Homeಅಂಕಣಗಳುವಿಧಾನ ಪರಿಷತ್ತು ಪುಡಾರಿಗಳ ಪುನರ್ವಸತಿ ಕೇಂದ್ರವೇ?

ವಿಧಾನ ಪರಿಷತ್ತು ಪುಡಾರಿಗಳ ಪುನರ್ವಸತಿ ಕೇಂದ್ರವೇ?

- Advertisement -
- Advertisement -

ವಿಧಾನ ಪರಿಷತ್ತಿಗೆ ಹಾಲಿ ಇದ್ದ ಸದಸ್ಯರ ಅವಧಿ ಮುಗಿದಿದ್ದರಿಂದ ಅವರ ಸ್ಥಾನದಲ್ಲಿ ಹೊಸಬರನ್ನು ಚುನಾಯಿಸುವ ಸಂದರ್ಭ ಒದಗಿದೆ. ವಿಧಾನ ಪರಿಷತ್ತನ್ನು ಸಾಮಾನ್ಯವಾಗಿ ಮೇಲ್ಮನೆ ಎಂದು ಕರೆಯಲಾಗುತ್ತದೆ. ಮೇಲ್ಮನೆಯ ಕೆಲಸ ವಿಧಾನ ಸಭೆಯಲ್ಲಿ ಮಂಡಿಸಲಾಗುವ ಹಾಗೂ ಅಂಗೀಕಾರವಾಗುವ ಮಸೂದೆಗಳು ಜನಪರವಾಗಿವೆಯೇ ಇಲ್ಲವೇ ಎಂಬುದನ್ನು ಅಥವಾ ಏನಾದರೂ ದೋಷಗಳಿವೆಯೇ ಎಂಬುದನ್ನು ಪರಿಶೀಲಿಸುವುದು; ಒಂದುವೇಳೆ ಏನಾದರೂ ದೋಷಗಳು ಕಂಡುಬಂದಲ್ಲಿ ಸದರಿ ಮಸೂದೆಯನ್ನು ಪುನರ್‍ಪರಿಶೀಲನೆಗಾಗಿ ವಿಧಾನಸಭೆಗೆ ವಾಪಸ್ ಕಳಿಸಲಾಗುತ್ತದೆ. ಮೇಲ್ಮನೆಯಲ್ಲಿ ಎತ್ತಲಾದ ಎಲ್ಲಾ ಆಕ್ಷೇಪಣೆಗಳನ್ನು ಪುನಃ ಪರಿಶೀಲಿಸಿ ಮತ್ತೆ ವಿಧಾನಸಭೆಯ ಮುಂದೆ ಮಂಡಿಸಿ ಹೀಗೆ ತಿದ್ದುಪಡಿಯಾದ ಮಸೂದೆಯನ್ನು ಮತ್ತೆ ವಿಧಾನಪರಿಷತ್ತಿಗೆ ರವಾನಿಸಬೇಕು. ವಿಧಾನ ಪರಿಷತ್ತು ಈ ತಿದ್ದುಪಡಿಯಾದ ಮಸೂದೆಯನ್ನೂ ಕೂಲಂಕಷವಾಗಿ ಪರಿಶೀಲಿಸಿ ಅದಕ್ಕೆ ಒಪ್ಪಿಗೆ ಕೊಟ್ಟ ನಂತರ ಮತ್ತೆ ವಿಧಾನಸಭೆಗೆ ಕಳಿಸಲಾಗುವುದು. ಈ ಮಸೂದೆಯನ್ನು ವಿಧಾನಸಭೆ ಅಂಗೀಕರಿಸಿದ ಮೇಲೆಯೇ ಮಸೂದೆ ಶಾಸನವಾಗಿ ಪರಿವರ್ತನೆಯಾಗುವುದು. ಅದರಂತೆಯೇ, ಸರ್ಕಾರ ರೂಪಿಸುವ ಎಲ್ಲವನ್ನೂ ಪ್ರಶ್ನಿಸುವ ಅಧಿಕಾರ ಕೂಡ ಈ ಮೇಲ್ಮನೆಗೆ ಇದೆ.

ಮೇಲ್ಮನೆಯಲ್ಲಿ ಶಾಸನಸಭೆಯಿಂದ ಆರಿಸಿ ಹೋಗುವ 25 ಸದಸ್ಯರು, ಸ್ಥಳೀಯ ಸಂಸ್ಥೆಗಳಿಂದ 25, ಶಿಕ್ಷಕರ ಕ್ಷೇತ್ರದಿಂದ 7 ಮತ್ತು ಪದವೀಧರರ ಕ್ಷೇತ್ರದಿಂದ 7 ಸದಸ್ಯರು ಆಯ್ಕೆಯಾಗುತ್ತಾರೆ. ಇವರ ಜೊತೆಗೆ ಸರ್ಕಾರ (ರಾಜ್ಯಪಾಲರ ಮೂಲಕ) 11 ಮಂದಿ ಗಣ್ಯರನ್ನು ನಾಮಕರಣ ಸದಸ್ಯರನ್ನಾಗಿ ನೇಮಿಸಲಾಗುತ್ತದೆ. ಹೀಗೆ ನಮ್ಮ ವಿಧಾನ ಪರಿಷತ್ತಿನಲ್ಲಿ ಒಟ್ಟು 75 ಸದಸ್ಯ ಬಲವಿದೆ. ಪ್ರತಿ ಎರಡು ವರ್ಷಗಳಿಗೊಮ್ಮೆ 1/3 ಭಾಗದಷ್ಟು ಸದಸ್ಯರು ನಿವೃತ್ತಿಯಾಗಿ ಹೊಸಸದಸ್ಯರು ಆಯ್ಕೆಯಾಗಬೇಕಾಗುತ್ತದೆ. ಈಗಿನ ಚುನಾವಣೆ ಕೂಡ ಅಂಥ ಒಂದು ಪ್ರಕ್ರಿಯೆಯೇ.

ಒಟ್ಟಿನಲ್ಲಿ ಈ ಮೇಲ್ಮನೆ ವಿಧಾನಸಭೆಯ ಕಾವಲು ಸಮಿತಿಯಾಗಿ ಕೆಲಸ ಮಾಡಬೇಕು. ಈ ಕಾವಲು ಸಮಿತಿಯಲ್ಲಿ ಪಕ್ಷಾತೀತರೂ, ಗಣ್ಯರೂ, ಕಾನೂನು ಕಟ್ಟಲೆಗಳ ಜ್ಞಾನ ಇರುವವರೂ, ಶಾಸನ ಸಭೆಯ ಸದಸ್ಯರ ಮನ್ನಣೆಗೆ ಪಾತ್ರರಾದವರು ಮಾತ್ರ ಇರಬೇಕು. ಹಾಗಾದಾಗ ಮಾತ್ರ ಮೇಲ್ಮನೆಯ ಪರಿಕಲ್ಪನೆ ಸಾರ್ಥಕವಾಗುತ್ತದೆ. ರಾಜ್ಯದ ವಿಧಾನ ಪರಿಷತ್ತಿನ ರೀತಿಯಲ್ಲೇ ಕೇಂದ್ರದಲ್ಲಿ ರಾಜ್ಯಸಭೆ ಇದೆ. ಪ್ರತಿಭಾವಂತರು ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಉತ್ತಮ ಕೊಡುಗೆ ನೀಡಬಲ್ಲವರನ್ನು ಇಂಥಾ ಸ್ಥಾನಕ್ಕೆ ಆಯ್ಕೆ ಮಾಡುತ್ತಿದ್ದರೆಂಬುದಕ್ಕೆ ಅಂಬೇಡ್ಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿಸಿದ್ದು ಉತ್ತಮ ಉದಾಹರಣೆ. ಖ್ಯಾತ ವಿಜ್ಞಾನಿ ಡಾ.ರಾಜಾರಾಮಣ್ಣನಂಥವರೂ ಕೂಡ ರಾಜ್ಯಸಭೆ ಸದಸ್ಯರಾಗಿದ್ದರು. ಕರ್ನಾಟಕದ ಉದಾಹರಣೆ ನೋಡುವುದಾದರೂ ಕಾರ್ಮಿಕ ನಾಯಕ ಬಿವಿ ಕಕ್ಕಿಲ್ಲಾಯ, ಅಬ್ದುಲ್ ನಜೀರ್ ಸಾಬ್, ವೈಕುಂಠ ಬಾಳಿಗಾ, ಗೊರೂರು ರಾಮಸ್ವಾಮಿ ಅಯ್ಯಂಗಾರ್, ಬಸವರಾಜ ಕಟ್ಟೀಮನಿ ಮುಂತಾದ ಗಣ್ಯರು ಈ ಮೇಲ್ಮನೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದನ್ನು ನಾವು ಸ್ಮರಿಸಿಕೊಳ್ಳಬಹುದು. ಇದು ಇತಿಹಾಸದ ಮಾತು.
ಸ್ವಾತಂತ್ರ್ಯ ಬಂದ ಮೇಲೆ ಹತ್ತಾರು ವರ್ಷಗಳ ಕಾಲ ಇಂತಹ ಗಣ್ಯರನ್ನೇ ಆಡಳಿತ ನಡೆಸುವ ಸರ್ಕಾರಗಳು ಆಯ್ಕೆಮಾಡುತ್ತಿದ್ದವು. ನಂತರದ ದಿನಮಾನಗಳಲ್ಲಿ ಆರಂಭವಾಯಿತು ಅಧಃಪತನ. ಜಾತಿವಾರು ಆಯ್ಕೆ, ಸ್ವಜನ ಪಕ್ಷಪಾತ, ತಮ್ಮ ಪಕ್ಷದವರನ್ನೇ ಆಯ್ಕೆ ಮಾಡಿಕೊಳ್ಳುವುದು, ಚುನಾವಣೆಗಳಲ್ಲಿ ಸೋತ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮೇಲ್ಮನೆಯಲ್ಲಿ ‘ಪುನರ್‍ವಸತಿ ಕಲ್ಪಿಸುವುದು’ ಇಂದು ಎಲ್ಲ ಪಕ್ಷಗಳಲ್ಲೂ ವ್ಯಾಪಕವಾಗಿದೆ. ಕೆಲವು ಉದ್ಯಮಿಗಳ ಬಳಿ ಕೋಟ್ಯಾಂತರ ರೂಪಾಯಿ ಹಣ ಪಡೆದು ಮೇಲ್ಮನೆಯ ಸದಸ್ಯತ್ವವನ್ನು ಮಾರಾಟ ಮಾಡುವ ಅಧಮ ರಾಜಕೀಯ ನಾಯಕರು ಹುಟ್ಟಿಕೊಂಡಿದ್ದಾರೆ. ಈಗಿನ ಮೇಲ್ಮನೆಯಲ್ಲಿ 50 ವರ್ಷಗಳ ಹಿಂದಿನಂತೆ ಅರ್ಹತೆಯುಳ್ಳವರು, ವರ್ಚಸುಳ್ಳವರು, ಗಣ್ಯರು, ಪಾರ್ಲಮೆಂಟೇರಿಯನ್‍ಗಳು, ಜನರ ಗೌರವಕ್ಕೆ ಪಾತ್ರರಾದವರ ಸಂಖ್ಯೆ ವಿರಳವಾಗುತ್ತಿದೆ. ವಾಸ್ತವದಲ್ಲಿ, ಮೇಲ್ಮನೆ ಕೆಳಮನೆಯ ಮಟ್ಟಕ್ಕೇ ಇಳಿದುಬಿಟ್ಟಿದೆ.


ಮೇಲ್ಮನೆ ಈಗ ವಿಧಾನಸಭೆಯ ಕಾಲೆಳೆಯುವ, ಕುಹಕಿಗಳಿಂದ ಕೂಡಿದ ಕೂಟವಾಗಿದೆ. ಇದರ ಘನತೆ ಗೌರವಗಳು ಹಾರಿಹೋಗಿವೆ. ಮೇಲ್ಮನೆ ವಿಧಾನಸಭೆಯ ಹಿತೈಷಿಯಾಗಿದ್ದರ ಬದಲಾಗಿ, ವಿಧಾನಸಭೆಯ ಶತ್ರು ಎನಿಸಿದೆ. ವಿಧಾನಸಭೆಯ ಘನತೆಯನ್ನು ಹೆಚ್ಚಿಸುವ ಕೆಲಸ ವಿಧಾನಪರಿಷತ್ತು ಮಾಡಬೇಕು. ಕಾಲ ಕಾಲಕ್ಕೆ ರಚನಾತ್ಮಕ ಸಲಹೆಗಳನ್ನು ನೀಡಿ, ವಿಧಾನ ಸಭೆ ಸರಿಯಾದ ದಾರಿಯಲ್ಲಿ ಸಾಗಲು ನೆರವಾಗಬೇಕು.
ವಿಧಾನಸಭೆ ಜನಪರವಾಗಿ ಕೆಲಸಮಾಡಲಿಕ್ಕೂ, ಸಂವಿಧಾನದ ಆಶಯವಾದ ಬಡವ – ಬಲ್ಲಿದ ಅಂತರವನ್ನು ತಗ್ಗಿಸುವ ಸಾಧನವನ್ನಾಗಿ ಪರಿವರ್ತಿಸುವ ಕೆಲಸವನ್ನೂ ವಿಧಾನ ಪರಿಷತ್ತು ಮಾಡಬೇಕಿತ್ತು. ಸರ್ಕಾರ ನಡೆಸುವವರ ಓರೆಕೋರೆಗಳನ್ನು ತಿದ್ದಿ, ಕಾನೂನಿಗನುಸಾರ ಕೆಲಸ ಮಾಡಿಸುವ ಕಾವಲು ಸಮಿತಿಯ ಪಾತ್ರವನ್ನು ನಿರ್ವಹಿಸಬೇಕು.
ಈಗಿನ ದುರಂತವೆಂದರೆ, ಹಾಲಿ ವಿಧಾನ ಪರಿಷತ್ತಿನಲ್ಲಿ ಕ್ರಿಮಿನಲ್‍ಗಳು, ಭೂಗಳ್ಳರು, ರಿಯಲ್ ಎಸ್ಟೇಟ್ ಧಂಧೆಯವರು, ಪಕ್ಷದ ನಾಯಕರ ಆಸ್ತಿಗಳನ್ನು ಕಾಪಾಡುವ ಏಜೆಂಟರು… ಎಲ್ಲರೂ ಇದ್ದಾರೆ. ಇಂತಹ ವಿಧಾನಪರಿಷತ್ತಿನ ಅಗತ್ಯತೆ ಇದೆಯೇ?
ಕುಮಾರಸ್ವಾಮಿಯವರ ಸರ್ಕಾರದಲ್ಲಿಯಾದರೂ ಘನತೆವೆತ್ತ ಜನರನ್ನು ಪರಿಷತ್ತಿಗೆ ಆಯ್ಕೆ ಮಾಡುವ ಪರಿಪಾಠ ಆರಂಭವಾಗುತ್ತದೆಯೆಂಬ ನಿರೀಕ್ಷೆ ಹುಸಿಯಾಗಿದೆ. ವಿಧಾನ ಪರಿಷತ್ತನ್ನು ಯಾವ ಉದಾತ್ತ ದೃಷ್ಟಿಯಿಂದ ಆರಂಭಿಸಲಾಯಿತೋ ಆ ದಿನಗಳು ಮತ್ತೆ ಬರುತ್ತವೆಯೆ?
– ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...