Homeಮುಖಪುಟನುಹ್ ಹಿಂಸಾಚಾರ: ಮುಸ್ಲಿಮರ ಆರ್ಥಿಕ ಬಹಿಷ್ಕಾರ ಸ್ವೀಕಾರಾರ್ಹವಲ್ಲ ಎಂದ ಸುಪ್ರೀಂ

ನುಹ್ ಹಿಂಸಾಚಾರ: ಮುಸ್ಲಿಮರ ಆರ್ಥಿಕ ಬಹಿಷ್ಕಾರ ಸ್ವೀಕಾರಾರ್ಹವಲ್ಲ ಎಂದ ಸುಪ್ರೀಂ

- Advertisement -
- Advertisement -

ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದ ಕೋಮು ಹಿಂಸಾಚಾರದ ಬಳಿಕ ಅಲ್ಲಿಯ ಮುಸ್ಲಿಮರ ಆರ್ಥಿಕ ಬಹಿಷ್ಕಾರದ ಕರೆಗಳು “ಸ್ವೀಕಾರಾರ್ಹವಲ್ಲ” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಟೀಕಿಸಿದೆ.

ಹರಿಯಾಣ ಹಿಂಸಾಚಾರದ ಬಗ್ಗೆ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು, ಹಿಂಸಾಚಾರದ ನಂತರ ವರದಿಯಾಗಿರುವ ದ್ವೇಷ ಭಾಷಣದ ದೂರುಗಳನ್ನು ಪರಿಶೀಲಿಸಲು ಹರಿಯಾಣ ಪೊಲೀಸ್ ಮಹಾನಿರ್ದೇಶಕರ ನೇತೃತ್ವದ ಸಮಿತಿಯನ್ನು ರಚಿಸುವಂತೆ ಸೂಚಿಸಿದೆ.

ಆರೋಪಗಳು ನಿಜವೆಂದು ಕಂಡುಬಂದರೆ, ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಬಹುದು ಎಂದು ನ್ಯಾಯಾಧೀಶರು ಹೇಳಿದರು.

”ಸಮಸ್ಯೆಯೆಂದರೆ, SHO [ಠಾಣೆಯ ಗೃಹ ಅಧಿಕಾರಿ] ಮಟ್ಟದಲ್ಲಿ ಅಥವಾ ಪೊಲೀಸ್ ಠಾಣೆಯ ಮಟ್ಟದಲ್ಲಿನ ಸಿಬ್ಬಂದಿಗೆ ಕಾನೂನಿನ ಸೂಕ್ಷ್ಮತೆಗಳು ಹಾಗೂ ಸಂವೇದನಾಶಿಲತೆಯು ಕಡಿಮೆ ಇದೆ ಹಾಗಾಗಿ ಹಿರಿಯ ಅಥವಾ ಮಧ್ಯಮ ಮಟ್ಟದ ಅಧಿಕಾರಿಗಳು … ಅವರನ್ನು ಸಂವೇದನಾಶೀಲಗೊಳಿಸಬಹುದು” ಎಂದು ನ್ಯಾಯಮೂರ್ತಿ ಖನ್ನಾ ಹೇಳಿದರು.

ಜುಲೈ 31ರಂದು ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯ ಮೆರವಣಿಗೆ ಆಯೋಜಿಸಿದ್ದರು. ಈ ವೇಳೆ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ಘರ್ಷಣೆಗಳು ಆರಂಭವಾದವು. ಆ ಬಳಿಕ ತ್ವರಿತವಾಗಿ ನುಹ್‌ನ ಆಚೆಗೆ ಗಲಾಟೆಗಳು ಶುರುವಾದವು.

ಗುರುಗ್ರಾಮ್‌ನಲ್ಲಿ ಹಿಂದುತ್ವವಾದಿ ಗುಂಪುಗಳು ಅತಿರೇಕಕ್ಕೆ ಹೋದವು. ಸೆಕ್ಟರ್ 57ರಲ್ಲಿ ಮಸೀದಿಯನ್ನು ಸುಟ್ಟುಹಾಕಿದರು, ಅದರ ಉಪ ಇಮಾಮ್ ಅನ್ನು ಕೊಂದರು ಮತ್ತು ಮರುದಿನ ಸೆಕ್ಟರ್ 70ರಲ್ಲಿ ಮುಸ್ಲಿಂ ವಲಸೆ ಕಾರ್ಮಿಕರ ಅಂಗಡಿಗಳು ಮತ್ತು ಗುಡಿಸಲುಗಳಿಗೆ ಬೆಂಕಿ ಹಚ್ಚಿದರು.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ವಿಳಂಬ ತನಿಖೆಗೆ ಸುಪ್ರೀಂ ಬೇಸರ

ಪತ್ರಕರ್ತ ಶಹೀನ್ ಅಬ್ದುಲ್ಲಾ ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಈ ಹಿಂಸಾಚಾರದ ನಂತರ ರಾಜ್ಯದ ವಿವಿಧ ಕಡೆ 27ಕ್ಕೂ ಹೆಚ್ಚು ರ್ಯಾಲಿಗಳನ್ನು ಆಯೋಜಿಸಲಾಗಿದೆ ಮತ್ತು ದ್ವೇಷದ ಭಾಷಣವನ್ನು ಮಾಡಿದ್ದಾರೆ ತಿಳಿಸಿದ್ದಾರೆ.

”ಆಗಸ್ಟ್ 2ರಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದು ವೈರಲ್ ಆಗಿತ್ತು.  ವಿಡಿಯೋದಲ್ಲಿ, ಸಂಹಸ್ತ್ ಹಿಂದೂ ಸಮಾಜದವರು ಹರಿಯಾಣದ ಹಿಸಾರ್‌ನಲ್ಲಿ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲೇ, ಅಲ್ಲಿಯ ಎರಡು ದಿನಗಳಲ್ಲಿ ಇಲ್ಲಿ ಯಾವುದೇ ಮುಸ್ಲಿಮರು ಅಂಗಡಿಗಳನ್ನು ನಡೆಸುವಂತಿಲ್ಲ, ಮುಸ್ಲಿಮರ ಬಹಿಷ್ಕರಿಸಬೇಕು ಎಂದು ಅಲ್ಲಿಯ ನಿವಾಸಿಗಳಿಗೆ ತಿಳಿಸಲಾಗಿದೆ.

ಶುಕ್ರವಾರದ ವಿಚಾರಣೆಯಲ್ಲಿ, ಅಬ್ದುಲ್ಲಾ ಅವರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಸುಪ್ರೀಂ ಕೋರ್ಟ್ ಜನರನ್ನು ರಕ್ಷಿಸಬೇಕು ಮತ್ತು ಈ ರೀತಿಯ ಅನಿಯಂತ್ರಿತವಾಗಿ ದೌರ್ಜನ್ಯ ನಡೆಯಲು ಬಿಡಬಾರದು ಎಂದು ಹೇಳಿದರು.

ನ್ಯಾಯಮೂರ್ತಿ ಖನ್ನಾ ಅವರು ಸಮುದಾಯಗಳ ನಡುವೆ ಸಾಮರಸ್ಯವನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ”ಈ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. ಯಾರೂ ಇದನ್ನು ಸ್ವೀಕರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಮಾತನಾಡಿ, ದ್ವೇಷಪೂರಿತ ಭಾಷಣದ ಸಮಸ್ಯೆ ನಿವಾರಣೆಗೆ ಕಾನೂನಿನಡಿ ಈಗಾಗಲೇ ಯಾಂತ್ರಿಕ ವ್ಯವಸ್ಥೆ ಇದ್ದರೂ ಕೆಲವೆಡೆ ಅದು ಕಾರ್ಯನಿರ್ವಹಿಸುತ್ತಿಲ್ಲ ಎಂದರು.

ಸಮಿತಿಯನ್ನು ರಚಿಸುವ ಆಲೋಚನೆಯ ಬಗ್ಗೆ ಪೀಠವು ಸಿಬಲ್ ಅವರನ್ನು ಕೇಳಿದಾಗ,  ಅವರು, ”ನನ್ನ ಸಮಸ್ಯೆ ಏನೆಂದರೆ ಇನ್ನೆರಡು ದಿನಗಳಲ್ಲಿ ಬೆದರಿಕೆ ಹಾಕಿ ಮುಸ್ಲಿಮರನ್ನು ಹೊರಹಾಕಿದಾಗ, ಈ ಸಮಿತಿಯು ಸಹಾಯ ಮಾಡಲು ಹೋಗುವುದಿಲ್ಲ” ಎಂದರು.

”ಎಫ್‌ಐಆರ್ ದಾಖಲಾದ ನಂತರ ಪೊಲೀಸರು ಅಪರಾಧಿಗಳನ್ನು ಬಂಧಿಸುವುದಿಲ್ಲ. ಎಫ್‌ಐಆರ್ ದಾಖಲಾದರೂ ಕೂಡ ಅವರ ವಿರುದ್ಧ ಯಾವುದೇ ಕ್ರಮ ಆಗುವುದಿಲ್ಲ ಎಂದರೆ ಎಫ್‌ಐಆರ್ ದಾಖಲಾಗಿದೆ ಎಂದು ಹೇಳುವುದರ ಅರ್ಥವೇನು?” ಎಂದು ಸಿಬಲ್ ಕೇಳಿದರು.

ಈ ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 18 ರಂದು ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...