Homeಮುಖಪುಟಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

- Advertisement -
- Advertisement -

ಮೋದಿ ಸರ್ಕಾರವು ಪ್ರಾರಂಭಿಸಿದ ಅತ್ಯಂತ ಮಹತ್ವಾಕಾಂಕ್ಷೆಯ ಸಾಮಾಜಿಕ ಕಲ್ಯಾಣ ಯೋಜನೆಗಳಲ್ಲಿ ಒಂದಾದ, “ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ” (AB-PMJAY)ಯಡಿ ಅವ್ಯವಹಾರ ನಡೆದಿದೆ ಎಂದು ಸಿಎಜಿ ವರದಿ ತಿಳಿಸಿದೆ.

ಭಾರತದ ಕಂಟ್ರೋಲರ್ –  ಆಡಿಟರ್ ಜನರಲ್ (ಸಿಎಜಿ)   ಆಯುಷ್ಮಾನ್ ಭಾರತ್  – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಬಹುದೊಡ್ಡ ಅವ್ಯವಹರಾದ ಬಗ್ಗೆ ಉಲ್ಲೇಖಿಸಿದ್ದು, 7.5 ಲಕ್ಷ ಫಲಾನುಭವಿಗಳು ಎಂದು ಹೇಳಲಾದ ವ್ಯಕ್ತಿಗಳು “ಒಂದೇ ಮೊಬೈಲ್” ಸಂಖ್ಯೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

ಇದಲ್ಲದೆ ದಾಖಲೆ ಪ್ರಕಾರ ಈ ಮೊದಲೇ  ಮೃತಪಟ್ಟಿದ್ದಾರೆಂದು ಘೋಷಿಸಿಲಾಗಿದ್ದ 3,446 ರೋಗಿಗಳ ಚಿಕಿತ್ಸೆಗಾಗಿ 6.97 ಕೋಟಿ ರೂಪಾಯಿ ಪಾವತಿಸಲಾಗಿದೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ತಿಳಿಸಿದೆ.

ಈ ಯೋಜನೆಯಡಿ ಜನರಿಗೆ  ನಗದು ರಹಿತ ಸೇವೆ ನೀಡಬೇಕಾಗಿತ್ತು. ಆದರೆ  ಫಲಾನುಭವಿಗಳು ಚಿಕಿತ್ಸೆಗಾಗಿ ಹಣವನ್ನು ಪಾವತಿಸಿದ್ದಾರೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರ ವರದಿ ಹೇಳಿದೆ.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾದ PMJAY ಕುರಿತಾದ ಲೆಕ್ಕಪರಿಶೋಧನಾ ವರದಿಯಲ್ಲಿ, CAG, ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ ನಂತರ, ಎಲ್ಲಾ ಪರೀಕ್ಷೆಗಳು, ಔಷಧಿಗಳ  ವೆಚ್ಚವನ್ನು ಆಸ್ಪತ್ರೆಯು ಭರಿಸಬೇಕಾಗುತ್ತದೆ. ಅದಕ್ಕೆ ತಗಲುವ ವೆಚ್ಚವನ್ನು ಪ್ಯಾಕೇಜ್ ಮೊತ್ತದಲ್ಲಿ ಸೇರಿಸಲಾಗಿದೆ.

2018 ರಲ್ಲಿ ಹೊರತಂದ, AB-PMJAY ಯೋಜನೆಯಡಿ ಕುಟುಂಬಕ್ಕೆ ವಾರ್ಷಿಕ   5 ಲಕ್ಷ ರೂಪಾಯಿಗಳವರೆಗೆ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ. ಸರ್ಕಾರದ ಮಾಹಿತಿ ಪ್ರಕಾರ ಆರೋಗ್ಯ ರಕ್ಷಣೆ ಯೋಜನೆಯು 50 ಕೋಟಿ ಜನರನ್ನು ಒಳಗೊಂಡಿದೆ.

ಈ ಯೋಜನೆಯಡಿ  ಫಲಾನುಭವಿಗಳಿಗೆ ಸೇವೆಗಳಿಗೆ ನಗದು ರಹಿತ ಮತ್ತು ಕಾಗದ ರಹಿತ ಸೇವೆಯನ್ನು ಒದಗಿಸಬೇಕಿದೆ. ಇತ್ತೀಚೆಗೆ ಸಂಸತ್ತಿನಲ್ಲಿ ಮಂಡಿಸಲಾದ AB-PMJAY ಕುರಿತ CAGಯ ಆಡಿಟ್ ವರದಿಯು,   “SHA (ರಾಜ್ಯ ಆರೋಗ್ಯ ಸಂಸ್ಥೆ) ಮತ್ತು ಖಾಸಗಿ EHCPS (ಎಂಪಾನೆಲ್ಡ್ ಹೆಲ್ತ್ ಕೇರ್ ಪ್ರೊವೈಡರ್ಸ್) ಸಹಿ ಮಾಡಿದ ಒಪ್ಪಂದದ ಪ್ರಕಾರ PMJAY ಫಲಾನುಭವಿಗಳಿಗೆ ಸಂಪೂರ್ಣ ನಗದು ರಹಿತ ರೀತಿಯಲ್ಲಿ ಆರೋಗ್ಯ ಸೌಲಭ್ಯ ನೀಡಬೇಕಿದೆ.

ಹಿಮಾಚಲ ಪ್ರದೇಶದಲ್ಲಿ, ಐದು EHCP ಗಳ 50 ಫಲಾನುಭವಿಗಳು ತಮ್ಮ ವೈದ್ಯಕೀಯ ಪರೀಕ್ಷೆಗಳನ್ನು ಇತರ ಆಸ್ಪತ್ರೆ ಅಥವಾ ವೈದ್ಯಕೀಯ ಪರೀಕ್ಷಾ ಕೇಂದ್ರದಲ್ಲಿ ಮಾಡಿಸಿದ್ದರು. ಈ  ಪರೀಕ್ಷೆಗಳ ವೆಚ್ಚವನ್ನು ಫಲಾನುಭವಿಗಳೇ ಭರಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ, 459 ರೋಗಿಗಳು ತಮ್ಮ ಸ್ವಂತ ಜೇಬಿನಿಂದ ಆರಂಭದಲ್ಲಿ 43.27 ಲಕ್ಷ ರೂ.ಗಳನ್ನು ಪಾವತಿಸಿದರು, ಬಿಲ್‌ಗಳನ್ನು ಪರಿಶೀಲಿಸಿದ ನಂತರ ರೋಗಿಗಳಿಗೆ ಮರುಪಾವತಿ ಮಾಡಲಾಯಿತು.75 ರೋಗಿಗಳಿಗೆ ಇನ್ನೂ 6.70 ಲಕ್ಷ ರೂಪಾಯಿ ಮರುಪಾವತಿ ಮಾಡಬೇಕಾಗಿದೆ ಎಂದು ಆಡಿಟ್ ಸಮಯದಲ್ಲಿ ಸಿಎಜಿ ಕಂಡುಹಿಡಿದಿದೆ.

ಜಾರ್ಖಂಡ್‌ನಲ್ಲಿ ಲೈಫ್ ಕೇರ್ ಆಸ್ಪತ್ರೆಯ 36 ರೋಗಿಗಳು  ಔಷಧಿಗಳು, ಚುಚ್ಚುಮದ್ದು, ರಕ್ತ ಇತ್ಯಾದಿಗಳನ್ನು ಖರೀದಿಸಲು ವಿವಿಧ ಮೊತ್ತವನ್ನು ಪಾವತಿಸಿರುವುದನ್ನು ವಿಮಾ ಕಂಪನಿ ಗಮನಿಸಿದೆ. ಈ ವೆಚ್ಚದ ವಿವರಗಳು SHA ಬಳಿ ಲಭ್ಯವಿರಲಿಲ್ಲ. ವಿಮಾ ಕಂಪನಿಯ ಅವಲೋಕನದ ಆಧಾರದ ಮೇಲೆ, SHA (ಆಗಸ್ಟ್ 28, 2020 ರಂದು) ಐದು ದಿನಗಳಲ್ಲಿ ತನ್ನ ವಿವರಣೆಯನ್ನು ಸಲ್ಲಿಸುವಂತೆ ಆಸ್ಪತ್ರೆಯನ್ನು ಕೇಳಿದೆ.

ಮೇಘಾಲಯದಲ್ಲಿ, ಫೆಬ್ರವರಿ 2019 ರಿಂದ ಮಾರ್ಚ್ 2021 ರವರೆಗೆ ಐದು ಖಾಸಗಿ EHCP ಗಳಲ್ಲಿ ಚಿಕಿತ್ಸೆ ಪಡೆದ 19,459 ಫಲಾನುಭವಿಗಳಲ್ಲಿ, 13,418 (ಶೇ. 69) ಜನರು ಡಿಸ್ಚಾರ್ಜ್ ಸಮಯದಲ್ಲಿ 12.34 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಪಾವತಿಸಬೇಕಾಗಿತ್ತು.

ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ, ಮೋದಿ ಸರ್ಕಾರವು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವನ್ನು (NHA) ಸ್ಥಾಪಿಸಿದೆ. PMJAY ಅನ್ನು ಜಾರಿಗೆ ತರಲು 33 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು.ಇದೀಗ ಯೋಜನೆಯಡಿ ಹಗರಣ ನಡೆದಿರುವುದು ಸಿಎಜಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿ: ಜಾತಿ ನಿಂದನೆ ಪ್ರಕರಣ: ನಟ ಉಪೇಂದ್ರ ವಿರುದ್ಧದ 2ನೇ FIRಗೆ ಹೈಕೋರ್ಟ್ ಮಧ್ಯಂತರ ತಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...