Homeಮುಖಪುಟನೆಹರು ಮ್ಯೂಸಿಯಂ ಹೆಸರು ಬದಲಾವಣೆ: ಇತಿಹಾಸ ನಿರ್ಮಿಸಲು ಮೋದಿಗೆ ಸಾಧ್ಯವಿಲ್ಲ; ಪ್ರತಿಪಕ್ಷಗಳ ಟೀಕೆ

ನೆಹರು ಮ್ಯೂಸಿಯಂ ಹೆಸರು ಬದಲಾವಣೆ: ಇತಿಹಾಸ ನಿರ್ಮಿಸಲು ಮೋದಿಗೆ ಸಾಧ್ಯವಿಲ್ಲ; ಪ್ರತಿಪಕ್ಷಗಳ ಟೀಕೆ

- Advertisement -
- Advertisement -

ಕೇಂದ್ರ ಸರ್ಕಾರವು ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯವನ್ನು(NMML) ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (PMML) ಎಂದು ಮರುನಾಮಕರಣ ಮಾಡಿದ ನಂತರ ಪ್ರತಿಪಕ್ಷಗಳು ಟೀಕೆಗಳ ಸುರಿಮಳೆಗೈದಿವೆ.

”ಇತಿಹಾಸ ರಚಿಸುವ ಅಗತ್ಯವಿದೆ, ಪ್ರಧಾನಿ ನರೇಂದ್ರ ಮೋದಿಯವರಿಗೆ ಅದನ್ನು ರಚಿಸಲು ಸಾಧ್ಯವಾಗುತ್ತಿಲ್ಲ. ನೆಹರೂಗೆ ಸಮರ್ಪಿತವಾದ ಯಾವುದನ್ನಾದರೂ ಕೀಳಾಗಿ ನೋಡುವುದು ಅಥವಾ ಹೆಸರು ಬದಲಾಯಿಸುವ ರಾಜಕೀಯ ಮಾಡುವುದನ್ನು ಬಿಡಿ” ಎಂದು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ ಪ್ರತಿಕ್ರಿಯಿಸಿದ್ದಾರೆ.

”ಪಂಡಿತ್ ಜವಾಹರ್‌ಲಾಲ್ ನೆಹರು ಆಧುನಿಕ ಭಾರತವನ್ನು ನಿರ್ಮಿಸಿದರು ಮತ್ತು ಅದಕ್ಕೆ ಅಡಿಪಾಯ ಹಾಕಿದರು. ಅವರು ಈ ದೇಶದಲ್ಲಿ ಉದಾರವಾದಿ ಪ್ರಜಾಪ್ರಭುತ್ವವನ್ನು ಜೀವಂತವಾಗಿಟ್ಟರು. ಐಐಎಂಗಳು, ಏಮ್ಸ್, ಐಐಟಿಗಳು, ಇಸ್ರೋ ಮತ್ತು ಸಂಸ್ಥೆಗಳನ್ನು ನಿರ್ಮಿಸಿದರು. ಆದರೆ ಪ್ರಧಾನಿ ಮೋದಿ ಇತಿಹಾಸದಲ್ಲಿ ಬಹಳ ನಕಾರಾತ್ಮಕವಾಗಿ ನೆನಪಿಸಿಕೊಳ್ಳುತ್ತಾರೆ” ಸುಪ್ರಿಯಾ ಹೇಳಿದ್ದಾರೆ.

ಜೂನ್‌ನಲ್ಲಿ ನಡೆದ ವಿಶೇಷ ಸಭೆಯಲ್ಲಿ NMML ಸೊಸೈಟಿ ತನ್ನ ಹೆಸರನ್ನು PMML ಸೊಸೈಟಿ ಎಂದು ಬದಲಾಯಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಇದಾದ ನಂತರ ವಸ್ತುಸಂಗ್ರಹಾಲಯವನ್ನು ಅಧಿಕೃತವಾಗಿ ಆಗಸ್ಟ್ 14ರಂದು ಮರುನಾಮಕರಣ ಮಾಡಲಾಯಿತು. ಈ ವಸ್ತುಸಂಗ್ರಹಾಲಯವು ತೀನ್ ಮೂರ್ತಿ ಭವನದಲ್ಲಿದೆ. ಇದು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಅಧಿಕೃತ ನಿವಾಸವಾಗಿದೆ.

ಕೇಂದ್ರ ಸರ್ಕಾರ ಮ್ಯೂಸಿಯಂ ಹೆಸರನ್ನು ಅಧಿಕೃತವಾಗಿ ಬದಲಾಯಿಸಿದ ನಂತರ ರಾಜಕೀಯ ಪಕ್ಷಗಳು, ವಿಶೇಷವಾಗಿ ಕಾಂಗ್ರೆಸ್, ಕೇಂದ್ರ ಸರ್ಕಾರದ ಕ್ರಮವನ್ನು ಟೀಕಿಸಿವೆ.

”ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನೆಹರು ಪರಂಪರೆಯನ್ನು ನಿರಾಕರಿಸುವ, ವಿರೂಪಗೊಳಿಸುವ, ಮಾನಹಾನಿ ಮಾಡುವ ಮತ್ತು ನಾಶಪಡಿಸುವ ಕಾರ್ಯಸೂಚಿಯನ್ನು ಮಾತ್ರ ಹೊಂದಿದೆ” ಎಂದು ಕಾಂಗ್ರೆಸ್ ಹೇಳಿದೆ.

”ತೀನ್ ಮೂರ್ತಿ ಭವನದಲ್ಲಿ ಇತರ ಯಾವ ಪ್ರಧಾನಿಗಳ ನಿವಾಸವಾಗಿರಲಿಲ್ಲ. ಇದು ಒಂದು ಐತಿಹಾಸಿಕ ಸ್ಥಳವಾಗಿದ್ದು, ನೆಹರೂ ಅವರು ದೇಶ ವಿಭಜನೆಯಿಂದ ಅವರು ನಿಧನರಾಗುವವರೆಗೂ ಅಲ್ಲೇ ಇದ್ದರು. ಜವಾಹರಲಾಲ್ ನೆಹರು ಅವರು ದೇಶದ ಮಣ್ಣಿನಲ್ಲಿರುವುದರಿಂದ ಕೇಂದ್ರ ಸರ್ಕಾರಕ್ಕೆ ಅವರನ್ನು ಅಳಿಸಲು ಸಾಧ್ಯವಿಲ್ಲ” ಎಂದು ಆರ್‌ಜೆಡಿ ನಾಯಕ ಮನೋಜ್ ಝಾ ಹೇಳಿದ್ದಾರೆ.

ಇದನ್ನೂ ಓದಿ: ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯದ ಹೆಸರು ಬದಲಾವಣೆ: ಕಾಂಗ್ರೆಸ್ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...