Homeಮುಖಪುಟಮಣಿಪುರ ಹಿಂಸಾಚಾರ: ವಿಳಂಬ ತನಿಖೆಗೆ ಸುಪ್ರೀಂ ಬೇಸರ

ಮಣಿಪುರ ಹಿಂಸಾಚಾರ: ವಿಳಂಬ ತನಿಖೆಗೆ ಸುಪ್ರೀಂ ಬೇಸರ

- Advertisement -
- Advertisement -

ಮಣಿಪುರದ ಹಿಂಸಾಚಾರ ಘಟನೆಗಳ ಕುರಿತಾದ ತನಿಖೆ ವಿಳಂಬವಾಗುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ಬೇಸರ ವ್ಯಕ್ತಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ”ಕೊಲೆ, ಅತ್ಯಾಚಾರ, ಬೆಂಕಿ ಹಚ್ಚುವಿಕೆ ಮತ್ತು ಎಫ್‌ಐಆರ್ ದಾಖಲಿಸದಿರುವುದು ಸೇರಿದಂತೆ ಘೋರ ಅಪರಾಧಗಳನ್ನು ಒಳಗೊಂಡ ಘಟನೆಗಳ ನಡುವೆ ತನಿಖೆಯನ್ನು ವಿಳಂಬ ಮಾಡಲಾಗುತ್ತಿದೆ” ಎನ್ನುವ ಅರ್ಜಿಗಳ ವಿಚಾರಣೆ ನಡೆಸಿದೆ.

ಅಪರಾಧ ನಡೆದಿರುವ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಸಾಮಾನ್ಯವಾಗಿ ಎಫ್‌ಐಆರ್ ದಾಖಲಿಸಲಾಗುತ್ತದೆ. ಯಾವುದೇ ಪೊಲೀಸ್ ಠಾಣೆಯು ದೂರು ಸ್ವೀಕರಿಸಿದ ಆನಂತರ ಮೊದಲು ಶೂನ್ಯ ಎಫ್‌ಐಆರ್ ದಾಖಲಿಸಬೇಕು. ಆ ಬಳಿಕ ಅದನ್ನು ಸಂಬಂಧಪಟ್ಟ ಠಾಣೆಗೆ ರವಾನಿಸಲು ಅನುಮತಿಸುತ್ತದೆ.

ಶೂನ್ಯ ಎಫ್‌ಐಆರ್‌ಗಳನ್ನು ದಾಖಲಿಸಿದ ಬಳಿಕ ತನಿಖೆಯ ಅಧಿಕಾರ ಹೊಂದಿರುವ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ರವಾನಿಸುವಲ್ಲಿ ಗಮನಾರ್ಹ ವಿಳಂಬವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 161 (ಪೊಲೀಸರಿಂದ ಸಾಕ್ಷಿಗಳ ಪರೀಕ್ಷೆ) ಮತ್ತು ಸೆಕ್ಷನ್ 164 (ಮ್ಯಾಜಿಸ್ಟ್ರೇಟ್ ಮುಂದೆ ಮಾಡಿದ ತಪ್ಪೊಪ್ಪಿಗೆಗಳು ಅಥವಾ ಹೇಳಿಕೆಗಳು) ಅಡಿಯಲ್ಲಿ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುವಲ್ಲಿ ವಿಳಂಬ ಮತ್ತು “ಶ್ರದ್ಧೆಯ ಕೊರತೆ” ಯನ್ನು ನ್ಯಾಯಾಲಯ ಎತ್ತಿ ತೋರಿಸಿದೆ.

ಲೈಂಗಿಕ ದೌರ್ಜನ್ಯವನ್ನು ತಡೆಗಟ್ಟುವುದು ಮತ್ತು ಸಂತ್ರಸ್ತರನ್ನು ರಕ್ಷಿಸುವುದು ಸರ್ಕಾರದ ಬದ್ಧ ಕರ್ತವ್ಯ ಎಂದು ಪೀಠವು ಗಮನಿಸಿದೆ.

”ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಮಹಿಳೆಯರು ಲೈಂಗಿಕ ದೌರ್ಜನ್ಯದ ಗಂಭೀರ ಕೃತ್ಯಗಳಿಗೆ ಒಳಗಾದ ರೀತಿ ವಿಚಾರದಲ್ಲಿ ದುಃಖವನ್ನು ವ್ಯಕ್ತಪಡಿಸಬೇಕು. ಜನಾಂಗೀಯ ಹಿಂಸಾಚಾರದ ಸಮಯದಲ್ಲಿ, ಒಂದು ಸಮುದಾಯ ಇನ್ನೊಂದು ಸಮುದಾಯ ಅಧೀನದಲ್ಲಿರಲು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತದೆ. ಮಹಿಳೆಯರ ಮೇಲಿನ ಇಂತಹ ಹಿಂಸಾಚಾರವು ಒಂದು ದೌರ್ಜನ್ಯವಲ್ಲದೆ ಮತ್ತೇನೂ ಅಲ್ಲ” ಎಂದು ಆದೇಶದಲ್ಲಿ ಹೇಳಲಾಗಿದೆ.

ಸರ್ಕಾರವು ಈ ಹಿಂಸಾಚಾರದ ಅಪರಾಧಿಗಳೊಂದಿಗೆ ಸೇರಿಕೊಂಡಿದೆ ಎಂಬ “ಗಂಭೀರ ಆರೋಪಗಳು” ಇವೆ ಎಂದು ನ್ಯಾಯಾಲಯವು ಗಮನಿಸಿದೆ.

”ಆರೋಪಗಳ ಮೇಲೆ ವಸ್ತುನಿಷ್ಠ ಸತ್ಯಶೋಧನೆಯನ್ನು ನಡೆಸಬೇಕಾಗುತ್ತದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕರ್ತವ್ಯಲೋಪ ಎಸಗಿದ ಅಧಿಕಾರಿಗಳನ್ನು ಅವರ ದರ್ಜೆ ಅಥವಾ ಹುದ್ದೆಯನ್ನು ಲೆಕ್ಕಿಸದೆ ಖಾತೆಗೆ ತೆಗೆಬೇಕು. ಹಿಂಸಾಚಾರದ ದುಷ್ಕರ್ಮಿಗಳೊಂದಿಗೆ ಶಾಮೀಲಾಗಿರುವವರನ್ನು “ತಪ್ಪದೆ ಹೊಣೆಗಾರರನ್ನಾಗಿ ಮಾಡಬೇಕು” ಎಂದು ಪೀಠವು ಹೇಳಿದೆ.

ಮೇ 3 ರಂದು ಈಶಾನ್ಯ ರಾಜ್ಯದಲ್ಲಿ ಕುಕಿ ಮತ್ತು ಮೈಟೆಯಿ ಸಸುಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದ ನಂತರ ಕನಿಷ್ಠ 187 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 60,000 ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಮತ್ತು ಕೇಂದ್ರ ಭದ್ರತಾ ಪಡೆಗಳ ಭಾರೀ ಉಪಸ್ಥಿತಿಯ ಹೊರತಾಗಿಯೂ ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ.

ಮಣಿಪುರದಲ್ಲಿ ಸುಗ್ರೀವಾಜ್ಞೆ ಮರುಸ್ಥಾಪನೆಗೆ ಮಧ್ಯಪ್ರವೇಶಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ಇದನ್ನೂ ಓದಿ: ಸ್ಮೃತಿ ಇರಾನಿಗೆ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೆರಳಿಸಲಿಲ್ಲ, ರಾಹುಲ್ ‘ಫೈಯಿಂಗ್ ಕಿಸ್’ ಕೆರಳಿಸಿದೆ: ಸ್ವಾತಿ ಮಾಲಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...