Homeಸಿನಿಮಾಕ್ರೀಡೆಬ್ರಿಜ್‌ಭೂಷಣ್ ಆಪ್ತ WFI ಅಧ್ಯಕ್ಷರಾಗದಂತೆ ತಡೆಯಲು ಶಾ ಭೇಟಿಗೆ ಮುಂದಾದ ಕುಸ್ತಿಪಟುಗಳು

ಬ್ರಿಜ್‌ಭೂಷಣ್ ಆಪ್ತ WFI ಅಧ್ಯಕ್ಷರಾಗದಂತೆ ತಡೆಯಲು ಶಾ ಭೇಟಿಗೆ ಮುಂದಾದ ಕುಸ್ತಿಪಟುಗಳು

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ಭೂಷಣ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಭಾರತೀಯ ಕುಸ್ತಿ ಫೆಡರೇಶನ್‌ನ (WFI) ಅಧ್ಯಕ್ಷರಾಗದಂತೆ ಮಾಡಲು ಕುಸ್ತಿಪಟುಗಳಾದ ಬಜರಂಗ್ ಫೆಡರೇಷನ್‌ನ ಬಜರಂಗ್ ಪೂನಿಯಾ, ವಿನೇಶಾ ಫೋಗಟ್ ಹಾಗೂ ಸಾಕ್ಷಿ ಮಲಿಕ್‌ ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

WFI ಅಧ್ಯಕ್ಷ ಸ್ಥಾನಕ್ಕೆ ಶನಿವಾರ (ಆಗಸ್ಟ್ 12ರಂದು) ಚುನಾವಣೆ ನಡೆಯಲಿದ್ದು, ಸಂಜಯ್ ಸಿಂಗ್ ಮತ್ತು 2010ರ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೊರಾಣ್ ನಡುವೆ ನೇರ ಪೈಪೋಟಿ ಇದೆ.

ಬಿಜೆಪಿ ಸಂಸದ ಹಾಗೂ WFIನ ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್‌ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಎರಡು ತಿಂಗಳು ಪ್ರತಿಭಟನೆ ನಡೆಸಿದ್ದರು. ಆರೋಪ ಮಾಡಿರುವ ಆರು ಮಹಿಳಾ ಕುಸ್ತಿಪಟುಗಳು, ಅನಿತಾ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಅನಿತಾ ಅವರು ಬ್ರಿಜ್‌ ಭೂಷಣ್‌ ವಿರುದ್ಧದ ಪ್ರಕರಣದ ಸಾಕ್ಷಿಗಳಲ್ಲಿ ಒಬ್ಬರಾಗಿದ್ದಾರೆ.

ಕುಸ್ತಿಪಟುಗಳು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಗುರುವಾರ ಬೆಳಿಗ್ಗೆ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಗೃಹ ಸಚಿವ ಅಮಿತ್‌ ಶಾ ಅವರನ್ನೂ ಭೇಟಿ ಮಾಡುವ ವಿಶ್ವಾಸದಲ್ಲಿದ್ದಾರೆ ಎಂದು ಬಜರಂಗ್, ವಿನೇಶಾ ಮತ್ತು ಸಾಕ್ಷಿ ಅವರ ನಿಕಟವರ್ತಿಯೊಬ್ಬರು ಪಿಟಿಐಗೆ ಮಾಹಿತಿ ನೀಡಿದ್ದಾರೆ.

”ಅಮಿತ್ ಶಾ ಅವರು ಕುಸ್ತಿಪಟುಗಳಿಗೆ ಇಂದು ಸಮಯ ನೀಡುವ ವಿಶ್ವಾಸವಿದೆ. ಸಂಸತ್ ಅಧಿವೇಶನದ ಬಳಿಕ ಗ್ರಹ ಸಚಿವರು ಕುಸ್ತಿಪಟುಗಳನ್ನು ಭೇಟಿ ಮಾಡಲಿದ್ದಾರೆ. ಬಿಜ್‌ಭೂಷಣ್ ಬಣದ ಸಂಜಯ್ ಸಿಂಗ್ WFI ಅಧ್ಯಕ್ಷರಾಗುವ ಬಗ್ಗೆ ಕುಸ್ತಿಪಟುಗಳು ತಮ್ಮ ಕಳವಳವನ್ನು ಮನವರಿಕೆ ಮಾಡಿಕೊಡಲಿದ್ದಾರೆ ಬ್ರಿಜ್‌ಭೂಷಣ್ ಸಂಬಂಧಿಕರು, ಆಪ್ತರು WFI ಅಧ್ಯಕ್ಷ ಸ್ಥಾನದ  ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ಬೇಡಿಕೆ ಇಡಲಿದ್ದಾರೆ” ಎಂದು ತಿಳಿಸಿದ್ದಾರೆ.

”ಸಂಜಯ್ ಸಿಂಗ್ ಅವರು ಬಿಜೆಪಿ ನಾಯಕ ಬ್ರಿಜ್‌ಭೂಷಣ್ ಆಪ್ತರು ಮಾತ್ರವಲ್ಲ. ಅವರ ಉದ್ಯಮದಲ್ಲಿ ಪಾಲುದಾರರೂ ಆಗಿದ್ದಾರೆ. ಹಾಗಾಗಿ ಸಂಜಯ ಅಧ್ಯಕ್ಷರಾದರೆ ಬ್ರಿಜ್‌ಭೂ‍ಣ್ ವಿರುದ್ಧ ಪ್ರತಿಭಟನೆ ನಡೆಸಿದ, ಕುಸ್ತಿಪಟುಗಳಿಗೆ ಹಿನ್ನಡೆಯಾಗಲಿದೆ. ಸಂಜಯ್ ಸಿಂಗ್‌ ಚುನಾವಣೆಗೆ ಸ್ಪರ್ಧಿಸುವುದು ಬ್ರಿಜ್ ಭೂಷಣ್ ಅವರ ಪುತ್ರನೇ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಸಮ” ಎಂದು ಹೆಸರು ಹೇಳಲಿಚ್ಛಿಸದ ವ್ಯಕ್ತಿ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...