Homeಅಂತರಾಷ್ಟ್ರೀಯದೊಡ್ಡ ಶ್ರೀಮಂತ ಸೌದಿಯನ್ನು ಸೋಲಿಸುತ್ತಿರುವ ಪುಟ್ಟ ಬಡ ರಾಷ್ಟ್ರ ಯೆಮೆನ್

ದೊಡ್ಡ ಶ್ರೀಮಂತ ಸೌದಿಯನ್ನು ಸೋಲಿಸುತ್ತಿರುವ ಪುಟ್ಟ ಬಡ ರಾಷ್ಟ್ರ ಯೆಮೆನ್

ಇರಾನ್ ಹೌಥಿಗಳ ಮೂಲಕ ಗಳಿಸಿರುವ ದಾಳಿಯ ಶಕ್ತಿಯು ಮುಂದೆ ಈಗ ಮುಂದುವರೆಯುತ್ತಿರುವ ಸಿರಿಯಾ, ಲೆಬನಾನ್ ಮತ್ತು ಇರಾಕ್ ಯುದ್ಧಗಳಲ್ಲಿ ಪಾಲುದಾರರಾಗಿರುವ ಇಸ್ರೇಲ್ ಮತ್ತು ಟರ್ಕಿಯನ್ನು ಎಚ್ಚರಿಕೆಯ ಸ್ಥಿತಿಯಲ್ಲಿ ಇಡಲಿದೆ.

- Advertisement -
- Advertisement -

ಯೆಮೆನ್ ಎಂಬ ಪುಟ್ಟ ರಾಷ್ಟ್ರದ ಮೇಲೆ ಹೇರಿದ ಯುದ್ಧದಲ್ಲಿ ಸೌದಿ ಅರೇಬಿಯಾ ಸೋಲುತ್ತಿರುವುದು ಮಾತ್ರವಲ್ಲ; ತನ್ನ ಮಿತ್ರರ ಬೆಂಬಲವನ್ನೂ ಕಳೆದುಕೊಳ್ಳುತ್ತಿದೆ ಎಂದು ಇತ್ತೀಚಿಗಿನ ಬೆಳವಣಿಗೆಗಳು ತೋರಿಸುತ್ತವೆ. ಸೌದಿಯ ಆಡಳಿತದ ವಿರುದ್ಧ ಹುಟ್ಟಿಕೊಂಡ ಹೌಥಿ ಅಥವಾ ಅನ್ಸಾರ್ ಅಲ್ಲಾಹ್ ಚಳವಳಿಯು ಎರಡು ದಶಕಗಳ ಯುದ್ಧದ ಬಳಿಕ ಸೌದಿಯನ್ನು ಮಂಡಿಯೂರುವಂತೆ ಮಾಡಿದೆ. ಪ್ರಪಂಚದ ಅತ್ಯಂತ ಬಡ ದೇಶಗಳಲ್ಲಿ ಒಂದಾದ ಯೆಮೆನ್ ಪ್ರಪಂಚದ ಅತ್ಯಂತ ಶ್ರೀಮಂತ ದೇಶವಾದ ಸೌದಿ ಅರೇಬಿಯಾವನ್ನು ಮಣಿಸಿರುವುದು ಇತ್ತೀಚಿನ ಕಾಲದಲ್ಲಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವ ವಿಷಯವಾಗಿದೆ.

ಇತ್ತೀಚಿನ ತಿಂಗಳುಗಳಲ್ಲಿ ಹೌಥಿಗಳು ತಮ್ಮ ಸರಣಿ ದಾಳಿಗಳ ಮೂಲಕ ಸೌದಿ ಅರೇಬಿಯಾದ ಯಾವುದೇ ಜಾಗಕ್ಕೆ ತಾವು ಪ್ರವೇಶಿಸಿಬಲ್ಲೆವು ಮತ್ತು ಅಲ್ಲಿ ದಾಳಿ ನಡೆಸಿ ಆ ದೇಶದ ಆರ್ಥಿಕತೆಯನ್ನು ಸ್ತಬ್ಧಗೊಳಿಸಲು ಶಕ್ತರಿದ್ದೇವೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಈ ದಾಳಿಗಳಿಂದ ಸೌದಿಯ ರಾಜಧಾನಿ ರಿಯಾದ್ ಮತ್ತು ಆ ದೇಶದ ಎಲ್ಲಾ ತೈಲ ಕ್ಷೇತ್ರಗಳು ಮಾತ್ರವಲ್ಲ, ನೆರೆಯ ದುಬೈಯ ಅತ್ಯಂತ ವ್ಯವಸ್ಥಿತವಾಗಿರುವ ವಿಮಾನ ನಿಲ್ದಾಣ ಕೂಡಾ ತಮ್ಮ ದಾಳಿಯ ವ್ಯಾಪ್ತಿಯಲ್ಲಿವೆ ಎಂದವರು ಸಾಬೀತುಮಾಡಿದ್ದಾರೆ.

ಈ ಪ್ರದೇಶದಲ್ಲಿ ಅಮೆರಿಕದ ಪ್ರಭಾವದ ವಿರುದ್ದ ಇರಾನಿನ ಪ್ರತಿರೋಧ ಕಾರ್ಯತಂತ್ರದ ಭಾಗವಾಗಿ ಶಿಯಾ ಹೌಥಿಗಳು ಹುಟ್ಟಿಕೊಂಡಿದ್ದರು. ಭಾರೀ ಸಾವುನೋವು ಮತ್ತು ಅತ್ಯಂತ ದೊಡ್ಡ ಮಾನವ ನಿರ್ಮಿತ ದುರಂತದ ನಡುವೆಯೂ ಯೆಮೆನ್ ಮೇಲೆ ಸೌದಿಯ ದಾಳಿಯನ್ನು ನಿಯಂತ್ರಿಸಲು ಮಾತ್ರವಲ್ಲ, ಅದನ್ನು ಮಿತ್ರರಾಷ್ಟ್ರಗಳಿಂದ ಪ್ರತ್ಯೇಕಿಸಲು ಅವರೀಗ ಶಕ್ತರಾಗಿದ್ದಾರೆ. ಈಗ ನೋಡಲು ಉಳಿದಿರುವುದೇನೆಂದರೆ, ಸಂಧಾನದ ಮೇಜಿನಲ್ಲಿ ಸೌದಿ ಅರೇಬಿಯಾವು ಎಷ್ಟರ ಮಟ್ಟಿಗೆ ಈ ಯುದ್ಧವನ್ನು ಕೊನೆಗೊಳಿಸಲು ಬಯಸಿದೆ ಎಂಬುದು. ಸ್ಥಳೀಯವಾಗಿ ಸೌದಿಯ ಮಿತ್ರಪಕ್ಷಗಳಲ್ಲಿ ಮುಖ್ಯವಾಗಿರುವುದು ಯುಎಇ ಮಾತ್ರ. ಯುಎಸ್‍ಎ, ಯುಕೆ, ಫ್ರಾನ್ಸ್ ಮತ್ತು ಕೆನಡಾಗಳು ಅದಕ್ಕೆ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿವೆ.

ವಿಶ್ವಸಂಸ್ಥೆಯು ಜಗತ್ತಿನ ಅತ್ಯಂತ ದೊಡ್ಡ ಮಾನವ ನಿರ್ಮಿತ ದುರಂತವೆಂದು ಬಣ್ಣಿಸಿರುವ ಯೆಮೆನ್ ಅಂತರ್ಯುದ್ಧದ ಬೆಂಕಿಗೆ 2015ರಲ್ಲಿ ಅಂದಿನ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಎಣ್ಣೆ ಸುರಿದಿದ್ದರು. ಈ ತನಕ ಸೌದಿ ಮಿತ್ರಕೂಟವು 10,000ದಷ್ಟು ಯೆಮೆನ್ ಪ್ರಜೆಗಳನ್ನು ಕೊಂದಿದೆ. ಅದರಲ್ಲಿ 1,000ದಷ್ಟು ಮಕ್ಕಳು. 30 ಲಕ್ಷಕ್ಕೂ ಹೆಚ್ಚು ಯೆಮೆನಿಗಳು ತಮ್ಮದೇ ದೇಶದಲ್ಲಿ ನಿರಾಶ್ರಿತರಾಗಿದ್ದಾರೆ. 1.7 ಕೋಟಿ ಜನಸಂಖ್ಯೆಯಲ್ಲಿ ಅರ್ಧದಷ್ಟು ಮಂದಿಗೆ ಆಹಾರವಾಗಲೀ, ಕುಡಿಯುವ ನೀರಾಗಲೀ ಸರಿಯಾಗಿ ಸಿಗುತ್ತಿಲ್ಲ. ಇದಕ್ಕೆ ಪ್ರಮುಖ ಕಾರಣ ಯೆಮೆನಿನ ಜನರಿಗೆ ಅಗತ್ಯ ವಸ್ತುಗಳ ಪೂರೈಕೆಯ ಮೇಲೆ ದಿಗ್ಬಂಧನ ವಿಧಿಸಿ ಉಂಟುಮಾಡಿದ ಮಾನವ ನಿರ್ಮಿತ ಬರ.

ಸೌದಿಗಳು ಯೆಮೆನಿ ಜನರ ಮೇಲೆ ಯದ್ವಾತದ್ವವಾಗಿ ಬಾಂಬ್‍ದಾಳಿ ನಡೆಸಿ, ಆ ದೇಶದ ಶಾಲೆಗಳು, ಆಸ್ಪತ್ರೆಗಳಂತಹಾ ಮೂಲಭೂತ ಸೌಕರ್ಯಗಳನ್ನು, ರಾಜಧಾನಿ ಸಾನಾವನ್ನು ಮತ್ತು ಪುರಾತನ ಸಾಂಸ್ಕೃತಿಕ ನಗರವಾದ ಸಾದ್ಹಾವನ್ನು ನಾಶ ಮಾಡಿದ್ದರು. 50 ಲಕ್ಷಕ್ಕಿಂತಲೂ ಹೆಚ್ಚು ಯೆಮೆನಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಹಸಿವಿನ ಸಾವನ್ನು ಎದುರಿಸುತ್ತಿದ್ದಾರೆ.

ಇರಾನ್ ವಿರುದ್ಧದ ಯುಎಸ್‍ಎಯ ದ್ವೇಷದ ಪರಿಣಾಮವಾಗಿ ಹೌಥಿಗಳು ಅಂತರ್ಖಂಡ ಕ್ಷಿಪಣಿಗಳೂ ಸೇರಿದಂತೆ ತಮ್ಮ ಶಸ್ತ್ರಾಸ್ತ್ರ ಬಲವನ್ನು ಪಡೆದುಕೊಂಡಿದ್ದಾರೆಂಬುದನ್ನು ಇತ್ತೀಚಿನ ಬೆಳವಣಿಗೆಗಳ ಮೂಲಕ ತೋರಿಸಿದ್ದಾರೆ. ಕಳೆದ ಎರಡು ತಿಂಗಳುಗಳಲ್ಲಿ ಸೌದಿಯ ಅಭಾ ವಿಮಾನ ನಿಲ್ದಾಣದ ಮೇಲೆ ಎರಡು ಬಾರಿ ದಾಳಿ ನಡೆಸಿದ್ದಾರೆ. ಆಗಸ್ಟ್ 17ರಂದು ಸೌದಿ ಅರೇಬಿಯಾದ ತೀರಾ ಒಳಗಿರುವ ತೈಲಬಾವಿಗಳ ಮೇಲೂ ದಾಳಿಯನ್ನು ನಡೆಸಿದ್ದಾರೆ. ಸೌದಿಯ ಮಿತ್ರರಾಷ್ಟ್ರ ಸಂಯುಕ್ತ ಅರಬ್ ಗಣರಾಜ್ಯ (ಯುಎಇ)ದಲ್ಲಿ ಯೆಮೆನ್‍ನಿಂದ 1250 ಕಿ.ಮೀ.ನಷ್ಟು ದೂರ ಇರುವ ಸಾಯ್ಬಾ ತೈಲಕ್ಷೇತ್ರದ ಮೇಲೆ ದಾಳಿ ನಡೆಸಿ ತಮ್ಮ ಶಕ್ತಿಯನ್ನು ತೋರಿಸಿದ್ದಾರೆ.

ಕಳೆದ ತಿಂಗಳು ಬಂದರು ನಗರ ಏಡನ್‍ನನ್ನು ಗೆದ್ದ ಬಳಿಕ ಸೌದಿಯ ಮಿತ್ರ ಯುಎಇ, ಮಿತ್ರಕೂಟದಿಂದ ಹೊರಬಂದಿದೆ. ಏಡನ್ ಸುನ್ನಿಗಳು ಬಹುಸಂಖ್ಯಾತರಾಗಿರುವ ನಗರ. ಅದನ್ನು ಯೆಮೆನಿ ಜನರ ಇಚ್ಛೆಗೆ ವಿರುದ್ಧವಾಗಿ ಎಷ್ಟು ಕಾಲ ಹಿಡಿದಿಟ್ಟುಕೊಳ್ಳಬಹುದು ಎಂಬುದನ್ನು ಮುಂದೆ ನೋಡಬೇಕಷ್ಟೆ.

ಸೌದಿ ಮತ್ತು ಅದರ ಮಿತ್ರ ಪಕ್ಷಗಳು ಯೆಮೆನಿಗಿಂತ ಹೆಚ್ಚು ಶಕ್ತಿಶಾಲಿ ಮತ್ತು ದುಬಾರಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದರೂ, ಹೌಥಿಗಳು ಇತ್ತೀಚೆಗೆ ಪಡೆದುಕೊಂಡಿರುವ ಶಸ್ತ್ರಾಸ್ತ್ರಗಳಿಂದ ಸೌದಿಯು ತಮ್ಮನ್ನು ರಕ್ಷಿಸಿಕೊಳ್ಳಲು ವಿಫಲರಾಗಿದ್ದಾರೆ. ಈ ಶಸ್ತ್ರಾಸ್ತ್ರಗಳನ್ನು ಯುಎಸ್‍ಎಯ ತೀವ್ರವಾದ ಆರ್ಥಿಕ ದಿಗ್ಬಂಧನದ ಹೊರತಾಗಿಯೂ ಇರಾನ್ ಅಭಿವೃದ್ಧಿಪಡಿಸಿದೆ. 2010ರಲ್ಲಿ ಯುಎಸ್‍ಎಯ ‘ಸ್ಟೆಲ್ತ್’ ಡ್ರೋನ್ ಒಂದನ್ನು ವಶಕ್ಕೆ ತೆಗೆದುಕೊಂಡ ಮೇಲೆ, ಇರಾನ್ ತನ್ನ ಸುತ್ತ 1500 ಕಿ.ಮೀ. ವ್ಯಾಪ್ತಿಯಲ್ಲಿ ಕಾವಲಿರಿಸುವ ಡ್ರೋನ್ ತಯಾರಿಸುವ ಕಾರ್ಯಕ್ರಮದಲ್ಲಿ ಯಶಸ್ವಿಯಾಯಿತು.

ಯುಎಸ್‍ಎ ತನ್ನ ಮಿತ್ರ ಪಕ್ಷಗಳ ಜೊತೆಗೂಡಿ ಈ ಪ್ರದೇಶದಲ್ಲಿ ನಡೆಸಿದ ಎಲ್ಲಾ ಯುದ್ಧಗಳು- 2001ರಲ್ಲಿ ಅಫಘಾನಿಸ್ತಾನ, 2003ರಲ್ಲಿ ಇರಾಕ್, 2006ರಲ್ಲಿ ಲೆಬನಾನ್, 2011ರಲ್ಲಿ ಸಿರಿಯಾ, 2014ರಲ್ಲಿ ಮತ್ತೆ ಇರಾಕ್, 2015ರಲ್ಲಿ ಯೆಮೆನ್-ಇವೆಲ್ಲವೂ ಅನುದ್ದೇಶಿತವಾಗಿ ಇರಾನ್ ಮತ್ತು ಅದರ ಮಿತ್ರ ಪಕ್ಷಗಳನ್ನು ಗಟ್ಟಿಗೊಳಿಸಿವೆ. ಇರಾನ್ ಹೌಥಿಗಳ ಮೂಲಕ ಗಳಿಸಿರುವ ದಾಳಿಯ ಶಕ್ತಿಯು ಮುಂದೆ ಈಗ ಮುಂದುವರೆಯುತ್ತಿರುವ ಸಿರಿಯಾ, ಲೆಬನಾನ್ ಮತ್ತು ಇರಾಕ್ ಯುದ್ಧಗಳಲ್ಲಿ ಪಾಲುದಾರರಾಗಿರುವ ಇಸ್ರೇಲ್ ಮತ್ತು ಟರ್ಕಿಯನ್ನು ಎಚ್ಚರಿಕೆಯ ಸ್ಥಿತಿಯಲ್ಲಿ ಇಡಲಿದೆ.

ಈಗ ಸೌದಿಯು ರಾಜಕೀಯವಾದ ಶಾಂತಿ ಸಂಧಾನಕ್ಕೆ ಒಪ್ಪಬೇಕಾದ ಅನಿವಾರ್ಯತೆಗೆ ಸಿಕ್ಕಿದೆ. ಪರಿಹಾರಧನ ನೀಡಬೇಕೆಂಬ ಯೆಮೆನ್ ಬೇಡಿಕೆಗೂ ಬಲಬರಲಿದೆ. ಆದರೆ, ಈಗಾಗಲೇ ಕಚ್ಚಾ ತೈಲದ ಬೆಲೆ ಕುಸಿತದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸೌದಿ ಅರೇಬಿಯಾ ಈ ಯುದ್ಧವನ್ನು ಮುಂದುವರಿಸುವುದು ಕಾರ್ಯಸಾಧುವಲ್ಲ ಎಂಬ ಲಕ್ಷಣಗಳು ಈಗಾಗಲೇ ಕಂಡುಬರುತ್ತಿರುವುದರಿಂದಾಗಿ ಹೌಥಿಗಳ ಬೇಡಿಕೆಗಳಿಗೆ ಒಪ್ಪದೇ ಬೇರೆ ದಾರಿಯಿಲ್ಲ.

ಯುದ್ಧ ಮತ್ತು ಪ್ರತಿದಾಳಿಯ ಮುಖಾಂತರ ಹೌಥಿಗಳು ಸಾಧಿಸಿರುವ ಈ ಗೆಲುವಿನಿಂದಲಾದರೂ, ಆ ಜಾಗದಲ್ಲಿ ಶಾಂತಿ ನೆಲೆಸಿದರೆ ಮನುಕುಲ ಸ್ವಲ್ಪವಾದರೂ ನಿಟ್ಟುಸಿರೆಳೆಯಬಹುದು. ಇಲ್ಲವಾದರೆ, ಮತ್ತಷ್ಟು ರಕ್ತಪಾತ ಹಾಗೂ ಅನಿಶ್ಚಿತತೆ ಆ ಭಾಗವನ್ನು ಕಾಡುವುದರಲ್ಲಿ ಸಂದೇಹವೇ ಇಲ್ಲ.

ಅನುವಾದ: ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...