Homeಮುಖಪುಟರೋಗಿಗೆ ಯುರೋ ಬ್ಯಾಗ್ ಬದಲಿಗೆ ಕೋಲ್ಡ್ ಡ್ರಿಂಕ್ಸ್ ಬಾಟಲಿ ಅಳವಡಿಸಿದ ಆಸ್ಪತ್ರೆ: ರೋಗಿ ಸಾವು

ರೋಗಿಗೆ ಯುರೋ ಬ್ಯಾಗ್ ಬದಲಿಗೆ ಕೋಲ್ಡ್ ಡ್ರಿಂಕ್ಸ್ ಬಾಟಲಿ ಅಳವಡಿಸಿದ ಆಸ್ಪತ್ರೆ: ರೋಗಿ ಸಾವು

- Advertisement -
- Advertisement -

ರೋಗಿಯೊಬ್ಬರು ವೈದ್ಯರ ಯಡವಟ್ಟಿನಿಂದ ಮೃತಪಟ್ಟಿರುವ ಆರೋಪ ಪಾಟ್ನಾದ ಜಮುಯಿ ಸದರ್ ಆಸ್ಪತ್ರೆಯಲ್ಲಿ ಕೇಳಿ ಬಂದಿದೆ.ಯುರೋ ಬ್ಯಾಗ್( ಮೂತ್ರ ಚೀಲ)ದ ಬದಲು ವೈದ್ಯರು ಕೋಲ್ಡ್ ಡ್ರಿಂಕ್ಸ್ ಬಾಟಲಿಯನ್ನು ರೋಗಿಗೆ ಅಳವಡಿಸಿರುವ ಆರೋಪ ಕೇಳಿ ಬಂದಿದೆ.ಇದಕ್ಕೆ ಪುಷ್ಠಿ ನೀಡುವ ಪೋಟೊ ಕೂಡ ವೈರಲ್ ಆಗಿದೆ.

ರೋಗಿಯನ್ನು ಆಸ್ಪತ್ರೆಗೆ ಕರೆತಂದಾಗ ಸ್ಥಿತಿ ತುಂಬಾ ಗಂಭೀರವಾಗಿತ್ತು ಮತ್ತು ಅವರು ಇಂದು ನಿಧನರಾದರು. ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಮುಯಿ ಸಿವಿಲ್ ಸರ್ಜನ್ ಡಾ.ಕೆ.ಎಂ.ಪ್ರತಾಪ್ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಆಸ್ಪತ್ರೆಯ ನಿರ್ಲಕ್ಷ್ಯದಿಂದ ರೋಗಿಯು ಸಾವನ್ನಪ್ಪಿದ್ದಾನೆ ಎಂಬ ಆರೋಪವನ್ನು ನಿರಾಕರಿಸಿದ ಡಾ.ಪ್ರತಾಪ್, ಯುರೋ ಬ್ಯಾಗ್‌ನ ಬದಲಿಗೆ ಖಾಲಿ ತಂಪು ಪಾನೀಯ ಬಾಟಲಿಯನ್ನು ಜೋಡಿಸಿದ್ದಕ್ಕಾಗಿ ಸಂಬಂಧಪಟ್ಟ ಆರೋಗ್ಯ ಅಧಿಕಾರಿಗೆ ಶೋಕಾಸ್ ನೋಟಿಸ್ ನೀಡಿದ್ದೇನೆ ಎಂದು ಹೇಳಿದ್ದಾರೆ.

ರೋಗಿಯನ್ನು ರೈಲ್ವೇ ಪೊಲೀಸರು ಚಿಕಿತ್ಸೆಗಾಗಿ ದಾಖಲಿಸಿದಾಗ ಸದರ್ ಆಸ್ಪತ್ರೆಯಲ್ಲಿ ಯುರೋ ಬ್ಯಾಗ್ ಲಭ್ಯವಿರಲಿಲ್ಲ ಎಂದು ಸರ್ಜನ್ ಅವರು ಹೇಳಿದ್ದಾರೆ.

ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿ 15-20 ನಿಮಿಷಗಳಲ್ಲಿ ಯುರೋ ಬ್ಯಾಗ್ ವ್ಯವಸ್ಥೆ ಮಾಡಲಾಗಿದೆ.ಆದರೆ ಯಾರೋ ಒಬ್ಬರು ಖಾಲಿ ತಂಪು ಪಾನೀಯ ಬಾಟಲಿಯೊಂದಿಗೆ ಅವರ ಛಾಯಾಚಿತ್ರವನ್ನು ತೆಗೆದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದ್ದಾರೆ ಎಂದು ಸಿವಿಲ್ ಸರ್ಜನ್ ಹೇಳಿದ್ದಾರೆ.

ಸೋಮವಾರ ಸಂಜೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೋಗಿಯನ್ನು ಝಾಝಾ ರೈಲ್ವೆ ಪೊಲೀಸರು ಕರೆತಂದಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಪರೀಕ್ಷೆಯ ನಂತರ, ವೈದ್ಯರು ಯುರೋ ಬ್ಯಾಗ್ ವ್ಯವಸ್ಥೆ ಮಾಡಲು ಮತ್ತು ಇನ್ಸುಲಿನ್ ಚುಚ್ಚುಮದ್ದಿನ ಜೊತೆಗೆ ಗ್ಯಾಸ್ ಪೈಪ್ ನ್ನು ಸಿದ್ದಪಡಿಸಲು ಆಸ್ಪತ್ರೆಯ ಸಿಬ್ಬಂದಿಗೆ ಸೂಚಿಸಿದ್ದಾರೆ. ತಕ್ಷಣಕ್ಕೆ ಯುರೋ ಬ್ಯಾಗ್ ಲಭ್ಯವಿಲ್ಲದ ಕಾರಣ, ರೋಗಿಗೆ ಖಾಲಿ ಸ್ಪ್ರೈಟ್ ಬಾಟಲಿಯನ್ನು ಅಳವಡಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಆದರೆ ಆಸ್ಪತ್ರೆಯು ಸ್ಪ್ರೈಟ್ ಬಾಟಲಿಯನ್ನು ಅಳವಡಿಸಿರುವುದು ರೋಗಿಯ ಸಾವಿಗೆ ಕಾರಣ ಎಂದು ಮಾಧ್ಯಮ ವರದಿಗಳು ಆರೋಪಿಸಿವೆ.

ಇದನ್ನು ಓದಿ: ಮಣಿಪುರ ವಿಚಾರದಲ್ಲಿ ರಾಹುಲ್ ಹೃದಯದಿಂದ ಮಾತನಾಡಿದರೆ, ಶಾ ರಾಜಕೀಯವಾಗಿ ಮಾತನಾಡಿದ್ದಾರೆ: ಟಿಎಂಸಿ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...