Homeಮುಖಪುಟವಿವಾದಿತ ದೆಹಲಿ ಸೇವಾ ಮಸೂದೆ ಸೇರಿ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ವಿವಾದಿತ ದೆಹಲಿ ಸೇವಾ ಮಸೂದೆ ಸೇರಿ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

- Advertisement -
- Advertisement -

ವಿವಾದಿತ ದೆಹಲಿ ಸೇವಾ ಮಸೂದೆ ಸೇರಿ ಒಟ್ಟು ನಾಲ್ಕು ಪ್ರಮುಖ ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ (ಆ.11) ಸಹಿ ಹಾಕಿದ್ದಾರೆ.

ಉಭಯ ಸದನಗಳಲ್ಲಿ ಅಂಗೀಕಾರವಾದ ಪ್ರಮುಖ ಮಸೂದೆಗಳು- ದೆಹಲಿ ಸೇವಾ ಮಸೂದೆ ಮತ್ತು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ​​ಗೆ (ಡಿಪಿಡಿಪಿ) ರಾಷ್ಟ್ರಪತಿಗಳು ಶುಕ್ರವಾರ ತಡರಾತ್ರಿ ಸಹಿ ಹಾಕಿದ್ದಾರೆ. ಇದರ ಜತೆಗೆ ಇಂದು ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ, ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಮಸೂದೆಗೂ ಕೂಡ ಸಹಿ ಹಾಕಿದ್ದು, ಕಾನೂನನಾಗಿ ಜಾರಿಗೆ ಬರಲಿದೆ.

ದೆಹಲಿ ಸೇವಾ ಮಸೂದೆ

ಆಮ್ ಆದ್ಮಿ ನೇತೃತ್ವದ ದೆಹಲಿ ಸರ್ಕಾರ ಸೇರಿದಂತೆ ಎಲ್ಲ ವಿರೋಧ ಪಕ್ಷಗಳು ಈ ಸೇವಾ ಮಸೂದೆಯನ್ನು ವಿರೋಧಿಸಿದ್ದವು. ”ಕೇಂದ್ರ ಸರ್ಕಾರ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಮಸೂದೆಯನ್ನು ತಂದಿದೆ. ನಮ್ಮ ಸರ್ಕಾರದ ಮೇಲೆ ಹಿಡಿತವನ್ನು ಸಾಧಿಸಿಲು ಪ್ರಯತ್ನ ಮಾಡುತ್ತಿದೆ” ಎಂದು ಆಪ್‌ ಆಕ್ರೋಶ ವ್ಯಕ್ತಪಡಿಸಿತ್ತು. ಪ್ರತಿಪಕ್ಷಗಳ ವಿರೋಧದ ನಡುವೆಯೇ ದೆಹಲಿ ಸೇವಾ ಮಸೂದೆಗೆ ಲೋಕ ಸಭೆ ಹಾಗೂ ರಾಜ್ಯಸಭೆಯಲ್ಲಿ ಅನುಮೋದನೆ ಸಿಕ್ಕಿತ್ತು. ಇದೀಗ ಈ ಮಸೂದೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ.

ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಮಸೂದೆ

ಮಣಿಪುರ ಹಿಂಸಾಚಾರ ವಿಚಾರವಾಗಿ ಸದನದಲ್ಲಿ ವಿರೋಧ ಪಕ್ಷಗಳು ಹಾಗೂ ಆಡಳಿತ ಪಕ್ಷದ ನಡುವಿನ ಗದ್ದಲದ ಮಧ್ಯೆಯೇ ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ (ಡಿಪಿಡಿಪಿ) ಮಸೂದೆಯನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು. ಈ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಮಂಡಿಸಲಾಯಿತು. ಪ್ರತಿಪಕ್ಷಗಳು ಅದನ್ನು ಹೆಚ್ಚಿನ ಪರಿಶೀಲನೆಗಾಗಿ ಸ್ಥಾಯಿ ಸಮಿತಿಗೆ ಉಲ್ಲೇಖಿಸಲು ಒತ್ತಾಯಿಸಿದಾಗ, ಧ್ವನಿ ಮತದ ಮೂಲಕ ಇದನ್ನು ಅಂಗೀಕರಿಸಲಾಗಿದೆ. ಈ ಮಸೂದೆಯನ್ನು ರಾಜ್ಯಸಭೆಯಲ್ಲೂ ಸೋಮವಾರ (ಆಗಸ್ಟ್ 7) ಅಂಗೀಕರಗೊಳಿಸಿದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಷ್ಟ್ರಪತಿಗಳು ಶುಕ್ರವಾರ ರಾತ್ರಿ ಈ ಮಸೂದೆಗೆ ಸಹಿ ಹಾಕಿದ್ದಾರೆ.

ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯ್ದೆ

ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯ್ದೆಯು ಡಿಜಿಟಲ್ ಜನನ ಪ್ರಮಾಣಪತ್ರಗಳನ್ನು ಪಡೆಯಲು ದಾರಿ ಮಾಡಿಕೊಡುತ್ತದೆ. ಇದನ್ನು ಅನೇಕ ಉದ್ದೇಶಗಳಿಗಾಗಿ ಒಂದೇ ದಾಖಲೆಯಾಗಿ ಬಳಸಬಹುದು. ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ನೀಡುವುದು, ಮದುವೆ ನೋಂದಣಿ, ಸರ್ಕಾರಿ ಉದ್ಯೋಗಕ್ಕೆ ನೇಮಕಾತಿ ಮತ್ತು ಆಹಾರ ಕಲ್ಯಾಣ ಯೋಜನೆಗಳನ್ನು ಪಡೆಯಲು ಜನ್ಮ ಪ್ರಮಾಣಪತ್ರವನ್ನು ಬಳಸಲು ಅನುಮತಿಸುವ ನಿಬಂಧನೆಗಳನ್ನು ಈ ಕಾಯ್ದೆ ಹೊಂದಿದೆ. ಇದಕ್ಕೂ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ.

ಜನ ವಿಶ್ವಾಸ (ನಿಬಂಧನೆಗಳ ತಿದ್ದುಪಡಿ) ಮಸೂದೆ

ರಾಜ್ಯಸಭೆಯಲ್ಲಿ ಗುರುವಾರ ಕೇಂದ್ರ ಸರ್ಕಾರವು ಜನ ವಿಶ್ವಾಸ (ನಿಬಂಧನೆಗಳ ತಿದ್ದುಪಡಿ) ಮಸೂದೆ 2023 ಅನ್ನು ಪರಿಚಯಿಸಿತು. ಇದು ಸಣ್ಣ ಅಪರಾಧಗಳನ್ನು ಸಾಬೀತುಪಡಿಸುವ ಮೂಲಕ ವ್ಯವಹಾರವನ್ನು ಸುಲಭಗೊಳಿಸಲು 42 ಕಾಯಿದೆಗಳಲ್ಲಿ 183 ನಿಬಂಧನೆಗಳನ್ನು ತಿದ್ದುಪಡಿ ಮಾಡಲು ಈ ಮಸೂದೆಯನ್ನು ಮಾಡಲಾಗಿದೆ. ಈ ಮಸೂದೆಗೂ ಕೂಡ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.

ಇದನ್ನೂ ಓದಿ: ಅದಾನಿ ಪೋರ್ಟ್ಸ್ ಆಡಿಟರ್ ರಾಜೀನಾಮೆ ನೀಡಲಿದ್ದಾರೆ, ಹೂಡಿಕೆದಾರರು ಹುಷಾರಾಗಿರಿ: ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...