Homeಮುಖಪುಟಉನ್ನತ ನ್ಯಾಯಾಲಯದ ತೀರ್ಪಿನ ವಿರುದ್ಧ ಆದೇಶ ನೀಡುವಂತಿಲ್ಲ: ಗುಜರಾತ್ ಹೈಕೋರ್ಟ್‌ಗೆ ಸುಪ್ರೀಂ ತರಾಟೆ

ಉನ್ನತ ನ್ಯಾಯಾಲಯದ ತೀರ್ಪಿನ ವಿರುದ್ಧ ಆದೇಶ ನೀಡುವಂತಿಲ್ಲ: ಗುಜರಾತ್ ಹೈಕೋರ್ಟ್‌ಗೆ ಸುಪ್ರೀಂ ತರಾಟೆ

- Advertisement -
- Advertisement -

ಯಾವುದೇ ನ್ಯಾಯಾಲಯವು ಸುಪ್ರೀಂ ಕೋರ್ಟ್‌ನ ತೀರ್ಪಿನ ವಿರುದ್ಧ ಆದೇಶ ಹೊರಡಿಸುವುದು ಸಾಂವಿಧಾನಿಕ ತತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿದ ಸುಪ್ರೀಂ ಕೋರ್ಟ್, ಪ್ರಕರಣವೊಂದರಲ್ಲಿ ಗುಜರಾತ್‌ ಹೈಕೋರ್ಟ್‌ನ್ನು ತರಾಟೆಗೆ ತೆಗೆದುಕೊಂಡಿದೆ.

ಅತ್ಯಾಚಾರ ಸಂತ್ರಸ್ತೆ ತನ್ನ ಗರ್ಭಾವಸ್ಥೆಯನ್ನು ಕೊನೆಗೊಳಿಸಲು ಅನುಮತಿ ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಅರ್ಜಿ ವಿಚಾರಣೆ ನಡೆಸಿದ  ಹೈಕೋರ್ಟ್ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿ ನಿರಾಕರಿಸಿ ಆದೇಶವನ್ನು ನೀಡಿತ್ತು. ಇದನ್ನು ಟೀಕಿಸಿದ ಸುಪ್ರೀಂಕೋರ್ಟ್ ಅತ್ಯಾಚಾರ ಸಂತ್ರಸ್ತೆಗೆ ಗರ್ಭವನ್ನು ಕೊನೆಗೊಳಿಸಲು ಅನುಮತಿಯನ್ನು ನೀಡಿದೆ.

ಗುಜರಾತ್ ಹೈಕೋರ್ಟ್ ನಲ್ಲಿ ಏನಾಗುತ್ತಿದೆ? ಭಾರತದ ಯಾವುದೇ ನ್ಯಾಯಾಲಯವು ಉನ್ನತ ನ್ಯಾಯಾಲಯದ ಆದೇಶದ ವಿರುದ್ಧ ಆದೇಶವನ್ನು ನೀಡುವಂತಿಲ್ಲ. ಇದು ಸಾಂವಿಧಾನದ ತತ್ವಕ್ಕೆ ವಿರುದ್ಧವಾಗಿದೆ ಎಂದು ನ್ಯಾಯಮೂರ್ತಿ ಬಿ ವಿ ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು  ಹೇಳಿದೆ.

ಪ್ರಕರಣದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಗುಜರಾತ್ ಸರ್ಕಾರದ ಪರ  ಹಾಜರಾಗಿದ್ದರು.

ಅತ್ಯಾಚಾರ ಸಂತ್ರಸ್ತೆಯ ಅರ್ಜಿಯನ್ನು ವಿಚಾರಣೆ  ನಡೆಸುವಲ್ಲಿ ಹೈಕೋರ್ಟ್‌ನ ವಿಳಂಬವನ್ನು ಸುಪ್ರೀಂಕೋರ್ಟ್ ಸೋಮವಾರ ಗಮನಿಸಿದೆ ಮತ್ತು “ಅಮೂಲ್ಯವಾದ ಸಮಯ” ಕಳೆದುಹೋಗಿದೆ ಎಂದು ಹೇಳಿದೆ. ನಂತರ ನ್ಯಾಯಮೂರ್ತಿ ನಾಗರತ್ನ ಮತ್ತು ನ್ಯಾ.ಭುಯಾನ್ ಅವರಿದ್ದ ಪೀಠ ಇಂದು ಈ ಪ್ರಕರಣದ ವಿಚಾರಣೆ ನಡೆಸುವುದಾಗಿ ಹೇಳಿದೆ.

ಈ ಕುರಿತು ಹೈಕೋರ್ಟ್‌ನ  ಧೋರಣೆ ಯನ್ನು ಟೀಕಿಸಿದ ಸುಪ್ರೀಂ ಕೋರ್ಟ್, ಮಹಿಳೆಯ ಮನವಿಗೆ ಪ್ರತಿಕ್ರಿಯೆ ನೀಡುವಂತೆ ಗುಜರಾತ್ ಸರ್ಕಾರ ಮತ್ತು ಇತರರಿಗೆ ಶನಿವಾರ ನೋಟಿಸ್ ಜಾರಿ ಮಾಡಿದೆ.

ಸಂತ್ರಸ್ತೆ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಈ ಕುರಿತು ಮಾಹಿತಿ ನೀಡಿದ್ದು, ಅವರು ಆಗಸ್ಟ್ 7 ರಂದು ಹೈಕೋರ್ಟ್ ಗೆ  ಸಂಪರ್ಕಿಸಿದರು ಮತ್ತು ಮರುದಿನ ಈ ವಿಷಯವನ್ನು ಆಲಿಸಲಾಯಿತು. ಅರ್ಜಿದಾರರ ಗರ್ಭಾವಸ್ಥೆಯ ಸ್ಥಿತಿ ಮತ್ತು ಅವರ ಆರೋಗ್ಯದ ಸ್ಥಿತಿಯನ್ನು ಪರಿಶೀಲಿಸಲು ವೈದ್ಯಕೀಯ  ತಂಡವನ್ನು ರಚಿಸುವಂತೆ ಆಗಸ್ಟ್ 8 ರಂದು ಹೈಕೋರ್ಟ್ ನಿರ್ದೇಶಿಸಿದೆ.

ಮೆಡಿಕಲ್ ಕಾಲೇಜು ಅತ್ಯಾಚಾರ ಸಂತ್ರಸ್ತೆಯನ್ನು ಪರೀಕ್ಷಿಸಿ ತನ್ನ ವರದಿಯನ್ನು ಆಗಸ್ಟ್ 10 ರಂದು ಸಲ್ಲಿಸಿದೆ. ವರದಿಯಲ್ಲಿ  ಗರ್ಭಾವಸ್ಥೆಯನ್ನು ಅಂತ್ಯಗೊಳಿಸಬಹುದು ಎಂದು ತಿಳಿಸಲಾಗಿತ್ತು ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ.

ಈ ಕುರಿತು ಆಗಸ್ಟ್ 11 ರಂದು ಹೈಕೋರ್ಟ್ ವರದಿಯನ್ನು ದಾಖಲಿಸಿದೆ  ಆದರೆ ವಿಚಿತ್ರ ಎಂದರೆ  12 ದಿನಗಳ ನಂತರ ವಿಷಯವನ್ನು ಪಟ್ಟಿ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ.  ಪ್ರಕರಣದಲ್ಲಿ  ಪ್ರತಿದಿನದ ವಿಳಂಬವು ನಿರ್ಣಾಯಕ ಮತ್ತು ಹೆಚ್ಚಿನ ಮಹತ್ವದ್ದಾಗಿದೆ ಕೋರ್ಟ್ ಹೇಳಿದೆ.

ಇಂತಹ ಸಂದರ್ಭಗಳಲ್ಲಿ, ಕನಿಷ್ಠ ತುರ್ತು ಪ್ರಜ್ಞೆ ಇರಬೇಕು ಮತ್ತು ಅದನ್ನು ಯಾವುದೇ ಸಾಮಾನ್ಯ ಪ್ರಕರಣವೆಂದು ಪರಿಗಣಿಸಿ ಅದನ್ನು ಮುಂದೂಡುವ ಮನೋಭಾವವನ್ನು ಹೊಂದಿರಬಾರದು. ಈ ಹೇಳಿಕೆಯನ್ನು ಹೇಳಲು ನಾವು ವಿಷಾದಿಸುತ್ತೇವೆ ಎಂದು  ಪೀಠವು ಮೌಖಿಕವಾಗಿ ಹೇಳಿದೆ.

ಆಗಸ್ಟ್ 17 ರಂದು ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ ಎಂದು ಪ್ರಕರಣದ ಸ್ಥಿತಿ ತೋರಿಸುತ್ತದೆ. ಆದರೆ ಯಾವುದೇ ಕಾರಣಗಳನ್ನು ನೀಡಲಾಗಿಲ್ಲ ಮತ್ತು ಆದೇಶವನ್ನು ಹೈಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಇನ್ನು ಅಪ್‌ಲೋಡ್ ಮಾಡಬೇಕಾಗಿದೆ ಎಂದು ಅರ್ಜಿದಾರರ ವಕೀಲರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಗರ್ಭಧಾರಣೆಯನ್ನು ಕೊನೆಗೊಳಿಸಲು ಮಹಿಳೆಗೆ ಅನುಮತಿಯನ್ನು ನೀಡಿದೆ. ಭ್ರೂಣವು ಜೀವಂತವಾಗಿದೆ ಎಂದಾದರೆ ಅದನ್ನು ಬದುಕುವಂತೆ ಮಾಡಲು ಆಸ್ಪತ್ರೆಯು ಕಾವು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ನೀಡಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನು ಓದಿ: ಕೇಂದ್ರದ ಗೃಹ, ರೈಲ್ವೆ, ಬ್ಯಾಂಕ್‌ ಸಿಬ್ಬಂದಿಗಳ ಮೇಲೆ ಹೆಚ್ಚು ಭ್ರಷ್ಟಾಚಾರದ ದೂರು ದಾಖಲು:ಸಿವಿಸಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...