Homeಮುಖಪುಟಬಿಲ್ಕಿಸ್‌ ಬಾನೋ ಪ್ರಕರಣ: ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ತರಾಟೆ

ಬಿಲ್ಕಿಸ್‌ ಬಾನೋ ಪ್ರಕರಣ: ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

2002ರ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಮೇಲೆ ಅತ್ಯಾಚಾರವೆಸಗಿ ಆಕೆಯ ಕುಟುಂಬವನ್ನು ಹತ್ಯೆಗೈದ ಅಪರಾಧಿಗಳನ್ನು ಶಿಕ್ಷೆಯ ಅವಧಿ ಮುಗಿಯುವ ಮುನ್ನವೇ ಬಿಡುಗಡೆ ಕುರಿತ ಅರ್ಜಿಗಳ ಸರಣಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಗುಜರಾತ್ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಬಿಲ್ಕಿಸ್‌ ಬಾನೊ ಸಾಮೂಹಿಕ ಅತ್ಯಾಚಾರಿಗಳು ಮತ್ತು ಆಕೆಯ ಕುಟುಂಬಸ್ಥರ ಹಂತಕರಿಗೆ ಕ್ಷಮಾದಾನ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಮೌಖಿಕವಾಗಿ ಹೇಳಿದ್ದು, ಸಮಾಜದಲ್ಲಿ ಸುಧಾರಣೆ ಮತ್ತು ಪುನರ್ಮಿಲನಕ್ಕೆ ಅವಕಾಶವನ್ನು ಪ್ರತಿಯೊಬ್ಬ ಅರ್ಹ ಅಪರಾಧಗೆ ನೀಡಬೇಕು. ”ಕ್ಷಮಾದಾನವನ್ನು ಕೆಲವು ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಅನ್ವಯಿಸಲಾಗುತ್ತಿದೆ? ಸುಧಾರಣೆಗೆ ಅವಕಾಶವನ್ನು ಪ್ರತಿಯೊಬ್ಬ ಅಪರಾಧಿಗಳಿಗೆ ನೀಡಬೇಕು, ಕೆಲವರಿಗೆ ಮಾತ್ರ ಅಲ್ಲ. ಅವರನ್ನು ಅವಧಿಗೆ ಮುನ್ನ ಬಿಡುಗಡೆ ಮಾಡಲು ಗುಜರಾತ್ ಸರ್ಕಾರ ಮುತುವರ್ಜಿ ವಹಿಸಿತ್ತು. ಅಪರಾಧಿಗಳ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ 14 ವರ್ಷಗಳ ಕಾಲ ಜೈಲಿನಲ್ಲಿದ್ದವರನ್ನು ಹೇಗೆ ಬಿಡುಗಡೆ ಮಾಡಲಾಯಿತು? ಇತರ ಕೈದಿಗಳನ್ನು ಯಾಕೆ ಬಿಡುಗಡೆ ಮಾಡಿಲ್ಲ. ಈ ಅಪರಾಧಿಗಳಿಗೆ ಮಾತ್ರ ಏಕೆ ನೀತಿಯ ಪ್ರಯೋಜನವನ್ನು ನೀಡಲಾಗಿದೆ? ಎಂದು ಗುಜರಾತ್ ಸರ್ಕಾರವನ್ನು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ತರಾಟೆ ತೆಗೆದುಕೊಂಡಿತು.

ಬಿಲ್ಕಿಸ್ ಅಪರಾಧಿಗಳಿಗಾಗಿ ಜೈಲು ಸಲಹಾ ಸಮಿತಿಯನ್ನು ಯಾವ ಆಧಾರದ ಮೇಲೆ ರಚಿಸಲಾಗಿದೆ ಎಂದು ಪ್ರಶ್ನಿಸಿದ ನ್ಯಾಯಾಲಯ, ವಿವರಗಳನ್ನು ನೀಡುವಂತೆ ರಾಜ್ಯಕ್ಕೆ ಆದೇಶಿಸಿದೆ. ಗೋಧ್ರಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯದ ಕಾರಣ ಅದರ ಅಭಿಪ್ರಾಯವನ್ನು ಏಕೆ ಕೇಳಲಾಗಿದೆ ಎಂದೂ ಅದು ಕೇಳಿದೆ.

ಮೇ 2022 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಆಧಾರದ ಮೇಲೆ ಗುಜರಾತ್ ಸರ್ಕಾರವು 11 ಅಪರಾಧಿಗಳಿಗೆ ವಿನಾಯಿತಿಯನ್ನು ನೀಡಿತ್ತು. ಕಳೆದ ವರ್ಷ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾದ 11 ಮಂದಿಗೆ ಮಹಾರಾಷ್ಟ್ರದ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿದ ನ್ಯಾಯಾಧೀಶರು ಅಪರಾಧಿಗಳನ್ನು ಬಿಡುಗಡೆ ಮಾಡಬೇಕೇ ಎಂಬ ರಾಜ್ಯದ ಪ್ರಶ್ನೆಗೆ ನಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದರು.

ಮಿತೇಶ್ ಭಟ್, ಶೈಲೇಶ್ ಭಟ್, ಜಸ್ವಂತ್ ನಾಯ್, ಗೋವಿಂದ್ ನಾಯ್, ರಾಧ್ಯೇಶಮ್ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೊಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯಿ ವೋಹಾನಿಯಾ, ರಾಜುಭಾಯ್ ಸೋನಿ, ಮತ್ತು ರಮೇಶ್ ಚಂದನಾ ಅವರು ‘ಸನ್ನಡತೆ ಆಧಾರದ’ ಮೇಲೆ ಬಿಡುಗಡೆಗೊಂಡ ಅಪರಾಧಿಗಳು. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಈ ಅಪರಾಧಿಗಳನ್ನು ಗುಜರಾತ್ ಸರ್ಕಾರ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಿತ್ತು.

ಬಿಲ್ಕಿಸ್ ಬಾನೋ ಪರ ವಕೀಲ ಶೋಭಾ ಗುಪ್ತಾ, ಅಪರಾಧಿಗಳ ಬಿಡುಗಡೆ ಕುರಿತು ಗುಜರಾತ್ ಸರ್ಕಾರದ ನಿರ್ಧಾರ ತಪ್ಪು ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ಮಹಾರಾಷ್ಟ್ರ ರಾಜ್ಯವನ್ನು ಕೇಳಲಿಲ್ಲ, ಕೇಂದ್ರವನ್ನು ಇದರಲ್ಲಿ ಪಕ್ಷವನ್ನಾಗಿ ಮಾಡಿಲ್ಲ. ಸುಪ್ರೀಂಕೋರ್ಟ್‌ನ ಆದೇಶವು ಅಪರಾಧಿ ರಾಧೇಶ್ಯಾಮ್‌ನ ಅರ್ಜಿಗೆ ಸಂಬಂಧಿಸಿದಂತೆ ಮಾತ್ರ, ಆದರೆ ಗುಜರಾತ್ ಸರ್ಕಾರವು ಎಲ್ಲಾ 11 ಅಪರಾಧಿಗಳಿಗೆ ವಿನಾಯಿತಿ ನೀಡಿದೆ ಎಂದು ಅವರು ಹೇಳಿದ್ದಾರೆ.

15 ವರ್ಷ 4 ತಿಂಗಳ ಜೈಲು ವಾಸವನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅಪರಾಧಿ ರಾಧೇಶ್ಯಾಮ್ ಷಾ ವಿನಾಯತಿ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಗುಜರಾತ್ ಸರ್ಕಾರವನ್ನು ಈ ವಿಷಯವನ್ನು ಪರಿಶೀಲಿಸಲು ಮತ್ತು ಎರಡು ತಿಂಗಳೊಳಗೆ ಅವರಿಗೆ ವಿನಾಯಿತಿ ನೀಡಬಹುದೇ ಎಂದು ನಿರ್ಧರಿಸಲು ಕೇಳಿದೆ. ಇದಕ್ಕೆ ಪ್ರತಿಯಾಗಿ ಗುಜರಾತ್ ಸರ್ಕಾರ ಎಲ್ಲಾ ಅಪರಾಧಿಗಳನ್ನು ಬಿಡುಗಡೆ ಮಾಡಿದೆ.

ಆಗಾಗಲೇ 14 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ ಮತ್ತು ಉತ್ತಮ ನಡವಳಿಕೆಯನ್ನು ಪ್ರದರ್ಶಿಸಿದ ಪುರುಷರನ್ನು ಸುಸಂಸ್ಕೃತ ಬ್ರಾಹ್ಮಣರು ಎಂದು ಕರೆದ ಸಮಿತಿಯ ಸದಸ್ಯರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಅಪರಾಧಿಗಳ ಬಿಡುಗಡೆಯ ಬಗ್ಗೆ ತನಗೆ ಸೂಚನೆ ನೀಡಿಲ್ಲ ಎಂದು ಬಿಲ್ಕಿಸ್ ಬಾನೋ ವಾದಿಸಿದ್ದಾರೆ. ಆಕೆಯ ಅರ್ಜಿಯ ವಿಚಾರಣೆ ಆಗಸ್ಟ್ 24 ರಂದು ನಡೆಯಲಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದೇಕೆ? ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...