Homeಮುಖಪುಟವಿವಾದಿತ ದೆಹಲಿ ಸೇವಾ ಮಸೂದೆ ಸೇರಿ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ವಿವಾದಿತ ದೆಹಲಿ ಸೇವಾ ಮಸೂದೆ ಸೇರಿ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

- Advertisement -
- Advertisement -

ವಿವಾದಿತ ದೆಹಲಿ ಸೇವಾ ಮಸೂದೆ ಸೇರಿ ಒಟ್ಟು ನಾಲ್ಕು ಪ್ರಮುಖ ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ (ಆ.11) ಸಹಿ ಹಾಕಿದ್ದಾರೆ.

ಉಭಯ ಸದನಗಳಲ್ಲಿ ಅಂಗೀಕಾರವಾದ ಪ್ರಮುಖ ಮಸೂದೆಗಳು- ದೆಹಲಿ ಸೇವಾ ಮಸೂದೆ ಮತ್ತು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ​​ಗೆ (ಡಿಪಿಡಿಪಿ) ರಾಷ್ಟ್ರಪತಿಗಳು ಶುಕ್ರವಾರ ತಡರಾತ್ರಿ ಸಹಿ ಹಾಕಿದ್ದಾರೆ. ಇದರ ಜತೆಗೆ ಇಂದು ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ, ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಮಸೂದೆಗೂ ಕೂಡ ಸಹಿ ಹಾಕಿದ್ದು, ಕಾನೂನನಾಗಿ ಜಾರಿಗೆ ಬರಲಿದೆ.

ದೆಹಲಿ ಸೇವಾ ಮಸೂದೆ

ಆಮ್ ಆದ್ಮಿ ನೇತೃತ್ವದ ದೆಹಲಿ ಸರ್ಕಾರ ಸೇರಿದಂತೆ ಎಲ್ಲ ವಿರೋಧ ಪಕ್ಷಗಳು ಈ ಸೇವಾ ಮಸೂದೆಯನ್ನು ವಿರೋಧಿಸಿದ್ದವು. ”ಕೇಂದ್ರ ಸರ್ಕಾರ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಮಸೂದೆಯನ್ನು ತಂದಿದೆ. ನಮ್ಮ ಸರ್ಕಾರದ ಮೇಲೆ ಹಿಡಿತವನ್ನು ಸಾಧಿಸಿಲು ಪ್ರಯತ್ನ ಮಾಡುತ್ತಿದೆ” ಎಂದು ಆಪ್‌ ಆಕ್ರೋಶ ವ್ಯಕ್ತಪಡಿಸಿತ್ತು. ಪ್ರತಿಪಕ್ಷಗಳ ವಿರೋಧದ ನಡುವೆಯೇ ದೆಹಲಿ ಸೇವಾ ಮಸೂದೆಗೆ ಲೋಕ ಸಭೆ ಹಾಗೂ ರಾಜ್ಯಸಭೆಯಲ್ಲಿ ಅನುಮೋದನೆ ಸಿಕ್ಕಿತ್ತು. ಇದೀಗ ಈ ಮಸೂದೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ.

ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಮಸೂದೆ

ಮಣಿಪುರ ಹಿಂಸಾಚಾರ ವಿಚಾರವಾಗಿ ಸದನದಲ್ಲಿ ವಿರೋಧ ಪಕ್ಷಗಳು ಹಾಗೂ ಆಡಳಿತ ಪಕ್ಷದ ನಡುವಿನ ಗದ್ದಲದ ಮಧ್ಯೆಯೇ ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ (ಡಿಪಿಡಿಪಿ) ಮಸೂದೆಯನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು. ಈ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಮಂಡಿಸಲಾಯಿತು. ಪ್ರತಿಪಕ್ಷಗಳು ಅದನ್ನು ಹೆಚ್ಚಿನ ಪರಿಶೀಲನೆಗಾಗಿ ಸ್ಥಾಯಿ ಸಮಿತಿಗೆ ಉಲ್ಲೇಖಿಸಲು ಒತ್ತಾಯಿಸಿದಾಗ, ಧ್ವನಿ ಮತದ ಮೂಲಕ ಇದನ್ನು ಅಂಗೀಕರಿಸಲಾಗಿದೆ. ಈ ಮಸೂದೆಯನ್ನು ರಾಜ್ಯಸಭೆಯಲ್ಲೂ ಸೋಮವಾರ (ಆಗಸ್ಟ್ 7) ಅಂಗೀಕರಗೊಳಿಸಿದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಷ್ಟ್ರಪತಿಗಳು ಶುಕ್ರವಾರ ರಾತ್ರಿ ಈ ಮಸೂದೆಗೆ ಸಹಿ ಹಾಕಿದ್ದಾರೆ.

ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯ್ದೆ

ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯ್ದೆಯು ಡಿಜಿಟಲ್ ಜನನ ಪ್ರಮಾಣಪತ್ರಗಳನ್ನು ಪಡೆಯಲು ದಾರಿ ಮಾಡಿಕೊಡುತ್ತದೆ. ಇದನ್ನು ಅನೇಕ ಉದ್ದೇಶಗಳಿಗಾಗಿ ಒಂದೇ ದಾಖಲೆಯಾಗಿ ಬಳಸಬಹುದು. ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ನೀಡುವುದು, ಮದುವೆ ನೋಂದಣಿ, ಸರ್ಕಾರಿ ಉದ್ಯೋಗಕ್ಕೆ ನೇಮಕಾತಿ ಮತ್ತು ಆಹಾರ ಕಲ್ಯಾಣ ಯೋಜನೆಗಳನ್ನು ಪಡೆಯಲು ಜನ್ಮ ಪ್ರಮಾಣಪತ್ರವನ್ನು ಬಳಸಲು ಅನುಮತಿಸುವ ನಿಬಂಧನೆಗಳನ್ನು ಈ ಕಾಯ್ದೆ ಹೊಂದಿದೆ. ಇದಕ್ಕೂ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ.

ಜನ ವಿಶ್ವಾಸ (ನಿಬಂಧನೆಗಳ ತಿದ್ದುಪಡಿ) ಮಸೂದೆ

ರಾಜ್ಯಸಭೆಯಲ್ಲಿ ಗುರುವಾರ ಕೇಂದ್ರ ಸರ್ಕಾರವು ಜನ ವಿಶ್ವಾಸ (ನಿಬಂಧನೆಗಳ ತಿದ್ದುಪಡಿ) ಮಸೂದೆ 2023 ಅನ್ನು ಪರಿಚಯಿಸಿತು. ಇದು ಸಣ್ಣ ಅಪರಾಧಗಳನ್ನು ಸಾಬೀತುಪಡಿಸುವ ಮೂಲಕ ವ್ಯವಹಾರವನ್ನು ಸುಲಭಗೊಳಿಸಲು 42 ಕಾಯಿದೆಗಳಲ್ಲಿ 183 ನಿಬಂಧನೆಗಳನ್ನು ತಿದ್ದುಪಡಿ ಮಾಡಲು ಈ ಮಸೂದೆಯನ್ನು ಮಾಡಲಾಗಿದೆ. ಈ ಮಸೂದೆಗೂ ಕೂಡ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.

ಇದನ್ನೂ ಓದಿ: ಅದಾನಿ ಪೋರ್ಟ್ಸ್ ಆಡಿಟರ್ ರಾಜೀನಾಮೆ ನೀಡಲಿದ್ದಾರೆ, ಹೂಡಿಕೆದಾರರು ಹುಷಾರಾಗಿರಿ: ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...