Homeಮುಖಪುಟಕೇಂದ್ರದ ಗೃಹ, ರೈಲ್ವೆ, ಬ್ಯಾಂಕ್‌ ಸಿಬ್ಬಂದಿಗಳ ಮೇಲೆ ಹೆಚ್ಚು ಭ್ರಷ್ಟಾಚಾರದ ದೂರು ದಾಖಲು:ಸಿವಿಸಿ ವರದಿ

ಕೇಂದ್ರದ ಗೃಹ, ರೈಲ್ವೆ, ಬ್ಯಾಂಕ್‌ ಸಿಬ್ಬಂದಿಗಳ ಮೇಲೆ ಹೆಚ್ಚು ಭ್ರಷ್ಟಾಚಾರದ ದೂರು ದಾಖಲು:ಸಿವಿಸಿ ವರದಿ

- Advertisement -
- Advertisement -

2022ರಲ್ಲಿ ಅತಿ ಹೆಚ್ಚು ಭ್ರಷ್ಟಾಚಾರದ ದೂರುಗಳು ಕೇಂದ್ರ ಗೃಹ ಸಚಿವಾಲಯದ ಉದ್ಯೋಗಿಗಳ ವಿರುದ್ಧ, ರೈಲ್ವೆ ಮತ್ತು ಬ್ಯಾಂಕ್‌ಗಳಲ್ಲಿ ಕೆಲಸ ಮಾಡುವವರ ವಿರುದ್ಧ ದಾಖಲಾಗಿವೆ ಎಂದು ಕೇಂದ್ರ ಜಾಗೃತ ಆಯೋಗ(ಸಿವಿಸಿ)(ಸೆಂಟ್ರಲ್ ವಿಜಿಲೆನ್ಸ್ ಕಮಿಷನ್) ಇತ್ತೀಚಿನ ವಾರ್ಷಿಕ ವರದಿಯಲ್ಲಿ ತಿಳಿಸಿದೆ.

ಒಟ್ಟಾರೆಯಾಗಿ 2022ರಲ್ಲಿ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿನ ವಿವಿಧ ಗ್ರೇಡ್ ನ ಅಧಿಕಾರಿಗಳ ವಿರುದ್ಧ ಒಟ್ಟು 1,15,203 ದೂರುಗಳನ್ನು ಸ್ವೀಕರಿಸಲಾಗಿದೆ. ಅದರಲ್ಲಿ 85,437 ಕೇಸ್ ಗಳ ವಿಲೇವಾರಿ ಮಾಡಲಾಗಿದ್ದು, 29,766 ಬಾಕಿ ಉಳಿದಿವೆ ಎಂದು ವರದಿ ತಿಳಿಸಿದೆ.

ಕೇಂದ್ರ ಜಾಗೃತ ಆಯೋಗ ಈ ಕುರಿತು ಪರಿಶೀಲಿಸಲು ರಾಜ್ಯಗಳ ಮುಖ್ಯ ವಿಜಿಲೆನ್ಸ್ ಅಧಿಕಾರಿಗಳಿಗೆ ಮೂರು ತಿಂಗಳ ಕಾಲಾವಧಿಯನ್ನು ನೀಡಿದೆ ಎಂದು ವರದಿ ತಿಳಿಸಿದೆ.

ಗೃಹ ಸಚಿವಾಲಯದ ಸಿಬ್ಬಂದಿಗಳಿಗೆ ಸಂಬಂಧಿಸಿದ  46,643 ದೂರುಗಳು ಕಳೆದ ವರ್ಷ ಬಂದಿವೆ. ರೈಲ್ವೆಯಲ್ಲಿ  10,580 ಮತ್ತು ಬ್ಯಾಂಕ್‌ಗಳಲ್ಲಿ 8,129 ದೂರುಗಳು ಬಂದಿವೆ ಎಂದು ವರದಿ ತಿಳಿಸಿದೆ.

ಗೃಹ ಸಚಿವಾಲಯದ ಉದ್ಯೋಗಿಗಳ ವಿರುದ್ಧದ ಒಟ್ಟು ದೂರುಗಳಲ್ಲಿ 23,919 ವಿಲೇವಾರಿಯಾಗಿದೆ ಮತ್ತು 22,724 ವಿಲೇವಾರಿಗೆ ಬಾಕಿ ಇದೆ. 19,198 ಮೂರು ತಿಂಗಳಿಗಿಂತ ಹೆಚ್ಚು ಕಾಲಗಳಿಂದ ಬಾಕಿಯಿದೆ ಎಂದು ವರದಿ ಹೇಳಿದೆ.

ರೈಲ್ವೆಯು 9,663 ದೂರುಗಳನ್ನು ವಿಲೇವಾರಿ ಮಾಡಿದ್ದರೆ, 917  ಪ್ರಕರಣಗಳು  ಬಾಕಿ ಉಳಿದಿವೆ. 9 ಪ್ರಕರಣ ಮೂರು ತಿಂಗಳಿಗಿಂತ ಹೆಚ್ಚು ಕಾಲ ಬಾಕಿ ಇದೆ ಎಂದು ಇತ್ತೀಚೆಗೆ ಸಾರ್ವಜನಿಕವಾಗಿ ಪ್ರಕಟವಾದ ವರದಿಯಲ್ಲಿ ತಿಳಿಸಲಾಗಿದೆ.

ಬ್ಯಾಂಕ್‌ಗಳು 7,762 ಭ್ರಷ್ಟಾಚಾರ ದೂರುಗಳನ್ನು ವಿಲೇವಾರಿ ಮಾಡಿದ್ದು, 367 ಬಾಕಿ ಉಳಿದಿವೆ ಎಂದು ವರದಿ ತಿಳಿಸಿದೆ.

CVCಯ ವರದಿಯ ಪ್ರಕಾರ, ಕಲ್ಲಿದ್ದಲು ಸಚಿವಾಲಯದಲ್ಲಿರುವ  ಉದ್ಯೋಗಿಗಳ ವಿರುದ್ಧ 4,304 ದೂರುಗಳು ದಾಖಲಾಗಿದೆ ಅದರಲ್ಲಿ  4,050 ಪ್ರಕರಣ ವಿಲೇವಾರಿ ಮಾಡಲಾಗಿದೆ. 4,236 ಪ್ರಕರಣ ಕಾರ್ಮಿಕ ಸಚಿವಾಲಯದ ವಿರುದ್ಧ ದಾಖಲಾಗಿದ್ದು ಅದರಲ್ಲಿ  4,016 ಪ್ರಕರಣ ವಿಲೇವಾರಿ ಮಾಡಲಾಗಿದೆ.  2,617 ಪ್ರಕರಣಗಳು ಪೆಟ್ರೋಲಿಯಂ ಸಚಿವಾಲಯದ ಉದ್ಯೋಗಿಗಳ ವಿರುದ್ಧ ದಾಖಲಾಗಿದೆ. ಅದರಲ್ಲಿ  2,409 ಪ್ರರಕಣಗಳ ವಿಲೇವಾರಿ ಮಾಡಲಾಗಿದೆ.

ಇದನ್ನು ಓದಿ: ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿ ಪುನರ್ ರಚನೆ: ಸಚಿನ್ ಪೈಲಟ್, ಶಶಿ ತರೂರ್ ಗೆ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...