Homeಮುಖಪುಟಉತ್ತರಪ್ರದೇಶ; ಮುಸ್ಲಿಂ ಬಾಲಕನ ಥಳಿಸಿ ಕೊಲೆ; ಐವರು ಪೊಲೀಸರ ಮೇಲೆ ಎಫ್ ಐಆರ್

ಉತ್ತರಪ್ರದೇಶ; ಮುಸ್ಲಿಂ ಬಾಲಕನ ಥಳಿಸಿ ಕೊಲೆ; ಐವರು ಪೊಲೀಸರ ಮೇಲೆ ಎಫ್ ಐಆರ್

- Advertisement -
ಉತ್ತರಪ್ರದೇಶದ ಬರೇಲಿಯಲ್ಲಿ ಮಾಂಸದ  ಫ್ಯಾಕ್ಟರಿಯಿಂದ  ಮನೆಗೆ ಬರುವಾಗ 17 ವರ್ಷದ ಬಾಲಕನ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆತನಿಗೆ ಥಳಿಸಿ ಕೊಲೆ ಮಾಡಿದ ಆರೋಪದ ಮೇಲೆ ಐವರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.
17 ವರ್ಷದ ಅರ್ಕನ್ ಅಲಿ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ ಎಂದು ಬರೇಲಿ ಪೊಲೀಸರು ಹೇಳಿಕೊಂಡಿದ್ದರು. ಆದರೆ ಘಟನೆ ನಡೆದು ನಾಲ್ಕು ತಿಂಗಳ ಬಳಿಕ ಇದೀಗ  ನ್ಯಾಯಾಲಯದ ಆದೇಶದ ಮೇರೆಗೆ  ಆ.17ರಂದು ಬರೇಲಿಯ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ತಂದೆ ಪಪ್ಪು ಖುರೇಷಿ ಅವರ ದೂರಿನ ಮೇರೆಗೆ ಬಿತ್ರಿ ಚೈನ್‌ಪುರ ಠಾಣಾಧಿಕಾರಿ ಅಶ್ವಿನಿ ಕುಮಾರ್ ಚೌಬೆ, ಸಬ್ ಇನ್ಸ್‌ಪೆಕ್ಟರ್ ಧರ್ಮೇಂದ್ರ ಕುಮಾರ್, ಕಾನ್‌ಸ್ಟೆಬಲ್‌ಗಳಾದ ರಾಜೇಶ್, ವಿಪಿನ್ ಕಂಡ್ವಾಲ್ ಮತ್ತು ಹೋಮ್ ಗಾರ್ಡ್ ವೀರಪಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳ ಮೇಲೆ ನರಹತ್ಯೆ, ಸುಲಿಗೆ, ಕ್ರಿಮಿನಲ್ ಪಿತೂರಿ, ದರೋಡೆ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ತನ್ನ ಮಗನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಲ್ಲದೆ, ಆತನಿಂದ 30,400 ರೂಪಾಯಿ ದೋಚಿದ್ದಾರೆ ಎಂದು ಪಪ್ಪು ಖುರೇಷಿ ಆರೋಪಿಸಿದ್ದಾರೆ.
ಎಪ್ರಿಲ್ 17 ರಂದು ಅರ್ಕಾನ್ ಅವರು ಎಮ್ಮೆ ಸಾಗಿಸಿದ  ಹಣವನ್ನು ಸಂಗ್ರಹಿಸಲು ಮಾರಿಯಾ ಫ್ರೋಜನ್ ಮಾಂಸದ ಕಾರ್ಖಾನೆಗೆ ಹೋದಾಗ ಈ ಘಟನೆ ನಡೆದಿದೆ. ಅರ್ಕಾನ್ ಗೆ ತಂದೆ ಖುರೇಷಿ 11.30 ರವರೆಗೆ ಕಾಯುತ್ತಾ ಕುಳಿತಿದ್ದರು. ಬಳಿಕ ಕರೆ ಮಾಡಿದಾಗ, ಆತ ಹಣ ತೆಗೆದುಕೊಂಡಿದ್ದು ಮನೆಗೆ ಬರುತ್ತಿರುವುದಾಗಿ ಹೇಳಿದ್ದ. ಆದರೆ ಮತ್ತೆ 11:45 ಕ್ಕೆ ನನಗೆ ಮಗನ ಫೋನ್ ನಿಂದ ಕರೆ ಬಂದಿದೆ. ಆಗ ತನ್ನನ್ನು ಪೊಲೀಸ್ ಎಂದು ಹೇಳಿಕೊಂಡ ವ್ಯಕ್ತಿ 50,000 ರೂಪಾಯಿಯೊಂದಿಗೆ ಬೇಗ ಸ್ಥಳಕ್ಕೆ ತಲುಪುವಂತೆ ಖುರೇಷಿಗೆ ಕೇಳಿಕೊಂಡಿದ್ದಾನೆ . ಇಲ್ಲವಾದರೆ  ಮಗನ ಮೇಲೆ  ಗೋಹತ್ಯೆಯ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಬೆದರಿಸಿದ್ದರು ಎಂದು ಎಫ್‌ಐಆರ್  ನಲ್ಲಿ ಹೇಳಲಾಗಿದೆ.
ಇದರಿಂದ ಭಯಗೊಂಡ ಖುರೇಷಿ  ಸ್ಥಳೀಯರ ಜೊತೆ ಬರೇಲಿಯ ಕಂಟೋನ್ಮೆಂಟ್ ಪ್ರದೇಶದ ಬಿಲಾಲ್ ಮಸೀದಿ ಪ್ರದೇಶಕ್ಕೆ ಹೋಗಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್, ಕಾನ್‌ಸ್ಟೆಬಲ್‌ಗಳು ಮತ್ತು ಹೋಮ್ ಗಾರ್ಡ್ ತನ್ನ ಮಗನನ್ನು ಅಮಾನುಷವಾಗಿ ಥಳಿಸುವುದನ್ನು ನಾನು ನೋಡಿದ್ದೇನೆ ಎಂದು ಅವರು ಆರೋಪಿಸಿದ್ದಾರೆ.
ಮಗ ರಕ್ತದ ಮಡುವಿನಲ್ಲಿ ನೆಲದ ಮೇಲೆ ಮಲಗಿದ್ದ. ಸ್ಥಳದಲ್ಲಿ ಬಿಳಿ ಕಾರು ಮತ್ತು ಬೈಕ್ ನಿಂತಿತ್ತು.  ಗ್ರಾಮದ ಮುಖ್ಯಸ್ಥ ಪೋನ್  ಕರೆ ಮಾಡಿದ ನಂತರ SHO ಚೌಬೆ ತಮ್ಮ ತಂಡದೊಂದಿಗೆ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಅವರು ಎಸ್ ಎಚ್ ಒ ಪೊಲೀಸರನ್ನು ಸಮರ್ಥಿಸಿಕೊಂಡಿದ್ದಾರೆ.  ವಾದಿಸಿದರೆ ಗ್ರಾಮಕ್ಕೆ ಬೆಂಕಿ ಹಚ್ಚುವುದಾಗಿ ಹಾಗೂ ಶೂಟ್ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮೇ 4 ರಂದು ಸ್ಥಳೀಯ ನ್ಯಾಯಾಲಯದಲ್ಲಿ CrPC 156 (3) ಅಡಿಯಲ್ಲಿ ಸಲ್ಲಿಸಿದ ಅರ್ಜಿಯಲ್ಲಿ, ಖುರೇಷಿ ಅವರು ಸ್ಥಳೀಯರು ಚಿತ್ರೀಕರಿಸಿದ  ವೀಡಿಯೊವನ್ನು ನ್ಯಾಯಾಲಯಕ್ಕೆ  ಸಲ್ಲಿಸಿದರು ಮತ್ತು ಪೊಲೀಸ್ ಅಧಿಕಾರಿಯು ಅವರಿಗೆ ಬೆದರಿಕೆ ಹಾಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು.
ಬಾಲಕ ತಲೆಗೆ ಆದ ಗಾಯದಿಂದ ಮೃತಪಟ್ಟಿದ್ದಾನೆಂದು ಖುರೇಷಿ ಹೇಳಿದ್ದು, ಗಾಯದ ನಿಜವಾದ ಸ್ವರೂಪ ಅಥವಾ ನಿಖರವಾದ ಕಾರಣದ ಬಗ್ಗೆ ಯಾವುದೇ ಸ್ಪಷ್ಟತೆ  ಇಲ್ಲ ಎಂದು ಹೇಳಿದ್ದಾರೆ.
ಮರಣೊತ್ತರ ಪರೀಕ್ಷೆ ವರದಿಯು ತನ್ನ ಮಗನ ದೇಹದಲ್ಲಿ “16 ಗಾಯಗಳು” ಇದೆ ಎಂದು ತೋರಿಸಿದೆ ಎಂದು ಖುರೇಷಿ ಹೇಳಿದರು. ಆದರೆ, ಬರೇಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್‌ಪೆಕ್ಟರ್ ಜನರಲ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಬರೇಲಿಯ ಉನ್ನತ ಅಧಿಕಾರಿಗಳಿಗೆ ಲಿಖಿತ ದೂರುಗಳನ್ನು ಸಲ್ಲಿಸಿದ್ದರೂ, ಈ ಬಗ್ಗೆ ಯಾವುದೇ ಎಫ್‌ಐಆರ್ ದಾಖಲಿಸಿರಲಿಲ್ಲ ಎಂದು ಅವರು ಹೇಳಿದರು.
ಆದರೆ ಸ್ಥಳದಲ್ಲಿ ಪೊಲೀಸ್ ತಂಡದ ಮೇಲೆ ಹಲ್ಲೆ ಮಾಡಿದ್ದಾರೆಂದು ಪೊಲೀಸರು ತನ್ನ ಮತ್ತು ಇತರ ಗ್ರಾಮಸ್ಥರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ರಾಜೀವ್ ಗಾಂಧಿಯ ರಾಜಕೀಯ ಜೀವನ ಕ್ರೂರ ರೀತಿಯಲ್ಲಿ ಕೊನೆಗೊಂಡಿದೆ: ಸೋನಿಯಾ ಗಾಂಧಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...