Homeಮುಖಪುಟಮೋದಿ ಮೊದಲ 90 ನಿಮಿಷದಲ್ಲಿ ಮಣಿಪುರದ ಬಗ್ಗೆ ಪ್ರಸ್ತಾಪಿಸಿಲ್ಲ: ಪ್ರತಿಪಕ್ಷಗಳಿಂದ ಟೀಕೆ

ಮೋದಿ ಮೊದಲ 90 ನಿಮಿಷದಲ್ಲಿ ಮಣಿಪುರದ ಬಗ್ಗೆ ಪ್ರಸ್ತಾಪಿಸಿಲ್ಲ: ಪ್ರತಿಪಕ್ಷಗಳಿಂದ ಟೀಕೆ

- Advertisement -
- Advertisement -

ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಪ್ರತಿಕ್ರಿಯೆಯನ್ನು ಪ್ರತಿಪಕ್ಷಗಳು ಟೀಕಿಸಿದೆ. ಅವರು ಮಣಿಪುರ ಹಿಂಸಾಚಾರದ ಬಗ್ಗೆ 90 ನಿಮಿಷಗಳ ಕಾಲ ಭಾಷಣ ಮಾಡಿದರೂ ಮಾತನಾಡಲಿಲ್ಲ ಮತ್ತು ನಾವು ಸದನದಿಂದ ಹೊರನಡೆದ ನಂತರ ಮಾತ್ರ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ವಿರೋಧ ಪಕ್ಷಗಳು ಟೀಕಿಸಿದೆ.

ಅವಿಶ್ವಾಸ ನಿರ್ಣಯಕ್ಕೆ ಪ್ರಧಾನಿ ಮೋದಿಯವರ ಉತ್ತರದ ಸಮಯದಲ್ಲಿ ಪ್ರತಿಪಕ್ಷ  I.N.D.I.A ಯ ಸಂಸದರು ಲೋಕಸಭೆಯಿಂದ ಹೊರನಡೆದಿದ್ದಾರೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒ’ಬ್ರೇನ್ ಅವರುಈ ಕುರಿತು ಟ್ವೀಟ್ ಮಾಡಿದ್ದು  , 21 ದಿನಗಳ ಕಾಲ ತಲೆಮರೆಸಿಕೊಂಡ ನಂತರ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಳೆದುಕೊಂಡು ಲೋಕಸಭೆಗೆ ವಿಶ್ವಾಸಮತ ಯಾಚನೆಯೊಂದಿಗೆ ಬರುವಂತೆ ಮಾಡಬೇಕಾಯಿತು.ಮೊದಲ ಒಂದು ಗಂಟೆ ಭಾಷಣದಲ್ಲಿ, ಕಲ್ಲು ಹೃದಯದ ವ್ಯಕ್ತಿ ಮಣಿಪುರದ ಬಗ್ಗೆ ಒಂದು ಮಾತನ್ನು ಕೂಡ ಹೇಳಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪ್ರಧಾನಿ ಮೋದಿಗಿಂತ ಹೆಚ್ಚು ಸಂಸತ್ತಿಗೆ ಅವಮಾನ ಮಾಡಿಲ್ಲ ಎಂದು ಡೆರೆಕ್ ಒಬ್ರಿಯಾನ್ ಹೇಳಿದ್ದಾರೆ.

ವಿರೋಧ ಪಕ್ಷವು ನಿರ್ಗಮಿಸಿದ ಮೂವತ್ತು ಸೆಕೆಂಡುಗಳಲ್ಲಿ, ಪ್ರಧಾನಿ ಮೋದಿ ಮಣಿಪುರದ ಬಗ್ಗೆ ಕೇವಲ ನಾಲ್ಕು ನಿಮಿಷಗಳ ಭಾಷಣದಲ್ಲಿ ತೊಡಗಿದರು ಎಂದು ಟಿಎಂಸಿ ಪ್ರಧಾನಿ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದೆ.

ಪ್ರಧಾನಿಯವರು ತಮ್ಮ ಭಾಷಣದಲ್ಲಿ ಪ್ರತಿಪಕ್ಷಗಳನ್ನು, ಮುಖ್ಯವಾಗಿ ಕಾಂಗ್ರೆಸ್‌ನ್ನು ತರಾಟೆಗೆ ತೆಗೆದುಕೊಂಡರು, “ಅವರಿಗೆ ಬಡವರ ಹಸಿವಿನ ಬಗ್ಗೆ ಚಿಂತೆ ಇಲ್ಲ, ಅಧಿಕಾರದ ಬಗ್ಗೆ ಮಾತ್ರ ಚಿಂತೆ” ಎಂದು ಹೇಳಿದರು.

ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷವು ಗೆಲ್ಲುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು ಮತ್ತು 2028ರಲ್ಲಿ ಮತ್ತೊಂದು ಅವಿಶ್ವಾಸ ನಿರ್ಣಯಕ್ಕೆ  ಸಿದ್ಧರಾಗಿ ಬರಲು ಪ್ರತಿಪಕ್ಷಗಳನ್ನು ಲೇವಡಿ ಮಾಡಿದರು.

ಮಣಿಪುರ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಇಡೀ ದೇಶವು ಮಣಿಪುರದೊಂದಿಗೆ ಇದೆ ಮತ್ತು ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಹೇಳಿದರು.

ಪ್ರಧಾನಿ ಮೋದಿಯವರಿಗೆ ಕಾಂಗ್ರೆಸ್ ನ ಭಯ  ಆವರಿಸಿದೆ ಮತ್ತು ಅದಕ್ಕಾಗಿಯೇ ಅವರು ಲೋಕಸಭೆಯಲ್ಲಿ ಮಾಡಿದ ಭಾಷಣದುದ್ದಕ್ಕೂ ಪಕ್ಷವನ್ನು ಟೀಕಿಸಿದರು ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಾತನಾಡಿ, ಪ್ರಧಾನಿ ಅವರು ಎರಡು ಗಂಟೆಗಳ ಕಾಲ ಮಾತನಾಡಿದ್ದಾರೆ. ಈ ಸಮಯದಲ್ಲಿ ಅವರು ಮಣಿಪುರದ ಬಗ್ಗೆ ಮಾತನಾಡುವ ಬದಲು ಪಕ್ಷವನ್ನು ಟೀಕಿಸಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರ ಭಾಷಣಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ಲೋಕಸಭೆಯ ಚರ್ಚೆಯನ್ನು ಚುನಾವಣಾ ರ್ಯಾಲಿಯಂತೆ ಬಳಸುತ್ತಿದ್ದಾರೆ.ನೀವು ಮೊದಲು ನಿಮ್ಮ ಮೊಂಡುತನ ಮತ್ತು ದುರಹಂಕಾರವನ್ನು ತ್ಯಜಿಸಿದ್ದರೆ, ಸಂಸತ್ತಿನ ಈ ಅಮೂಲ್ಯ ಸಮಯವನ್ನು ಉಳಿಸಬಹುದಿತ್ತು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನು ಓದಿ: ಮಹಾರಾಷ್ಟ್ರ:ಪತ್ರಕರ್ತನ ಮೇಲೆ ಶಾಸಕನ ಬೆಂಬಲಿಗರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...