Homeಮುಖಪುಟಮಹಾರಾಷ್ಟ್ರ:ಪತ್ರಕರ್ತನ ಮೇಲೆ ಶಾಸಕನ ಬೆಂಬಲಿಗರಿಂದ ಹಲ್ಲೆ

ಮಹಾರಾಷ್ಟ್ರ:ಪತ್ರಕರ್ತನ ಮೇಲೆ ಶಾಸಕನ ಬೆಂಬಲಿಗರಿಂದ ಹಲ್ಲೆ

- Advertisement -
- Advertisement -

8ರ ಹರೆಯದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಮುಂದಿಟ್ಟು ಶಾಸಕ ಕಿಶೋರ್ ಪಾಟೀಲ್ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಲ್ಲಿ ನ್ಯಾಯ ಒದಗಿಸುವಂತೆ ಆಗ್ರಹಿಸಿದ ಮಹಾರಾಷ್ಟ್ರದ ಪತ್ರಕರ್ತ ಸಂದೀಪ್ ಮಹಾಜನ್ ಮೇಲೆ  ಶಾಸಕ ಕಿಶೋರ್ ಪಾಟೀಲ್ ಬೆಂಬಲಿಗರು ಹಾಗೂ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಶಿವಸೇನಾ ಶಿಂಧೆ ಬಣದ ಶಾಸಕ ಮತ್ತು ಆತನ ಬೆಂಬಲಿಗರ ಈ ಕೃತ್ಯವನ್ನು ಪ್ರತಿಪಕ್ಷಗಳು ಖಂಡಿಸಿದ್ದು, ಶಾಸಕ ಕಿಶೋರ್ ಪಾಟೀಲ್ ಮತ್ತು ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪ್ರತಿಪಕ್ಷಗಳು ಒತ್ತಾಯಿಸಿವೆ. ಅಲ್ಲದೆ ಪತ್ರಕರ್ತನಿಗೆ  ಹಾಗೂ ಆತನ ಕುಟುಂಬಕ್ಕೆ ಬೆದರಿಕೆಯೊಡ್ಡುತ್ತಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದೆ.

ಎನ್‌ಸಿಪಿ ಶಾಸಕ ರೋಹಿತ್ ಪವಾರ್ ಕೂಡ ಈ ವಿಷಯ ಪ್ರಸ್ತಾಪಿಸಿದ್ದು, ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ ಎಂಬುದನ್ನು ಈ ಘಟನೆ ತೋರಿಸುತ್ತದೆ ಎಂದು ಹೇಳಿದ್ದಾರೆ. ಮಾಧ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿದೆ ಆದರೆ ಪತ್ರಕರ್ತರ ಮೇಲೆಯೇ ಸವಾರಿ ನಡೆಯುತ್ತದೆ ಯಾಕೆಂದರೆ ಅವರು ಸಮಸ್ಯೆಗಳನ್ನು ಬಯಲಿಗೆಳೆಯುತ್ತಾರೆ ಎಂದು ಅವರು ಹೇಳಿದ್ದು, ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ದೇಶದ್ರೋಹಿ ಗ್ಯಾಂಗ್‌ನ ಗೂಂಡಾಗಳು ನಿರ್ಲಜ್ಜವಾಗಿ ವರ್ತಿಸಿದ್ದಾರೆ ಎಂದು ಉದ್ಧವ್ ಠಾಕ್ರೆ ಬಣದ ಶಿವಸೇನೆ ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಹೇಳಿದ್ದಾರೆ.

ಸಂದೀಪ್ ಮಹಾಜನ್ ಅವರು ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಪಚೋರಾದಲ್ಲಿ ತಮ್ಮದೇ ಆದ ಯೂಟ್ಯೂಬ್ ಚಾನೆಲ್ ಮತ್ತು ಪತ್ರಿಕೆಯನ್ನು ನಡೆಸುತ್ತಿದ್ದಾರೆ.ಕೆಲವು ದಿನಗಳ ಹಿಂದೆ, ಎಂಟು ವರ್ಷದ ಬಾಲಕಿಯ ಮೇಲೆ 19 ವರ್ಷದ ನೆರೆಮನೆಯ ಯುವಕನೋರ್ವ ಅತ್ಯಾಚಾರವೆಸಗಿ ಆಕೆಗೆ ಕಲ್ಲಿನಿಂದ ಹಲ್ಲೆ ಮಾಡಿದ್ದ. ಸ್ಥಳೀಯ ಪೊಲೀಸರು ಹಾಗೂ ಶಾಸಕ ಕಿಶೋರ ಪಾಟೀಲ್ ಈ ಪ್ರಕರಣವನ್ನು ಮುಚ್ಚಿ ಹಾಕಲು  ಯತ್ನಿಸಿದರು ಎಂಬ ಆರೋಪ ಕೇಳಿ ಬಂದಿದೆ.

ಸಂದೀಪ್ ಮಹಾಜನ್ ಅವರು ತಮ್ಮ ಸ್ಥಳೀಯ ಪತ್ರಿಕೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಈ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನುಸುದ್ದಿ ಮಾಡಿದ್ದರು ಮತ್ತು ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ಸುದ್ದಿಯನ್ನು ಪ್ರಸಾರ ಮಾಡಿದ್ದರು. ಶಿಂಧೆ ಬಣದ ಶಿವಸೇನೆ ಶಾಸಕ ಕಿಶೋರ್ ಪಾಟೀಲ್ ಪತ್ರಕರ್ತ ಸಂದೀಪ್ ಮಹಾಜನ್ ಅವರ ವರದಿಯ ಬಗ್ಗೆ ಕೋಪಗೊಂಡರು ಮತ್ತು ಫೋನ್ ಮೂಲಕ ಸಂದೀಪ್ ಮಹಾಜನ್ ಗೆ ನಿಂದಿಸಿದ್ದಾರೆ. ಇದನ್ನು ಪತ್ರಕರ್ತ ಪ್ರಶ್ನಿಸಿದಾಗ ಶಾಸಕ ಕಿಶೋರ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಆದರೆ ಸಂದೀಪ್ ಮಹಾಜನ್ ಅವರು ಅತ್ಯಾಚಾರ ಮತ್ತು ಕೊಲೆ ಘಟನೆಯ ಬಗ್ಗೆ ತಮ್ಮ ವರದಿಯನ್ನು ಮುಂದುವರಿಸಿದ್ದರು ಮತ್ತು ಸ್ಥಳೀಯ ಶಾಸಕ ಕಿಶೋರ್ ಪಾಟೀಲ್ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಪ್ರಶ್ನೆಗಳನ್ನು ಎತ್ತಿ ಬಾಲಕಿ ಮತ್ತು ಆಕೆಯ ಕುಟುಂಬಕ್ಕೆ ನ್ಯಾಯಕ್ಕಾಗಿ ಒತ್ತಾಯಿಸಿದ್ದರು.

ಶಿವಸೇನಾ ಶಾಸಕ ಕಿಶೋರ್ ಪಾಟೀಲ್  ಬೆಂಬಲಿಗರು ಮಹಾಜನ್ ಅವರು ಕಚೇರಿಗೆ ಹೋಗುತ್ತಿದ್ದಾಗ  ಅವರನ್ನು ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಹಲ್ಲೆ ನಡೆಸಿದ್ದಾರೆ. ಅವರು ಪೊಲೀಸ್ ಕೇಸ್ ದಾಖಲಿಸಲು ಹೋದಾಗ ಪೊಲೀಸರು ಶಿವಸೇನಾ ಶಾಸಕ ಕಿಶೋರ್ ಪಾಟೀಲ್ ಮತ್ತು ಅವರ ಗೂಂಡಾಗಳ ವಿರುದ್ಧ ಪ್ರಕರಣ ದಾಖಲಿಸಲು ನಿರಾಕರಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಇದನ್ನು ಓದಿ: ಹರ್ಯಾಣ ಹಿಂಸಾಚಾರ: ಮುಸ್ಲಿಮರ ರಕ್ಷಣೆಗೆ ನಿಲ್ಲುವುದಾಗಿ ನಿರ್ಣಯ ತೆಗೆದುಕೊಂಡ ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...