HomeಮುಖಪುಟNEET ಪರೀಕ್ಷೆ ತಗೆದುಹಾಕುವ ಮಸೂದೆಗೆ ರಾಜ್ಯಪಾಲರ ಅನುಮತಿ ಬೇಕಿಲ್ಲ: ಸಚಿವ ಸುಬ್ರಮಣಿಯನ್

NEET ಪರೀಕ್ಷೆ ತಗೆದುಹಾಕುವ ಮಸೂದೆಗೆ ರಾಜ್ಯಪಾಲರ ಅನುಮತಿ ಬೇಕಿಲ್ಲ: ಸಚಿವ ಸುಬ್ರಮಣಿಯನ್

- Advertisement -
- Advertisement -

NEET ಪರೀಕ್ಷೆ ವಿರುದ್ಧದ ರಾಜ್ಯದ ಮಸೂದೆಯನ್ನು ಅನುಮೋದಿಸುವಲ್ಲಿ ರಾಜ್ಯಪಾಲ ಆರ್‌ಎನ್ ರವಿ ಅವರು ವಿರೋಧಿಸುವಂತಿಲ್ಲ, ಇದರಲ್ಲಿ ಅವರ ಪಾತ್ರ ಏನೂ ಇಲ್ಲ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಭಾನುವಾರ ಹೇಳಿದ್ದಾರೆ.

ಭಾರತದಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ಪದವಿಪೂರ್ವ ಕೋರ್ಸ್‌ಗಳಿಗೆ ಅರ್ಹತಾ ಪರೀಕ್ಷೆಯಾಗಿ NEET ನಡೆಸಲಾಗುತ್ತದೆ. ಇದನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುತ್ತದೆ.

ಸೆಪ್ಟೆಂಬರ್ 2021ರಲ್ಲಿ, ತಮಿಳುನಾಡು ಅಸೆಂಬ್ಲಿಯು ಡಿಎಂಕೆ ಮಂಡಿಸಿದ ಮಸೂದೆಯನ್ನು ಅಂಗೀಕರಿಸಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ NEETನಿಂದ ವಿನಾಯಿತಿ ನೀಡುವಂತೆ ಕೋರಿತ್ತು. 12ನೇ ತರಗತಿಯ ಪರೀಕ್ಷಾ ಫಲಿತಾಂಶಗಳ ಆಧಾರದ ಮೇಲೆ ವೈದ್ಯಕೀಯ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳ ಪ್ರವೇಶವನ್ನು ಕೈಗೊಳ್ಳಲಾಗುವುದು ಎಂದು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಪಠ್ಯಕ್ರಮವನ್ನು ಆಧರಿಸಿದ ಈ ಪ್ರವೇಶ ಪರೀಕ್ಷೆಯು ರಾಜ್ಯ ಮಂಡಳಿಯ ಪಠ್ಯಕ್ರಮವನ್ನು ಅನುಸರಿಸುವ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುತ್ತದೆ ಎಂಬ ಆಧಾರದ ಮೇಲೆ ತಮಿಳುನಾಡು ಪರೀಕ್ಷೆಯನ್ನು ವಿರೋಧಿಸುತ್ತಿದೆ.

ರಾಜ್ಯಪಾಲ ರವಿ ಅವರು ಮಸೂದೆಗೆ ಒಪ್ಪಿಗೆ ನೀಡಲಿಲ್ಲ ಮತ್ತು ಕಾಯಿದೆಯು ಕಾನೂನಾಗುವುದನ್ನು ನಿಲ್ಲಿಸಿತು. ಆನಂತರ ಫೆಬ್ರವರಿ 2022ರಲ್ಲಿ ತಮಿಳುನಾಡು ಅಸೆಂಬ್ಲಿಯು ಮತ್ತೊಮ್ಮೆ ಮಸೂದೆಯನ್ನು ಅಂಗೀಕರಿಸಿತು. ಶಿಕ್ಷಣವು ಸಂವಿಧಾನದ ಏಕಕಾಲಿಕ ಪಟ್ಟಿಯಲ್ಲಿ ಒಂದು ವಿಷಯವಾಗಿರುವುದರಿಂದ ಮಸೂದೆಯು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಲುಪಿಸಲಾಯಿತು.

ನೀಟ್ ಪರೀಕ್ಷೆಯು ಇಡೀ ದೇಶದಲ್ಲಿ ಇರುವುದಾದರೆ ರಾಜ್ಯತದಲ್ಲಿ ಮಾತ್ರ ತಗೆದುಹಾಕುವ ಬಿಲ್‌ಗೆ ನಾನು ಎಂದಿಗೂ ಒಪ್ಪಿಗೆ ನೀಡುವುದಿಲ್ಲ ಎಂದು ರವಿ ಅವರು ಶನಿವಾರ ಹೇಳಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ.

ಬಿಲ್‌ಗೆ ಒಪ್ಪಿಗೆ ನೀಡುವ ಕುರಿತು ವಿದ್ಯಾರ್ಥಿಯೊಬ್ಬರ ತಂದೆ ರವಿ ಅವರನ್ನು ಕೇಳಿದಾಗ, ”ನಾನು ನಿಮಗೆ ತುಂಬಾ ಪ್ರಾಮಾಣಿಕವಾಗಿ ಹೇಳುತ್ತಿದ್ದೇನೆ. ನಾನು ಎಂದಿಗೂ NEET ಗೆ ಕ್ಲಿಯರೆನ್ಸ್ ನೀಡುವುದಿಲ್ಲ [ವಿನಾಯಿತಿ ಮಸೂದೆ]” ಎಂದಿದ್ದಾರೆ.

ರವಿ ಅವರ ಹೇಳಿಕೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದ ಸುಬ್ರಮಣಿಯನ್, ರಾಷ್ಟ್ರಪತಿಗಳ ಕಚೇರಿ ಈ ಮಸೂದೆಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಿದ್ದು, ತಮಿಳುನಾಡು ಸರ್ಕಾರದಿಂದ ಸ್ಪಷ್ಟನೆ ಕೇಳಿದೆ. ಈಗ, ರಾಷ್ಟ್ರಪತಿಗಳು ಮಸೂದೆಗೆ ಒಪ್ಪಿಗೆ ನೀಡುತ್ತಾರೆ ಎಂದು ಭಾವಿಸಿದರೆ, ರಾಜ್ಯಪಾಲರ ಕಚೇರಿಗೆ ಸೂಚನೆ ಸಿಗುತ್ತದೆ, ಅನುಮತಿ ಅಲ್ಲ. ಆದ್ದರಿಂದ, ಮಸೂದೆಯಲ್ಲಿ ರಾಜ್ಯಪಾಲರಿಗೆ ಹೆಚ್ಚಿನ ಪಾತ್ರವಿಲ್ಲ” ಎಂದು ಸುಬ್ರಮಣಿಯನ್ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು, ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ: ನಿಮ್ಮ ಗುರಿಗೆ ತೊಡಕಾಗಿರುವ NEET ಪರೀಕ್ಷೆಯನ್ನು ತೆಗೆದುಹಾಕುತ್ತೇವೆ: ಅಭ್ಯರ್ಥಿಗಳಿಗೆ ಸ್ಟಾಲಿನ್ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...