Homeಮುಖಪುಟನುಹ್ ಹಿಂಸಾಚಾರ: ಮುಸ್ಲಿಮರ ಆರ್ಥಿಕ ಬಹಿಷ್ಕಾರ ಸ್ವೀಕಾರಾರ್ಹವಲ್ಲ ಎಂದ ಸುಪ್ರೀಂ

ನುಹ್ ಹಿಂಸಾಚಾರ: ಮುಸ್ಲಿಮರ ಆರ್ಥಿಕ ಬಹಿಷ್ಕಾರ ಸ್ವೀಕಾರಾರ್ಹವಲ್ಲ ಎಂದ ಸುಪ್ರೀಂ

- Advertisement -
- Advertisement -

ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದ ಕೋಮು ಹಿಂಸಾಚಾರದ ಬಳಿಕ ಅಲ್ಲಿಯ ಮುಸ್ಲಿಮರ ಆರ್ಥಿಕ ಬಹಿಷ್ಕಾರದ ಕರೆಗಳು “ಸ್ವೀಕಾರಾರ್ಹವಲ್ಲ” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಟೀಕಿಸಿದೆ.

ಹರಿಯಾಣ ಹಿಂಸಾಚಾರದ ಬಗ್ಗೆ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು, ಹಿಂಸಾಚಾರದ ನಂತರ ವರದಿಯಾಗಿರುವ ದ್ವೇಷ ಭಾಷಣದ ದೂರುಗಳನ್ನು ಪರಿಶೀಲಿಸಲು ಹರಿಯಾಣ ಪೊಲೀಸ್ ಮಹಾನಿರ್ದೇಶಕರ ನೇತೃತ್ವದ ಸಮಿತಿಯನ್ನು ರಚಿಸುವಂತೆ ಸೂಚಿಸಿದೆ.

ಆರೋಪಗಳು ನಿಜವೆಂದು ಕಂಡುಬಂದರೆ, ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಬಹುದು ಎಂದು ನ್ಯಾಯಾಧೀಶರು ಹೇಳಿದರು.

”ಸಮಸ್ಯೆಯೆಂದರೆ, SHO [ಠಾಣೆಯ ಗೃಹ ಅಧಿಕಾರಿ] ಮಟ್ಟದಲ್ಲಿ ಅಥವಾ ಪೊಲೀಸ್ ಠಾಣೆಯ ಮಟ್ಟದಲ್ಲಿನ ಸಿಬ್ಬಂದಿಗೆ ಕಾನೂನಿನ ಸೂಕ್ಷ್ಮತೆಗಳು ಹಾಗೂ ಸಂವೇದನಾಶಿಲತೆಯು ಕಡಿಮೆ ಇದೆ ಹಾಗಾಗಿ ಹಿರಿಯ ಅಥವಾ ಮಧ್ಯಮ ಮಟ್ಟದ ಅಧಿಕಾರಿಗಳು … ಅವರನ್ನು ಸಂವೇದನಾಶೀಲಗೊಳಿಸಬಹುದು” ಎಂದು ನ್ಯಾಯಮೂರ್ತಿ ಖನ್ನಾ ಹೇಳಿದರು.

ಜುಲೈ 31ರಂದು ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯ ಮೆರವಣಿಗೆ ಆಯೋಜಿಸಿದ್ದರು. ಈ ವೇಳೆ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ಘರ್ಷಣೆಗಳು ಆರಂಭವಾದವು. ಆ ಬಳಿಕ ತ್ವರಿತವಾಗಿ ನುಹ್‌ನ ಆಚೆಗೆ ಗಲಾಟೆಗಳು ಶುರುವಾದವು.

ಗುರುಗ್ರಾಮ್‌ನಲ್ಲಿ ಹಿಂದುತ್ವವಾದಿ ಗುಂಪುಗಳು ಅತಿರೇಕಕ್ಕೆ ಹೋದವು. ಸೆಕ್ಟರ್ 57ರಲ್ಲಿ ಮಸೀದಿಯನ್ನು ಸುಟ್ಟುಹಾಕಿದರು, ಅದರ ಉಪ ಇಮಾಮ್ ಅನ್ನು ಕೊಂದರು ಮತ್ತು ಮರುದಿನ ಸೆಕ್ಟರ್ 70ರಲ್ಲಿ ಮುಸ್ಲಿಂ ವಲಸೆ ಕಾರ್ಮಿಕರ ಅಂಗಡಿಗಳು ಮತ್ತು ಗುಡಿಸಲುಗಳಿಗೆ ಬೆಂಕಿ ಹಚ್ಚಿದರು.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ವಿಳಂಬ ತನಿಖೆಗೆ ಸುಪ್ರೀಂ ಬೇಸರ

ಪತ್ರಕರ್ತ ಶಹೀನ್ ಅಬ್ದುಲ್ಲಾ ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಈ ಹಿಂಸಾಚಾರದ ನಂತರ ರಾಜ್ಯದ ವಿವಿಧ ಕಡೆ 27ಕ್ಕೂ ಹೆಚ್ಚು ರ್ಯಾಲಿಗಳನ್ನು ಆಯೋಜಿಸಲಾಗಿದೆ ಮತ್ತು ದ್ವೇಷದ ಭಾಷಣವನ್ನು ಮಾಡಿದ್ದಾರೆ ತಿಳಿಸಿದ್ದಾರೆ.

”ಆಗಸ್ಟ್ 2ರಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದು ವೈರಲ್ ಆಗಿತ್ತು.  ವಿಡಿಯೋದಲ್ಲಿ, ಸಂಹಸ್ತ್ ಹಿಂದೂ ಸಮಾಜದವರು ಹರಿಯಾಣದ ಹಿಸಾರ್‌ನಲ್ಲಿ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲೇ, ಅಲ್ಲಿಯ ಎರಡು ದಿನಗಳಲ್ಲಿ ಇಲ್ಲಿ ಯಾವುದೇ ಮುಸ್ಲಿಮರು ಅಂಗಡಿಗಳನ್ನು ನಡೆಸುವಂತಿಲ್ಲ, ಮುಸ್ಲಿಮರ ಬಹಿಷ್ಕರಿಸಬೇಕು ಎಂದು ಅಲ್ಲಿಯ ನಿವಾಸಿಗಳಿಗೆ ತಿಳಿಸಲಾಗಿದೆ.

ಶುಕ್ರವಾರದ ವಿಚಾರಣೆಯಲ್ಲಿ, ಅಬ್ದುಲ್ಲಾ ಅವರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಸುಪ್ರೀಂ ಕೋರ್ಟ್ ಜನರನ್ನು ರಕ್ಷಿಸಬೇಕು ಮತ್ತು ಈ ರೀತಿಯ ಅನಿಯಂತ್ರಿತವಾಗಿ ದೌರ್ಜನ್ಯ ನಡೆಯಲು ಬಿಡಬಾರದು ಎಂದು ಹೇಳಿದರು.

ನ್ಯಾಯಮೂರ್ತಿ ಖನ್ನಾ ಅವರು ಸಮುದಾಯಗಳ ನಡುವೆ ಸಾಮರಸ್ಯವನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ”ಈ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. ಯಾರೂ ಇದನ್ನು ಸ್ವೀಕರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಮಾತನಾಡಿ, ದ್ವೇಷಪೂರಿತ ಭಾಷಣದ ಸಮಸ್ಯೆ ನಿವಾರಣೆಗೆ ಕಾನೂನಿನಡಿ ಈಗಾಗಲೇ ಯಾಂತ್ರಿಕ ವ್ಯವಸ್ಥೆ ಇದ್ದರೂ ಕೆಲವೆಡೆ ಅದು ಕಾರ್ಯನಿರ್ವಹಿಸುತ್ತಿಲ್ಲ ಎಂದರು.

ಸಮಿತಿಯನ್ನು ರಚಿಸುವ ಆಲೋಚನೆಯ ಬಗ್ಗೆ ಪೀಠವು ಸಿಬಲ್ ಅವರನ್ನು ಕೇಳಿದಾಗ,  ಅವರು, ”ನನ್ನ ಸಮಸ್ಯೆ ಏನೆಂದರೆ ಇನ್ನೆರಡು ದಿನಗಳಲ್ಲಿ ಬೆದರಿಕೆ ಹಾಕಿ ಮುಸ್ಲಿಮರನ್ನು ಹೊರಹಾಕಿದಾಗ, ಈ ಸಮಿತಿಯು ಸಹಾಯ ಮಾಡಲು ಹೋಗುವುದಿಲ್ಲ” ಎಂದರು.

”ಎಫ್‌ಐಆರ್ ದಾಖಲಾದ ನಂತರ ಪೊಲೀಸರು ಅಪರಾಧಿಗಳನ್ನು ಬಂಧಿಸುವುದಿಲ್ಲ. ಎಫ್‌ಐಆರ್ ದಾಖಲಾದರೂ ಕೂಡ ಅವರ ವಿರುದ್ಧ ಯಾವುದೇ ಕ್ರಮ ಆಗುವುದಿಲ್ಲ ಎಂದರೆ ಎಫ್‌ಐಆರ್ ದಾಖಲಾಗಿದೆ ಎಂದು ಹೇಳುವುದರ ಅರ್ಥವೇನು?” ಎಂದು ಸಿಬಲ್ ಕೇಳಿದರು.

ಈ ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 18 ರಂದು ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...