Homeಮುಖಪುಟವಿವಾದಿತ ದೆಹಲಿ ಸೇವಾ ಮಸೂದೆ ಸೇರಿ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ವಿವಾದಿತ ದೆಹಲಿ ಸೇವಾ ಮಸೂದೆ ಸೇರಿ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

- Advertisement -
- Advertisement -

ವಿವಾದಿತ ದೆಹಲಿ ಸೇವಾ ಮಸೂದೆ ಸೇರಿ ಒಟ್ಟು ನಾಲ್ಕು ಪ್ರಮುಖ ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ (ಆ.11) ಸಹಿ ಹಾಕಿದ್ದಾರೆ.

ಉಭಯ ಸದನಗಳಲ್ಲಿ ಅಂಗೀಕಾರವಾದ ಪ್ರಮುಖ ಮಸೂದೆಗಳು- ದೆಹಲಿ ಸೇವಾ ಮಸೂದೆ ಮತ್ತು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ​​ಗೆ (ಡಿಪಿಡಿಪಿ) ರಾಷ್ಟ್ರಪತಿಗಳು ಶುಕ್ರವಾರ ತಡರಾತ್ರಿ ಸಹಿ ಹಾಕಿದ್ದಾರೆ. ಇದರ ಜತೆಗೆ ಇಂದು ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ, ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಮಸೂದೆಗೂ ಕೂಡ ಸಹಿ ಹಾಕಿದ್ದು, ಕಾನೂನನಾಗಿ ಜಾರಿಗೆ ಬರಲಿದೆ.

ದೆಹಲಿ ಸೇವಾ ಮಸೂದೆ

ಆಮ್ ಆದ್ಮಿ ನೇತೃತ್ವದ ದೆಹಲಿ ಸರ್ಕಾರ ಸೇರಿದಂತೆ ಎಲ್ಲ ವಿರೋಧ ಪಕ್ಷಗಳು ಈ ಸೇವಾ ಮಸೂದೆಯನ್ನು ವಿರೋಧಿಸಿದ್ದವು. ”ಕೇಂದ್ರ ಸರ್ಕಾರ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಮಸೂದೆಯನ್ನು ತಂದಿದೆ. ನಮ್ಮ ಸರ್ಕಾರದ ಮೇಲೆ ಹಿಡಿತವನ್ನು ಸಾಧಿಸಿಲು ಪ್ರಯತ್ನ ಮಾಡುತ್ತಿದೆ” ಎಂದು ಆಪ್‌ ಆಕ್ರೋಶ ವ್ಯಕ್ತಪಡಿಸಿತ್ತು. ಪ್ರತಿಪಕ್ಷಗಳ ವಿರೋಧದ ನಡುವೆಯೇ ದೆಹಲಿ ಸೇವಾ ಮಸೂದೆಗೆ ಲೋಕ ಸಭೆ ಹಾಗೂ ರಾಜ್ಯಸಭೆಯಲ್ಲಿ ಅನುಮೋದನೆ ಸಿಕ್ಕಿತ್ತು. ಇದೀಗ ಈ ಮಸೂದೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ.

ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಮಸೂದೆ

ಮಣಿಪುರ ಹಿಂಸಾಚಾರ ವಿಚಾರವಾಗಿ ಸದನದಲ್ಲಿ ವಿರೋಧ ಪಕ್ಷಗಳು ಹಾಗೂ ಆಡಳಿತ ಪಕ್ಷದ ನಡುವಿನ ಗದ್ದಲದ ಮಧ್ಯೆಯೇ ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ (ಡಿಪಿಡಿಪಿ) ಮಸೂದೆಯನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು. ಈ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಮಂಡಿಸಲಾಯಿತು. ಪ್ರತಿಪಕ್ಷಗಳು ಅದನ್ನು ಹೆಚ್ಚಿನ ಪರಿಶೀಲನೆಗಾಗಿ ಸ್ಥಾಯಿ ಸಮಿತಿಗೆ ಉಲ್ಲೇಖಿಸಲು ಒತ್ತಾಯಿಸಿದಾಗ, ಧ್ವನಿ ಮತದ ಮೂಲಕ ಇದನ್ನು ಅಂಗೀಕರಿಸಲಾಗಿದೆ. ಈ ಮಸೂದೆಯನ್ನು ರಾಜ್ಯಸಭೆಯಲ್ಲೂ ಸೋಮವಾರ (ಆಗಸ್ಟ್ 7) ಅಂಗೀಕರಗೊಳಿಸಿದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಷ್ಟ್ರಪತಿಗಳು ಶುಕ್ರವಾರ ರಾತ್ರಿ ಈ ಮಸೂದೆಗೆ ಸಹಿ ಹಾಕಿದ್ದಾರೆ.

ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯ್ದೆ

ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯ್ದೆಯು ಡಿಜಿಟಲ್ ಜನನ ಪ್ರಮಾಣಪತ್ರಗಳನ್ನು ಪಡೆಯಲು ದಾರಿ ಮಾಡಿಕೊಡುತ್ತದೆ. ಇದನ್ನು ಅನೇಕ ಉದ್ದೇಶಗಳಿಗಾಗಿ ಒಂದೇ ದಾಖಲೆಯಾಗಿ ಬಳಸಬಹುದು. ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ನೀಡುವುದು, ಮದುವೆ ನೋಂದಣಿ, ಸರ್ಕಾರಿ ಉದ್ಯೋಗಕ್ಕೆ ನೇಮಕಾತಿ ಮತ್ತು ಆಹಾರ ಕಲ್ಯಾಣ ಯೋಜನೆಗಳನ್ನು ಪಡೆಯಲು ಜನ್ಮ ಪ್ರಮಾಣಪತ್ರವನ್ನು ಬಳಸಲು ಅನುಮತಿಸುವ ನಿಬಂಧನೆಗಳನ್ನು ಈ ಕಾಯ್ದೆ ಹೊಂದಿದೆ. ಇದಕ್ಕೂ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ.

ಜನ ವಿಶ್ವಾಸ (ನಿಬಂಧನೆಗಳ ತಿದ್ದುಪಡಿ) ಮಸೂದೆ

ರಾಜ್ಯಸಭೆಯಲ್ಲಿ ಗುರುವಾರ ಕೇಂದ್ರ ಸರ್ಕಾರವು ಜನ ವಿಶ್ವಾಸ (ನಿಬಂಧನೆಗಳ ತಿದ್ದುಪಡಿ) ಮಸೂದೆ 2023 ಅನ್ನು ಪರಿಚಯಿಸಿತು. ಇದು ಸಣ್ಣ ಅಪರಾಧಗಳನ್ನು ಸಾಬೀತುಪಡಿಸುವ ಮೂಲಕ ವ್ಯವಹಾರವನ್ನು ಸುಲಭಗೊಳಿಸಲು 42 ಕಾಯಿದೆಗಳಲ್ಲಿ 183 ನಿಬಂಧನೆಗಳನ್ನು ತಿದ್ದುಪಡಿ ಮಾಡಲು ಈ ಮಸೂದೆಯನ್ನು ಮಾಡಲಾಗಿದೆ. ಈ ಮಸೂದೆಗೂ ಕೂಡ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.

ಇದನ್ನೂ ಓದಿ: ಅದಾನಿ ಪೋರ್ಟ್ಸ್ ಆಡಿಟರ್ ರಾಜೀನಾಮೆ ನೀಡಲಿದ್ದಾರೆ, ಹೂಡಿಕೆದಾರರು ಹುಷಾರಾಗಿರಿ: ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...