Homeಮುಖಪುಟಹರ್ಯಾಣ: ಹಿಂದುತ್ವ ಸಂಘಟನೆಯ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ

ಹರ್ಯಾಣ: ಹಿಂದುತ್ವ ಸಂಘಟನೆಯ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ

- Advertisement -
- Advertisement -

ದ್ವೇಷ ಭಾಷಣ ಮಾಡದಂತೆ ಷರತ್ತು ವಿಧಿಸಿದರೂ ಹರ್ಯಾಣದಲ್ಲಿ ಹಿಂದುತ್ವ ಸಂಘಟನೆಯೊಂದರ  ಬೃಹತ್ ಸಮಾವೇಶದಲ್ಲಿ ಮತ್ತೆ ಪ್ರಚೋದನಾತ್ಮಕ ಹೇಳಿಕೆಗಳನ್ನು ಕೊಡಲಾಗಿದೆ.

ಇಂದು ಪಲ್ವಾಲ್ ಜಿಲ್ಲೆಯಲ್ಲಿ ಕೆಲವು ಭಾಷಣಕಾರರು ಬಹಿರಂಗ ಬೆದರಿಕೆ ಹಾಕಿದ್ದಾರೆ. ದ್ವೇಷದ ಭಾಷಣ ಮಾಡಬಾರದೆಂದು ಸಂಘಟಕರು ಭಾಷಣಗಾರರಿಗೆ ಹೇಳಿದ್ದರು ಎನ್ನಲಾಗಿದೆ. ಆದರೆ ಕೆಲವು ಭಾಷಣಕಾರರು ಅದನ್ನು ನಿರ್ಲಕ್ಷಿಸಿದ್ದಾರೆ.

ಒಬ್ಬ ಭಾಷಣಕಾರ, “ನೀವು ಬೆರಳು ಎತ್ತಿದರೆ, ನಾವು ನಿಮ್ಮ ಕೈಗಳನ್ನು ಕತ್ತರಿಸುತ್ತೇವೆ” ಎಂದು ಹೇಳಿದ್ದಾನೆ. ಇನ್ನೊಬ್ಬ ರೈಫಲ್‌ಗಳಿಗೆ ಪರವಾನಗಿ ನೀಡಬೇಕೆಂದು ಒತ್ತಾಯಿಸಿದ್ದಾನೆ.

ಹರ್ಯಾಣದ  ನುಹ್ ನಲ್ಲಿ ಎರಡು ವಾರಗಳ ಮೊದಲು ನಡೆದ ಹಿಂಸಾಚಾರದಲ್ಲಿ 6 ಮಂದಿ ಮೃತಪಟ್ಟಿದ್ದರು.

ಎರಡು ವಾರಗಳ ಹಿಂದೆ ಹರಿಯಾಣದ ನುಹ್‌ನಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ ಆರು ಜನರು ಸಾವನ್ನಪ್ಪಿದ ನಂತರ ಮತ್ತೆ ಹಿಂದುತ್ವ ಸಂಘಟನ ಸಭೆ ನಡೆಸಿದೆ. ಕಳೆದ ತಿಂಗಳು ನುಹ್‌ನಲ್ಲಿ ಆರಂಭವಾದ ವಿಶ್ವ ಹಿಂದೂ ಪರಿಷತ್‌ನ ಧಾರ್ಮಿಕ ಮೆರವಣಿಗೆಯನ್ನು ಪೂರ್ಣಗೊಳಿಸಲು   ಹಿಂದುತ್ವ ಗುಂಪು ನುಹ್ ನಲ್ಲೇ ಮಹಾಪಂಚಾಯತ್ ನ್ನು ಆಯೋಜಿಸಲು ಮುಂದಾಗಿತ್ತು.ಆದರೆ, ಪೊಲೀಸರಿಂದ ಅನುಮತಿ ನಿರಾಕರಿಸಿದ ನಂತರ ಅದನ್ನು 35 ಕಿಮೀ ದೂರದ ಪಲ್ವಾಲ್‌ಗೆ ಸ್ಥಳಾಂತರಿಸಲಾಗಿದೆ.

ಮಹಾಪಂಚಾಯತ್ ಪಲ್ವಾಲ್-ನುಹ್ ಗಡಿಯಲ್ಲಿರುವ ಪೊಂಡ್ರಿ ಗ್ರಾಮದಲ್ಲಿ ನಡೆದಿದೆ. ಹಲವು ಷರತ್ತುಗಳ ಮೇಲೆ ಅನುಮತಿ ನೀಡಲಾಗಿದೆ ಎಂದು ಪಲ್ವಾಲ್ ಪೊಲೀಸ್ ವರಿಷ್ಠಾಧಿಕಾರಿ ಲೋಕೇಂದ್ರ ಸಿಂಗ್ ಹೇಳಿದ್ದಾರೆ.

ಯಾರು ಕೂಡ ದ್ವೇಷ ಅಥವಾ ಪ್ರಚೋದನಾಕಾರಿ ಭಾಷಣ ಮಾಡಬಾರದು. ಪ್ರಚೋದನಕಾರಿ ಭಾಷಣ ಮಾಡಿದರೆ ತಕ್ಷಣ ಎಫ್ ಐಆರ್ ದಾಖಲಿಸುತ್ತೇವೆ.ಯಾರು ಕೂಡ  ಸಮಾವೇಶಕ್ಕೆ ಬರುವಾಗ ಆಯುಧಗಳು, ದೊಣ್ಣೆಗಳು, ಲಾಠಿಗಳನ್ನು ಅಥವಾ ಯಾವುದೇ ದಹಿಸುವ ವಸ್ತುವನ್ನು ತರದಂತೆ ಷರತ್ತು ವಿಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಕೇವಲ 500 ಜನರಿಗೆ ಮಾತ್ರ ಅವಕಾಶ ಮತ್ತು ಸಮಾವೇಶ ಮಧ್ಯಾಹ್ನ 2 ಗಂಟೆಗೆ  ಕೊನೆಗಳ್ಳಬೇಕು ಎಂದು ಕೂಡ ಪೊಲೀಸರು ಷರತ್ತು ವಿಧಿಸಿದ್ದರು ಎನ್ನಲಾಗಿದೆ.

ಇದನ್ನು ಓದಿ: ದಲಿತ ಸಮುದಾಯಕ್ಕೆ ಅವಮಾನ – ತೀವ್ರ ಟೀಕೆಯ ನಂತರ ಕ್ಷಮೆಯಾಚಿಸಿದ ನಟ ಉಪೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...