Homeಮುಖಪುಟಮಣಿಪುರ:ಅಸ್ಸಾಂ ರೈಫಲ್ಸ್ ವಿರುದ್ಧ ಕೇಸ್ ದಾಖಲಿಸಿದ ಸ್ಥಳೀಯ ಪೊಲೀಸರು

ಮಣಿಪುರ:ಅಸ್ಸಾಂ ರೈಫಲ್ಸ್ ವಿರುದ್ಧ ಕೇಸ್ ದಾಖಲಿಸಿದ ಸ್ಥಳೀಯ ಪೊಲೀಸರು

- Advertisement -
- Advertisement -

ಮಣಿಪುರದಲ್ಲಿ ಅಸ್ಸಾಂ ರೈಪಲ್ಸ್ ಘಟಕದ ವಿರುದ್ಧ ಸ್ಥಳೀಯ ಪೊಲೀಸರು ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಡಿದ್ದಾರೆ.

ಮಣಿಪುರ ಪೊಲೀಸರು, ಅಸ್ಸಾಂ ರೈಫಲ್ಸ್ ಘಟಕದ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಆಗಸ್ಟ್ 5 ರಂದು ತಮ್ಮ ಕರ್ತವ್ಯವನ್ನು ನಿರ್ವಹಿಸದಂತೆ ಪೊಲೀಸ್ ತಂಡವನ್ನು ಅಡ್ಡಿ ಮಾಡಿದ್ದಾರೆ ಮತ್ತು ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾದಲ್ಲಿ ಕುಕಿ ದಂಗೆಕೋರರು ಮೂವರು ಮೈತೈ ಜನರನ್ನು ಕೊಲೆ ಮಾಡಿ ಪಲಾಯನ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಷ್ಣುಪುರ್ ಜಿಲ್ಲೆಯ ಫೌಗಕ್ಚಾವೊ ಪೊಲೀಸ್ ಠಾಣೆಯಲ್ಲಿ ಈ ಕುರಿತು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಲಾಗಿದೆ. ಆಗಸ್ಟ್ 5 ರ ಬೆಳ್ಳಂಬೆಳಗ್ಗೆ ಮೂವರ ಹತ್ಯೆಯಾದಾಗಿನಿಂದ ಗುಂಡಿನ ಚಕಮಕಿಯ ಘಟನೆಗಳು ವರದಿಯಾಗಿವೆ.

ಮಣಿಪುರ ಪೊಲೀಸರು  ಅಸ್ಸಾಂ ರೈಫಲ್ಸ್ ಗಳ ಬದಲಿಗೆ ಸಿಆರ್‌ಪಿಎಫ್ ಮತ್ತು ಮಣಿಪುರ ಪೊಲೀಸ್ ಸಿಬ್ಬಂದಿಯನ್ನು ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್-ಕಾಂಗ್‌ವೈ ರಸ್ತೆಯ ಚೆಕ್ ಪೋಸ್ಟ್‌ನಲ್ಲಿ ನಿಯೋಜಿಸಲು ನಿರ್ಧರಿಸಿದ್ದಾರೆ.

ಮೈತೈ ಪ್ರಭಾವಿ ಮಹಿಳಾ ಜಾಗೃತ ವಿಭಾಗ “ಮೀರಾ ಪೈಬಿಸ್” ಅಸ್ಸಾಂ ರೈಫಲ್ಸ್ ನ್ನು ಸಂಘರ್ಷ ಪೀಡಿತ ರಾಜ್ಯದಿಂದ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ಅಸ್ಸಾಂ ರೈಫಲ್ಸ್  ಪಕ್ಷಪಾತ ಮಾಡಿದೆ ಎಂದು ಆರೋಪಿಸಲಾಗಿದೆ.

ಇನ್ನೊಂದು ಕಡೆ ಅಸ್ಸಾಂ ರೈಫಲ್ಸ್ ಘಟಕ ಮತ್ತು ಭಾರತೀಯ ಸೇನೆ ಮೈತೈ ಮಹಿಳಾ ಗುಂಪುಗಳು ತಮ್ಮ ಕಾರ್ಯಾಚರಣೆಯಲ್ಲಿ ಮಧ್ಯಪ್ರವೇಶಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಫೌಗಕ್‌ಚಾವೊ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ, ಆಗಸ್ಟ್ 5 ರಂದು ಬೆಳಿಗ್ಗೆ 6.30 ರ ಸುಮಾರಿಗೆ 9 ಅಸ್ಸಾಂ ರೈಫಲ್ಸ್‌ಗಳು ತಮ್ಮ ವಾಹನಗಳನ್ನು ಬಳಸಿ ಕ್ವಾಕ್ಟಾ ಮತ್ತು ಫೋಲ್ಜಾಂಗ್ ರಸ್ತೆಯಲ್ಲಿ ಪೊಲೀಸ್ ತಂಡವನ್ನು ತಡೆದಿದ್ದಾರೆ ಎಂದು ಪ್ರಭಾರಿ ಅಧಿಕಾರಿ ಎನ್. ದೇವದಾಸ್ ಸಿಂಗ್ ಆರೋಪಿಸಿದ್ದಾರೆ.

ಕ್ವಾಕ್ಟಾ ಮತ್ತು ಫೋಲ್ಜಾಂಗ್ ರಸ್ತೆಯ ನಡುವಿನ ಕ್ವಾಕ್ಟಾದ ವಾರ್ಡ್ ಸಂಖ್ಯೆ 8 ರಲ್ಲಿ ಕುಕಿ ದಂಗೆಕೋರರು ಆಶ್ರಯ ಪಡೆದಿದ್ದಾರೆ ಎಂಬ ಮಾಹಿತಿಯ ಆಧಾರದ ಮೇಲೆ ಪೊಲೀಸ್ ತಂಡ ಅಲ್ಲಿಗೆ ತೆರಳಿದೆ. ಫೋಲ್ಜಾಂಗ್ ನೆರೆಯ ಚುರಾಚಂದಪುರ ಜಿಲ್ಲೆಯಲ್ಲಿದೆ.ಮೂವರು ಮೈತೈ ಸಮುದಾಯದ  ಹತ್ಯೆಯಲ್ಲಿ ಕುಕಿ ದಂಗೆಕೋರರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.ಆರೋಪಿಗಳಿಗೆ ಸುಲಭವಾಗಿ ತಪ್ಪಿಸಿಕೊಳ್ಳಲು ಅಸ್ಸಾಂ ರೈಫಲ್ಸ್ ಘಟಕ ಅನುವು ಮಾಡಿಕೊಟ್ಟಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೇ 3 ರಿಂದ ಮಣಿಪುರದಲ್ಲಿ ಮೈತೈ ಮತ್ತು ಕುಕಿ ಸಮುದಾಯಗಳ ನಡುವಿನ ಹಿಂಸಾಚಾರದಿಂದಾಗಿ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 60,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಭದ್ರತಾ ತಂಡಗಳ ನಿಯೋಜನೆಯ ಹೊರತಾಗಿಯೂ ಪರಿಸ್ಥಿತಿ ಇನ್ನೂ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿ: ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...