Homeಮುಖಪುಟ77ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮೋದಿ ಭಾಷಣ

77ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮೋದಿ ಭಾಷಣ

- Advertisement -
- Advertisement -

ಹೊಸದಿಲ್ಲಿ: 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ನಂತರ ರಾಷ್ಟ್ರವನ್ನು ಉದ್ದೇಶಿಸಿ ಭಾಷಣವನ್ನು ಮಾಡಿದ್ದಾರೆ.

ದೆಹಲಿಯ ಕೆಂಪುಕೋಟೆಯಲ್ಲಿ 7.30 ಕ್ಕೆ ಧ್ವಜಾರೋಹಣವನ್ನು ಮಾಡಿದ ಪ್ರಧಾನಿ ಮೋದಿ,ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.140 ಕೋಟಿ ಭಾರತೀಯ ನಾಗರಿಕರನ್ನು “ಪರಿವರ್ಜನ್” (ಕುಟುಂಬದ ಸದಸ್ಯರು) ಎಂದು ಮೋದಿ ಕರೆದಿದ್ದಾರೆ. ಸಂಪುಟ ಸಚಿವರು, ರಾಜಕೀಯ ಮುಖಂಡರು, ಎಲ್ಲಾ ಮೂರು ಸೇನಾ ಮುಖ್ಯಸ್ಥರು ಮತ್ತು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಳೆದ ಕೆಲವು ವಾರಗಳಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಮಾತನಾಡುವಂತೆ ಪ್ರಧಾನಿ ಮೋದಿಗೆ ಒತ್ತಾಯಿಸಲಾಗಿತ್ತು.ಇಂದು ಮೋದಿ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಣಿಪುರದ ಬಗ್ಗೆ ಉಲ್ಲೇಖಿಸಿದ್ದಾರೆ.

ಮಣಿಪುರ ಕಳೆದ ಕೆಲವಾರಗಳಲ್ಲಿ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಹಲವಾರು ಜನರು ಪ್ರಾಣ ಕಳೆದುಕೊಂಡರು, ಮತ್ತು ನಮ್ಮ ತಾಯಿ ಮತ್ತು ಸಹೋದರಿಯರಿಗೆ ಅವಮಾನವಾಯಿತು. ನಿಧಾನವಾಗಿ ಈ ಪ್ರದೇಶದಲ್ಲಿ ಶಾಂತಿ ಸ್ಥಾಪನೆಯಾಗುತ್ತಿದೆ.ಭಾರತವು ಮಣಿಪುರದೊಂದಿಗೆ ನಿಂತಿದೆ ಎಂದು ಅವರು ಹೇಳಿದರು. ಶಾಂತಿ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಕೆಲಸ ಮಾಡುತ್ತಿವೆ.

ಮಣಿಪುರದ ಜನರು ಶಾಂತಿ ಸ್ಥಾಪಿಸಬೇಕು.   ಕಳೆದ ಕೆಲವು ದಿನಗಳಿಂದ ಶಾಂತಿ ಸ್ಥಾಪನೆಯಾಗುತ್ತಿದೆ   ಮಣಿಪುರದಲ್ಲಿ ಶಾಂತಿಯ ಮೂಲಕ ಪರಿಹಾರದ ಮಾರ್ಗವನ್ನು ಕಂಡುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಇದಲ್ಲದೆ ಪ್ರಾದೇಶಿಕ ಆಕಾಂಕ್ಷೆಗಳನ್ನು ಗೌರವಿಸುವ ಮತ್ತು ಒಟ್ಟಾರೆ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಅಗತ್ಯತೆಯ ಬಗ್ಗೆ ಮಾತನಾಡುವಾಗ ಪ್ರಧಾನಿ ಮೋದಿ ನಂತರ ತಮ್ಮ ಭಾಷಣದಲ್ಲಿ ಮಣಿಪುರವನ್ನು ಪ್ರಸ್ತಾಪಿಸಿದರು.

ಭಾರತ 1000 ವರ್ಷಗಳ ಗುಲಾಮಗಿರಿಯಿಂದ ಹೊರಬಂದಿದೆ. ಇದು ಅಮೃತಕಾಲದ ಮೊದಲ ವರ್ಷ, ಎಲ್ಲರ ಕಲ್ಯಾಣ ಮತ್ತು ಎಲ್ಲರ ಸಂತೋಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಪ್ರಪಂಚದಾದ್ಯಂತ ಭಾರತದ ವಿಚಾರದಲ್ಲಿ ಹೊಸ ಭರವಸೆ ಹುಟ್ಟಿಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇಂದು ನಮ್ಮಲ್ಲಿ ಜನಸಂಖ್ಯೆ ಇದೆ.ನಮ್ಮಲ್ಲಿ ಪ್ರಜಾಪ್ರಭುತ್ವವಿದೆ. ನಮ್ಮಲ್ಲಿ ವೈವಿಧ್ಯತೆ ಇದೆ ಎಂದು ಹೇಳಿದ್ದಾರೆ.

ನನ್ನ ದೇಶದ ಜನರ ಮೇಲಿನ ಹಣದುಬ್ಬರದ ಹೊರೆಯನ್ನು ಕಡಿಮೆ ಮಾಡಲು ನಾನು ಈ ದಿಕ್ಕಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ನನ್ನ ಪ್ರಯತ್ನ ಮುಂದುವರಿಯುತ್ತದೆ. ಗ್ರಾಮದಿಂದ ಗ್ರಾಮಕ್ಕೆ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ, ಸರ್ಕಾರ ಯಾವ ಯೋಜನೆಗಳಿಗೆ ಅಡಿಗಲ್ಲು ಹಾಕುತ್ತದೋ ಅದು ನಮ್ಮ ಅವಧಿಯಲ್ಲಿಯೇ ಪೂರ್ಣಗೊಳ್ಳುತ್ತದೆ.

ದೇಶವು ಜಿ-20 ಶೃಂಗಸಭೆಯನ್ನು ಆಯೋಜಿಸುವ ಅವಕಾಶವನ್ನು ಪಡೆದುಕೊಂಡಿದೆ. ಕಳೆದ ಒಂದು ವರ್ಷದಿಂದ, ಜಿ 20ಯಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ, ಇದು ದೇಶದ ಸಾಮರ್ಥ್ಯದ ಬಗ್ಗೆ ಜಗತ್ತಿಗೆ ಅರಿವು ಮೂಡಿಸಿದೆ.ನಮ್ಮ ಗಡಿಗಳು ಹಿಂದೆಂದಿಗಿಂತಲೂ ಹೆಚ್ಚು ಸುರಕ್ಷಿತವಾಗಿವೆ. ಸೇನೆಯ ಆಧುನೀಕರಣ. ನಮ್ಮ ಸೇನೆಯು ಯುದ್ಧಕ್ಕೆ ಸಿದ್ಧವಾಗಿರಬೇಕು. ಅದಕ್ಕಾಗಿಯೇ ನಮ್ಮ ಸೇನೆಯಲ್ಲಿ ವೆಚ್ಚದ ಸುಧಾರಣೆಯ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಮುಂಬರುವ 5 ವರ್ಷಗಳಲ್ಲಿ ದೇಶವು ಮೊದಲ ಮೂರು ಜಾಗತಿಕ ಆರ್ಥಿಕತೆಗಳಲ್ಲಿ ಸ್ಥಾನ ಪಡೆಯುವುದು ಗ್ಯಾರಂಟಿ.ನನ್ನ 5 ವರ್ಷಗಳಲ್ಲಿ 13.5 ಕೋಟಿ ಬಡ ಸಹೋದರ ಸಹೋದರಿಯರು ಬಡತನದ ಸರಪಳಿಗಳನ್ನು ಮುರಿದು ನವ ಮಧ್ಯಮ ವರ್ಗದ ರೂಪದಲ್ಲಿ ಹೊರಬಂದಿದ್ದಾರೆ, ಜೀವನದಲ್ಲಿ ಇದಕ್ಕಿಂತ ದೊಡ್ಡ ತೃಪ್ತಿ ಇನ್ನೊಂದಿಲ್ಲ ಎಂದು ಮೋದಿ ಭಾಷಣದಲ್ಲಿ ಉಲ್ಲೇಖಿಸಿದ್ದರು.

ಇದನ್ನು ಓದಿ: ಭಾರತ ಮಾತೆ ಪ್ರತಿಯೊಬ್ಬ ಭಾರತೀಯನ ಧ್ವನಿ; ರಾಹುಲ್ ಗಾಂಧಿ ಸ್ವಾತಂತ್ರ್ಯ ದಿನದ ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....