Homeಮುಖಪುಟಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

- Advertisement -
- Advertisement -

ಮೋದಿ ಸರ್ಕಾರವು ಪ್ರಾರಂಭಿಸಿದ ಅತ್ಯಂತ ಮಹತ್ವಾಕಾಂಕ್ಷೆಯ ಸಾಮಾಜಿಕ ಕಲ್ಯಾಣ ಯೋಜನೆಗಳಲ್ಲಿ ಒಂದಾದ, “ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ” (AB-PMJAY)ಯಡಿ ಅವ್ಯವಹಾರ ನಡೆದಿದೆ ಎಂದು ಸಿಎಜಿ ವರದಿ ತಿಳಿಸಿದೆ.

ಭಾರತದ ಕಂಟ್ರೋಲರ್ –  ಆಡಿಟರ್ ಜನರಲ್ (ಸಿಎಜಿ)   ಆಯುಷ್ಮಾನ್ ಭಾರತ್  – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಬಹುದೊಡ್ಡ ಅವ್ಯವಹರಾದ ಬಗ್ಗೆ ಉಲ್ಲೇಖಿಸಿದ್ದು, 7.5 ಲಕ್ಷ ಫಲಾನುಭವಿಗಳು ಎಂದು ಹೇಳಲಾದ ವ್ಯಕ್ತಿಗಳು “ಒಂದೇ ಮೊಬೈಲ್” ಸಂಖ್ಯೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

ಇದಲ್ಲದೆ ದಾಖಲೆ ಪ್ರಕಾರ ಈ ಮೊದಲೇ  ಮೃತಪಟ್ಟಿದ್ದಾರೆಂದು ಘೋಷಿಸಿಲಾಗಿದ್ದ 3,446 ರೋಗಿಗಳ ಚಿಕಿತ್ಸೆಗಾಗಿ 6.97 ಕೋಟಿ ರೂಪಾಯಿ ಪಾವತಿಸಲಾಗಿದೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ತಿಳಿಸಿದೆ.

ಈ ಯೋಜನೆಯಡಿ ಜನರಿಗೆ  ನಗದು ರಹಿತ ಸೇವೆ ನೀಡಬೇಕಾಗಿತ್ತು. ಆದರೆ  ಫಲಾನುಭವಿಗಳು ಚಿಕಿತ್ಸೆಗಾಗಿ ಹಣವನ್ನು ಪಾವತಿಸಿದ್ದಾರೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರ ವರದಿ ಹೇಳಿದೆ.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾದ PMJAY ಕುರಿತಾದ ಲೆಕ್ಕಪರಿಶೋಧನಾ ವರದಿಯಲ್ಲಿ, CAG, ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ ನಂತರ, ಎಲ್ಲಾ ಪರೀಕ್ಷೆಗಳು, ಔಷಧಿಗಳ  ವೆಚ್ಚವನ್ನು ಆಸ್ಪತ್ರೆಯು ಭರಿಸಬೇಕಾಗುತ್ತದೆ. ಅದಕ್ಕೆ ತಗಲುವ ವೆಚ್ಚವನ್ನು ಪ್ಯಾಕೇಜ್ ಮೊತ್ತದಲ್ಲಿ ಸೇರಿಸಲಾಗಿದೆ.

2018 ರಲ್ಲಿ ಹೊರತಂದ, AB-PMJAY ಯೋಜನೆಯಡಿ ಕುಟುಂಬಕ್ಕೆ ವಾರ್ಷಿಕ   5 ಲಕ್ಷ ರೂಪಾಯಿಗಳವರೆಗೆ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ. ಸರ್ಕಾರದ ಮಾಹಿತಿ ಪ್ರಕಾರ ಆರೋಗ್ಯ ರಕ್ಷಣೆ ಯೋಜನೆಯು 50 ಕೋಟಿ ಜನರನ್ನು ಒಳಗೊಂಡಿದೆ.

ಈ ಯೋಜನೆಯಡಿ  ಫಲಾನುಭವಿಗಳಿಗೆ ಸೇವೆಗಳಿಗೆ ನಗದು ರಹಿತ ಮತ್ತು ಕಾಗದ ರಹಿತ ಸೇವೆಯನ್ನು ಒದಗಿಸಬೇಕಿದೆ. ಇತ್ತೀಚೆಗೆ ಸಂಸತ್ತಿನಲ್ಲಿ ಮಂಡಿಸಲಾದ AB-PMJAY ಕುರಿತ CAGಯ ಆಡಿಟ್ ವರದಿಯು,   “SHA (ರಾಜ್ಯ ಆರೋಗ್ಯ ಸಂಸ್ಥೆ) ಮತ್ತು ಖಾಸಗಿ EHCPS (ಎಂಪಾನೆಲ್ಡ್ ಹೆಲ್ತ್ ಕೇರ್ ಪ್ರೊವೈಡರ್ಸ್) ಸಹಿ ಮಾಡಿದ ಒಪ್ಪಂದದ ಪ್ರಕಾರ PMJAY ಫಲಾನುಭವಿಗಳಿಗೆ ಸಂಪೂರ್ಣ ನಗದು ರಹಿತ ರೀತಿಯಲ್ಲಿ ಆರೋಗ್ಯ ಸೌಲಭ್ಯ ನೀಡಬೇಕಿದೆ.

ಹಿಮಾಚಲ ಪ್ರದೇಶದಲ್ಲಿ, ಐದು EHCP ಗಳ 50 ಫಲಾನುಭವಿಗಳು ತಮ್ಮ ವೈದ್ಯಕೀಯ ಪರೀಕ್ಷೆಗಳನ್ನು ಇತರ ಆಸ್ಪತ್ರೆ ಅಥವಾ ವೈದ್ಯಕೀಯ ಪರೀಕ್ಷಾ ಕೇಂದ್ರದಲ್ಲಿ ಮಾಡಿಸಿದ್ದರು. ಈ  ಪರೀಕ್ಷೆಗಳ ವೆಚ್ಚವನ್ನು ಫಲಾನುಭವಿಗಳೇ ಭರಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ, 459 ರೋಗಿಗಳು ತಮ್ಮ ಸ್ವಂತ ಜೇಬಿನಿಂದ ಆರಂಭದಲ್ಲಿ 43.27 ಲಕ್ಷ ರೂ.ಗಳನ್ನು ಪಾವತಿಸಿದರು, ಬಿಲ್‌ಗಳನ್ನು ಪರಿಶೀಲಿಸಿದ ನಂತರ ರೋಗಿಗಳಿಗೆ ಮರುಪಾವತಿ ಮಾಡಲಾಯಿತು.75 ರೋಗಿಗಳಿಗೆ ಇನ್ನೂ 6.70 ಲಕ್ಷ ರೂಪಾಯಿ ಮರುಪಾವತಿ ಮಾಡಬೇಕಾಗಿದೆ ಎಂದು ಆಡಿಟ್ ಸಮಯದಲ್ಲಿ ಸಿಎಜಿ ಕಂಡುಹಿಡಿದಿದೆ.

ಜಾರ್ಖಂಡ್‌ನಲ್ಲಿ ಲೈಫ್ ಕೇರ್ ಆಸ್ಪತ್ರೆಯ 36 ರೋಗಿಗಳು  ಔಷಧಿಗಳು, ಚುಚ್ಚುಮದ್ದು, ರಕ್ತ ಇತ್ಯಾದಿಗಳನ್ನು ಖರೀದಿಸಲು ವಿವಿಧ ಮೊತ್ತವನ್ನು ಪಾವತಿಸಿರುವುದನ್ನು ವಿಮಾ ಕಂಪನಿ ಗಮನಿಸಿದೆ. ಈ ವೆಚ್ಚದ ವಿವರಗಳು SHA ಬಳಿ ಲಭ್ಯವಿರಲಿಲ್ಲ. ವಿಮಾ ಕಂಪನಿಯ ಅವಲೋಕನದ ಆಧಾರದ ಮೇಲೆ, SHA (ಆಗಸ್ಟ್ 28, 2020 ರಂದು) ಐದು ದಿನಗಳಲ್ಲಿ ತನ್ನ ವಿವರಣೆಯನ್ನು ಸಲ್ಲಿಸುವಂತೆ ಆಸ್ಪತ್ರೆಯನ್ನು ಕೇಳಿದೆ.

ಮೇಘಾಲಯದಲ್ಲಿ, ಫೆಬ್ರವರಿ 2019 ರಿಂದ ಮಾರ್ಚ್ 2021 ರವರೆಗೆ ಐದು ಖಾಸಗಿ EHCP ಗಳಲ್ಲಿ ಚಿಕಿತ್ಸೆ ಪಡೆದ 19,459 ಫಲಾನುಭವಿಗಳಲ್ಲಿ, 13,418 (ಶೇ. 69) ಜನರು ಡಿಸ್ಚಾರ್ಜ್ ಸಮಯದಲ್ಲಿ 12.34 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಪಾವತಿಸಬೇಕಾಗಿತ್ತು.

ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ, ಮೋದಿ ಸರ್ಕಾರವು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವನ್ನು (NHA) ಸ್ಥಾಪಿಸಿದೆ. PMJAY ಅನ್ನು ಜಾರಿಗೆ ತರಲು 33 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು.ಇದೀಗ ಯೋಜನೆಯಡಿ ಹಗರಣ ನಡೆದಿರುವುದು ಸಿಎಜಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿ: ಜಾತಿ ನಿಂದನೆ ಪ್ರಕರಣ: ನಟ ಉಪೇಂದ್ರ ವಿರುದ್ಧದ 2ನೇ FIRಗೆ ಹೈಕೋರ್ಟ್ ಮಧ್ಯಂತರ ತಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...