Homeಮುಖಪುಟಸಬ್ಯಸಾಚಿ ದಾಸ್ ಗೆ ಬೆಂಬಲಿಸಿ ಅಶೋಕ ವಿವಿಯ ಮತ್ತೋರ್ವ ಪ್ರಾಧ್ಯಾಪಕ ರಾಜೀನಾಮೆ

ಸಬ್ಯಸಾಚಿ ದಾಸ್ ಗೆ ಬೆಂಬಲಿಸಿ ಅಶೋಕ ವಿವಿಯ ಮತ್ತೋರ್ವ ಪ್ರಾಧ್ಯಾಪಕ ರಾಜೀನಾಮೆ

- Advertisement -
- Advertisement -

ಸಂಶೋಧನಾ ಪ್ರಬಂಧದ ವಿವಾದದ ನಂತರ ಅಶೋಕ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಸಹಾಯಕ  ಪ್ರಾಧ್ಯಾಪಕ ಸಬ್ಯಸಾಚಿ ದಾಸ್ ಅವರು  ರಾಜೀನಾಮೆ ನೀಡಿದ್ದರು.  ಇದೀಗ ಅರ್ಥಶಾಸ್ತ್ರ ವಿಭಾಗದ ಮತ್ತೊಬ್ಬ ಪ್ರಾಧ್ಯಾಪಕ ಪುಲಪ್ರೆ ಬಾಲಕೃಷ್ಣನ್ ಅವರು ಸಬ್ಯಸಾಚಿ ದಾಸ್ ಅವರನ್ನು ಬೆಂಬಲಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ದಾಸ್‌ ಅವರನ್ನು ಮರುನೇಮಕ ಮಾಡಿಕೊಳ್ಳದಿದ್ದಲ್ಲಿ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಆಡಳಿತ ಮಂಡಳಿಗೆ ಸಬ್ಯಸಾಚಿ ದಾಸ್  ಸಹೋದ್ಯೋಗಿಗಳು ಪತ್ರ ಬರೆದಿದ್ದಾರೆ. ಇಂಗ್ಲಿಷ್‌ ಮತ್ತು ಕ್ರಿಯೇಟಿವ್ ರೈಟಿಂಗ್ ವಿಭಾಗದ ಅಧ್ಯಾಪಕರು ಕೂಡ  ಇದಕ್ಕೆ ಬೆಂಬಲವನ್ನು ನೀಡಿದ್ದಾರೆ. ಆಗಸ್ಟ್‌ 23ರ ಒಳಗಾಗಿ ದಾಸ್ ಅವರನ್ನು ಮರುನೇಮಕ ಮಾಡಿಕೊಳ್ಳಬೇಕು ಎಂದು ವಿವಿ ಆಡಳಿತ ಮಂಡಳಿಗೆ ಗಡುವು ನೀಡಲಾಗಿದೆ.

ನಮ್ಮ ಸಹೋದ್ಯೋಗಿ ಪ್ರೊ.ಸಬ್ಯಸಾಚಿ ದಾಸ್ ಅವರ ರಾಜೀನಾಮೆಯ ಪ್ರಸ್ತಾಪ ಮತ್ತು ವಿವಿಯ ತರಾತುರಿ ಅಂಗೀಕಾರವು , ಅರ್ಥಶಾಸ್ತ್ರ ವಿಭಾಗದ ಅಧ್ಯಾಪಕರು, ನಮ್ಮ ಸಹೋದ್ಯೋಗಿಗಳು, ನಮ್ಮ ವಿದ್ಯಾರ್ಥಿಗಳು ಮತ್ತು ಅಶೋಕ ವಿಶ್ವವಿದ್ಯಾಲಯದ ಹಿತೈಷಿಗಳು ಆಡಳಿತದ ಜೊತೆಗೆ ಹೊಂದಿದ್ದ ನಂಬಿಕೆಯನ್ನು ಆಳವಾಗಿ ಛಿದ್ರಗೊಳಿಸಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಪ್ರೊ. ದಾಸ್ ಅವರು ಶೈಕ್ಷಣಿಕ ವಿಚಾರದಲ್ಲಿ ಯಾವುದೇ ಅಂಗೀಕೃತ ಮಾನದಂಡವನ್ನು ಉಲ್ಲಂಘಿಸಲಿಲ್ಲ. ಇವರ ಅಧ್ಯಯನದ ಕುರಿತ ಹಸ್ತಕ್ಷೇಪವು ಸಾಂಸ್ಥಿಕ ಕಿರುಕುಳವನ್ನು ರೂಪಿಸುತ್ತದೆ. ಶೈಕ್ಷಣಿಕ ಸ್ವಾತಂತ್ರ್ಯವನ್ನು ಮೊಟಕುಗೊಳಿಸುತ್ತದೆ ಮತ್ತು ಭಯದ ವಾತಾವರಣದಲ್ಲಿ ಕಾರ್ಯನಿರ್ವಹಿಸಲು ವಿದ್ವಾಂಸರನ್ನು ಒತ್ತಾಯಿಸುತ್ತದೆ. ನಾವು ಇದನ್ನು ಪ್ರಬಲ ಪದಗಳಲ್ಲಿ ಖಂಡಿಸುತ್ತೇವೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಅಶೋಕ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಅಧ್ಯಾಪಕರಾದ ಪ್ರೊಫೆಸರ್ ಸಬ್ಯಸಾಚಿ ದಾಸ್ ಅವರು “ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವದಲ್ಲಿ ಪ್ರಜಾಪ್ರಭುತ್ವದ ಹಿನ್ನಡೆ” ಎಂಬ ಶೀರ್ಷಿಕೆಯ ತನ್ನ ಪ್ರಬಂಧದ ಬಳಿಕ ವಿವಾದಕ್ಕೀಡಾಗಿ ರಾಜೀನಾಮೆ ನೀಡಿದ್ದರು.ಸಂಶೋಧನಾ ಪ್ರಬಂಧವು ಆನ್‌ಲೈನ್‌ನಲ್ಲಿ ವೈರಲ್ ಆಗಿ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಪ್ರೊಫೆಸರ್ ಸಬ್ಯಸಾಚಿ ದಾಸ್ ಅವರನ್ನು ಬೆಂಬಲಿಸಿ  ಬಾಲಕೃಷ್ಣನ್ ಅವರು ರಾಜೀನಾಮೆ ನೀಡಿದ್ದು, ರಾಜೀನಾಮೆ ಕುರಿತು ವಿಶ್ವವಿದ್ಯಾಲಯ ಸಿಬ್ಬಂದಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನು ಓದಿ: ಅಸ್ಸಾಂ: ಬಿಜೆಪಿ ಕಚೇರಿಯಲ್ಲಿ ತಲೆಕೆಳಗಾಗಿ ತ್ರಿವರ್ಣ ಧ್ವಜ ಹಾರಾಟ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...