Homeಅಂಕಣಗಳುಗ್ಯಾರಂಟಿ ಸಪೋರ್ಟು ಮಾಡಿ ನೋಡಿ ಸಾರ್

ಗ್ಯಾರಂಟಿ ಸಪೋರ್ಟು ಮಾಡಿ ನೋಡಿ ಸಾರ್

- Advertisement -
- Advertisement -

ಕಡೆಗೂ ಭಾರತ ಕಂಡ ಅಪರೂಪದ ಪ್ರಧಾನಿ ಲೋಕಸಭೆಯಲ್ಲಿ ಕಾಣಿಸಿಕೊಂಡು ಕಾಂಗ್ರೆಸ್ಸಿಗರನ್ನು ಎರಡು ಗಂಟೆ ಟೀಕಿಸಿದರು, ನಂತರ ಐದು ನಿಮಿಷ ಮಣಿಪುರದ ಪ್ರಸ್ತಾಪ ಮಾಡಿದರು. ಆದರೇನು ಪ್ರಧಾನಿಯ ಮುಖ ಸಹಜವಾಗಿರಲಿಲ್ಲ. ತಪ್ಪುಗಳನ್ನು ಮುಚ್ಚಿಕೊಳ್ಳುವ ಸುಳ್ಳುಹೇಳುವ ಮುಖದಂತಿತ್ತು. ಮೋದಿ ಈ ದೇಶದ ಜವಾಬ್ದಾರಿ ಹೊತ್ತ ಪ್ರಧಾನಿಯಾಗಿದ್ದರೆ ಮಣಿಪುರದಲ್ಲಿ ಗಲಭೆ ಹೊತ್ತಿಕೊಂಡ ಕೂಡಲೇ ಅಲ್ಲಿಗೆ ಹೋಗುತ್ತಿದ್ದರೆ, ಆ ಕಾರಣಕ್ಕಾದರೂ ನೂರಾರು ಕೊಲೆಗಳು ನಡೆಯುತ್ತಿರಲಿಲ್ಲ; ಸಾವಿರಾರು ಮನೆ ಧ್ವಂಸವಾಗುತ್ತಿರಲಿಲ್ಲ; ಹೆಣ್ಣು ಮಕ್ಕಳ ಬೆತ್ತಲೆ ಮೆರವಣಿಗೆ ನಡೆಯುತ್ತಿರಲಿಲ್ಲ ಮತ್ತು ಅವರ ಮೇಲಿನ ದೌರ್ಜನ್ಯ ನಡೆಯುತ್ತಿರಲಿಲ್ಲ. ಮೋದಿ ಸಂಸತ್‌ಗೆ ಬರದಂತೆ ತಪ್ಪಿಸಿಕೊಂಡು ತಿರುಗುವ ಪ್ರಮೇಯವೇ ಜರುಗುತ್ತಿರಲಿಲ್ಲ. ಗುಜರಾತಿನಲ್ಲಿ ಮೋದಿ ಸರಕಾರವಿದ್ದಾಗ ಮುಸ್ಲಿಮರ ಮಾರಣಹೋಮಕ್ಕೆ ಕಾರಣರಾದ ಕೋಮುಗಲಭೆಯ ಬಗ್ಗೆ ಇಂದಿಗೂ ಅವರು ಕ್ಷಮೆ ಕೋರಿಲ್ಲ. ಇನ್ನು ಮಣಿಪುರದ ಘಟನೆ ಕೇವಲ ಮಣಿಪುರಕ್ಕೆ ಮಾತ್ರ ಸೀಮಿತ ಎಂದು ಭಾರತದ ಒಕ್ಕೂಟದ ರಾಜ್ಯಗಳು ಭಾವಿಸುವಂತಿಲ್ಲ. ಈ ನಡುವೆ ಮಣಿಪುರದ ಘಟನೆಗಳನ್ನು ಮರೆಮಾಚಿ ಕುಳಿತಿರುವ ಮಾಧ್ಯಮದವರು ರಾಹುಲ್ ಗಾಂಧಿಯವರ ’ಫ್ಲೈಯಿಂಗ್ ಕಿಸ್’ ಬಗ್ಗೆ ತಲೆಕೆಡಿಸಿಕೊಂಡು ದಿನಗಟ್ಟಲೆ ಕೊರೆಯುತ್ತಿರುವುದು ನಗು ಕಳೆದುಕೊಂಡವರಿಗೆ ನಗು ತರಿಸಿದೆಯಲ್ಲಾ, ಥೂತ್ತೇರಿ.

******

ಪತ್ರಕರ್ತರಿಗೆ ಪ್ರಿಯರಾಗಿರುವ ಕುಮಾರಣ್ಣನನ್ನು ಮಾತನಾಡಿಸಬೇಕೆನಿಸಿತಲ್ಲಾ. ಇಂತಹ ಅಪೇಕ್ಷೆ ಮೂಡಲು, ಕುಮಾರಣ್ಣ ಸಿಂಗಾಪುರದ ಮುಖಾಂತರ ಯೂರೋಪ್ ಟೂರು ಮಾಡುತ್ತಿದ್ದಾರೆ ಎಂಬ ಸುದ್ದಿಯೇ ಕಾರಣವಾಗಿ ಪೋನು ಮಾಡಿದರೆ ರಿಂಗಾಯ್ತು. ರಿಂಗ್ ಟೋನ್ ’ಯಾರು ಏನು ಮಾಡುವರು, ನನಗೇನು ಕೇಡು ಮಾಡುವರು..’

“ಯಾರು? ಹಲೊ ಯಾರು?”

“ನಾನು ಸಾರ್ ಯಾಹೂ.”

“ಎಲ್ಲಿ ಬ್ರದರ್ ಸಿಕ್ಕಲೇಯಿಲ್ಲ ನೀವು.”

“ಬಂದಿದ್ದೆ ಸಾರ್, ಈಗತಾನೇ ಸಿಂಗಾಪುರಕ್ಕೋದ್ರು ಅಂದ್ರು ಸಾರ್.”

“ಕರೆದಿದ್ರೆ ನೀವು ಬರತಿದ್ರ?”

“ನಾನಾಗ್ಲೆ ನೋಡಿದ್ದಿನಿ ಸಾರ್.”

“ಯಾವಾಗ ನೋಡಿದ್ರಿ?”

“ನಾನು ಸಿಂಗಾಪುರ ನೋಡಿದಾಗ ನೀವಿನ್ನೂ ಸ್ಟೂಡೆಂಟು ಸಾರ್, ಆಗ ಸಿಂಗಾಪುರ ತೋರಿಸೊ ಏಜೆಂಟ್‌ಗಳು ಹುಟ್ಟಿಗಂಡಿದ್ರು. ನಮ್ಮನ್ನ ಕರಕಂಡು ಹೋಗಿ, ನಮ್ಮ ಹೆಸರಲ್ಲಿ ಟಿ.ವಿ, ಗಡಿಯಾರ, ಫೋನು, ಟೇಪರಿಕಾರ್ಡು ಯಲ್ಲಾನು ತಗಂಡು ರಸ್ತೆ ಪಾರ್ಕು ಮಾಲ್ ತೋರಿಸಿ ಕರಕಂಡು ಬರೋರು. ಅಂಗೆ ನಾನು ಹೋಗಿದ್ದೆ, ನಾನು ಪತ್ರಕರ್ತ ಅಂತ ಒಂದು ಪೆನ್ನು ತಕ್ಕೊಟ್ರು ಸಾರ್, ಅಂಗಾಗಿ ನಾನು ಸಿಂಗಾಪುರ ನೋಡಿದ್ದಿನಿ.”

“ಈಗ ನೋಡಬೇಕು ನೀವು. ಆ ದೇಶಗಳ ನೋಡಿದ್ರೆ ತಲೆ ತಗ್ಗಸಂಗಾಯ್ತದೆ ಕಂಡ್ರಿ.”

“ನೀವ್ಯಾಕೆ ತಲೆ ತಗ್ಗಸಬೇಕು ಸಾರ್.”

“ನಾನು ಕರ್ನಾಟಕದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಸಿಂಗಾಪುರದ ತರ ಒಂದು ರೋಡು ಒಂದು ಪಾರ್ಕು ಮಾಡಕ್ಕಾಗಲಿಲ್ಲವಲ್ಲ ಅಂತ ತಲೆ ತಗ್ಗಸತಕ್ಕಂತ ಅಭಿಪ್ರಾಯ ಮೂಡುತ್ತೆ ಕಂಡ್ರಿ.”

“ನಿಜ ಸಾರ್, ನಿಮ್ಮ ಆತ್ಮವಿಮರ್ಶೆ ಮೆಚ್ಚತಕ್ಕೆಂತದ್ದು. ಎಷ್ಟು ಜನ ರಾಜಕಾರಣಿಗಳಿಗೆ ಇಂತ ಜ್ಞಾನೋದಯ ಆಗತ್ತೆ ಸಾರ್? ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ನೀವು ರಾಮನಗರದ ಊರೊಳಗಡೆ ಹೋದ್ರೆ ತಲೆ ತಗ್ಗಿಸಲೇಬೇಕು ಸಾರ್. ಆ ರಸ್ತೆ ಗುಂಡಿಗಳು ಆ ಗಲೀಜು ನೋಡಕ್ಕಾಗಲ್ಲ ಸಾರ್.”

“ರಾಮನಗರ ಅಷ್ಟೇ ಅಲ್ಲ ಕಂಡ್ರಿ. ಐದಾರು ಬಾರಿ ಗೆದ್ದು ಶಾಸಕರು ಮಂತ್ರಿಗಳಾಗಿರತಕ್ಕಂತ ಉದಾಹರಣೆಗಳು ನಮ್ಮ ರಾಜ್ಯದಲ್ಲಿ ಹೇರಳವಾಗಿವೆ. ಕನಿಷ್ಟ ಜನಗಳಿಗೆ ಪ್ರಾಥಮಿಕವಾಗಿ ಬೇಕಾಗಿರತಕ್ಕಂತ ಅಗತ್ಯಗಳು ಏನಿವೆ ಅವನ್ನ ಪೂರ್ಣವಾಗಿ ಒದಗಿಸತಕ್ಕಂತ ಕೆಲಸನ ಯಾರೂ ಮಾಡತಕ್ಕಂತದ್ದಕ್ಕೆ ಮನಸು ಮಾಡದೆ ಬರೀ ಆಸ್ತಿ ಮಾಡಿಬುಟು.”

“ನಿಜ ಸಾರ್ ಕೇವಲ ಐದೊರ್ಸ ಮಂತ್ರಿಗಳಾಗಿದ್ದ ಜನಗಳು ಕೋಟ್ಯಾಂತರ ರೂಪಾಯಿಗಳ ಆಸ್ತಿ ಮಾಡಿದ್ದರೆ, ರಾಜಕಾರಣಿಗಳಿಗೆ ದುಡ್ಡು ಹೊಡಿಯಕ್ಕೆ ಅವಕಾಶ ಮಾಡಿಕೊಟ್ಟ ಅಧಿಕಾರಿಗಳು ಕೋಟ್ಯಾಧಿಪತಿಗಳಾಗಿದ್ದಾರೆ. ಒಬ್ಬ ಅಧಿಕಾರಿನ ಲೋಕಾಯುಕ್ತರು ರೈಡ್ ಮಾಡಿದ್ರೆ ಐದು ಕೋಟಿ ಬೆಲೆ ಬಾಳೊ ಮನೆ, ಮೂರುವರೆ ಕೆ.ಜಿ ಚಿನ್ನ, ಸೈಟುಗಳು, ಅಪಾರ್ಟ್‌ಮೆಂಟ್ ಮನೆಲಿ ಎಪ್ಪತೈದು ಲಕ್ಷ ಕ್ಯಾಶು ಇನ್ನೂರು ಪ್ಯಾಂಟು, ನಾನ್ನೂರು ಶರಟು, ನೂರು ಜೊತೆ ಚಪ್ಪಲಿ ಸಿಗತವೆ ಸಾರ್.”

“ರಾಜಕಾರಣಿಗಳ ಮನೆ ರೈಡು ಮಾಡಿದ್ರು ಅಷ್ಟೆ ಆಸ್ತಿ ಸಿಗತಕ್ಕಂತ ವಾತಾವರಣ ಇದೆಯಲ್ರಿ. ಆ ದುಡ್ಡನ್ನೆಲ್ಲಾ ನಾವು ಕರ್ನಾಟಕದ ಅಭಿವೃದ್ಧಿಗೆ ಬಳಸಿದ್ರೆ ನಮ್ಮೂರು ಸಿಂಗಾಪುರ ಆಯ್ತಿತ್ತಲ್ರೀ.”

ಇದನ್ನೂ ಓದಿ: ರಾಮ ಕೃಷ್ಣ ಕಪ್ಪುಗಿದ್ರಲ್ಲವ..

“ಹಂಡ್ರೆಡ್ ಪರಸೆಂಟು ನಿಜ ಸಾರ್. ಒಬ್ಬ ರಾಜಕಾರಣಿಗೆ ನಾಲ್ಕು ಜನ ಗಂಡು ಮಕ್ಕಳಿದ್ರೆ ಅವುರಿಗೆಲ್ಲಾ ಮನೆ ಇರತ್ತೆ, ಕಾರಿರತ್ತೆ, ಬೈಕಿರತವೆ ನಾಲ್ಕು ಜನ ಸೊಸೆಯರತ್ರ ತಲಾ ನಾಲ್ಕು ಕೆ.ಜಿ ಚಿನ್ನದ ಒಡವೆಗಳಿರತವೆ. ಇಂಥ ರಾಜಕಾರಣಿಗಳ ಆಸ್ತಿ ಹರಾಜಾಕಿದ್ರೆ ಸಾಕು ಸಾರ್. ನಾವು ದುಬೈ ಶೇಕ್‌ಗಳ ತರ ಇರಬಹುದು.”

“ಆ ದೇಶದ ಜನಗಳನ್ನ ನೋಡ್ತಾಯಿದ್ರೆ ನಾವು ಯಾವತ್ತು ಆತರ ಆಗ್ತಿವಿ ಅನತಕ್ಕಂತ ಭಾವನೆ ಏನಿದೆ ಆ ಬಗ್ಗೆ ಚಿಂತನೆ ಮಾಡಿದ್ರೆ ನಿಜಕ್ಕೂ ಆಶ್ಚರ್ಯ ಆಗತ್ತೆ ಕಂಡ್ರಿ.”

“ನೀವು ಆ ದೇಶದ ಜನ ನೋಡದಿರ್ಲಿ, ಇಲ್ಲೆ ನಮ್ಮ ಸಿಟಿಗಳ ಹೊರಗೆ ಶೆಡ್ಡು ಗುಡುಸ್ಲಾಕ್ಕಂಡಿರೊ ಅಲೆಮಾರಿಗಳ ನೋಡಿದ್ರೆ. ಈ ರಾಜಕಾರಣಿಗಳು ಯಾವತ್ತು ಉದ್ದಾರಾಗಬಾರದು ಅನ್ಸುತ್ತೆ ಸಾರ್. ನೀವು ಮುಖ್ಯಮಂತ್ರಿಯಾಗಿದ್ದಾಗ ಇಂತವರ ಕಡೆ ನೋಡದು ಬಿಟ್ಟು ಬ್ರಾಹ್ಮಣರ ಅಭಿವೃದ್ಧಿ ನಿಗಮ ಮಾಡಿದ್ರಿ ಗೊತ್ತ ಸಾರ್.”

“ನಾನು ಬ್ರಾಹ್ಮಣರ ಅಭಿವೃದ್ಧಿ ನಿಗಮ ಮಾಡಿದ್ದು ಸರಿ ಕಂಡ್ರಿ. ಆ ಜನ ಸಮಾಜಕ್ಕೆ ಏನಾದ್ರು ಮಾಡ್ತರೆ, ಅದೇ ಈ ಊರ ಹೊರಗೆ ಇರತಕ್ಕಂತ ಜನಗಳಿಗೆ ಏನಾದ್ರು ಸಹಾಯ ಮಾಡಿದ್ರೆ ಕುಡುದು ತಿಂದು ಹಾಳು ಮಾಡ್ತರೆ. ಅವರಿಗೆ ಕೊಟ್ಟಿದ್ದೆ ವೇಸ್ಟು ಅನ್ನಂಗೆ ಮಾಡ್ತರೆ, ಅದ್ಕೆ ನಾನು ನಮ್ಮ ಸಹಾಯ ಏನಿದೆ ಅದು ಸದುಪಯೋಗ ಮಾಡಿಕತಕ್ಕಂತ ಜನಗಳನ್ನ ಪತ್ತೆ ಹಚ್ಚಿ ಆ ಕೆಲಸ ಮಾಡಿದೆ.”

“ನೀವು ಮಾಡಿದ್ದು ಬಿಜೆಪಿ ಕಾರ್ಯಕ್ರಮ ಸಾರ್. ನೋಡಿ ಅವುರು ನಿಮ್ಮನ್ನ ಬಳಸ್ಕಂಡ್ರು. ಮೋದಿನು ಬಳಸ್ಕಂಡು ಎಕನಾಮಿಕಲಿ ವೀಕರ್ ಸೆಕ್ಷನ್‌ಗೆ ಮೀಸಲಾತಿ ಬೇಕು ಅಂತ ಪಡದೇಬುಟ್ರು. ಈಗ ಅವುರನ್ನ ಹಿಡಿಯಕ್ಕೆ ಯಾರ ಕೈಲು ಆಗಲ್ಲ ಗೊತ್ತೆ.”

“ಆದ್ರು ಅವುರೆಷ್ಟು ಜನ ಇದಾರ್ರಿ?”

“ಒಬ್ಬರೆ ಸಾಕು ಸಾರ್, ಬ್ರಿಟಿಷರು ಎಷ್ಟು ಜನ ಇದ್ರು? ಇಂಡಿಯಾನೆ ಆಳಲಿಲ್ಲವ?”

“ಆಳಿದ್ರು ಸರಿ, ಆದ್ರೆ ರಾಜ್ಯವನ್ನ ಆಳತಕ್ಕಂತ ಜನಕ್ಕೆ ಅಧಿಕಾರ ಹೋದ್ರೆ ಹಾಗೆ ಇರದು ಕಷ್ಟ ಕಂಡ್ರಿ. ನನಿಗಂತು ಕರ್ನಾಟಕದಲ್ಲಿ ಇರಕ್ಕೆ ಬೇಜಾರು.”

“ಬೇಜಾರಾದ್ರೆ ಒಂದು ಕೆಲಸ ಮಾಡಬಹುದು ಸಾರ್. ಹ್ಯಂಗಿದ್ರೂ ನಮ್ಮ ಸಿನಿಮಾ ರಂಗ ಹಾಳಾಗ್ತಾಯಿದೆ. ಅದಕ್ಕೆ ಜೀವಕೊಡಿ ಸಾರ್, ಹೊಸ ಸಿನಿಮಾ ತಗಿರಿ, ಸಿನಿಮಾ ಟಾಕೀಸ್ ಕಟ್ಟಿ, ಡಿಸ್ಟ್ರಿಬ್ಯೂಷನ್ ಮಾಡಿ.”

“ಅವುನ್ಯಲ್ಲ ಮಾಡಿ ಆಯ್ತಲ್ರಿ, ಆ ಸಿನಿಮಾ ಲೋಕ ಏನು ಅನತಕ್ಕಂತ ಅನುಭವವನ್ನ ಪಡಕೊಂಡೆ ನಾನು ರಾಜಕಾರಣಕ್ಕೆ ಬಂದಿದ್ದು. ಈಗ ರಾಜಕಾರಣದ ಅನುಭವನೂ ಆಯ್ತು, ಪಂಚರತ್ನ ಕೈ ಹಿಡಿತವೆ ಅಂತ ತಿಳಕಂಡಿದ್ದೇ ತಪ್ಪಾಯ್ತು.”

“ಸಾರ್ ನನಿಗೆ ನಿಮ್ಮ ಬಗ್ಗೆ ಏನೋ ಒಂಥರ ಅಭಿಮಾನ ಇತ್ತು. ಅದ್ಯಲ್ಲ ವಂಟೊಯ್ತು ಸಾರ್.”

“ಯಾಕ್ರಿ?”

“ನಿಮ್ಮ ಪಾರ್ಟಿಗೆ ಐವತ್ತೆಂಟು ಸೀಟು ಬಂದಾಗ ಎಸ್ಸೆಂ ಕೃಷ್ಣ ಆಡಳಿತ ರಾಜ್ಯಪಾಲರ ಆಡಳಿತದಂಗಿತ್ತು, ಜನತಾದಳದಲ್ಲಿ ಪಟೇಲ್ರು, ಪ್ರಕಾಶ್, ಸಿಂಧ್ಯ, ಸಿದ್ದರಾಮಯ್ಯ, ವೈದ್ಯನಾಥ ಪಾಟೀಲ, ರಾಯರೆಡ್ಡಿ ಈ ತರ ಒಂದು ದಂಡೇಯಿದ್ದ ಕಾರಣಕ್ಕೆ ಜನತಾ ಪಾರ್ಟಿಗೆ ಅಷ್ಟು ಸೀಟು ಬಂದು ಈಗ ಅವರ್‍ಯಾರೂ ಇಲ್ಲದ ಕಾಲದಲ್ಲಿ ಪಂಚರತ್ನ ತೋರುಸ್ತ ನೀವೊಬ್ರು ಹೋದ್ರೆ ಯಾರು ಓಟಾಕ್ತರೆ ಸಾರ್? ನಿಜವಾಗ್ಲು ಹೇಳ್ತಿನಿ ನಿಮ್ಮ ಕುಟುಂಬದ ಮರ್‍ಯಾದಿಗೋಸ್ಕರ ಹತ್ತೊಂಬತ್ತು ಬಂದವೆ. ಇಲ್ಲಾ ಅಂದಿದ್ರೆ ಹತ್ತೆಯ. ಈಗ್ಲು ನೀವು ಬಿಜೆಪಿ ಕಡಿಕೋದ್ರೆ ನಿಮ್ಮ ಜೊತೆ ಬರವು ಒಂಬತ್ತು ನವಗ್ರಹಗಳು ಮಾತ್ರ.”

“ಮತ್ತೇನು ಮಾಡದೀಗ?”

“ಗ್ಯಾರಂಟಿ ಸಪೊರ್ಟ್ ಮಾಡಿ, ಮುಂದೆ ನೋಡಿ.”

“ಸತ್ರು ಅಂತ ಕೆಲಸ ಮಾಡಲ್ಲ.”

“ಥೂತ್ತೆರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...