Homeಮುಖಪುಟಹಿಮಾಚಲ ಪ್ರದೇಶ ಮಳೆಗೆ ತತ್ತರ: 22 ಮಂದಿ ದುರ್ಮರಣ

ಹಿಮಾಚಲ ಪ್ರದೇಶ ಮಳೆಗೆ ತತ್ತರ: 22 ಮಂದಿ ದುರ್ಮರಣ

- Advertisement -
- Advertisement -

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ 22 ಮಂದಿ ಮೃತಪಟ್ಟಿದ್ದು, ಶಿಮ್ಲಾದಲ್ಲಿ ದೇವಾಲಯ ಕುಸಿತಕ್ಕೆ 9 ಮಂದಿ ಮೃತಪಟ್ಟಿದ್ದಾರೆ.

ಶಿಮ್ಲಾದಲ್ಲಿ ಸಮ್ಮರ್ ಹಿಲ್ ಪ್ರದೇಶದಲ್ಲಿ ಶಿವನ  ದೇವಾಲಯ ಕುಸಿದು  9 ಮಂದಿ ಮೃತಪಟ್ಟಿದ್ದಾರೆ.ಸೋಲನ್ ಜಿಲ್ಲೆಯಲ್ಲಿ ಮೇಘಸ್ಫೋಟಕ್ಕೆ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿದ್ದಾರೆ.ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.

ನಿನ್ನೆ ರಾತ್ರಿ ಮೇಘಸ್ಫೋಟದ ನಂತರ ಸೋಲನ್‌ನಲ್ಲಿ ಎರಡು ಮನೆಗಳು ಕೊಚ್ಚಿಹೋಗಿವೆ. ಆರು ಜನರನ್ನು ರಕ್ಷಿಸಿಸಲಾಗಿದೆ. ಜಾಡೋನ್ ಗ್ರಾಮದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಳೇರ ಪಂಚಾಯಿತಿಯಲ್ಲಿ ಭೂಕುಸಿತದಿಂದ ತಾತ್ಕಾಲಿಕ ಮನೆ ಕುಸಿದು ಇಬ್ಬರು ಮಕ್ಕಳು  ಸಾವನ್ನಪ್ಪಿದ್ದು, ಒಬ್ಬರ ಮೃತದೇಹ ಪತ್ತೆಯಾಗಿದೆ. ರಾಮ್‌ಶೆಹರ್ ತಹಸಿಲ್‌ನ ಬನಾಲ್ ಗ್ರಾಮದಲ್ಲಿ ಭೂಕುಸಿತದಲ್ಲಿ ಮತ್ತೊಬ್ಬ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಸೋಲನ್‌ನ ಡೆಪ್ಯುಟಿ ಕಮಿಷನರ್ ಮನಮೋಹನ್ ಶರ್ಮಾ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಹಮರ್‌ಪುರದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಪ್ರವಾಹ ಪರಿಸ್ಥಿತಿಯ ಬಗ್ಗೆ ಸೋಮವಾರ ಡೆಹ್ರಾಡೂನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ನಾಗರಿಕರ ಸುರಕ್ಷತೆ ಮತ್ತು ಬೇಕಾಗಿರುವ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ  ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಭಾರೀ ಮಳೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಗುಡ್ಡಗಾಡು ಪ್ರದೇಶಗಳಿಗೆ ತೆರಳದಂತೆ ಎಲ್ಲಾ ಜನರಿಗೆ ಡಿಜಿಪಿ ಅಶೋಕ್ ಕುಮಾರ್ ಮನವಿ ಮಾಡಿದ್ದಾರೆ.

ಹವಾಮಾನ ಇಲಾಖೆ ಈಗಾಗಲೇ ರೆಡ್ ಅಲರ್ಟ್ ನೀಡಿದೆ. ಆಗಸ್ಟ್ 12 ರಿಂದ ವಿಶೇಷವಾಗಿ ಗರ್ವಾಲ್ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ.  ಪೊಲೀಸ್ ಮತ್ತು ಎಸ್‌ಡಿಆರ್‌ಎಫ್ ತಂಡವು ಅಲರ್ಟ್ ಆಗಿದೆ ಎಂದು ಡಿಜಿಪಿ ಹೇಳಿದ್ದಾರೆ.

ಇದನ್ನು ಓದಿ:  NEET ಪರೀಕ್ಷೆ ತಗೆದುಹಾಕುವ ಮಸೂದೆಗೆ ರಾಜ್ಯಪಾಲರ ಅನುಮತಿ ಬೇಕಿಲ್ಲ: ಸಚಿವ ಸುಬ್ರಮಣಿಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...