Homeಮುಖಪುಟಬಿಜೆಪಿಯ ಬೃಹತ್ ಹಗರಣ ಸಿಎಜಿ ವರದಿಯಿಂದ ಬಹಿರಂಗ: ಪ್ರಧಾನಿಯ ಮೌನ ಪ್ರಶ್ನಿಸಿದ ಕಾಂಗ್ರೆಸ್

ಬಿಜೆಪಿಯ ಬೃಹತ್ ಹಗರಣ ಸಿಎಜಿ ವರದಿಯಿಂದ ಬಹಿರಂಗ: ಪ್ರಧಾನಿಯ ಮೌನ ಪ್ರಶ್ನಿಸಿದ ಕಾಂಗ್ರೆಸ್

- Advertisement -
- Advertisement -

ಬಿಜೆಪಿ ಆಡಳಿತದಲ್ಲಿ ನಡೆದಿರುವ ಹಲವು ಅಕ್ರಮಗಳ ಕುರಿತು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿ ಹೇಳಿರುವುದನ್ನು ಉಲ್ಲೇಖಿಸಿ, ಪ್ರಧಾನಿ ನರೇಂದ್ರ ಮೋದಿಯವರು ಯಾಕೆ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ಬುಧವಾರ ತರಾಟೆ ತಗೆದುಕೊಂಡಿದೆ.

ನೂರಾರು ಕೋಟಿ ಮೊತ್ತದ ಏಳು ಹಗರಣಗಳಲ್ಲಿ ಮೋದಿ ಸರ್ಕಾರ ಭಾಗಿಯಾಗಿದೆ ಎಂದು ವಿರೋಧ ಪಕ್ಷ ಆರೋಪಿಸಿದೆ.

ಭಾರತ್‌ಮಾಲಾ ಯೋಜನೆಯಲ್ಲಿನ ಅಕ್ರಮಗಳಗಳ ಬಗ್ಗೆ ಸಿಎಜಿ ನೀಡಿದ ವರದಿಯನ್ನು ಎತ್ತಿ ತೋರಿಸಿರುವ ಕಾಂಗ್ರೆಸ್, ದ್ವಾರಕಾ ಎಕ್ಸ್‌ಪ್ರೆಸ್‌ವೇ ನಿರ್ಮಾಣ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಟೋಲ್ ನಿಯಮಗಳ ಉಲ್ಲಂಘನೆ, ಆಯುಷ್ಮಾನ್ ಭಾರತ್ ಯೋಜನೆ ಮತ್ತು ಅಯೋಧ್ಯೆ ಅಭಿವೃದ್ಧಿ ಯೋಜನೆಯಲ್ಲಿ ಗುತ್ತಿಗೆದಾರರಿಗೆ ಅನಗತ್ಯ ಲಾಭ ಮಾಡಲಾಗಿದೆ ಎಂದು ಆರೋಪಿಸಿದೆ.

”ಸಿಎಜಿ ನಿಮ್ಮ ಮೂಗಿನ ನೇರಕ್ಕೆ ಬಯಲಿಗೆಳೆಯುತ್ತಿರುವ ಹಗರಣಗಳ ಬಗ್ಗೆ ನೀವು [ಮೋದಿ] ಮೌನ ಮುರಿಯುತ್ತೀರಾ?” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಪ್ರಶ್ನಿಸಿದ್ದಾರೆ.

”ನೀವು CCEA [ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ] ಅಧ್ಯಕ್ಷರಾಗಿರುವಿರಿ, ನೀವು ಭಾರತಮಾಲಾ ಯೋಜನೆಯ ಬಗ್ಗೆ ನಿಮ್ಮ ಬಾಯಿ ಮುಚ್ಚಿಕೊಂಡಿದ್ದೀರಾ ಏಕೆ? ಅಲ್ಲಿ ನಿರ್ಮಾಣ ವೆಚ್ಚವು ಕಿಮೀಗೆ 15.37 ಕೋಟಿಯಿಂದ 32 ಕೋಟಿಗೆ ದ್ವಿಗುಣಗೊಂಡಿದೆ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರದ ಪ್ರಮುಖ ರಸ್ತೆ ಅಭಿವೃದ್ಧಿ ಯೋಜನೆಯಾದ ಭಾರತಮಾಲಾ ಯೋಜನೆಯಲ್ಲಿ, ಟೆಂಡರ್ ಪ್ರಕ್ರಿಯೆಯೂ ದೋಷಪೂರಿತವಾಗಿದೆ ಎಂದು ಶ್ರೀನಾಟೆ ಆರೋಪಿಸಿದರು.

”ಸಲ್ಲಿಕೆಯಾದ ವಿವರವಾದ ಯೋಜನಾ ವರದಿ ಇಲ್ಲ.. ಎಸ್ಕ್ರೊ ಖಾತೆಯಿಂದ 3,500 ಕೋಟಿ ರೂಪಾಯಿಗಳ ಹಣವನ್ನು ಬೇರೆಡೆಗೆ ವರ್ಗಾಯಿಸಲಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ, ಸುರಕ್ಷತಾ ಸಲಹೆಗಾರರನ್ನು ನೇಮಿಸಲಾಗಿಲ್ಲ” ಎಂದು ಹೇಳಿದ್ದಾರೆ.

ದೆಹಲಿ-ಗುರುಗ್ರಾಮ್ ಗಡಿಯಲ್ಲಿನ ದ್ವಾರಕಾ ಎಕ್ಸ್‌ಪ್ರೆಸ್‌ವೇ ಯೋಜನೆಯಲ್ಲಿ ಅಕ್ರಮಗಳು ನಡೆದಿವೆ. CCEA ಅನುಮೋದನೆ ಮಾಡಿದ ಪ್ರತಿ ಕಿಮೀ ವೆಚ್ಚ  18.20 ಕೋಟಿ ವೆಚ್ಚಕ್ಕೆ ಬದಲಾಗಿ ಎಕ್ಸ್‌ಪ್ರೆಸ್‌ವೇ ನ್ನು ಪ್ರತಿ ಕಿಮೀಗೆ 250.77 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಅವರು ಆರೋಪಿಸಿದರು.

ಸಿಎಜಿಯ ಎಕ್ಸ್‌ಪ್ರೆಸ್‌ವೇಯ ಆಡಿಟ್ ವರದಿಯಲ್ಲಿ, ಭಾರತ ಮಾಲಾ ಪರಿಯೋಜನಾ ಹಂತ-1 ರ ಅಡಿಯಲ್ಲಿ ನಿರ್ಮಿಸಲಾದ ದ್ವಾರಕಾ ಹೆದ್ದಾರಿಯ ವೆಚ್ಚವು 2017ರಲ್ಲಿ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಅನುಮೋದಿಸಿದ ಮೊತ್ತವನ್ನು 14 ಪಟ್ಟು ಮೀರಿದೆ ಎಂದು ತಿಳಿಸಿದೆ.

”500 ಕೋಟಿ ರೂ. ವೆಚ್ಚದಲ್ಲಿ ಮಂಗಳಯಾನ [ಮಾರ್ಸ್ ಆರ್ಬಿಟರ್ ಮಿಷನ್] ಹೋಗಬಹುದಿತ್ತು… NHAIನ [ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ] ಐದು ಟೋಲ್ ಪ್ಲಾಜಾಗಳನ್ನು ಮಾತ್ರ ಆಡಿಟ್ ಮಾಡಿದಾಗ ದೇಶದ ಸಾಮಾನ್ಯ ನಾಗರಿಕರನ್ನು 132 ಕೋಟಿ ರೂಪಾಯಿ ಲೂಟಿ ಮಾಡಿರುವುದು ಗೊತ್ತಾಗಿದೆ. ಒಂದು ವೇಳೆ ಇಡೀ ದೇಶದ ಪ್ರತಿಯೊಂದು ಟೋಲ್ ಪ್ಲಾಜಾವನ್ನು ಲೆಕ್ಕಪರಿಶೋಧನೆ ಮಾಡಿದರೆ, ಈ ಹಗರಣದ ಮೊತ್ತ ಎಷ್ಟಾಗಬಹುದು?” ಎಂದು ಶ್ರೀನಾಟೆ ಪ್ರಶ್ನೆ ಮಾಡಿದ್ದಾರೆ.

ಇನ್ನು ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಲ್ಲಿ ಸುಮಾರು 7.5 ಲಕ್ಷ ಫಲಾನುಭವಿಗಳು ಒಂದೇ ಸೆಲ್‌ಫೋನ್ ಸಂಖ್ಯೆ – 9999999999 ಅಡಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ವರದಿ ಹೇಳಿರುವುದನ್ನು ಕಾಂಗ್ರೆಸ್ ಉಲ್ಲೇಖಿಸಿದೆ.

ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯು ಬಡ ಜನರಿಗೆ ಆರೋಗ್ಯ ವಿಮೆಗಾಗಿ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾಗಿದೆ.

”ಏಳೂವರೆ ಲಕ್ಷ ಫಲಾನುಭವಿಗಳು, ಒಂದು ಫೋನ್ ಸಂಖ್ಯೆಯೊಂದಿಗೆ ನೋಂದಾಯಿಸಲಾಗಿದೆ, ಆದರೆ ಅಷ್ಟೆ ಅಲ್ಲ, ಸಾವನ್ನಪ್ಪಿದ 88,000ಕ್ಕೂ ಹೆಚ್ಚು ಜನರಿಗೂ ಹಣ ನೀಡಲಾಗಿದೆ. ಹಾಗಾದರೆ ಆ ಹಣ ಯಾರಿಗೆ ಹೋಗಿದೆ..? ಇದೊಂದು ದೊಡ್ಡ ಪ್ರಶ್ನೆಯಾಗಿದೆ” ಎಂದು ಶ್ರೀನಾಟೆ ಹೇಳಿದ್ದಾರೆ.

ಇದನ್ನೂ ಓದಿ: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

ಉತ್ತರ ಪ್ರದೇಶದ ಅಯೋಧ್ಯೆ ಅಭಿವೃದ್ಧಿ ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ಹೇಳುವುದಾದರೆ ಅಲ್ಲಿ ನೋಂದಾಯಿತವಲ್ಲದ ಗುತ್ತಿಗೆದಾರರಿಗೆ ಹಣವನ್ನು ನೀಡಲಾಗಿದೆ ಎಂದು ಹೇಳಿದೆ.

”ನೋಂದಣಿ ಮಾಡದ ಗುತ್ತಿಗೆದಾರರಿಗೆ ಹಣವನ್ನು ನೀಡಲಾಗಿದೆ. ಆ ಜನರು ಯಾರು? ಅವರು ಏನು ಮಾಡುತ್ತಿದ್ದಾರೆ? ಟೆಂಡರ್ ಪ್ರಕ್ರಿಯೆಯು ದೋಷಪೂರಿತವಾಗಿದ್ದು ಹೇಗೆ?” ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಸಚಿವಾಲಯವು 19 ರಾಜ್ಯಗಳಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಪ್ರಚಾರ ಮಾಡುವ ಹೋರ್ಡಿಂಗ್‌ಗಳನ್ನು ಹಾಕಲು ಬಡವರು, ದೈಹಿಕವಾಗಿ ಅಂಗವಿಕಲರು, ವಿಧವೆಯರು ಮತ್ತು ಹಿರಿಯ ನಾಗರಿಕರಿಗೆ ಪಿಂಚಣಿ ಹಣವನ್ನು ಬಳಸಲಾಗಿದೆ ಎಂದು ಶ್ರೀನಾಟೆ ಹೇಳಿದ್ದಾರೆ.

”ದೋಷಪೂರಿತ ಎಂಜಿನ್ ವಿನ್ಯಾಸಕ್ಕಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅನ್ನು ಸಹ ಎಳೆಯಲಾಗಿದೆ, ಇದು ಸುಮಾರು 154 ಕೋಟಿ ರೂಪಾಯಿಗಳ ನಷ್ಟಕ್ಕೆ ಕಾರಣವಾಗಿದೆ” ಎಂದು ಅವರು ಹೇಳಿದರು.

”ಇದು ಬೊಕ್ಕಸವನ್ನು ಲೂಟಿ ಮಾಡುತ್ತಿದೆ; ಇದು ಭಾರತದ ಜನರನ್ನು ಲೂಟಿ ಮಾಡುತ್ತಿದೆ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಆದರೆ ಕ್ರಮ ಕೈಗೊಳ್ಳುವ ಮೊದಲು, ಪ್ರಧಾನಿಯವರು ಈ ದೇಶಕ್ಕೆ ಹೇಳಬೇಕಾಗಿದೆ, ಬಡವರಿಗೆ, ದೈಹಿಕವಾಗಿ ವಿಕಲಚೇತನರಿಗೆ, ವೃದ್ಧರಿಗೆ ಮತ್ತು ವಿಧವೆಯರಿಗೆ ಉದ್ದೇಶಿಸಲಾದ ಯೋಜನೆಗಳ ಹಣವನ್ನು ಅನಗತ್ಯವಾಗಿ ಬಳಸಲು ಏಕೆ ಅನುಮತಿಸುತ್ತಿದ್ದಾರೆ?” ಎನ್ನುವುದನ್ನು ಎಂದು ಪ್ರಧಾನಿಗೆ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ತರಾಟೆ ತೆಗೆದುಕೊಮಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...