Homeಮುಖಪುಟಮಣಿಪುರ: ಬೆಂಕಿಗೆ ತುಪ್ಪ ಸುರಿದ ಅಮಿತ್‌ ಶಾ, 7 ನಿಮಿಷಕ್ಕೆ ಸುಸ್ತಾದ ಮೋದಿಜಿ

ಮಣಿಪುರ: ಬೆಂಕಿಗೆ ತುಪ್ಪ ಸುರಿದ ಅಮಿತ್‌ ಶಾ, 7 ನಿಮಿಷಕ್ಕೆ ಸುಸ್ತಾದ ಮೋದಿಜಿ

- Advertisement -
- Advertisement -

ಕಳೆದ ಮೂರು ತಿಂಗಳಿನಿಂದಲೂ ಮಣಿಪುರ ಹೊತ್ತು ಉರಿಯುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡುವವರಿಗೆಲ್ಲ ಭದ್ರತೆ ನೀಡಲು ಮುಂದಾಗುವ ನಮ್ಮ ದೇಶದ ಸರ್ಕಾರ ಮಣಿಪುರದಲ್ಲಿ ಇಲ್ಲಿಯವರೆಗೂ ಸರಿಯಾದ ಭದ್ರತೆ ನೀಡಲು ಸಾಧ್ಯವಾಗಿಲ್ಲ. ಭದ್ರತೆ ನೀಡುವುದಿರಲಿ, ಪೊಲೀಸರ ಹಾಗೂ ಪ್ಯಾರಾಮಿಲಿಟರಿ ಫೋರ್ಸ್‌ನ ಬಂದೂಕುಗಳನ್ನು ಮಣಿಪುರದ ತೀವ್ರಗಾಮಿಗಳು ಹೊತ್ತುಕೊಂಡು ಹೋಗಲು ಅನುವು ಮಾಡಿಕೊಡಲಾಗಿದೆ. ಮೈತೆ ಮತ್ತು ಕುಕಿ ಸಮುದಾಯಗಳೆರಡರ ಕಡೆಯೂ ಸಾವು ನೋವುಗಳಾಗಿವೆ. ಕುಕಿ ಸಮುದಾಯದ ಯುವತಿಯರನ್ನು ಅಮಾನವೀಯವಾಗಿ ವಿಕೃತವಾಗಿ ಬೆತ್ತಲೆ ಮೆರವಣಿಗೆ ಮಾಡಿದ್ದನ್ನು ಕೋಪ ಮತ್ತು ಕಣ್ಣಿರಿಲ್ಲದೆ ನೋಡಲು ಸಾಧ್ಯವೇ ಇಲ್ಲ. ಮಣಿಪುರದ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಮೋದಿಯವರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು ಎದ್ದು ಕಾಣುತ್ತಿದೆ. ಸ್ವತಃ ಮೋದಿಯವರೇ ಮಣಿಪುರದ ಬಗ್ಗೆ ತುಟಿ ಬಿಚ್ಚಲು ಎರಡು ತಿಂಗಳು ತೆಗೆದುಕೊಂಡಿದ್ದಾರೆ. ಭಾರತದ ಸಂವಿಧಾನಾತ್ಮಕ ಸದನವಾಗಿರುವ ಸಂಸತ್ತಿನಲ್ಲಿ ಮಣಿಪುರದ ಬಗ್ಗೆ ಪ್ರಧಾನಿಯವರ ತುಟಿ ಬಿಚ್ಚಿಸಲು ಅವಿಶ್ವಾಸ ನಿರ್ಣಯ ಕೈಗೊಳ್ಳುವ ದುಸ್ಥಿತಿಗೆ ದೇಶದ ಪ್ರಜಾಪ್ರಭುತ್ವ ತಲುಪಿದೆ. ಸಂಸತ್ತಿನಲ್ಲಿ ಮಣಿಪುರದ ಮಹಿಳೆಯರ ಆಕ್ರಂದನವನ್ನು ಕೇಳಬೇಕಿದ್ದ ಆಡಳಿತ ಪಕ್ಷದ ಮಹಿಳೆಯರು ʼಫ್ಲೈಯಿಂಗ್‌ ಕಿಸ್‌ʼ ಚರ್ಚೆ ಮಾಡುತ್ತಿದ್ದಾರೆ.

ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಗಾಗಿ ಕೊನೆಗೂ ಸಂಸತ್ತಿಗೆ ಬಂದ ಪ್ರಧಾನಿ ಮೋದಿಯವರು ಬರೋಬ್ಬರಿ 133 ನಿಮಿಶಗಳ ಕಾಲ ಭಾಷಣ ಮಾಡಿದ್ದಾರೆ. ಅಂದರೆ 2 ಗಂಟೆಗಳಿಗಿಂತಲೂ ಹೆಚ್ಚು ಸಮಯ ಮಾತಾಡಿದ್ದಾರೆ. ಇದರಲ್ಲಿ ಮಣಿಪುರದ ಬಗ್ಗೆ ಕೇವಲ 7 ನಿಮಿಷಗಳ ಕಾಲ ಮಾತಾಡಿದ್ದಾರೆ! ಅನ್ಯಾಯಕ್ಕೊಳಗಾಗಿರುವ ಮಣಿಪುರಕ್ಕೆ ಮತ್ತಷ್ಟು ಅನ್ಯಾಯ ಮಾಡಿದ್ದಾರೆ. 7 ನಿಮಿಷ ಮಾತನಾಡುವ ಮೂಲಕ ಮಣಿಪುರಕ್ಕೂ ಮೋದಿ ಸರ್ಕಾರಕ್ಕೂ ಸಂಬಂಧಿಲ್ಲವೆಂದೇ ಹೇಳುತ್ತಿದ್ದಾರೆ.

ಇದು ಒಂದು ಕಡೆಯಾದರೆ ಗೃಹಮಂತ್ರಿ ಅಮಿತ್‌ ಶಾ ಅವರು ಸಂಸತ್ತಿನಲ್ಲಿ ʼಮಣಿಪುರದ ಪ್ರಕ್ಷುಬ್ದತೆಗೆ ಮ್ಯಾನ್ಮಾರ್‌ನಿಂದ ವಲಸೆ ಬಂದಿರುವ ಕುಕಿಗಳು ಪ್ರಮುಖ ಪಾತ್ರ ವಹಸಿದ್ದಾರೆʼ ಎಂಬಂತಹ ಮಾತುಗಳನ್ನಾಡಿ ಮಣಿಪುರದಲ್ಲಿ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಮಣಿಪುರದ ಗಲಭೆಯನ್ನು ಶಮನ ಮಾಡಲಂತೂ ಇವರಿಗೆ ಸಾಧ್ಯವಾಗಲಿಲ್ಲ. ದಿನವೂ ಕೊಲೆ, ಸುಲಿಗೆ, ಅತ್ಯಾಚಾರಗಳು ವರದಿಯಾಗುತ್ತಿವೆ. ಮೈತೆ ಮತ್ತು ಕುಕಿಗಳ ನಡುವೆ ವೈಷಮ್ಯ ಮುಗಿಲುಮುಟ್ಟಿದೆ. ಪೊಲೀಸರು ಮತ್ತು ಸ್ಥಳೀಯ ಆಡಳಿತ ಕೈಕಟ್ಟಿ ಕುಳಿತಿದೆ. ಹೀಗಿರುವಾಗ ಅಮಿತ್‌ ಶಾ ಇಂತಹ ಹೇಳಿಕೆ ಕೊಟ್ಟಿರುವುದು ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿಯುವುರಲ್ಲಿ ಎರಡು ಮಾತಿಲ್ಲ. ಮಣಿಪುರದ ಮೈತೆಗಳ ಪರವಾಗಿ ಅಲ್ಲಿನ ಬಿಜೆಪಿ ಸರ್ಕಾರ ಬಹಿರಂಗವಾಗಿಯೇ ಕೆಲಸ ಮಾಡುತ್ತಿದೆ ಎಂಬ ವಿಚಾರಕ್ಕೆ ಅಮಿತ್‌ ಶಾ ಮಾತುಗಳು ಸಾಕ್ಷಿ ನೀಡುತ್ತಿವೆ. ಬೇಲಿಯೇ ಎದ್ದು ಹೊಲವನ್ನು ಮೇಯುತ್ತಿರುವಾಗ ಮಣಿಪುರವನ್ನು ಕಾಪಾಡುವವರಾರು? ಮಣಿಪುರ ಭಾರತದ ಅವಿಭಾಜ್ಯ ಅಂಗವಲ್ಲವೇ? ಕುಕಿಗಳು ಭಾರತೀಯರಲ್ಲವೇ?

– ಸಾಕ್ಯ ಸಮಗಾರ

ಇದನ್ನೂ ಓದಿ; ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...