Homeಮುಖಪುಟಮಹಾರಾಷ್ಟ್ರ:ಪತ್ರಕರ್ತನ ಮೇಲೆ ಶಾಸಕನ ಬೆಂಬಲಿಗರಿಂದ ಹಲ್ಲೆ

ಮಹಾರಾಷ್ಟ್ರ:ಪತ್ರಕರ್ತನ ಮೇಲೆ ಶಾಸಕನ ಬೆಂಬಲಿಗರಿಂದ ಹಲ್ಲೆ

- Advertisement -
- Advertisement -

8ರ ಹರೆಯದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಮುಂದಿಟ್ಟು ಶಾಸಕ ಕಿಶೋರ್ ಪಾಟೀಲ್ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಲ್ಲಿ ನ್ಯಾಯ ಒದಗಿಸುವಂತೆ ಆಗ್ರಹಿಸಿದ ಮಹಾರಾಷ್ಟ್ರದ ಪತ್ರಕರ್ತ ಸಂದೀಪ್ ಮಹಾಜನ್ ಮೇಲೆ  ಶಾಸಕ ಕಿಶೋರ್ ಪಾಟೀಲ್ ಬೆಂಬಲಿಗರು ಹಾಗೂ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಶಿವಸೇನಾ ಶಿಂಧೆ ಬಣದ ಶಾಸಕ ಮತ್ತು ಆತನ ಬೆಂಬಲಿಗರ ಈ ಕೃತ್ಯವನ್ನು ಪ್ರತಿಪಕ್ಷಗಳು ಖಂಡಿಸಿದ್ದು, ಶಾಸಕ ಕಿಶೋರ್ ಪಾಟೀಲ್ ಮತ್ತು ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪ್ರತಿಪಕ್ಷಗಳು ಒತ್ತಾಯಿಸಿವೆ. ಅಲ್ಲದೆ ಪತ್ರಕರ್ತನಿಗೆ  ಹಾಗೂ ಆತನ ಕುಟುಂಬಕ್ಕೆ ಬೆದರಿಕೆಯೊಡ್ಡುತ್ತಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದೆ.

ಎನ್‌ಸಿಪಿ ಶಾಸಕ ರೋಹಿತ್ ಪವಾರ್ ಕೂಡ ಈ ವಿಷಯ ಪ್ರಸ್ತಾಪಿಸಿದ್ದು, ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ ಎಂಬುದನ್ನು ಈ ಘಟನೆ ತೋರಿಸುತ್ತದೆ ಎಂದು ಹೇಳಿದ್ದಾರೆ. ಮಾಧ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿದೆ ಆದರೆ ಪತ್ರಕರ್ತರ ಮೇಲೆಯೇ ಸವಾರಿ ನಡೆಯುತ್ತದೆ ಯಾಕೆಂದರೆ ಅವರು ಸಮಸ್ಯೆಗಳನ್ನು ಬಯಲಿಗೆಳೆಯುತ್ತಾರೆ ಎಂದು ಅವರು ಹೇಳಿದ್ದು, ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ದೇಶದ್ರೋಹಿ ಗ್ಯಾಂಗ್‌ನ ಗೂಂಡಾಗಳು ನಿರ್ಲಜ್ಜವಾಗಿ ವರ್ತಿಸಿದ್ದಾರೆ ಎಂದು ಉದ್ಧವ್ ಠಾಕ್ರೆ ಬಣದ ಶಿವಸೇನೆ ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಹೇಳಿದ್ದಾರೆ.

ಸಂದೀಪ್ ಮಹಾಜನ್ ಅವರು ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಪಚೋರಾದಲ್ಲಿ ತಮ್ಮದೇ ಆದ ಯೂಟ್ಯೂಬ್ ಚಾನೆಲ್ ಮತ್ತು ಪತ್ರಿಕೆಯನ್ನು ನಡೆಸುತ್ತಿದ್ದಾರೆ.ಕೆಲವು ದಿನಗಳ ಹಿಂದೆ, ಎಂಟು ವರ್ಷದ ಬಾಲಕಿಯ ಮೇಲೆ 19 ವರ್ಷದ ನೆರೆಮನೆಯ ಯುವಕನೋರ್ವ ಅತ್ಯಾಚಾರವೆಸಗಿ ಆಕೆಗೆ ಕಲ್ಲಿನಿಂದ ಹಲ್ಲೆ ಮಾಡಿದ್ದ. ಸ್ಥಳೀಯ ಪೊಲೀಸರು ಹಾಗೂ ಶಾಸಕ ಕಿಶೋರ ಪಾಟೀಲ್ ಈ ಪ್ರಕರಣವನ್ನು ಮುಚ್ಚಿ ಹಾಕಲು  ಯತ್ನಿಸಿದರು ಎಂಬ ಆರೋಪ ಕೇಳಿ ಬಂದಿದೆ.

ಸಂದೀಪ್ ಮಹಾಜನ್ ಅವರು ತಮ್ಮ ಸ್ಥಳೀಯ ಪತ್ರಿಕೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಈ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನುಸುದ್ದಿ ಮಾಡಿದ್ದರು ಮತ್ತು ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ಸುದ್ದಿಯನ್ನು ಪ್ರಸಾರ ಮಾಡಿದ್ದರು. ಶಿಂಧೆ ಬಣದ ಶಿವಸೇನೆ ಶಾಸಕ ಕಿಶೋರ್ ಪಾಟೀಲ್ ಪತ್ರಕರ್ತ ಸಂದೀಪ್ ಮಹಾಜನ್ ಅವರ ವರದಿಯ ಬಗ್ಗೆ ಕೋಪಗೊಂಡರು ಮತ್ತು ಫೋನ್ ಮೂಲಕ ಸಂದೀಪ್ ಮಹಾಜನ್ ಗೆ ನಿಂದಿಸಿದ್ದಾರೆ. ಇದನ್ನು ಪತ್ರಕರ್ತ ಪ್ರಶ್ನಿಸಿದಾಗ ಶಾಸಕ ಕಿಶೋರ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಆದರೆ ಸಂದೀಪ್ ಮಹಾಜನ್ ಅವರು ಅತ್ಯಾಚಾರ ಮತ್ತು ಕೊಲೆ ಘಟನೆಯ ಬಗ್ಗೆ ತಮ್ಮ ವರದಿಯನ್ನು ಮುಂದುವರಿಸಿದ್ದರು ಮತ್ತು ಸ್ಥಳೀಯ ಶಾಸಕ ಕಿಶೋರ್ ಪಾಟೀಲ್ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಪ್ರಶ್ನೆಗಳನ್ನು ಎತ್ತಿ ಬಾಲಕಿ ಮತ್ತು ಆಕೆಯ ಕುಟುಂಬಕ್ಕೆ ನ್ಯಾಯಕ್ಕಾಗಿ ಒತ್ತಾಯಿಸಿದ್ದರು.

ಶಿವಸೇನಾ ಶಾಸಕ ಕಿಶೋರ್ ಪಾಟೀಲ್  ಬೆಂಬಲಿಗರು ಮಹಾಜನ್ ಅವರು ಕಚೇರಿಗೆ ಹೋಗುತ್ತಿದ್ದಾಗ  ಅವರನ್ನು ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಹಲ್ಲೆ ನಡೆಸಿದ್ದಾರೆ. ಅವರು ಪೊಲೀಸ್ ಕೇಸ್ ದಾಖಲಿಸಲು ಹೋದಾಗ ಪೊಲೀಸರು ಶಿವಸೇನಾ ಶಾಸಕ ಕಿಶೋರ್ ಪಾಟೀಲ್ ಮತ್ತು ಅವರ ಗೂಂಡಾಗಳ ವಿರುದ್ಧ ಪ್ರಕರಣ ದಾಖಲಿಸಲು ನಿರಾಕರಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಇದನ್ನು ಓದಿ: ಹರ್ಯಾಣ ಹಿಂಸಾಚಾರ: ಮುಸ್ಲಿಮರ ರಕ್ಷಣೆಗೆ ನಿಲ್ಲುವುದಾಗಿ ನಿರ್ಣಯ ತೆಗೆದುಕೊಂಡ ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...