Homeಮುಖಪುಟಉತ್ತರಪ್ರದೇಶ; ಮುಸ್ಲಿಂ ಬಾಲಕನ ಥಳಿಸಿ ಕೊಲೆ; ಐವರು ಪೊಲೀಸರ ಮೇಲೆ ಎಫ್ ಐಆರ್

ಉತ್ತರಪ್ರದೇಶ; ಮುಸ್ಲಿಂ ಬಾಲಕನ ಥಳಿಸಿ ಕೊಲೆ; ಐವರು ಪೊಲೀಸರ ಮೇಲೆ ಎಫ್ ಐಆರ್

- Advertisement -
ಉತ್ತರಪ್ರದೇಶದ ಬರೇಲಿಯಲ್ಲಿ ಮಾಂಸದ  ಫ್ಯಾಕ್ಟರಿಯಿಂದ  ಮನೆಗೆ ಬರುವಾಗ 17 ವರ್ಷದ ಬಾಲಕನ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆತನಿಗೆ ಥಳಿಸಿ ಕೊಲೆ ಮಾಡಿದ ಆರೋಪದ ಮೇಲೆ ಐವರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.
17 ವರ್ಷದ ಅರ್ಕನ್ ಅಲಿ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ ಎಂದು ಬರೇಲಿ ಪೊಲೀಸರು ಹೇಳಿಕೊಂಡಿದ್ದರು. ಆದರೆ ಘಟನೆ ನಡೆದು ನಾಲ್ಕು ತಿಂಗಳ ಬಳಿಕ ಇದೀಗ  ನ್ಯಾಯಾಲಯದ ಆದೇಶದ ಮೇರೆಗೆ  ಆ.17ರಂದು ಬರೇಲಿಯ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ತಂದೆ ಪಪ್ಪು ಖುರೇಷಿ ಅವರ ದೂರಿನ ಮೇರೆಗೆ ಬಿತ್ರಿ ಚೈನ್‌ಪುರ ಠಾಣಾಧಿಕಾರಿ ಅಶ್ವಿನಿ ಕುಮಾರ್ ಚೌಬೆ, ಸಬ್ ಇನ್ಸ್‌ಪೆಕ್ಟರ್ ಧರ್ಮೇಂದ್ರ ಕುಮಾರ್, ಕಾನ್‌ಸ್ಟೆಬಲ್‌ಗಳಾದ ರಾಜೇಶ್, ವಿಪಿನ್ ಕಂಡ್ವಾಲ್ ಮತ್ತು ಹೋಮ್ ಗಾರ್ಡ್ ವೀರಪಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳ ಮೇಲೆ ನರಹತ್ಯೆ, ಸುಲಿಗೆ, ಕ್ರಿಮಿನಲ್ ಪಿತೂರಿ, ದರೋಡೆ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ತನ್ನ ಮಗನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಲ್ಲದೆ, ಆತನಿಂದ 30,400 ರೂಪಾಯಿ ದೋಚಿದ್ದಾರೆ ಎಂದು ಪಪ್ಪು ಖುರೇಷಿ ಆರೋಪಿಸಿದ್ದಾರೆ.
ಎಪ್ರಿಲ್ 17 ರಂದು ಅರ್ಕಾನ್ ಅವರು ಎಮ್ಮೆ ಸಾಗಿಸಿದ  ಹಣವನ್ನು ಸಂಗ್ರಹಿಸಲು ಮಾರಿಯಾ ಫ್ರೋಜನ್ ಮಾಂಸದ ಕಾರ್ಖಾನೆಗೆ ಹೋದಾಗ ಈ ಘಟನೆ ನಡೆದಿದೆ. ಅರ್ಕಾನ್ ಗೆ ತಂದೆ ಖುರೇಷಿ 11.30 ರವರೆಗೆ ಕಾಯುತ್ತಾ ಕುಳಿತಿದ್ದರು. ಬಳಿಕ ಕರೆ ಮಾಡಿದಾಗ, ಆತ ಹಣ ತೆಗೆದುಕೊಂಡಿದ್ದು ಮನೆಗೆ ಬರುತ್ತಿರುವುದಾಗಿ ಹೇಳಿದ್ದ. ಆದರೆ ಮತ್ತೆ 11:45 ಕ್ಕೆ ನನಗೆ ಮಗನ ಫೋನ್ ನಿಂದ ಕರೆ ಬಂದಿದೆ. ಆಗ ತನ್ನನ್ನು ಪೊಲೀಸ್ ಎಂದು ಹೇಳಿಕೊಂಡ ವ್ಯಕ್ತಿ 50,000 ರೂಪಾಯಿಯೊಂದಿಗೆ ಬೇಗ ಸ್ಥಳಕ್ಕೆ ತಲುಪುವಂತೆ ಖುರೇಷಿಗೆ ಕೇಳಿಕೊಂಡಿದ್ದಾನೆ . ಇಲ್ಲವಾದರೆ  ಮಗನ ಮೇಲೆ  ಗೋಹತ್ಯೆಯ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಬೆದರಿಸಿದ್ದರು ಎಂದು ಎಫ್‌ಐಆರ್  ನಲ್ಲಿ ಹೇಳಲಾಗಿದೆ.
ಇದರಿಂದ ಭಯಗೊಂಡ ಖುರೇಷಿ  ಸ್ಥಳೀಯರ ಜೊತೆ ಬರೇಲಿಯ ಕಂಟೋನ್ಮೆಂಟ್ ಪ್ರದೇಶದ ಬಿಲಾಲ್ ಮಸೀದಿ ಪ್ರದೇಶಕ್ಕೆ ಹೋಗಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್, ಕಾನ್‌ಸ್ಟೆಬಲ್‌ಗಳು ಮತ್ತು ಹೋಮ್ ಗಾರ್ಡ್ ತನ್ನ ಮಗನನ್ನು ಅಮಾನುಷವಾಗಿ ಥಳಿಸುವುದನ್ನು ನಾನು ನೋಡಿದ್ದೇನೆ ಎಂದು ಅವರು ಆರೋಪಿಸಿದ್ದಾರೆ.
ಮಗ ರಕ್ತದ ಮಡುವಿನಲ್ಲಿ ನೆಲದ ಮೇಲೆ ಮಲಗಿದ್ದ. ಸ್ಥಳದಲ್ಲಿ ಬಿಳಿ ಕಾರು ಮತ್ತು ಬೈಕ್ ನಿಂತಿತ್ತು.  ಗ್ರಾಮದ ಮುಖ್ಯಸ್ಥ ಪೋನ್  ಕರೆ ಮಾಡಿದ ನಂತರ SHO ಚೌಬೆ ತಮ್ಮ ತಂಡದೊಂದಿಗೆ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಅವರು ಎಸ್ ಎಚ್ ಒ ಪೊಲೀಸರನ್ನು ಸಮರ್ಥಿಸಿಕೊಂಡಿದ್ದಾರೆ.  ವಾದಿಸಿದರೆ ಗ್ರಾಮಕ್ಕೆ ಬೆಂಕಿ ಹಚ್ಚುವುದಾಗಿ ಹಾಗೂ ಶೂಟ್ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮೇ 4 ರಂದು ಸ್ಥಳೀಯ ನ್ಯಾಯಾಲಯದಲ್ಲಿ CrPC 156 (3) ಅಡಿಯಲ್ಲಿ ಸಲ್ಲಿಸಿದ ಅರ್ಜಿಯಲ್ಲಿ, ಖುರೇಷಿ ಅವರು ಸ್ಥಳೀಯರು ಚಿತ್ರೀಕರಿಸಿದ  ವೀಡಿಯೊವನ್ನು ನ್ಯಾಯಾಲಯಕ್ಕೆ  ಸಲ್ಲಿಸಿದರು ಮತ್ತು ಪೊಲೀಸ್ ಅಧಿಕಾರಿಯು ಅವರಿಗೆ ಬೆದರಿಕೆ ಹಾಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು.
ಬಾಲಕ ತಲೆಗೆ ಆದ ಗಾಯದಿಂದ ಮೃತಪಟ್ಟಿದ್ದಾನೆಂದು ಖುರೇಷಿ ಹೇಳಿದ್ದು, ಗಾಯದ ನಿಜವಾದ ಸ್ವರೂಪ ಅಥವಾ ನಿಖರವಾದ ಕಾರಣದ ಬಗ್ಗೆ ಯಾವುದೇ ಸ್ಪಷ್ಟತೆ  ಇಲ್ಲ ಎಂದು ಹೇಳಿದ್ದಾರೆ.
ಮರಣೊತ್ತರ ಪರೀಕ್ಷೆ ವರದಿಯು ತನ್ನ ಮಗನ ದೇಹದಲ್ಲಿ “16 ಗಾಯಗಳು” ಇದೆ ಎಂದು ತೋರಿಸಿದೆ ಎಂದು ಖುರೇಷಿ ಹೇಳಿದರು. ಆದರೆ, ಬರೇಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್‌ಪೆಕ್ಟರ್ ಜನರಲ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಬರೇಲಿಯ ಉನ್ನತ ಅಧಿಕಾರಿಗಳಿಗೆ ಲಿಖಿತ ದೂರುಗಳನ್ನು ಸಲ್ಲಿಸಿದ್ದರೂ, ಈ ಬಗ್ಗೆ ಯಾವುದೇ ಎಫ್‌ಐಆರ್ ದಾಖಲಿಸಿರಲಿಲ್ಲ ಎಂದು ಅವರು ಹೇಳಿದರು.
ಆದರೆ ಸ್ಥಳದಲ್ಲಿ ಪೊಲೀಸ್ ತಂಡದ ಮೇಲೆ ಹಲ್ಲೆ ಮಾಡಿದ್ದಾರೆಂದು ಪೊಲೀಸರು ತನ್ನ ಮತ್ತು ಇತರ ಗ್ರಾಮಸ್ಥರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ರಾಜೀವ್ ಗಾಂಧಿಯ ರಾಜಕೀಯ ಜೀವನ ಕ್ರೂರ ರೀತಿಯಲ್ಲಿ ಕೊನೆಗೊಂಡಿದೆ: ಸೋನಿಯಾ ಗಾಂಧಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...