Homeಮುಖಪುಟರಾಹುಲ್ ಗಾಂಧಿಗೆ ಶಿಕ್ಷೆಗೆ ತಡೆ ನಿರಾಕರಿಸಿದ್ದ ಜಡ್ಜ್  ಸೇರಿ 23 ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸ್ಸು

ರಾಹುಲ್ ಗಾಂಧಿಗೆ ಶಿಕ್ಷೆಗೆ ತಡೆ ನಿರಾಕರಿಸಿದ್ದ ಜಡ್ಜ್  ಸೇರಿ 23 ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸ್ಸು

- Advertisement -
- Advertisement -

‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಕೆಳ ನ್ಯಾಯಾಲಯ ನೀಡಿದ  ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ  ಗುಜರಾತ್ ಹೈಕೋರ್ಟ್ ನ್ಯಾಯಾಧೀಶರು ಸೇರಿ  23 ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ವರ್ಗಾವಣೆಗೆ ಶಿಫಾರಸು ಮಾಡಿದೆ.

ಜುಲೈನಲ್ಲಿ ನೀಡಿದ ತೀರ್ಪಿನಲ್ಲಿ ನ್ಯಾಯಮೂರ್ತಿ ಹೇಮಂತ್ ಎಂ ಪ್ರಚ್ಚಕ್ ಅವರು ರಾಹುಲ್ ಗಾಂಧಿಯವರ ಮನವಿಯನ್ನು ತಿರಸ್ಕರಿಸಿದ್ದರು.

ಕಳೆದ ರಾತ್ರಿ ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ವರ್ಗಾವಣೆಗಳನ್ನು ಕೊಲಿಜಿಯಂ ಶಿಫಾರಸು ಮಾಡಿದೆ ಎಂದು ಹೇಳಲಾಗಿದೆ.

ಈ ಹಿಂದೆ 2002ರ ಗುಜರಾತ್ ಗಲಭೆ ಪ್ರಕರಣದ ಆರೋಪಿಯಾಗಿದ್ದ ಬಿಜೆಪಿಯ ಮಾಜಿ ಸಚಿವೆ ಮಾಯಾ ಕೊಡ್ನಾನಿ ಅವರನ್ನು ಸಮರ್ಥಿಸುವ ವಕೀಲರ ತಂಡದಲ್ಲಿ ನ್ಯಾಯಮೂರ್ತಿ ಪ್ರಚ್ಚಕ್ ಒಬ್ಬರಾಗಿದ್ದರು.

ನ್ಯಾಯಮೂರ್ತಿ ಪ್ರಚ್ಚಕ್ ಅವರು ಗುಜರಾತ್ ಹೈಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಆರಂಭಿಸಿದರು ಮತ್ತು ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಅಡಿಯಲ್ಲಿ ಗುಜರಾತ್ ಸರ್ಕಾರದ ಸಹಾಯಕ ವಕೀಲರಾಗಿ ಕೆಲಸ ಮಾಡಿದ್ದರು.

2015 ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ಒಂದು ವರ್ಷದ ನಂತರ, ಅವರನ್ನು ಗುಜರಾತ್ ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಪರ ವಕೀಲರಾಗಿ ನೇಮಿಸಲಾಯಿತು.ಅವರು 2019 ರವರೆಗೆ ಈ ಹುದ್ದೆಯಲ್ಲಿದ್ದರು.2021ರಲ್ಲಿ ಅವರು ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ನೇಮಕಗೊಂಡರು.

ಇದನ್ನು ಓದಿ: ಅಧೀರ್ ಚೌಧರಿ ಲೋಕಸಭೆಯಿಂದ ಅಮಾನತು: ಅಧಿಕಾರದ ದುರಹಂಕಾರ, ದುರುದ್ದೇಶ ಎಂದ ಖರ್ಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...