Homeಮುಖಪುಟ77ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮೋದಿ ಭಾಷಣ

77ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮೋದಿ ಭಾಷಣ

- Advertisement -
- Advertisement -

ಹೊಸದಿಲ್ಲಿ: 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ನಂತರ ರಾಷ್ಟ್ರವನ್ನು ಉದ್ದೇಶಿಸಿ ಭಾಷಣವನ್ನು ಮಾಡಿದ್ದಾರೆ.

ದೆಹಲಿಯ ಕೆಂಪುಕೋಟೆಯಲ್ಲಿ 7.30 ಕ್ಕೆ ಧ್ವಜಾರೋಹಣವನ್ನು ಮಾಡಿದ ಪ್ರಧಾನಿ ಮೋದಿ,ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.140 ಕೋಟಿ ಭಾರತೀಯ ನಾಗರಿಕರನ್ನು “ಪರಿವರ್ಜನ್” (ಕುಟುಂಬದ ಸದಸ್ಯರು) ಎಂದು ಮೋದಿ ಕರೆದಿದ್ದಾರೆ. ಸಂಪುಟ ಸಚಿವರು, ರಾಜಕೀಯ ಮುಖಂಡರು, ಎಲ್ಲಾ ಮೂರು ಸೇನಾ ಮುಖ್ಯಸ್ಥರು ಮತ್ತು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಳೆದ ಕೆಲವು ವಾರಗಳಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಮಾತನಾಡುವಂತೆ ಪ್ರಧಾನಿ ಮೋದಿಗೆ ಒತ್ತಾಯಿಸಲಾಗಿತ್ತು.ಇಂದು ಮೋದಿ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಣಿಪುರದ ಬಗ್ಗೆ ಉಲ್ಲೇಖಿಸಿದ್ದಾರೆ.

ಮಣಿಪುರ ಕಳೆದ ಕೆಲವಾರಗಳಲ್ಲಿ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಹಲವಾರು ಜನರು ಪ್ರಾಣ ಕಳೆದುಕೊಂಡರು, ಮತ್ತು ನಮ್ಮ ತಾಯಿ ಮತ್ತು ಸಹೋದರಿಯರಿಗೆ ಅವಮಾನವಾಯಿತು. ನಿಧಾನವಾಗಿ ಈ ಪ್ರದೇಶದಲ್ಲಿ ಶಾಂತಿ ಸ್ಥಾಪನೆಯಾಗುತ್ತಿದೆ.ಭಾರತವು ಮಣಿಪುರದೊಂದಿಗೆ ನಿಂತಿದೆ ಎಂದು ಅವರು ಹೇಳಿದರು. ಶಾಂತಿ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಕೆಲಸ ಮಾಡುತ್ತಿವೆ.

ಮಣಿಪುರದ ಜನರು ಶಾಂತಿ ಸ್ಥಾಪಿಸಬೇಕು.   ಕಳೆದ ಕೆಲವು ದಿನಗಳಿಂದ ಶಾಂತಿ ಸ್ಥಾಪನೆಯಾಗುತ್ತಿದೆ   ಮಣಿಪುರದಲ್ಲಿ ಶಾಂತಿಯ ಮೂಲಕ ಪರಿಹಾರದ ಮಾರ್ಗವನ್ನು ಕಂಡುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಇದಲ್ಲದೆ ಪ್ರಾದೇಶಿಕ ಆಕಾಂಕ್ಷೆಗಳನ್ನು ಗೌರವಿಸುವ ಮತ್ತು ಒಟ್ಟಾರೆ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಅಗತ್ಯತೆಯ ಬಗ್ಗೆ ಮಾತನಾಡುವಾಗ ಪ್ರಧಾನಿ ಮೋದಿ ನಂತರ ತಮ್ಮ ಭಾಷಣದಲ್ಲಿ ಮಣಿಪುರವನ್ನು ಪ್ರಸ್ತಾಪಿಸಿದರು.

ಭಾರತ 1000 ವರ್ಷಗಳ ಗುಲಾಮಗಿರಿಯಿಂದ ಹೊರಬಂದಿದೆ. ಇದು ಅಮೃತಕಾಲದ ಮೊದಲ ವರ್ಷ, ಎಲ್ಲರ ಕಲ್ಯಾಣ ಮತ್ತು ಎಲ್ಲರ ಸಂತೋಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಪ್ರಪಂಚದಾದ್ಯಂತ ಭಾರತದ ವಿಚಾರದಲ್ಲಿ ಹೊಸ ಭರವಸೆ ಹುಟ್ಟಿಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇಂದು ನಮ್ಮಲ್ಲಿ ಜನಸಂಖ್ಯೆ ಇದೆ.ನಮ್ಮಲ್ಲಿ ಪ್ರಜಾಪ್ರಭುತ್ವವಿದೆ. ನಮ್ಮಲ್ಲಿ ವೈವಿಧ್ಯತೆ ಇದೆ ಎಂದು ಹೇಳಿದ್ದಾರೆ.

ನನ್ನ ದೇಶದ ಜನರ ಮೇಲಿನ ಹಣದುಬ್ಬರದ ಹೊರೆಯನ್ನು ಕಡಿಮೆ ಮಾಡಲು ನಾನು ಈ ದಿಕ್ಕಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ನನ್ನ ಪ್ರಯತ್ನ ಮುಂದುವರಿಯುತ್ತದೆ. ಗ್ರಾಮದಿಂದ ಗ್ರಾಮಕ್ಕೆ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ, ಸರ್ಕಾರ ಯಾವ ಯೋಜನೆಗಳಿಗೆ ಅಡಿಗಲ್ಲು ಹಾಕುತ್ತದೋ ಅದು ನಮ್ಮ ಅವಧಿಯಲ್ಲಿಯೇ ಪೂರ್ಣಗೊಳ್ಳುತ್ತದೆ.

ದೇಶವು ಜಿ-20 ಶೃಂಗಸಭೆಯನ್ನು ಆಯೋಜಿಸುವ ಅವಕಾಶವನ್ನು ಪಡೆದುಕೊಂಡಿದೆ. ಕಳೆದ ಒಂದು ವರ್ಷದಿಂದ, ಜಿ 20ಯಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ, ಇದು ದೇಶದ ಸಾಮರ್ಥ್ಯದ ಬಗ್ಗೆ ಜಗತ್ತಿಗೆ ಅರಿವು ಮೂಡಿಸಿದೆ.ನಮ್ಮ ಗಡಿಗಳು ಹಿಂದೆಂದಿಗಿಂತಲೂ ಹೆಚ್ಚು ಸುರಕ್ಷಿತವಾಗಿವೆ. ಸೇನೆಯ ಆಧುನೀಕರಣ. ನಮ್ಮ ಸೇನೆಯು ಯುದ್ಧಕ್ಕೆ ಸಿದ್ಧವಾಗಿರಬೇಕು. ಅದಕ್ಕಾಗಿಯೇ ನಮ್ಮ ಸೇನೆಯಲ್ಲಿ ವೆಚ್ಚದ ಸುಧಾರಣೆಯ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಮುಂಬರುವ 5 ವರ್ಷಗಳಲ್ಲಿ ದೇಶವು ಮೊದಲ ಮೂರು ಜಾಗತಿಕ ಆರ್ಥಿಕತೆಗಳಲ್ಲಿ ಸ್ಥಾನ ಪಡೆಯುವುದು ಗ್ಯಾರಂಟಿ.ನನ್ನ 5 ವರ್ಷಗಳಲ್ಲಿ 13.5 ಕೋಟಿ ಬಡ ಸಹೋದರ ಸಹೋದರಿಯರು ಬಡತನದ ಸರಪಳಿಗಳನ್ನು ಮುರಿದು ನವ ಮಧ್ಯಮ ವರ್ಗದ ರೂಪದಲ್ಲಿ ಹೊರಬಂದಿದ್ದಾರೆ, ಜೀವನದಲ್ಲಿ ಇದಕ್ಕಿಂತ ದೊಡ್ಡ ತೃಪ್ತಿ ಇನ್ನೊಂದಿಲ್ಲ ಎಂದು ಮೋದಿ ಭಾಷಣದಲ್ಲಿ ಉಲ್ಲೇಖಿಸಿದ್ದರು.

ಇದನ್ನು ಓದಿ: ಭಾರತ ಮಾತೆ ಪ್ರತಿಯೊಬ್ಬ ಭಾರತೀಯನ ಧ್ವನಿ; ರಾಹುಲ್ ಗಾಂಧಿ ಸ್ವಾತಂತ್ರ್ಯ ದಿನದ ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...