Homeಅಂಕಣಗಳುವಿಧಾನ ಪರಿಷತ್ತು ಪುಡಾರಿಗಳ ಪುನರ್ವಸತಿ ಕೇಂದ್ರವೇ?

ವಿಧಾನ ಪರಿಷತ್ತು ಪುಡಾರಿಗಳ ಪುನರ್ವಸತಿ ಕೇಂದ್ರವೇ?

- Advertisement -
- Advertisement -

ವಿಧಾನ ಪರಿಷತ್ತಿಗೆ ಹಾಲಿ ಇದ್ದ ಸದಸ್ಯರ ಅವಧಿ ಮುಗಿದಿದ್ದರಿಂದ ಅವರ ಸ್ಥಾನದಲ್ಲಿ ಹೊಸಬರನ್ನು ಚುನಾಯಿಸುವ ಸಂದರ್ಭ ಒದಗಿದೆ. ವಿಧಾನ ಪರಿಷತ್ತನ್ನು ಸಾಮಾನ್ಯವಾಗಿ ಮೇಲ್ಮನೆ ಎಂದು ಕರೆಯಲಾಗುತ್ತದೆ. ಮೇಲ್ಮನೆಯ ಕೆಲಸ ವಿಧಾನ ಸಭೆಯಲ್ಲಿ ಮಂಡಿಸಲಾಗುವ ಹಾಗೂ ಅಂಗೀಕಾರವಾಗುವ ಮಸೂದೆಗಳು ಜನಪರವಾಗಿವೆಯೇ ಇಲ್ಲವೇ ಎಂಬುದನ್ನು ಅಥವಾ ಏನಾದರೂ ದೋಷಗಳಿವೆಯೇ ಎಂಬುದನ್ನು ಪರಿಶೀಲಿಸುವುದು; ಒಂದುವೇಳೆ ಏನಾದರೂ ದೋಷಗಳು ಕಂಡುಬಂದಲ್ಲಿ ಸದರಿ ಮಸೂದೆಯನ್ನು ಪುನರ್‍ಪರಿಶೀಲನೆಗಾಗಿ ವಿಧಾನಸಭೆಗೆ ವಾಪಸ್ ಕಳಿಸಲಾಗುತ್ತದೆ. ಮೇಲ್ಮನೆಯಲ್ಲಿ ಎತ್ತಲಾದ ಎಲ್ಲಾ ಆಕ್ಷೇಪಣೆಗಳನ್ನು ಪುನಃ ಪರಿಶೀಲಿಸಿ ಮತ್ತೆ ವಿಧಾನಸಭೆಯ ಮುಂದೆ ಮಂಡಿಸಿ ಹೀಗೆ ತಿದ್ದುಪಡಿಯಾದ ಮಸೂದೆಯನ್ನು ಮತ್ತೆ ವಿಧಾನಪರಿಷತ್ತಿಗೆ ರವಾನಿಸಬೇಕು. ವಿಧಾನ ಪರಿಷತ್ತು ಈ ತಿದ್ದುಪಡಿಯಾದ ಮಸೂದೆಯನ್ನೂ ಕೂಲಂಕಷವಾಗಿ ಪರಿಶೀಲಿಸಿ ಅದಕ್ಕೆ ಒಪ್ಪಿಗೆ ಕೊಟ್ಟ ನಂತರ ಮತ್ತೆ ವಿಧಾನಸಭೆಗೆ ಕಳಿಸಲಾಗುವುದು. ಈ ಮಸೂದೆಯನ್ನು ವಿಧಾನಸಭೆ ಅಂಗೀಕರಿಸಿದ ಮೇಲೆಯೇ ಮಸೂದೆ ಶಾಸನವಾಗಿ ಪರಿವರ್ತನೆಯಾಗುವುದು. ಅದರಂತೆಯೇ, ಸರ್ಕಾರ ರೂಪಿಸುವ ಎಲ್ಲವನ್ನೂ ಪ್ರಶ್ನಿಸುವ ಅಧಿಕಾರ ಕೂಡ ಈ ಮೇಲ್ಮನೆಗೆ ಇದೆ.

ಮೇಲ್ಮನೆಯಲ್ಲಿ ಶಾಸನಸಭೆಯಿಂದ ಆರಿಸಿ ಹೋಗುವ 25 ಸದಸ್ಯರು, ಸ್ಥಳೀಯ ಸಂಸ್ಥೆಗಳಿಂದ 25, ಶಿಕ್ಷಕರ ಕ್ಷೇತ್ರದಿಂದ 7 ಮತ್ತು ಪದವೀಧರರ ಕ್ಷೇತ್ರದಿಂದ 7 ಸದಸ್ಯರು ಆಯ್ಕೆಯಾಗುತ್ತಾರೆ. ಇವರ ಜೊತೆಗೆ ಸರ್ಕಾರ (ರಾಜ್ಯಪಾಲರ ಮೂಲಕ) 11 ಮಂದಿ ಗಣ್ಯರನ್ನು ನಾಮಕರಣ ಸದಸ್ಯರನ್ನಾಗಿ ನೇಮಿಸಲಾಗುತ್ತದೆ. ಹೀಗೆ ನಮ್ಮ ವಿಧಾನ ಪರಿಷತ್ತಿನಲ್ಲಿ ಒಟ್ಟು 75 ಸದಸ್ಯ ಬಲವಿದೆ. ಪ್ರತಿ ಎರಡು ವರ್ಷಗಳಿಗೊಮ್ಮೆ 1/3 ಭಾಗದಷ್ಟು ಸದಸ್ಯರು ನಿವೃತ್ತಿಯಾಗಿ ಹೊಸಸದಸ್ಯರು ಆಯ್ಕೆಯಾಗಬೇಕಾಗುತ್ತದೆ. ಈಗಿನ ಚುನಾವಣೆ ಕೂಡ ಅಂಥ ಒಂದು ಪ್ರಕ್ರಿಯೆಯೇ.

ಒಟ್ಟಿನಲ್ಲಿ ಈ ಮೇಲ್ಮನೆ ವಿಧಾನಸಭೆಯ ಕಾವಲು ಸಮಿತಿಯಾಗಿ ಕೆಲಸ ಮಾಡಬೇಕು. ಈ ಕಾವಲು ಸಮಿತಿಯಲ್ಲಿ ಪಕ್ಷಾತೀತರೂ, ಗಣ್ಯರೂ, ಕಾನೂನು ಕಟ್ಟಲೆಗಳ ಜ್ಞಾನ ಇರುವವರೂ, ಶಾಸನ ಸಭೆಯ ಸದಸ್ಯರ ಮನ್ನಣೆಗೆ ಪಾತ್ರರಾದವರು ಮಾತ್ರ ಇರಬೇಕು. ಹಾಗಾದಾಗ ಮಾತ್ರ ಮೇಲ್ಮನೆಯ ಪರಿಕಲ್ಪನೆ ಸಾರ್ಥಕವಾಗುತ್ತದೆ. ರಾಜ್ಯದ ವಿಧಾನ ಪರಿಷತ್ತಿನ ರೀತಿಯಲ್ಲೇ ಕೇಂದ್ರದಲ್ಲಿ ರಾಜ್ಯಸಭೆ ಇದೆ. ಪ್ರತಿಭಾವಂತರು ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಉತ್ತಮ ಕೊಡುಗೆ ನೀಡಬಲ್ಲವರನ್ನು ಇಂಥಾ ಸ್ಥಾನಕ್ಕೆ ಆಯ್ಕೆ ಮಾಡುತ್ತಿದ್ದರೆಂಬುದಕ್ಕೆ ಅಂಬೇಡ್ಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿಸಿದ್ದು ಉತ್ತಮ ಉದಾಹರಣೆ. ಖ್ಯಾತ ವಿಜ್ಞಾನಿ ಡಾ.ರಾಜಾರಾಮಣ್ಣನಂಥವರೂ ಕೂಡ ರಾಜ್ಯಸಭೆ ಸದಸ್ಯರಾಗಿದ್ದರು. ಕರ್ನಾಟಕದ ಉದಾಹರಣೆ ನೋಡುವುದಾದರೂ ಕಾರ್ಮಿಕ ನಾಯಕ ಬಿವಿ ಕಕ್ಕಿಲ್ಲಾಯ, ಅಬ್ದುಲ್ ನಜೀರ್ ಸಾಬ್, ವೈಕುಂಠ ಬಾಳಿಗಾ, ಗೊರೂರು ರಾಮಸ್ವಾಮಿ ಅಯ್ಯಂಗಾರ್, ಬಸವರಾಜ ಕಟ್ಟೀಮನಿ ಮುಂತಾದ ಗಣ್ಯರು ಈ ಮೇಲ್ಮನೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದನ್ನು ನಾವು ಸ್ಮರಿಸಿಕೊಳ್ಳಬಹುದು. ಇದು ಇತಿಹಾಸದ ಮಾತು.
ಸ್ವಾತಂತ್ರ್ಯ ಬಂದ ಮೇಲೆ ಹತ್ತಾರು ವರ್ಷಗಳ ಕಾಲ ಇಂತಹ ಗಣ್ಯರನ್ನೇ ಆಡಳಿತ ನಡೆಸುವ ಸರ್ಕಾರಗಳು ಆಯ್ಕೆಮಾಡುತ್ತಿದ್ದವು. ನಂತರದ ದಿನಮಾನಗಳಲ್ಲಿ ಆರಂಭವಾಯಿತು ಅಧಃಪತನ. ಜಾತಿವಾರು ಆಯ್ಕೆ, ಸ್ವಜನ ಪಕ್ಷಪಾತ, ತಮ್ಮ ಪಕ್ಷದವರನ್ನೇ ಆಯ್ಕೆ ಮಾಡಿಕೊಳ್ಳುವುದು, ಚುನಾವಣೆಗಳಲ್ಲಿ ಸೋತ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮೇಲ್ಮನೆಯಲ್ಲಿ ‘ಪುನರ್‍ವಸತಿ ಕಲ್ಪಿಸುವುದು’ ಇಂದು ಎಲ್ಲ ಪಕ್ಷಗಳಲ್ಲೂ ವ್ಯಾಪಕವಾಗಿದೆ. ಕೆಲವು ಉದ್ಯಮಿಗಳ ಬಳಿ ಕೋಟ್ಯಾಂತರ ರೂಪಾಯಿ ಹಣ ಪಡೆದು ಮೇಲ್ಮನೆಯ ಸದಸ್ಯತ್ವವನ್ನು ಮಾರಾಟ ಮಾಡುವ ಅಧಮ ರಾಜಕೀಯ ನಾಯಕರು ಹುಟ್ಟಿಕೊಂಡಿದ್ದಾರೆ. ಈಗಿನ ಮೇಲ್ಮನೆಯಲ್ಲಿ 50 ವರ್ಷಗಳ ಹಿಂದಿನಂತೆ ಅರ್ಹತೆಯುಳ್ಳವರು, ವರ್ಚಸುಳ್ಳವರು, ಗಣ್ಯರು, ಪಾರ್ಲಮೆಂಟೇರಿಯನ್‍ಗಳು, ಜನರ ಗೌರವಕ್ಕೆ ಪಾತ್ರರಾದವರ ಸಂಖ್ಯೆ ವಿರಳವಾಗುತ್ತಿದೆ. ವಾಸ್ತವದಲ್ಲಿ, ಮೇಲ್ಮನೆ ಕೆಳಮನೆಯ ಮಟ್ಟಕ್ಕೇ ಇಳಿದುಬಿಟ್ಟಿದೆ.


ಮೇಲ್ಮನೆ ಈಗ ವಿಧಾನಸಭೆಯ ಕಾಲೆಳೆಯುವ, ಕುಹಕಿಗಳಿಂದ ಕೂಡಿದ ಕೂಟವಾಗಿದೆ. ಇದರ ಘನತೆ ಗೌರವಗಳು ಹಾರಿಹೋಗಿವೆ. ಮೇಲ್ಮನೆ ವಿಧಾನಸಭೆಯ ಹಿತೈಷಿಯಾಗಿದ್ದರ ಬದಲಾಗಿ, ವಿಧಾನಸಭೆಯ ಶತ್ರು ಎನಿಸಿದೆ. ವಿಧಾನಸಭೆಯ ಘನತೆಯನ್ನು ಹೆಚ್ಚಿಸುವ ಕೆಲಸ ವಿಧಾನಪರಿಷತ್ತು ಮಾಡಬೇಕು. ಕಾಲ ಕಾಲಕ್ಕೆ ರಚನಾತ್ಮಕ ಸಲಹೆಗಳನ್ನು ನೀಡಿ, ವಿಧಾನ ಸಭೆ ಸರಿಯಾದ ದಾರಿಯಲ್ಲಿ ಸಾಗಲು ನೆರವಾಗಬೇಕು.
ವಿಧಾನಸಭೆ ಜನಪರವಾಗಿ ಕೆಲಸಮಾಡಲಿಕ್ಕೂ, ಸಂವಿಧಾನದ ಆಶಯವಾದ ಬಡವ – ಬಲ್ಲಿದ ಅಂತರವನ್ನು ತಗ್ಗಿಸುವ ಸಾಧನವನ್ನಾಗಿ ಪರಿವರ್ತಿಸುವ ಕೆಲಸವನ್ನೂ ವಿಧಾನ ಪರಿಷತ್ತು ಮಾಡಬೇಕಿತ್ತು. ಸರ್ಕಾರ ನಡೆಸುವವರ ಓರೆಕೋರೆಗಳನ್ನು ತಿದ್ದಿ, ಕಾನೂನಿಗನುಸಾರ ಕೆಲಸ ಮಾಡಿಸುವ ಕಾವಲು ಸಮಿತಿಯ ಪಾತ್ರವನ್ನು ನಿರ್ವಹಿಸಬೇಕು.
ಈಗಿನ ದುರಂತವೆಂದರೆ, ಹಾಲಿ ವಿಧಾನ ಪರಿಷತ್ತಿನಲ್ಲಿ ಕ್ರಿಮಿನಲ್‍ಗಳು, ಭೂಗಳ್ಳರು, ರಿಯಲ್ ಎಸ್ಟೇಟ್ ಧಂಧೆಯವರು, ಪಕ್ಷದ ನಾಯಕರ ಆಸ್ತಿಗಳನ್ನು ಕಾಪಾಡುವ ಏಜೆಂಟರು… ಎಲ್ಲರೂ ಇದ್ದಾರೆ. ಇಂತಹ ವಿಧಾನಪರಿಷತ್ತಿನ ಅಗತ್ಯತೆ ಇದೆಯೇ?
ಕುಮಾರಸ್ವಾಮಿಯವರ ಸರ್ಕಾರದಲ್ಲಿಯಾದರೂ ಘನತೆವೆತ್ತ ಜನರನ್ನು ಪರಿಷತ್ತಿಗೆ ಆಯ್ಕೆ ಮಾಡುವ ಪರಿಪಾಠ ಆರಂಭವಾಗುತ್ತದೆಯೆಂಬ ನಿರೀಕ್ಷೆ ಹುಸಿಯಾಗಿದೆ. ವಿಧಾನ ಪರಿಷತ್ತನ್ನು ಯಾವ ಉದಾತ್ತ ದೃಷ್ಟಿಯಿಂದ ಆರಂಭಿಸಲಾಯಿತೋ ಆ ದಿನಗಳು ಮತ್ತೆ ಬರುತ್ತವೆಯೆ?
– ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...