Homeಕರ್ನಾಟಕಬಲಪಂಥೀಯ ಸಂಘಟನೆಯಿಂದ ಜೀವಬೆದರಿಕೆ: ವಿಚಾರವಾದಿಗಳಿಗೆ ರಕ್ಷಣೆ ಒದಗಿಸಲು ಮುಂದಾದ ರಾಜ್ಯ ಸರ್ಕಾರ

ಬಲಪಂಥೀಯ ಸಂಘಟನೆಯಿಂದ ಜೀವಬೆದರಿಕೆ: ವಿಚಾರವಾದಿಗಳಿಗೆ ರಕ್ಷಣೆ ಒದಗಿಸಲು ಮುಂದಾದ ರಾಜ್ಯ ಸರ್ಕಾರ

- Advertisement -
- Advertisement -

ನಾಡಿನ ಖ್ಯಾತ ಬರಹಗಾರರು, ವಿಚಾರವಾದಿಗಳು ಮತ್ತು ಶಿಕ್ಷಣತಜ್ಞರಿಗೆ ಬಲಪಂಥೀಯ ಸಂಘಟನೆಯವರು ಜೀವಬೆದರಿಕೆಯ ಸಂದೇಶಗಳನ್ನು ರವಾನಿಸುತ್ತಿದ್ದಾರೆ. ಹಾಗಾಗಿ ನಾಡಿನ 15ಕ್ಕೂ ಹೆಚ್ಚು ವಿಚಾರವಾದಿಗಳಿಗೆ ರಕ್ಷಣೆ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.

ಯಾವೆಲ್ಲ ಲೇಖಕರು ಮತ್ತು ಬುದ್ಧಿಜೀವಿಗಳು ಬೆದರಿಕೆ ಎದುರಿಸುತ್ತಿದ್ದಾರೋ ಅವರಿಗೆಲ್ಲ ಭದ್ರತೆ ಒದಗಿಸಬೇಕು ಎಂದು ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರಿಗೆ ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.

ಕಳೆದ ವರ್ಷ ರಾಜ್ಯ ಬಿಜೆಪಿ ಸರ್ಕಾರವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮತ್ತು ಇತರ ಧಾರ್ಮಿಕ ಉಡುಪುಗಳ ನಿಷೇಧ ಹೇರಿದ್ದವು ಇದಕ್ಕೆ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದವು. ಆ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಬಗ್ಗೆ ಕಳವಳ ವ್ಯಕ್ತಪಡಿಸಿ 61 ಬುದ್ದಿಜೀವಿಗಳು ಬಹಿರಂಗ ಪತ್ರ ಬರೆದಿದ್ದರು.

ಆ ಬಳಿಕ ಅವರಿಗೆ ಬೆದರಿಕೆ ಪತ್ರಗಳು ಬರಲಾರಂಭಿಸಿದವು. ಸಾಹಿತಿಗಳಾದ ಎಸ್ ಜಿ ಸಿದ್ದರಾಮಯ್ಯ, ವಸುಂಧರಾ ಭೂಪತಿ, ಕುಂ ವೀರಭದ್ರಪ್ಪ, ಪ್ರಾಧ್ಯಾಪಕರಾದ ಮರುಳಸಿದ್ದಪ್ಪ ಮತ್ತು ಬಣಜಗೆರೆ ಜಯಪ್ರಕಾಶ್ ಸೇರಿದಂತೆ ಅನೇಕರು ಕರ್ನಾಟಕ ಸರ್ಕಾರಕ್ಕೆ ಭದ್ರತೆ ಕೋರಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಈ ಹಿಂದೆ ರಾಜ್ಯದಲ್ಲಿ ಸಾಹಿತಿ ಎಂಎಂ ಕಲ್ಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಯಿತು. ಇದೀಗ ಹೋರಾಟಗಾರರಿಗೆ ಅದೇ ರೀತಿ ನಿಮ್ಮನ್ನು ಹತ್ಯೆ ಮಾಡಲಾಗುವುದು ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ.

ಗುಂಡಿನ ದಾಳಿಯಲ್ಲಿ ಹಿರಿಯ ಸಂಶೋಧಕ, ಸಾಹಿತಿ ಎಂ.ಎಂ.ಕಲಬುರ್ಗಿ ಸಾವನ್ನಪ್ಪಿದ್ದರು. ಆಗಸ್ಟ್ 30, 2015 ರಂದು ಕರ್ನಾಟಕದ ಧಾರವಾಡ ಜಿಲ್ಲೆಯ ಅವರ ಮನೆಯಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. ಹಿಂದುತ್ವ ರಾಜಕಾರಣದ ವಿರುದ್ಧ ಕಟುವಾದ ಅಭಿಪ್ರಾಯಗಳಿಗೆ ಹೆಸರಾದ ಪತ್ರಕರ್ತೆ ಲಂಕೇಶ್ ಅವರನ್ನು ಬೆಂಗಳೂರಿನ ಅವರ ಮನೆಯಲ್ಲಿ ಸೆಪ್ಟೆಂಬರ್ 5, 2017 ರಂದು ಬಂದೂಕುಧಾರಿಗಳು ಹತ್ಯೆ ಮಾಡಿದರು.

ಎರಡೂ ಕೊಲೆ ಪ್ರಕರಣಗಳ ಚಾರ್ಜ್‌ಶೀಟ್‌ಗಳಲ್ಲಿ ಆರು ವ್ಯಕ್ತಿಗಳನ್ನು ಶಂಕಿತರೆಂದು ಪಟ್ಟಿ ಮಾಡಲಾಗಿದೆ. ಆದಾಗ್ಯೂ, ಕಲ್ಬುರ್ಗಿ ಪ್ರಕರಣದ ಆರೋಪಪಟ್ಟಿಯಲ್ಲಿ ಈ ವ್ಯಕ್ತಿಗಳು ಅನಾಮಧೇಯ ಸಂಘಟನೆಯಿಂದ ಬಂದವರು ಎಂದು ಹೇಳುತ್ತದೆ. ಆದರೆ ಲಂಕೇಶ್ ಹತ್ಯೆಯಲ್ಲಿ ದಾಖಲಾಗಿರುವವರು ಅವರನ್ನು ಹಿಂದುತ್ವ ಸಂಸ್ಥೆ ಸನಾತನ ಸಂಸ್ಥೆಯ ಸದಸ್ಯರು ಎಂದು ಹೆಸರಿಸಲಾಗಿದೆ.

ಹಿಂದಿನ ಬಿಜೆಪಿ ಸರ್ಕಾರವು ಶಾಲಾ ಪಠ್ಯಪುಸ್ತಕಗಳ “ಕೇಸರಿಕರಣ”ವನ್ನು ವಿರೋಧಿಸಿದ ಸಿದ್ದರಾಮಯ್ಯ ಮತ್ತು ರಾಮಚಂದ್ರಪ್ಪ ಅವರಂತಹ ಸಾಹಿತಿಗಳ ಜತೆ ಒಡನಾಟ ಬೇಡ ಎಂಬ ಎಚ್ಚರಿಕೆ ಪತ್ರ ಬಂದಿತ್ತು ಎಂದು ಭೂಪತಿ ಪೊಲೀಸರಿಗೆ ದೂರು ನೀಡಿದ್ದರು.

ವೀರಭದ್ರಪ್ಪ ಅವರು “ಹಿಂದೂ ವಿರೋಧಿ” ಎಂದು ಆರೋಪಿಸಿ “ಅವರ ಅಂತ್ಯಕ್ರಿಯೆಗೆ ಸಿದ್ಧರಾಗಿ” ಎಂದು ಬೆದರಿಕೆಯ ಪತ್ರ ಬಂದಿತ್ತು ಎಂದು ಹೇಳಿದ್ದರು.

ಪರಮೇಶ್ವರ್ ಅವರು ಶುಕ್ರವಾರ ಈ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

”ಗೌರಿ ಲಂಕೇಶ್ ಮತ್ತು ಪ್ರೊಫೆಸರ್ ಕಲ್ಬುರ್ಗಿ ಅವರ ಹತ್ಯೆಯನ್ನು ನಾವು ಮರೆತಿಲ್ಲ. ಬರಹಗಾರರಿಗೆ ರಕ್ಷಣೆ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಶನಿವಾರದ ಸಭೆಯಲ್ಲಿ ನಾವು ಬರಹಗಾರರಿಂದ ಎಲ್ಲಾ ವಿವರಗಳನ್ನು ಪಡೆಯುತ್ತೇವೆ” ಎಂದು ಅವರು ಹೇಳಿದ್ದಾರೆ.

ಜೂನ್ 2022 ರಿಂದ ತನಗೆ ಅಂತಹ 13 ಪತ್ರಗಳು ಬಂದಿವೆ ಎಂದು ಜಯಪ್ರಕಾಶ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

”ಪಠ್ಯಪುಸ್ತಕಗಳ ಪರಿಷ್ಕರಣೆಯಂತಹ ವಿಷಯಗಳಲ್ಲಿ ನಾವು ಸರ್ಕಾರದ ವಿರುದ್ಧ ಹೇಳಿಕೆಗಳನ್ನು ನೀಡಿದಾಗ ನಮಗೆ ಬೆದರಿಕೆ ಪತ್ರಗಳು ಬರುತ್ತವೆ ರಾಜ್ಯದ ವಿವಿಧ ಭಾಗಗಳಿಂದ ಪತ್ರಗಳನ್ನು ಪೋಸ್ಟ್ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರವು ಜಾಗೃತ ತಂಡವನ್ನು ರಚಿಸಿತು. ಈಗಲೂ ನಮಗೆ ಅಂತಹ ಪತ್ರಗಳು ಬರುತ್ತಿವೆ. ಈ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚಿಸುತ್ತೇವೆ” ಎಂದರು.

ಇಂತಹ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆಯ ಹರಿಹರ ಮೂಲದ ಪ್ರದೀಪ್ ಎಂಬಾತನನ್ನು ಪೊಲೀಸರು ಮೇ ತಿಂಗಳಲ್ಲಿ ಬಂಧಿಸಿದ್ದರು ಆದರೂ ಕೂಡ ಲೇಖಕರಿಗೆ ಪತ್ರಗಳು ಬರುತ್ತಲೇ ಇವೆ.

ಇದನ್ನೂ ಓದಿ: ದಾಭೋಲ್ಕರ್, ಪನ್ಸಾರೆ, ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆಗೆ ಸಂಬಂಧ ಇದೆಯಾ?ಸುಪ್ರೀಂಕೋರ್ಟ್ ಪ್ರಶ್ನೆ

ಬಲಪಂಥೀಯ ಸಂಘಟನೆಗಳಿಂದ ವಿಚಾರವಾದಿಗಳಿಗೆ ಜೀವಬೆದರಿಕೆ 

ಬಹುಭಾಷಾ ನಟ ಮತ್ತು ನಿರ್ದೇಶಕ ಪ್ರಕಾಶ್ ರಾಜ್ ಅವರು ಹಿಂದಿನಿಂದಲೂ ಹಿಂದುತ್ವ ರಾಜಕೀಯ ಮತ್ತು ಬಲಪಂಥೀಯ ಉಗ್ರವಾದದ ಕಟು ಟೀಕಾಕಾರರಾಗಿದ್ದು, ಬುಧವಾರ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ, ಮಧ್ಯವಯಸ್ಕ ವ್ಯಕ್ತಿಯೊಬ್ಬರು ಹಣೆಯ ಮೇಲೆ ‘ತಿಲಕ’ ಮತ್ತು ಕೊರಳಲ್ಲಿ ಕುಂಕುಮದ ಸ್ಕಾರ್ಫ್ ಅನ್ನು ಹೊಂದಿದ್ದು, ನಟ ಪ್ರಕಾಶ್ ರಾಜ್‌ರನ್ನು ‘ಕೊಲೆ’ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

20ಕ್ಕೂ ಹೆಚ್ಚು ಲೇಖಕರಿಗೆ ಬೆದರಿಕೆ ಇದೆ

ಕರ್ನಾಟಕದಲ್ಲಿ ಬಲಪಂಥೀಯ ಶಕ್ತಿಗಳಿಂದ ಬೆದರಿಕೆ ಪತ್ರಗಳು ಬುದ್ಧಿಜೀವಿ ಪ್ರಕಾಶ್ ರಾಜ್ ಅವರಿಗೆ  ಮಾತ್ರ ಬಂದಿರುವುದಲ್ಲ, ರಂಗಭೂಮಿ ಮತ್ತು ಸಿನಿಮಾ ನಟರು, ಬರಹಗಾರರು ಮತ್ತು ರಾಜಕೀಯ ವಿಮರ್ಶಕರು ಸೇರಿದಂತೆ 20ಕ್ಕೂ ಹೆಚ್ಚು ಬುದ್ಧಿಜೀವಿಗಳು ಜೀವಬೆದರಿಕೆ ಎದುರಿಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊಗಳ ಮೂಲಕ ಅಥವಾ ಅವರ ವಿಳಾಸಗಳಿಗೆ ಪತ್ರಗಳ ಮೂಲಕ ವಿವಿಧ ರೀತಿಯ ಬೆದರಿಕೆಗಳನ್ನು ಅವರು ಎದುರಿಸುತ್ತಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ, ಬರಹಗಾರರು, ಸಾರ್ವಜನಿಕ ಬುದ್ಧಿಜೀವಿಗಳು, ನಾಟಕಕಾರರು ಮತ್ತು ಸಿನಿ ಕಲಾವಿದರಿಗೆ ಅನಾಮಧೇಯ ಬೆದರಿಕೆಗಳು ಬಂದಿವೆ. ಇತ್ತೀಚೆಗೆ ಬಂಜಗೆರೆ ಜಯಪ್ರಕಾಶ್, ವಸುಂಧರಾ ಭೂಂಪತಿ, ಪ್ರಾಧ್ಯಾಪಕ ಬರಗೂರು ರಾಮಚಂದ್ರಪ್ಪ, ಖ್ಯಾತ ವಿಮರ್ಶಕ ಕೆ ಮರುಳಸಿದ್ದಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್‌ಜಿ ಸಿದ್ದರಾಮಯ್ಯ, ಬರಹಗಾರ ಕುಂ. ವೀರಭದ್ರಪ್ಪ ಮತ್ತು ಬರಹಗಾರ ಬಿ ಎಲ್ ವೇಣು ಇನ್ನೂ ಅನೇಕರು ಬೆದರಿಕೆ ಎದುರಿಸಿದ್ದಾರೆ.

ಇತ್ತೀಚೆಗೆ ಬರಹಗಾರ ಬಂಜಗೆರೆ ಜಯಪ್ರಕಾಶ್ ಅವರಿಗೆ ಬೆದರಿಕೆ ಪತ್ರ ಬಂದಿತ್ತು. ಎಂ ಎಂ ಕಲಬುರ್ಗಿ ಮತ್ತು ಪತ್ರಕರ್ತೆ, ಲೇಖಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆಗೈದವರ ಹಿಟ್ ಲಿಸ್ಟ್‌ನಲ್ಲಿ ಅವರ ಹೆಸರು ಕಾಣಿಸಿಕೊಂಡಿದೆ. ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಲೇಖಕರು ಕಳೆದ ಹತ್ತು ವರ್ಷಗಳಿಂದ ರಾತ್ರಿಯಿಡೀ ಪೊಲೀಸ್ ಭದ್ರತೆಯನ್ನು ಪಡೆಯುತ್ತಿದ್ದಾರೆ.

ಎಂ ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಅವರನ್ನು ಕೊಂದವರು ಯಾರು?

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಮತ್ತು ಕನ್ನಡದ ಪ್ರಮುಖ ಲೇಖಕರಲ್ಲಿ ಒಬ್ಬರಾದ ಎಸ್ ಜಿ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದು, ”ನಾವು ಯಾವುದೇ ಧರ್ಮದ ಪರ ಅಥವಾ ವಿರುದ್ಧವಾಗಿಲ್ಲ. ನಾವು ಭಾರತೀಯ ಸಂವಿಧಾನವನ್ನು ಬಲವಾಗಿ ನಂಬುತ್ತೇವೆ. ಕರ್ನಾಟಕದಂತಹ ಮುಕ್ತ ರಾಜ್ಯದಲ್ಲಿ ಎಲ್ಲರ ಸೌಹಾರ್ದಯುತ ಬದುಕಿಗಾಗಿ ನಾವು ಮಾತನಾಡುತ್ತೇವೆ. ಅದು ನಮ್ಮ ಹಕ್ಕು ಕೂಡ. ಭಯದ ಮನೋವಿಕಾರವನ್ನು ಸೃಷ್ಟಿಸುವ ಮೂಲಕ ಯಾರೂ ಅದನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಗೌರಿ ಲಂಕೇಶ್ ಮತ್ತು ಎಂ.ಎಂ.ಕಲಬುರ್ಗಿ ಅವರನ್ನು ಕೊಂದವರು ಯಾರು ಎಂಬುದು ಎಲ್ಲರಿಗೂ ಗೊತ್ತು. ಸಂವಿಧಾನ, ಸ್ವಾತಂತ್ರ್ಯ ಮತ್ತು ಸಮಾನತೆಯ ಬಗ್ಗೆ ಅರಿವು ಮೂಡಿಸುವ ಬರಹಗಾರರಿಗೆ ಮುಕ್ತ ವಾತಾವರಣವನ್ನು ಸೃಷ್ಟಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಭದ್ರತೆಯ ಅಡಿಯಲ್ಲಿ ಬದುಕುವುದು ಅಸಂಬದ್ಧ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...