Homeಮುಖಪುಟಅವಿಶ್ವಾಸ ನಿರ್ಣಯದ ವೇಳೆ ಬೆತ್ತಲಾದ ಕುಂಭಕರ್ಣ: ಮೋದಿ ವಿರುದ್ಧ ಮತ್ತೆ ಗುಡುಗಿದ ನಟ ಕಿಶೋರ್

ಅವಿಶ್ವಾಸ ನಿರ್ಣಯದ ವೇಳೆ ಬೆತ್ತಲಾದ ಕುಂಭಕರ್ಣ: ಮೋದಿ ವಿರುದ್ಧ ಮತ್ತೆ ಗುಡುಗಿದ ನಟ ಕಿಶೋರ್

- Advertisement -
- Advertisement -

ಸಂಸತ್ತಿನಲ್ಲಿ ಮಣಿಪುರ ಹಿಂಸಾಚಾರದ ಕುರಿತು ಪ್ರಧಾನಿ ಮೋದಿ ಮಾತನಾಡಬೇಕು ಎನ್ನುವ ಉದ್ದೇಶದಿಂದ ವಿರೋಧ ಪಕ್ಷಗಳ INDIA ಒಕ್ಕೂಟವು ಅವಿಶ್ವಾಸ ನಿರ್ಣಯ ತಂದಿತ್ತು. ಹಾಗಾಗಿ ಗುರುವಾಗ ಮಾತ್ರವೇ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಣಿಪುರದ ಬಗ್ಗೆ ಕೆಲವೇ ನಿಮಿಷಗಳ ಕಾಲ ಮಾತನಾಡಿದ್ದಾರೆ. ಅವರ ಇಷ್ಟು ದಿನದ ಮೌನದ ಬಗ್ಗೆ ನಟ ಕಿಶೋರ್ ಕುಮಾರ್ ಅವರು ಕಟುವಾಗಿ ಟೀಕಿಸಿದ್ದಾರೆ.

ಪ್ರಧಾನಿ ಮೋದಿ ಹಾಗೂ ವ್ಯವಸ್ಥೆ ವಿರುದ್ಧ ಆಗಾಗ ಪ್ರತಿಕ್ರಿಯಿಸುವ ಸಂವೇದನಾಶೀಲ ನಟ ಕಿಶೋರ್ ಕುಮಾರ್ ಅವರು ಇದೀಗ ಮತ್ತೆ ಪ್ರಧಾನಿ ಮೋದಿಯನ್ನು ಟೀಕಿಸಿ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ”ಮಣಿಪುರದ ಪ್ರಶ್ನೆಗೆ ಉತ್ತರಿಸಲು ಬಾರದ ಅಯೋಗ್ಯತೆಯನ್ನು, ಧೂರ್ತತೆಯನ್ನು ಮುಚ್ಚಿಟ್ಟಿದ್ದ ಮೌನದ ಮುಸುಕನ್ನು ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯ ಕಳಚಿ ಬಿಸಾಡುತ್ತಿದ್ದಂತೆ ಸಂಸತ್ತಿನಲ್ಲಿ ಬೆತ್ತಲಾದ ಕುಂಭಕರ್ಣ” ಎಂದು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

View this post on Instagram

 

A post shared by Kishore Kumar Huli (@actorkishore)

”ನಮ್ಮದೇ ಜನ ಮಣಿಪುರದಲ್ಲಿ ರಕ್ತದ ಮಡುವಲ್ಲಿ ಸತ್ತು ಬಿದ್ದಿರುವಾಗ, ನಾವು ಹಾಕಿದ ಅನ್ನ ತಿಂದು ನಮ್ಮ ಸಮಸ್ಯೆಯ ಬಗ್ಗೆ ಮಾತಾಡುವುದು ಬಿಟ್ಟು ಮತ್ತವರ ಟೀಕೆ, ತನ್ನದೇ ಹೊಗಳಿಕೆಯಲ್ಲಿ, ಸುಳ್ಳುಗಳ, ಜೈಕಾರಗಳ ಮಳೆಯಲ್ಲಿ ಮಿಂದ ಪ್ರಧಾನ ಸೇವಕ.. ನಿದ್ದೆ ಹೊಡೆದ ಹೊಗಳುಭಟ್ಟರು, ಅದನ್ನೇ ಸಾಧನೆಯೆಂದು ಮೆರೆದ ತಲೆತಿರುಕ ಗೋದೀ ಮಾಧ್ಯಮ” ಎಂದು ಬರೆದು ಕಿಶೋರ್ ಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಗಾಗಿ ಕೊನೆಗೂ ಗುರುವಾರ ಸಂಸತ್ತಿಗೆ ಬಂದ ಪ್ರಧಾನಿ ಮೋದಿಯವರು 2 ಗಂಟೆಗಳಿಗಿಂತಲೂ ಹೆಚ್ಚು ಸಮಯ ಮಾತಾಡಿದ್ದಾರೆ. ಇದರಲ್ಲಿ ಮಣಿಪುರದ ಬಗ್ಗೆ ಕೇವಲ 7 ನಿಮಿಷಗಳ ಕಾಲ ಮಾತಾಡಿದ್ದಾರೆ! ಅನ್ಯಾಯಕ್ಕೊಳಗಾಗಿರುವ ಮಣಿಪುರಕ್ಕೆ ಮತ್ತಷ್ಟು ಅನ್ಯಾಯ ಮಾಡಿದ್ದಾರೆ.

ಈ ಬಗ್ಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒ’ಬ್ರೇನ್ ಅವರು ಟ್ವೀಟ್ ಮಾಡಿದ್ದು, ”21 ದಿನಗಳ ಕಾಲ ತಲೆಮರೆಸಿಕೊಂಡ ನಂತರ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಳೆದುಕೊಂಡು ಲೋಕಸಭೆಗೆ ವಿಶ್ವಾಸಮತ ಯಾಚನೆಯೊಂದಿಗೆ ಬರುವಂತೆ ಮಾಡಬೇಕಾಯಿತು.ಮೊದಲ ಒಂದು ಗಂಟೆ ಭಾಷಣದಲ್ಲಿ, ಕಲ್ಲು ಹೃದಯದ ವ್ಯಕ್ತಿ ಮಣಿಪುರದ ಬಗ್ಗೆ ಒಂದು ಮಾತನ್ನು ಕೂಡ ಹೇಳಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪ್ರಧಾನಿ ಮೋದಿಗಿಂತ ಹೆಚ್ಚು ಸಂಸತ್ತಿಗೆ ಅವಮಾನ ಮಾಡಿಲ್ಲ” ಎಂದು ಡೆರೆಕ್ ಒಬ್ರಿಯಾನ್ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ: ಬೆಂಕಿಗೆ ತುಪ್ಪ ಸುರಿದ ಅಮಿತ್‌ ಶಾ, 7 ನಿಮಿಷಕ್ಕೆ ಸುಸ್ತಾದ ಮೋದಿಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...