Homeಮುಖಪುಟಮಣಿಪುರ:ಅಸ್ಸಾಂ ರೈಫಲ್ಸ್ ವಿರುದ್ಧ ಕೇಸ್ ದಾಖಲಿಸಿದ ಸ್ಥಳೀಯ ಪೊಲೀಸರು

ಮಣಿಪುರ:ಅಸ್ಸಾಂ ರೈಫಲ್ಸ್ ವಿರುದ್ಧ ಕೇಸ್ ದಾಖಲಿಸಿದ ಸ್ಥಳೀಯ ಪೊಲೀಸರು

- Advertisement -
- Advertisement -

ಮಣಿಪುರದಲ್ಲಿ ಅಸ್ಸಾಂ ರೈಪಲ್ಸ್ ಘಟಕದ ವಿರುದ್ಧ ಸ್ಥಳೀಯ ಪೊಲೀಸರು ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಡಿದ್ದಾರೆ.

ಮಣಿಪುರ ಪೊಲೀಸರು, ಅಸ್ಸಾಂ ರೈಫಲ್ಸ್ ಘಟಕದ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಆಗಸ್ಟ್ 5 ರಂದು ತಮ್ಮ ಕರ್ತವ್ಯವನ್ನು ನಿರ್ವಹಿಸದಂತೆ ಪೊಲೀಸ್ ತಂಡವನ್ನು ಅಡ್ಡಿ ಮಾಡಿದ್ದಾರೆ ಮತ್ತು ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾದಲ್ಲಿ ಕುಕಿ ದಂಗೆಕೋರರು ಮೂವರು ಮೈತೈ ಜನರನ್ನು ಕೊಲೆ ಮಾಡಿ ಪಲಾಯನ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಷ್ಣುಪುರ್ ಜಿಲ್ಲೆಯ ಫೌಗಕ್ಚಾವೊ ಪೊಲೀಸ್ ಠಾಣೆಯಲ್ಲಿ ಈ ಕುರಿತು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಲಾಗಿದೆ. ಆಗಸ್ಟ್ 5 ರ ಬೆಳ್ಳಂಬೆಳಗ್ಗೆ ಮೂವರ ಹತ್ಯೆಯಾದಾಗಿನಿಂದ ಗುಂಡಿನ ಚಕಮಕಿಯ ಘಟನೆಗಳು ವರದಿಯಾಗಿವೆ.

ಮಣಿಪುರ ಪೊಲೀಸರು  ಅಸ್ಸಾಂ ರೈಫಲ್ಸ್ ಗಳ ಬದಲಿಗೆ ಸಿಆರ್‌ಪಿಎಫ್ ಮತ್ತು ಮಣಿಪುರ ಪೊಲೀಸ್ ಸಿಬ್ಬಂದಿಯನ್ನು ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್-ಕಾಂಗ್‌ವೈ ರಸ್ತೆಯ ಚೆಕ್ ಪೋಸ್ಟ್‌ನಲ್ಲಿ ನಿಯೋಜಿಸಲು ನಿರ್ಧರಿಸಿದ್ದಾರೆ.

ಮೈತೈ ಪ್ರಭಾವಿ ಮಹಿಳಾ ಜಾಗೃತ ವಿಭಾಗ “ಮೀರಾ ಪೈಬಿಸ್” ಅಸ್ಸಾಂ ರೈಫಲ್ಸ್ ನ್ನು ಸಂಘರ್ಷ ಪೀಡಿತ ರಾಜ್ಯದಿಂದ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ಅಸ್ಸಾಂ ರೈಫಲ್ಸ್  ಪಕ್ಷಪಾತ ಮಾಡಿದೆ ಎಂದು ಆರೋಪಿಸಲಾಗಿದೆ.

ಇನ್ನೊಂದು ಕಡೆ ಅಸ್ಸಾಂ ರೈಫಲ್ಸ್ ಘಟಕ ಮತ್ತು ಭಾರತೀಯ ಸೇನೆ ಮೈತೈ ಮಹಿಳಾ ಗುಂಪುಗಳು ತಮ್ಮ ಕಾರ್ಯಾಚರಣೆಯಲ್ಲಿ ಮಧ್ಯಪ್ರವೇಶಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಫೌಗಕ್‌ಚಾವೊ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ, ಆಗಸ್ಟ್ 5 ರಂದು ಬೆಳಿಗ್ಗೆ 6.30 ರ ಸುಮಾರಿಗೆ 9 ಅಸ್ಸಾಂ ರೈಫಲ್ಸ್‌ಗಳು ತಮ್ಮ ವಾಹನಗಳನ್ನು ಬಳಸಿ ಕ್ವಾಕ್ಟಾ ಮತ್ತು ಫೋಲ್ಜಾಂಗ್ ರಸ್ತೆಯಲ್ಲಿ ಪೊಲೀಸ್ ತಂಡವನ್ನು ತಡೆದಿದ್ದಾರೆ ಎಂದು ಪ್ರಭಾರಿ ಅಧಿಕಾರಿ ಎನ್. ದೇವದಾಸ್ ಸಿಂಗ್ ಆರೋಪಿಸಿದ್ದಾರೆ.

ಕ್ವಾಕ್ಟಾ ಮತ್ತು ಫೋಲ್ಜಾಂಗ್ ರಸ್ತೆಯ ನಡುವಿನ ಕ್ವಾಕ್ಟಾದ ವಾರ್ಡ್ ಸಂಖ್ಯೆ 8 ರಲ್ಲಿ ಕುಕಿ ದಂಗೆಕೋರರು ಆಶ್ರಯ ಪಡೆದಿದ್ದಾರೆ ಎಂಬ ಮಾಹಿತಿಯ ಆಧಾರದ ಮೇಲೆ ಪೊಲೀಸ್ ತಂಡ ಅಲ್ಲಿಗೆ ತೆರಳಿದೆ. ಫೋಲ್ಜಾಂಗ್ ನೆರೆಯ ಚುರಾಚಂದಪುರ ಜಿಲ್ಲೆಯಲ್ಲಿದೆ.ಮೂವರು ಮೈತೈ ಸಮುದಾಯದ  ಹತ್ಯೆಯಲ್ಲಿ ಕುಕಿ ದಂಗೆಕೋರರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.ಆರೋಪಿಗಳಿಗೆ ಸುಲಭವಾಗಿ ತಪ್ಪಿಸಿಕೊಳ್ಳಲು ಅಸ್ಸಾಂ ರೈಫಲ್ಸ್ ಘಟಕ ಅನುವು ಮಾಡಿಕೊಟ್ಟಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೇ 3 ರಿಂದ ಮಣಿಪುರದಲ್ಲಿ ಮೈತೈ ಮತ್ತು ಕುಕಿ ಸಮುದಾಯಗಳ ನಡುವಿನ ಹಿಂಸಾಚಾರದಿಂದಾಗಿ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 60,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಭದ್ರತಾ ತಂಡಗಳ ನಿಯೋಜನೆಯ ಹೊರತಾಗಿಯೂ ಪರಿಸ್ಥಿತಿ ಇನ್ನೂ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿ: ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...