Homeಅಂಕಣಗಳುವಿಧಾನ ಪರಿಷತ್ತು ಪುಡಾರಿಗಳ ಪುನರ್ವಸತಿ ಕೇಂದ್ರವೇ?

ವಿಧಾನ ಪರಿಷತ್ತು ಪುಡಾರಿಗಳ ಪುನರ್ವಸತಿ ಕೇಂದ್ರವೇ?

- Advertisement -
- Advertisement -

ವಿಧಾನ ಪರಿಷತ್ತಿಗೆ ಹಾಲಿ ಇದ್ದ ಸದಸ್ಯರ ಅವಧಿ ಮುಗಿದಿದ್ದರಿಂದ ಅವರ ಸ್ಥಾನದಲ್ಲಿ ಹೊಸಬರನ್ನು ಚುನಾಯಿಸುವ ಸಂದರ್ಭ ಒದಗಿದೆ. ವಿಧಾನ ಪರಿಷತ್ತನ್ನು ಸಾಮಾನ್ಯವಾಗಿ ಮೇಲ್ಮನೆ ಎಂದು ಕರೆಯಲಾಗುತ್ತದೆ. ಮೇಲ್ಮನೆಯ ಕೆಲಸ ವಿಧಾನ ಸಭೆಯಲ್ಲಿ ಮಂಡಿಸಲಾಗುವ ಹಾಗೂ ಅಂಗೀಕಾರವಾಗುವ ಮಸೂದೆಗಳು ಜನಪರವಾಗಿವೆಯೇ ಇಲ್ಲವೇ ಎಂಬುದನ್ನು ಅಥವಾ ಏನಾದರೂ ದೋಷಗಳಿವೆಯೇ ಎಂಬುದನ್ನು ಪರಿಶೀಲಿಸುವುದು; ಒಂದುವೇಳೆ ಏನಾದರೂ ದೋಷಗಳು ಕಂಡುಬಂದಲ್ಲಿ ಸದರಿ ಮಸೂದೆಯನ್ನು ಪುನರ್‍ಪರಿಶೀಲನೆಗಾಗಿ ವಿಧಾನಸಭೆಗೆ ವಾಪಸ್ ಕಳಿಸಲಾಗುತ್ತದೆ. ಮೇಲ್ಮನೆಯಲ್ಲಿ ಎತ್ತಲಾದ ಎಲ್ಲಾ ಆಕ್ಷೇಪಣೆಗಳನ್ನು ಪುನಃ ಪರಿಶೀಲಿಸಿ ಮತ್ತೆ ವಿಧಾನಸಭೆಯ ಮುಂದೆ ಮಂಡಿಸಿ ಹೀಗೆ ತಿದ್ದುಪಡಿಯಾದ ಮಸೂದೆಯನ್ನು ಮತ್ತೆ ವಿಧಾನಪರಿಷತ್ತಿಗೆ ರವಾನಿಸಬೇಕು. ವಿಧಾನ ಪರಿಷತ್ತು ಈ ತಿದ್ದುಪಡಿಯಾದ ಮಸೂದೆಯನ್ನೂ ಕೂಲಂಕಷವಾಗಿ ಪರಿಶೀಲಿಸಿ ಅದಕ್ಕೆ ಒಪ್ಪಿಗೆ ಕೊಟ್ಟ ನಂತರ ಮತ್ತೆ ವಿಧಾನಸಭೆಗೆ ಕಳಿಸಲಾಗುವುದು. ಈ ಮಸೂದೆಯನ್ನು ವಿಧಾನಸಭೆ ಅಂಗೀಕರಿಸಿದ ಮೇಲೆಯೇ ಮಸೂದೆ ಶಾಸನವಾಗಿ ಪರಿವರ್ತನೆಯಾಗುವುದು. ಅದರಂತೆಯೇ, ಸರ್ಕಾರ ರೂಪಿಸುವ ಎಲ್ಲವನ್ನೂ ಪ್ರಶ್ನಿಸುವ ಅಧಿಕಾರ ಕೂಡ ಈ ಮೇಲ್ಮನೆಗೆ ಇದೆ.

ಮೇಲ್ಮನೆಯಲ್ಲಿ ಶಾಸನಸಭೆಯಿಂದ ಆರಿಸಿ ಹೋಗುವ 25 ಸದಸ್ಯರು, ಸ್ಥಳೀಯ ಸಂಸ್ಥೆಗಳಿಂದ 25, ಶಿಕ್ಷಕರ ಕ್ಷೇತ್ರದಿಂದ 7 ಮತ್ತು ಪದವೀಧರರ ಕ್ಷೇತ್ರದಿಂದ 7 ಸದಸ್ಯರು ಆಯ್ಕೆಯಾಗುತ್ತಾರೆ. ಇವರ ಜೊತೆಗೆ ಸರ್ಕಾರ (ರಾಜ್ಯಪಾಲರ ಮೂಲಕ) 11 ಮಂದಿ ಗಣ್ಯರನ್ನು ನಾಮಕರಣ ಸದಸ್ಯರನ್ನಾಗಿ ನೇಮಿಸಲಾಗುತ್ತದೆ. ಹೀಗೆ ನಮ್ಮ ವಿಧಾನ ಪರಿಷತ್ತಿನಲ್ಲಿ ಒಟ್ಟು 75 ಸದಸ್ಯ ಬಲವಿದೆ. ಪ್ರತಿ ಎರಡು ವರ್ಷಗಳಿಗೊಮ್ಮೆ 1/3 ಭಾಗದಷ್ಟು ಸದಸ್ಯರು ನಿವೃತ್ತಿಯಾಗಿ ಹೊಸಸದಸ್ಯರು ಆಯ್ಕೆಯಾಗಬೇಕಾಗುತ್ತದೆ. ಈಗಿನ ಚುನಾವಣೆ ಕೂಡ ಅಂಥ ಒಂದು ಪ್ರಕ್ರಿಯೆಯೇ.

ಒಟ್ಟಿನಲ್ಲಿ ಈ ಮೇಲ್ಮನೆ ವಿಧಾನಸಭೆಯ ಕಾವಲು ಸಮಿತಿಯಾಗಿ ಕೆಲಸ ಮಾಡಬೇಕು. ಈ ಕಾವಲು ಸಮಿತಿಯಲ್ಲಿ ಪಕ್ಷಾತೀತರೂ, ಗಣ್ಯರೂ, ಕಾನೂನು ಕಟ್ಟಲೆಗಳ ಜ್ಞಾನ ಇರುವವರೂ, ಶಾಸನ ಸಭೆಯ ಸದಸ್ಯರ ಮನ್ನಣೆಗೆ ಪಾತ್ರರಾದವರು ಮಾತ್ರ ಇರಬೇಕು. ಹಾಗಾದಾಗ ಮಾತ್ರ ಮೇಲ್ಮನೆಯ ಪರಿಕಲ್ಪನೆ ಸಾರ್ಥಕವಾಗುತ್ತದೆ. ರಾಜ್ಯದ ವಿಧಾನ ಪರಿಷತ್ತಿನ ರೀತಿಯಲ್ಲೇ ಕೇಂದ್ರದಲ್ಲಿ ರಾಜ್ಯಸಭೆ ಇದೆ. ಪ್ರತಿಭಾವಂತರು ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಉತ್ತಮ ಕೊಡುಗೆ ನೀಡಬಲ್ಲವರನ್ನು ಇಂಥಾ ಸ್ಥಾನಕ್ಕೆ ಆಯ್ಕೆ ಮಾಡುತ್ತಿದ್ದರೆಂಬುದಕ್ಕೆ ಅಂಬೇಡ್ಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿಸಿದ್ದು ಉತ್ತಮ ಉದಾಹರಣೆ. ಖ್ಯಾತ ವಿಜ್ಞಾನಿ ಡಾ.ರಾಜಾರಾಮಣ್ಣನಂಥವರೂ ಕೂಡ ರಾಜ್ಯಸಭೆ ಸದಸ್ಯರಾಗಿದ್ದರು. ಕರ್ನಾಟಕದ ಉದಾಹರಣೆ ನೋಡುವುದಾದರೂ ಕಾರ್ಮಿಕ ನಾಯಕ ಬಿವಿ ಕಕ್ಕಿಲ್ಲಾಯ, ಅಬ್ದುಲ್ ನಜೀರ್ ಸಾಬ್, ವೈಕುಂಠ ಬಾಳಿಗಾ, ಗೊರೂರು ರಾಮಸ್ವಾಮಿ ಅಯ್ಯಂಗಾರ್, ಬಸವರಾಜ ಕಟ್ಟೀಮನಿ ಮುಂತಾದ ಗಣ್ಯರು ಈ ಮೇಲ್ಮನೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದನ್ನು ನಾವು ಸ್ಮರಿಸಿಕೊಳ್ಳಬಹುದು. ಇದು ಇತಿಹಾಸದ ಮಾತು.
ಸ್ವಾತಂತ್ರ್ಯ ಬಂದ ಮೇಲೆ ಹತ್ತಾರು ವರ್ಷಗಳ ಕಾಲ ಇಂತಹ ಗಣ್ಯರನ್ನೇ ಆಡಳಿತ ನಡೆಸುವ ಸರ್ಕಾರಗಳು ಆಯ್ಕೆಮಾಡುತ್ತಿದ್ದವು. ನಂತರದ ದಿನಮಾನಗಳಲ್ಲಿ ಆರಂಭವಾಯಿತು ಅಧಃಪತನ. ಜಾತಿವಾರು ಆಯ್ಕೆ, ಸ್ವಜನ ಪಕ್ಷಪಾತ, ತಮ್ಮ ಪಕ್ಷದವರನ್ನೇ ಆಯ್ಕೆ ಮಾಡಿಕೊಳ್ಳುವುದು, ಚುನಾವಣೆಗಳಲ್ಲಿ ಸೋತ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮೇಲ್ಮನೆಯಲ್ಲಿ ‘ಪುನರ್‍ವಸತಿ ಕಲ್ಪಿಸುವುದು’ ಇಂದು ಎಲ್ಲ ಪಕ್ಷಗಳಲ್ಲೂ ವ್ಯಾಪಕವಾಗಿದೆ. ಕೆಲವು ಉದ್ಯಮಿಗಳ ಬಳಿ ಕೋಟ್ಯಾಂತರ ರೂಪಾಯಿ ಹಣ ಪಡೆದು ಮೇಲ್ಮನೆಯ ಸದಸ್ಯತ್ವವನ್ನು ಮಾರಾಟ ಮಾಡುವ ಅಧಮ ರಾಜಕೀಯ ನಾಯಕರು ಹುಟ್ಟಿಕೊಂಡಿದ್ದಾರೆ. ಈಗಿನ ಮೇಲ್ಮನೆಯಲ್ಲಿ 50 ವರ್ಷಗಳ ಹಿಂದಿನಂತೆ ಅರ್ಹತೆಯುಳ್ಳವರು, ವರ್ಚಸುಳ್ಳವರು, ಗಣ್ಯರು, ಪಾರ್ಲಮೆಂಟೇರಿಯನ್‍ಗಳು, ಜನರ ಗೌರವಕ್ಕೆ ಪಾತ್ರರಾದವರ ಸಂಖ್ಯೆ ವಿರಳವಾಗುತ್ತಿದೆ. ವಾಸ್ತವದಲ್ಲಿ, ಮೇಲ್ಮನೆ ಕೆಳಮನೆಯ ಮಟ್ಟಕ್ಕೇ ಇಳಿದುಬಿಟ್ಟಿದೆ.


ಮೇಲ್ಮನೆ ಈಗ ವಿಧಾನಸಭೆಯ ಕಾಲೆಳೆಯುವ, ಕುಹಕಿಗಳಿಂದ ಕೂಡಿದ ಕೂಟವಾಗಿದೆ. ಇದರ ಘನತೆ ಗೌರವಗಳು ಹಾರಿಹೋಗಿವೆ. ಮೇಲ್ಮನೆ ವಿಧಾನಸಭೆಯ ಹಿತೈಷಿಯಾಗಿದ್ದರ ಬದಲಾಗಿ, ವಿಧಾನಸಭೆಯ ಶತ್ರು ಎನಿಸಿದೆ. ವಿಧಾನಸಭೆಯ ಘನತೆಯನ್ನು ಹೆಚ್ಚಿಸುವ ಕೆಲಸ ವಿಧಾನಪರಿಷತ್ತು ಮಾಡಬೇಕು. ಕಾಲ ಕಾಲಕ್ಕೆ ರಚನಾತ್ಮಕ ಸಲಹೆಗಳನ್ನು ನೀಡಿ, ವಿಧಾನ ಸಭೆ ಸರಿಯಾದ ದಾರಿಯಲ್ಲಿ ಸಾಗಲು ನೆರವಾಗಬೇಕು.
ವಿಧಾನಸಭೆ ಜನಪರವಾಗಿ ಕೆಲಸಮಾಡಲಿಕ್ಕೂ, ಸಂವಿಧಾನದ ಆಶಯವಾದ ಬಡವ – ಬಲ್ಲಿದ ಅಂತರವನ್ನು ತಗ್ಗಿಸುವ ಸಾಧನವನ್ನಾಗಿ ಪರಿವರ್ತಿಸುವ ಕೆಲಸವನ್ನೂ ವಿಧಾನ ಪರಿಷತ್ತು ಮಾಡಬೇಕಿತ್ತು. ಸರ್ಕಾರ ನಡೆಸುವವರ ಓರೆಕೋರೆಗಳನ್ನು ತಿದ್ದಿ, ಕಾನೂನಿಗನುಸಾರ ಕೆಲಸ ಮಾಡಿಸುವ ಕಾವಲು ಸಮಿತಿಯ ಪಾತ್ರವನ್ನು ನಿರ್ವಹಿಸಬೇಕು.
ಈಗಿನ ದುರಂತವೆಂದರೆ, ಹಾಲಿ ವಿಧಾನ ಪರಿಷತ್ತಿನಲ್ಲಿ ಕ್ರಿಮಿನಲ್‍ಗಳು, ಭೂಗಳ್ಳರು, ರಿಯಲ್ ಎಸ್ಟೇಟ್ ಧಂಧೆಯವರು, ಪಕ್ಷದ ನಾಯಕರ ಆಸ್ತಿಗಳನ್ನು ಕಾಪಾಡುವ ಏಜೆಂಟರು… ಎಲ್ಲರೂ ಇದ್ದಾರೆ. ಇಂತಹ ವಿಧಾನಪರಿಷತ್ತಿನ ಅಗತ್ಯತೆ ಇದೆಯೇ?
ಕುಮಾರಸ್ವಾಮಿಯವರ ಸರ್ಕಾರದಲ್ಲಿಯಾದರೂ ಘನತೆವೆತ್ತ ಜನರನ್ನು ಪರಿಷತ್ತಿಗೆ ಆಯ್ಕೆ ಮಾಡುವ ಪರಿಪಾಠ ಆರಂಭವಾಗುತ್ತದೆಯೆಂಬ ನಿರೀಕ್ಷೆ ಹುಸಿಯಾಗಿದೆ. ವಿಧಾನ ಪರಿಷತ್ತನ್ನು ಯಾವ ಉದಾತ್ತ ದೃಷ್ಟಿಯಿಂದ ಆರಂಭಿಸಲಾಯಿತೋ ಆ ದಿನಗಳು ಮತ್ತೆ ಬರುತ್ತವೆಯೆ?
– ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...