Homeಮುಖಪುಟಉತ್ತರಪ್ರದೇಶ; ಮುಸ್ಲಿಂ ಬಾಲಕನ ಥಳಿಸಿ ಕೊಲೆ; ಐವರು ಪೊಲೀಸರ ಮೇಲೆ ಎಫ್ ಐಆರ್

ಉತ್ತರಪ್ರದೇಶ; ಮುಸ್ಲಿಂ ಬಾಲಕನ ಥಳಿಸಿ ಕೊಲೆ; ಐವರು ಪೊಲೀಸರ ಮೇಲೆ ಎಫ್ ಐಆರ್

- Advertisement -
ಉತ್ತರಪ್ರದೇಶದ ಬರೇಲಿಯಲ್ಲಿ ಮಾಂಸದ  ಫ್ಯಾಕ್ಟರಿಯಿಂದ  ಮನೆಗೆ ಬರುವಾಗ 17 ವರ್ಷದ ಬಾಲಕನ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆತನಿಗೆ ಥಳಿಸಿ ಕೊಲೆ ಮಾಡಿದ ಆರೋಪದ ಮೇಲೆ ಐವರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.
17 ವರ್ಷದ ಅರ್ಕನ್ ಅಲಿ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ ಎಂದು ಬರೇಲಿ ಪೊಲೀಸರು ಹೇಳಿಕೊಂಡಿದ್ದರು. ಆದರೆ ಘಟನೆ ನಡೆದು ನಾಲ್ಕು ತಿಂಗಳ ಬಳಿಕ ಇದೀಗ  ನ್ಯಾಯಾಲಯದ ಆದೇಶದ ಮೇರೆಗೆ  ಆ.17ರಂದು ಬರೇಲಿಯ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ತಂದೆ ಪಪ್ಪು ಖುರೇಷಿ ಅವರ ದೂರಿನ ಮೇರೆಗೆ ಬಿತ್ರಿ ಚೈನ್‌ಪುರ ಠಾಣಾಧಿಕಾರಿ ಅಶ್ವಿನಿ ಕುಮಾರ್ ಚೌಬೆ, ಸಬ್ ಇನ್ಸ್‌ಪೆಕ್ಟರ್ ಧರ್ಮೇಂದ್ರ ಕುಮಾರ್, ಕಾನ್‌ಸ್ಟೆಬಲ್‌ಗಳಾದ ರಾಜೇಶ್, ವಿಪಿನ್ ಕಂಡ್ವಾಲ್ ಮತ್ತು ಹೋಮ್ ಗಾರ್ಡ್ ವೀರಪಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳ ಮೇಲೆ ನರಹತ್ಯೆ, ಸುಲಿಗೆ, ಕ್ರಿಮಿನಲ್ ಪಿತೂರಿ, ದರೋಡೆ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ತನ್ನ ಮಗನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಲ್ಲದೆ, ಆತನಿಂದ 30,400 ರೂಪಾಯಿ ದೋಚಿದ್ದಾರೆ ಎಂದು ಪಪ್ಪು ಖುರೇಷಿ ಆರೋಪಿಸಿದ್ದಾರೆ.
ಎಪ್ರಿಲ್ 17 ರಂದು ಅರ್ಕಾನ್ ಅವರು ಎಮ್ಮೆ ಸಾಗಿಸಿದ  ಹಣವನ್ನು ಸಂಗ್ರಹಿಸಲು ಮಾರಿಯಾ ಫ್ರೋಜನ್ ಮಾಂಸದ ಕಾರ್ಖಾನೆಗೆ ಹೋದಾಗ ಈ ಘಟನೆ ನಡೆದಿದೆ. ಅರ್ಕಾನ್ ಗೆ ತಂದೆ ಖುರೇಷಿ 11.30 ರವರೆಗೆ ಕಾಯುತ್ತಾ ಕುಳಿತಿದ್ದರು. ಬಳಿಕ ಕರೆ ಮಾಡಿದಾಗ, ಆತ ಹಣ ತೆಗೆದುಕೊಂಡಿದ್ದು ಮನೆಗೆ ಬರುತ್ತಿರುವುದಾಗಿ ಹೇಳಿದ್ದ. ಆದರೆ ಮತ್ತೆ 11:45 ಕ್ಕೆ ನನಗೆ ಮಗನ ಫೋನ್ ನಿಂದ ಕರೆ ಬಂದಿದೆ. ಆಗ ತನ್ನನ್ನು ಪೊಲೀಸ್ ಎಂದು ಹೇಳಿಕೊಂಡ ವ್ಯಕ್ತಿ 50,000 ರೂಪಾಯಿಯೊಂದಿಗೆ ಬೇಗ ಸ್ಥಳಕ್ಕೆ ತಲುಪುವಂತೆ ಖುರೇಷಿಗೆ ಕೇಳಿಕೊಂಡಿದ್ದಾನೆ . ಇಲ್ಲವಾದರೆ  ಮಗನ ಮೇಲೆ  ಗೋಹತ್ಯೆಯ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಬೆದರಿಸಿದ್ದರು ಎಂದು ಎಫ್‌ಐಆರ್  ನಲ್ಲಿ ಹೇಳಲಾಗಿದೆ.
ಇದರಿಂದ ಭಯಗೊಂಡ ಖುರೇಷಿ  ಸ್ಥಳೀಯರ ಜೊತೆ ಬರೇಲಿಯ ಕಂಟೋನ್ಮೆಂಟ್ ಪ್ರದೇಶದ ಬಿಲಾಲ್ ಮಸೀದಿ ಪ್ರದೇಶಕ್ಕೆ ಹೋಗಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್, ಕಾನ್‌ಸ್ಟೆಬಲ್‌ಗಳು ಮತ್ತು ಹೋಮ್ ಗಾರ್ಡ್ ತನ್ನ ಮಗನನ್ನು ಅಮಾನುಷವಾಗಿ ಥಳಿಸುವುದನ್ನು ನಾನು ನೋಡಿದ್ದೇನೆ ಎಂದು ಅವರು ಆರೋಪಿಸಿದ್ದಾರೆ.
ಮಗ ರಕ್ತದ ಮಡುವಿನಲ್ಲಿ ನೆಲದ ಮೇಲೆ ಮಲಗಿದ್ದ. ಸ್ಥಳದಲ್ಲಿ ಬಿಳಿ ಕಾರು ಮತ್ತು ಬೈಕ್ ನಿಂತಿತ್ತು.  ಗ್ರಾಮದ ಮುಖ್ಯಸ್ಥ ಪೋನ್  ಕರೆ ಮಾಡಿದ ನಂತರ SHO ಚೌಬೆ ತಮ್ಮ ತಂಡದೊಂದಿಗೆ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಅವರು ಎಸ್ ಎಚ್ ಒ ಪೊಲೀಸರನ್ನು ಸಮರ್ಥಿಸಿಕೊಂಡಿದ್ದಾರೆ.  ವಾದಿಸಿದರೆ ಗ್ರಾಮಕ್ಕೆ ಬೆಂಕಿ ಹಚ್ಚುವುದಾಗಿ ಹಾಗೂ ಶೂಟ್ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮೇ 4 ರಂದು ಸ್ಥಳೀಯ ನ್ಯಾಯಾಲಯದಲ್ಲಿ CrPC 156 (3) ಅಡಿಯಲ್ಲಿ ಸಲ್ಲಿಸಿದ ಅರ್ಜಿಯಲ್ಲಿ, ಖುರೇಷಿ ಅವರು ಸ್ಥಳೀಯರು ಚಿತ್ರೀಕರಿಸಿದ  ವೀಡಿಯೊವನ್ನು ನ್ಯಾಯಾಲಯಕ್ಕೆ  ಸಲ್ಲಿಸಿದರು ಮತ್ತು ಪೊಲೀಸ್ ಅಧಿಕಾರಿಯು ಅವರಿಗೆ ಬೆದರಿಕೆ ಹಾಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು.
ಬಾಲಕ ತಲೆಗೆ ಆದ ಗಾಯದಿಂದ ಮೃತಪಟ್ಟಿದ್ದಾನೆಂದು ಖುರೇಷಿ ಹೇಳಿದ್ದು, ಗಾಯದ ನಿಜವಾದ ಸ್ವರೂಪ ಅಥವಾ ನಿಖರವಾದ ಕಾರಣದ ಬಗ್ಗೆ ಯಾವುದೇ ಸ್ಪಷ್ಟತೆ  ಇಲ್ಲ ಎಂದು ಹೇಳಿದ್ದಾರೆ.
ಮರಣೊತ್ತರ ಪರೀಕ್ಷೆ ವರದಿಯು ತನ್ನ ಮಗನ ದೇಹದಲ್ಲಿ “16 ಗಾಯಗಳು” ಇದೆ ಎಂದು ತೋರಿಸಿದೆ ಎಂದು ಖುರೇಷಿ ಹೇಳಿದರು. ಆದರೆ, ಬರೇಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್‌ಪೆಕ್ಟರ್ ಜನರಲ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಬರೇಲಿಯ ಉನ್ನತ ಅಧಿಕಾರಿಗಳಿಗೆ ಲಿಖಿತ ದೂರುಗಳನ್ನು ಸಲ್ಲಿಸಿದ್ದರೂ, ಈ ಬಗ್ಗೆ ಯಾವುದೇ ಎಫ್‌ಐಆರ್ ದಾಖಲಿಸಿರಲಿಲ್ಲ ಎಂದು ಅವರು ಹೇಳಿದರು.
ಆದರೆ ಸ್ಥಳದಲ್ಲಿ ಪೊಲೀಸ್ ತಂಡದ ಮೇಲೆ ಹಲ್ಲೆ ಮಾಡಿದ್ದಾರೆಂದು ಪೊಲೀಸರು ತನ್ನ ಮತ್ತು ಇತರ ಗ್ರಾಮಸ್ಥರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ರಾಜೀವ್ ಗಾಂಧಿಯ ರಾಜಕೀಯ ಜೀವನ ಕ್ರೂರ ರೀತಿಯಲ್ಲಿ ಕೊನೆಗೊಂಡಿದೆ: ಸೋನಿಯಾ ಗಾಂಧಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...