Homeಮುಖಪುಟಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತೀರಿ, ಆದರೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ನಿಮ್ಮದೇ ಪಕ್ಷದ ಸಂಸದರ ಬಗ್ಗೆ ಯಾಕೆ ಮಾತನಾಡಲ್ಲ? ಎಂದು ಸ್ಮೃತಿ ಇರಾನಿ ಅವರಿಗೆ ಟಿಎಂ ಸಿ ಸಂಸೆದೆ ಮಹುವಾ ಮೊಯಿತ್ರಾ ಪ್ರಶ್ನೆ ಮಾಡಿದ್ದಾರೆ.

ಅವಿಶ್ವಾಸ ನಿರ್ಣಯದ ಚರ್ಚೆಯಲ್ಲಿ ಲೋಕಸಭೆಯಲ್ಲಿ ಮಾತನಾಡಿದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು, ಈ ನಿರ್ಣಯವು ಸದನದಲ್ಲಿ ಯಶಸ್ವಿಯಾಗಲು ಉದ್ದೇಶಿಸಿಲ್ಲ, ಆದರೆ ಸರ್ಕಾರದ ಮೇಲೆ ಅವಿಶ್ವಾಸಕ್ಕಿಂತ ಹೆಚ್ಚಾಗಿ, ವಿಪಕ್ಷಗಳ INDIA ಮೈತ್ರಿಕೂಟದ ಮೇಲಿನ ವಿಶ್ವಾಸಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.

ಮಣಿಪುರದ ಬಗ್ಗೆ ಮಾತನಾಡಿದ ಅವರು, ಅಲ್ಲಿನ ಪರಿಸ್ಥಿತಿಯು ಇತರ ರಾಜ್ಯಗಳಿಗಿಂತ ಭಿನ್ನವಾಗಿದೆ. ಮಣಿಪುರದಲ್ಲಿ ದ್ವೇಷ ಅಪರಾಧ, ಆಂತರಿಕ ಕಲಹ ನಡೆಯುತ್ತಿದೆ. ಬಹುಪಾಲು ಅವಿಶ್ವಾಸ ನಿರ್ಣಯಗಳು ಸರ್ಕಾರವನ್ನು ಪತನ ಮಾಡಲು ಬಳಸಲಾಗುತ್ತದೆ. ಇಲ್ಲಿ ಆ ಸಾಧ್ಯತೆ ಇಲ್ಲ ಎಂದು ನಮಗೆ ತಿಳಿದಿದೆ. ನಮ್ಮ ಬಳಿ ಸಂಖ್ಯಾಬಲವಿಲ್ಲ. ಆಡಳಿತಾರೂಢ ಪಕ್ಷದಲ್ಲಿರುವ ನನ್ನ ಅನೇಕ ಸ್ನೇಹಿತರು ಮತ್ತು ವೈಎಸ್‌ಆರ್‌ನಂತಹ ಇತರ ಬಿಜೆಪಿ ಮಿತ್ರರು, ಈ ನಿರ್ಣಯವು INDIAದ ಪತನಕ್ಕಾಗಿದೆ ಎಂದು ನಮ್ಮನ್ನು ಲೇವಡಿ ಮಾಡಿದ್ದಾರೆ. ಆದರೆ ನಾವು ಯಾರನ್ನೂ ಕೆಳಗಿಳಿಸುವುದಕ್ಕಾಗಿ ಅಲ್ಲ, ಒಗ್ಗೂಡಿಸುವುದಕ್ಕಾಗಿ ಈ ನಿರ್ಣಯವನ್ನು ತಂದಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಸ್ಮೃತಿ ಇರಾನಿಗೆ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೆರಳಿಸಲಿಲ್ಲ, ರಾಹುಲ್ ‘ಫೈಯಿಂಗ್ ಕಿಸ್’ ಕೆರಳಿಸಿದೆ: ಸ್ವಾತಿ ಮಾಲಿವಾಲ್

ಪ್ರಧಾನಿ ಮೋದಿ ಅವರು ಮಣಿಪುರದ ಪರಿಸ್ಥಿತಿಯನ್ನು ಇತರ ರಾಜ್ಯಗಳೊಂದಿಗೆ ಹೋಲಿಸುವು ‘ಸುಳ್ಳು ಹರಡುವಿಕೆ’ಯ ಭಾಗವಾಗಿದೆ ಎಂದ ಸಂಸದೆ ಕಿಡಿಕಾರಿದ್ದಾರೆ.

”ಮಣಿಪುರದಲ್ಲಿ ನಡೆಯುತ್ತಿರುವುದು ಒಂದು ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷದ ಅಪರಾಧವಾಗಿದೆ. ಅಲ್ಲಿ ಪೊಲೀಸ್ ಸಿಬ್ಬಂದಿ ಒಂದು ಸಮುದಾಯಕ್ಕೆ ಸೇರಿದ್ದಾರೆ. ಮುಖ್ಯಮಂತ್ರಿಯವರ ಅದೇ ಸಮುದಾಯದವರಾಗಿರಬಹುದು ಎಂದೆನಿಸುತ್ತದೆ. ಪೊಲೀಸ್‌ ಸಿಬ್ಬಂದಿ ಇನ್ನೊಂದು ಸಮುದಾಯದ ಮಹಿಳೆಯರ ಮೇಲೆ ಅತ್ಯಾಚಾರವೆಸಗುವುದಕ್ಕಾಗಿ ಸಮುದಾಯದ ಜನಸಮೂಹಕ್ಕೆ ಅವರನ್ನು ಒಪ್ಪಿಸಿದರು. ನ್ಯಾಯದ ಬೇಡಿಕೆಯನ್ನು ತಡೆಯುವ ಎಲ್ಲಾ ಪ್ರಯತ್ನಗಳು ಇಲ್ಲಿ ನಡೆದವು” ಎಂದು ಮಣಿಪುರದ ಇಬ್ಬರು ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣವನ್ನು ನೆನಪಿಸಿದ್ದಾರೆ.

”ಕಳೆದ 3 ತಿಂಗಳಲ್ಲಿ 6,500 ಎಫ್‌ಐಆರ್‌ಗಳು ದಾಖಲಾಗಿವೆ ಯಾವ ರಾಜ್ಯದಲ್ಲಿ ಹೀಗಾಗಿದೆ? ಇದು ಡಬಲ್ ಇಂಜಿನ್ ಸರ್ಕಾರದ ದೊಡ್ಡ ವೈಫಲ್ಯ. ರಾಜಸ್ಥಾನದ ಬಗ್ಗೆ, ಛತ್ತೀಸ್‌ಗಢದ ಬಗ್ಗೆ ಏನಂತೀರಿ? ಎಂದು ಕೇಳುವ ಮೂಲಕ ಇತರ ರಾಜ್ಯಗಳನ್ನು ಅವಮಾನಿಸಬಾರದು. ಮಣಿಪುರವು ಮೌನವಾಗಿ ಅನುಮೋದಿಸಲಾದ ದ್ವೇಷದ ಅಪರಾಧವಾಗಿದೆ. ಇದು ಅಂತರ್ಯುದ್ಧ ಎಂದರೆ ತಪ್ಪಾಗಲ್ಲ” ಎಂದು ಮೋದಿ ನೇತೃತ್ವದ ಸರ್ಕಾರವನ್ನು ಮಹುವಾ ಮೊಯಿತ್ರಾ ಟೀಕಿಸಿದ್ದಾರೆ.

”ಪ್ರಧಾನಿ ಮೋದಿಯವರೇ ನೀವು ಇದನ್ನು ಕೇಳುತ್ತಿದ್ದರೆ… ನಾನು ಮಣಿಪುರದ ಜನರ ಪರವಾಗಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಆಡಳಿತವನ್ನು ಬದಲಿಸಿ, ಎಲ್ಲಾ ಪಕ್ಷಗಳು ಕದನ ವಿರಾಮಕ್ಕಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಡಿ. ಇಲ್ಲದಿದ್ದರೆ, ನಿಮ್ಮ ಅವಧಿ ಮುಗಿದ ನಂತರವೂ, ಮಣಿಪುರದಲ್ಲಿ ಏನು ತಪ್ಪಾಗಿದೆ ಎಂದು ಭಾರತ ಒಂದೇ ಧ್ವನಿಯಲ್ಲಿ ಪ್ರತಿಧ್ವನಿಸುತ್ತದೆ” ಎಂದು ಮಹುವಾ ಮೊಯಿತ್ರಾ ಹೇಳಿದರು.

”ಭಾರತವು ನಿಮ್ಮ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದೆ. ಹೊಸ ಸಂಸತ್ತಿನ ಸಭಾಂಗಣದಲ್ಲಿ ಬಹುಮತದ ಧರ್ಮೀಯರಿಗೆ ತಲೆಬಾಗುವ ಮಹಾನ್ ಪ್ರಜಾಪ್ರಭುತ್ವದ ಪ್ರಧಾನಿಯ ನಡೆ ನಾಚಿಕೆಗೇಡು ಪೊಲೀಸ್ ದೌರ್ಜನ್ಯ ಮತ್ತು ಚಾಂಪಿಯನ್ ಕುಸ್ತಿಪಟುಗಳ ವಿರುದ್ಧ ಎಫ್‌ಐಆರ್ ದಾಖಲಿಸುವುದು ನಮಗೆ ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿಯ 3 ಜಿಲ್ಲೆಗಳ 50 ಪಂಚಾಯತ್‌ಗಳು- ಹರ್ಯಾಣದಲ್ಲಿ ಮುಸ್ಲಿಂ ವರ್ತಕರನ್ನು ರಾಜ್ಯಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿ ಪತ್ರಗಳನ್ನು ಹೊರಡಿಸಿರುವುದು ನಮಗೆ ಅವಮಾನ ತಂದಿದೆ. ದ್ವೇಷದ ಯುದ್ಧದಲ್ಲಿ ಏನೇನಾಯ್ತು ನೋಡಿ, ತರಕಾರಿಗಳು ಹಿಂದೂ ಆದವು, ಆಡು ಮುಸ್ಲಿಂ ಆಯ್ತು ನಾವು ಹಿಂಸೆಗೆ ಒಳಗಾಗುವುದಿಲ್ಲ. ಮಮತಾ ದೀದಿ ಹೆದರಿಲ್ಲ, ಸ್ಟಾಲಿನ್ ಹೆದರಿಲ್ಲ, ಅಖಿಲೇಶ್ ಜಿ ಹೆದರಿಲ್ಲ, ರಾಹುಲ್ ಗಾಂಧಿ ಹೆದರಿಲ್ಲ. ಒಬ್ಬ ಕ್ರೋನಿ ಕ್ಯಾಪಿಟಲಿಸ್ಟ್ ನಾವು ನೋಡುತ್ತಿರುವಾಗಲೇ ಭಾರತದ ನಿಯಂತ್ರಕರು ಮತ್ತು ಇಕ್ವಿಟಿ ಮಾರುಕಟ್ಟೆಗಳಿಂದ ಹಣ ಮಾಡಲು ಹೋಗುವುದಿಲ್ಲ. ಎಲ್ಲರೂ ಕೇಳುತ್ತಾರೆ ಮೋದಿಜಿ ಇಲ್ಲದಿದ್ದರೆ ಯಾರು? ಮಣಿಪುರದ ಬಗ್ಗೆ ಈ ಮೌನದ ನಂತರ ಮೋದಿ ಅಲ್ಲದೆ ಬೇರೆ ಯಾರೂ ಅಲ್ಲ ಎಂದು ಭಾರತ ಹೇಳಬಹುದು ಎಂದರು.

ರಾಹುಲ್ ಮೇಲೆ ಆರೋಪಿಸಿರುವ ‘ಫ್ಲೈಯಿಂಗ್ ಕಿಸ್’ ಪ್ರಕರಣ ಬಗ್ಗೆ ಮಾತನಾಡಿದ ಮಹುವಾ, ”ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂದು ಬಿಜೆಪಿ ಸಂಸದರ ಮೇಲೆ ಆರೋಪ ಬಂದಾಗ ನೀವೇನೂ ಮಾತಾಡಿಲ್ಲ ಯಾಕೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಪ್ರಶ್ನಿಸಿದ್ದಾರೆ.

ಗುರುವಾರ ನಡೆದ ಮೋದಿ ನೇತೃತ್ವದ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಭಾಷಣದ ನಂತರ ಸಂಸತ್ತಿನಲ್ಲಿ ರಾಹುಲ್ ಗಾಂಧಿಯವರು ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂದು ಕೇಂದ್ರ ಸಚಿವ ಆಕ್ರೋಶ ವ್ಯಕ್ತಡಿಸಿದ್ದು, ಬಿಜೆಪಿ ಸಂಸದೆಯರು ಕೂಡ ಕ್ರಮಕ್ಕೆ ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...