Homeಮುಖಪುಟಏಕನಾಥ್ ಶಿಂಧೆಯನ್ನು ಆಸ್ಪತ್ರೆಗೆ ದಾಖಲಿಸಿ ಅಜಿತ್ ಪವಾರನ್ನು ಸಿಎಂ ಮಾಡುವ ಹುನ್ನಾರ ನಡೆಯುತ್ತಿದೆ: ವಿಜಯ್ ವಾಡೆತ್ತಿವಾರ್

ಏಕನಾಥ್ ಶಿಂಧೆಯನ್ನು ಆಸ್ಪತ್ರೆಗೆ ದಾಖಲಿಸಿ ಅಜಿತ್ ಪವಾರನ್ನು ಸಿಎಂ ಮಾಡುವ ಹುನ್ನಾರ ನಡೆಯುತ್ತಿದೆ: ವಿಜಯ್ ವಾಡೆತ್ತಿವಾರ್

- Advertisement -
- Advertisement -

ಏಕನಾಥ್ ಶಿಂಧೆ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಬಂಡಾಯ ಎನ್‌ಸಿಪಿ) ನಾಯಕ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿದ್ದಾರೆ.

ಗಡ್ಚಿರೋಲಿ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಡೆತ್ತಿವಾರ್, ಶಿಂಧೆಯನ್ನು ಆಸ್ಪತ್ರೆಗೆ ದಾಖಲಿಸಿ  ನಂತರ ಅವರ ಆರೋಗ್ಯದ ಕಾರಣ ಹೇಳಿ ಶಿಂಧೆ ಅವರನ್ನು ಬದಲಿಸಿ ಬಂಡಾಯ ಎನ್‌ಸಿಪಿ ಎಂಎಲ್‌ನ ಗುಂಪಿನ ಮುಖ್ಯಸ್ಥ ಅಜಿತ್ ಪವಾರ್ ಅವರನ್ನು ಸಿಎಂ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಬಂಡಾಯ ಎನ್‌ಸಿಪಿ ಶಾಸಕರ ಗುಂಪಿನ ಮುಖ್ಯಸ್ಥರಾದ ಅಜಿತ್ ಪವಾರ್ ಅವರು ಇತ್ತೀಚೆಗೆ ಪುಣೆಯಲ್ಲಿ ಭೇಟಿಯಾದರು.ಅಜಿತ್‌ಗೆ ನಿಷ್ಠರಾಗಿರುವ ಶಾಸಕರ ನಡುವೆ ಮಾತುಕತೆ ನಡೆದಿದೆ ಎಂದು ಹೇಳಿದ್ದಾರೆ.

ಸಿಎಂ 24 ಗಂಟೆಗಳ ಕಾಲ ಕೆಲಸ ಮಾಡುತ್ತಿರುವುದರಿಂದ ಸಿಎಂ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಅವರ ಬೆಂಬಲಿಗ ಮತ್ತು ಶಾಸಕ ಸಂಜಯ್ ಶಿರ್ಸತ್ ಇತ್ತೀಚೆಗೆ ಹೇಳಿಕೆ ನೀಡಿದ್ದರು.ಏಕನಾಥ್ ಶಿಂಧೆ ಅವರನ್ನು ಆಸ್ಪತ್ರೆಗೆ ದಾಖಲಿಸಲು ಮತ್ತು ಅವರ ಬದಲಿಗೆ ಹೊಸ ಮುಖ್ಯಮಂತ್ರಿಯನ್ನು ನೇಮಿಸಲು ನಡೆಯುತ್ತಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಹೊರಬರುತ್ತಿದೆ ಎಂದು ವಡೆತ್ತಿವಾರ್ ಹೇಳಿದರು.

ಶಿಂಧೆ ಅವರು ಚೆನ್ನಾಗಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಕೂಡ ಹೇಳಿಕೆ ನೀಡಿದ್ದಾರೆ ಎಂದು  ವಾಡೆತ್ತಿವಾರ್ ಹೇಳಿದ್ದಾರೆ. ಅವರು ಶಿಂಧೆ ಅವರನ್ನು ಎರಡು ತಿಂಗಳ ಕಾಲ ಆಸ್ಪತ್ರೆಗೆ ದಾಖಲಿಸಬಹುದು ಮತ್ತು ವೈದ್ಯಕೀಯ ಕಾರಣ ನೀಡಿ ಅವರನ್ನು ಬದಲಾಯಿಸಬಹುದು ಎಂದು ನಾನು ಭಯಪಡುತ್ತೇನೆ ಎಂದು ಹೇಳಿದ್ದಾರೆ.

ಶಿವಸೇನಾ ಮುಖವಾಣಿ ಸಾಮ್ನಾ, ಸಿಎಂ ಶಿಂಧೆ ಅವರ ‘ಅನಾರೋಗ್ಯ’ದ ಬಗ್ಗೆ ಶಾಸಕ ಶಿರ್ಸತ್ ಅವರ ಹೇಳಿಕೆಯನ್ನು ಉಲ್ಲೇಖಿಸಿದೆ. ಶಿಂಧೆ ಅವರು 24 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ, ಆದರೆ ಇದು ರಾಜ್ಯದಲ್ಲಿ ಎಲ್ಲಿಯೂ ಪ್ರತಿಫಲಿಸಿರುವುದು ಕಂಡಿಲ್ಲ. ಅವರು ಹುದ್ದೆ ಕಳೆದುಕೊಳ್ಳುವ ಭಯದಿಂದ ನಿದ್ದೆ ಕಳೆದುಕೊಂಡಿರಬಹುದು ಎಂದು ಹೇಳಿದೆ.

ಶಿರ್ಸತ್ ಅವರ ಹೇಳಿಕೆಗಳು ನಿಜವಾಗಿದ್ದರೆ, ಶಿಂಧೆ ಅವರನ್ನು ಐಸಿಯುಗೆ ಸೇರಿಸಬೇಕು ಮತ್ತು ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರನ್ನು ಭೇಟಿಯಾಗದಂತೆ ದೂರ ಇಡಬೇಕು. ಶಿಂಧೆ ಅವರನ್ನು ಮುಂಬೈ ಅಥವಾ ಥಾಣೆಯಲ್ಲಿರುವ ಒಳ್ಳೆಯ ಆಸ್ಪತ್ರೆಗೆ ದಾಖಲಿಸಬೇಕು ಎಂದು ಸಾಮ್ನಾ ಸಂಪಾದಕೀಯ ವ್ಯಂಗ್ಯವಾಗಿ ಹೇಳಿದೆ.

ಇದನ್ನು ಓದಿ: ಮೋದಿಯವರ ‘ಮನ್‌ ಕಿ ಬಾತ್‌ನಲ್ಲಿ ದೇಶದ ಜನ ಇರೋದಿಲ್ಲ’: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...