Homeಮುಖಪುಟಹಿಂದೂ ಧಾರ್ಮಿಕ ಯಾತ್ರೆಯಲ್ಲಿ ಶಸ್ತ್ರಾಸ್ತ್ರ ನಿಷೇಧ: ಹಿಂದೂ ಸಂಘಟನೆಗಳಿಗೆ ಪೊಲೀಸರ ಸೂಚನೆ

ಹಿಂದೂ ಧಾರ್ಮಿಕ ಯಾತ್ರೆಯಲ್ಲಿ ಶಸ್ತ್ರಾಸ್ತ್ರ ನಿಷೇಧ: ಹಿಂದೂ ಸಂಘಟನೆಗಳಿಗೆ ಪೊಲೀಸರ ಸೂಚನೆ

- Advertisement -
- Advertisement -

ಜುಲೈ 31 ರಂದು ಕೋಮು ಹಿಂಸಾಚಾರ ನಡೆದ ನುಹ್‌ನಲ್ಲಿ ಧಾರ್ಮಿಕ ಯಾತ್ರೆಯನ್ನು ಪುನರಾರಂಭಿಸುವುದಾಗಿ ಹಲವಾರು  ಹಿಂದುತ್ವವಾದಿ ಗುಂಪುಗಳು ಘೋಷಿಸಿದೆ.ಅಂತಹ ಯಾತ್ರೆ ನಡೆದರೆ ಯಾವುದೇ ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯಲು ಅನುಮತಿಸಲಾಗುವುದಿಲ್ಲ ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ  ಮತ್ತು “ಸೂಕ್ಷ್ಮ” ಪ್ರದೇಶಗಳಲ್ಲಿ ಸಭೆ ಸೇರುವುದನ್ನು ಅನುಮತಿಸಲಾಗುವುದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ನುಹ್ ಎಸ್ಪಿ ನರೇಂದ್ರ ಬಿಜಾರ್ನಿಯಾ ಮಾತನಾಡಿ, ಅಂತಹ ಕಾರ್ಯಕ್ರಮಕ್ಕೆ ಅನುಮತಿಗಾಗಿ ಅವರು ಇನ್ನೂ ನಮ್ಮಲ್ಲಿ ಅನುಮತಿ ಕೇಳಲಿಲ್ಲ.ಯಾತ್ರೆಗೆ ಅನುಮತಿ ನೀಡಿದರೂ ಜಿಲ್ಲೆಯಲ್ಲಿ ಶಾಂತಿ ಕದಡಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ.ಸೂಕ್ಷ್ಮ ಪ್ರದೇಶಗಳಲ್ಲಿ ಮೆರವಣಿಗೆ ನಡೆಸಲು ಬಿಡವುದಿಲ್ಲ.ಶಸ್ತ್ರಾಸ್ತ್ರಗಳನ್ನು ಸಾಗಿಸಲು ಅನುಮತಿಸುವುದಿಲ್ಲ.ಮೆರವಣಿಗೆಯಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ಸಹ ನಿರ್ಬಂಧಿಸಲಾಗುತ್ತದೆ. ಕೋಮುವಾದಿ ಅಥವಾ ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಇರುತ್ತಾರೆ ಎಂದು ಬಿಜರ್ನಿಯಾ ಹೇಳಿದರು.

ಕಾರ್ಯಕ್ರಮದಲ್ಲಿ 100 ಜನರಿಗೆ ಮಾತ್ರ ಅವಕಾಶ ಕೊಡುವ ಕುರಿತು ಪೊಲೀಸ್ ಅಧಿಕಾರಿಗಳು ಚರ್ಚಿಸುತ್ತಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ಈ ಹಿಂದೆ ಇದ್ದ ನುಹ್ ಎಸ್ಪಿ ವರುಣ್ ಸಿಂಗ್ಲಾ ಅವರನ್ನು ಬದಲಿಸಿದ ಬಳಿಕ ಬಿಜರ್ನಿಯಾ ಇತ್ತೀಚೆಗೆ ಪೊಲೀಸ್ ಮುಖ್ಯಸ್ಥರಾಗಿದ್ದಾರೆ. ಹಿಂಸಾಚಾರ ಭುಗಿಲೆದ್ದಾಗ ಸಿಂಗ್ಲಾ ರಜೆಯಲ್ಲಿದ್ದರು ಮತ್ತು ನಂತರ ಅವರನ್ನು ವರ್ಗಾಯಿಸಲಾಗಿದೆ.

ಈ ವಾರದ ಆರಂಭದಲ್ಲಿ ಹರಿಯಾಣದ ಪಲ್ವಾಲ್‌ನಲ್ಲಿ ನಡೆದ ‘ಮಹಾಪಂಚಾಯತ್’ ನಲ್ಲಿ  ಹಿಂದೂ ಬಲಪಂಥೀಯ ಗುಂಪುಗಳು ಆಗಸ್ಟ್ 28 ರಂದು ಯಾತ್ರೆಯನ್ನು “ಪುನರಾರಂಭಿಸುವುದಾಗಿ” ಹೇಳಿದ್ದವು. ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಈ ಸಮಾರಂಭದಲ್ಲಿ ಹಲವಾರು ಭಾಷಣಕಾರರು ಯಾತ್ರೆಯಲ್ಲಿ ಭಾಗವಹಿಸದಂತೆ “ತಮ್ಮನ್ನು ಸಾಧ್ಯವಾದರೆ ತಡೆಯುವಂತೆ” ಸವಾಲು ಹಾಕಿದ್ದಾರೆ ಎಂದು ತಿಳಿಸಿದೆ. ಜೊತೆಗೆ ಆತ್ಮರಕ್ಷಣೆಗಾಗಿ  ಗನ್ ಲೈಸೆನ್ಸ್‌ಗಳ ಬೇಡಿಕೆ ಇಟ್ಟಿದ್ದರು.

ಇದನ್ನು ಓದಿ: ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯದ ಹೆಸರು ಬದಲಾವಣೆ: ಕಾಂಗ್ರೆಸ್ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...