Homeಮುಖಪುಟಉತ್ತರಪ್ರದೇಶ; ಮುಸ್ಲಿಂ ಬಾಲಕನ ಥಳಿಸಿ ಕೊಲೆ; ಐವರು ಪೊಲೀಸರ ಮೇಲೆ ಎಫ್ ಐಆರ್

ಉತ್ತರಪ್ರದೇಶ; ಮುಸ್ಲಿಂ ಬಾಲಕನ ಥಳಿಸಿ ಕೊಲೆ; ಐವರು ಪೊಲೀಸರ ಮೇಲೆ ಎಫ್ ಐಆರ್

- Advertisement -
ಉತ್ತರಪ್ರದೇಶದ ಬರೇಲಿಯಲ್ಲಿ ಮಾಂಸದ  ಫ್ಯಾಕ್ಟರಿಯಿಂದ  ಮನೆಗೆ ಬರುವಾಗ 17 ವರ್ಷದ ಬಾಲಕನ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆತನಿಗೆ ಥಳಿಸಿ ಕೊಲೆ ಮಾಡಿದ ಆರೋಪದ ಮೇಲೆ ಐವರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.
17 ವರ್ಷದ ಅರ್ಕನ್ ಅಲಿ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ ಎಂದು ಬರೇಲಿ ಪೊಲೀಸರು ಹೇಳಿಕೊಂಡಿದ್ದರು. ಆದರೆ ಘಟನೆ ನಡೆದು ನಾಲ್ಕು ತಿಂಗಳ ಬಳಿಕ ಇದೀಗ  ನ್ಯಾಯಾಲಯದ ಆದೇಶದ ಮೇರೆಗೆ  ಆ.17ರಂದು ಬರೇಲಿಯ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ತಂದೆ ಪಪ್ಪು ಖುರೇಷಿ ಅವರ ದೂರಿನ ಮೇರೆಗೆ ಬಿತ್ರಿ ಚೈನ್‌ಪುರ ಠಾಣಾಧಿಕಾರಿ ಅಶ್ವಿನಿ ಕುಮಾರ್ ಚೌಬೆ, ಸಬ್ ಇನ್ಸ್‌ಪೆಕ್ಟರ್ ಧರ್ಮೇಂದ್ರ ಕುಮಾರ್, ಕಾನ್‌ಸ್ಟೆಬಲ್‌ಗಳಾದ ರಾಜೇಶ್, ವಿಪಿನ್ ಕಂಡ್ವಾಲ್ ಮತ್ತು ಹೋಮ್ ಗಾರ್ಡ್ ವೀರಪಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳ ಮೇಲೆ ನರಹತ್ಯೆ, ಸುಲಿಗೆ, ಕ್ರಿಮಿನಲ್ ಪಿತೂರಿ, ದರೋಡೆ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ತನ್ನ ಮಗನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಲ್ಲದೆ, ಆತನಿಂದ 30,400 ರೂಪಾಯಿ ದೋಚಿದ್ದಾರೆ ಎಂದು ಪಪ್ಪು ಖುರೇಷಿ ಆರೋಪಿಸಿದ್ದಾರೆ.
ಎಪ್ರಿಲ್ 17 ರಂದು ಅರ್ಕಾನ್ ಅವರು ಎಮ್ಮೆ ಸಾಗಿಸಿದ  ಹಣವನ್ನು ಸಂಗ್ರಹಿಸಲು ಮಾರಿಯಾ ಫ್ರೋಜನ್ ಮಾಂಸದ ಕಾರ್ಖಾನೆಗೆ ಹೋದಾಗ ಈ ಘಟನೆ ನಡೆದಿದೆ. ಅರ್ಕಾನ್ ಗೆ ತಂದೆ ಖುರೇಷಿ 11.30 ರವರೆಗೆ ಕಾಯುತ್ತಾ ಕುಳಿತಿದ್ದರು. ಬಳಿಕ ಕರೆ ಮಾಡಿದಾಗ, ಆತ ಹಣ ತೆಗೆದುಕೊಂಡಿದ್ದು ಮನೆಗೆ ಬರುತ್ತಿರುವುದಾಗಿ ಹೇಳಿದ್ದ. ಆದರೆ ಮತ್ತೆ 11:45 ಕ್ಕೆ ನನಗೆ ಮಗನ ಫೋನ್ ನಿಂದ ಕರೆ ಬಂದಿದೆ. ಆಗ ತನ್ನನ್ನು ಪೊಲೀಸ್ ಎಂದು ಹೇಳಿಕೊಂಡ ವ್ಯಕ್ತಿ 50,000 ರೂಪಾಯಿಯೊಂದಿಗೆ ಬೇಗ ಸ್ಥಳಕ್ಕೆ ತಲುಪುವಂತೆ ಖುರೇಷಿಗೆ ಕೇಳಿಕೊಂಡಿದ್ದಾನೆ . ಇಲ್ಲವಾದರೆ  ಮಗನ ಮೇಲೆ  ಗೋಹತ್ಯೆಯ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಬೆದರಿಸಿದ್ದರು ಎಂದು ಎಫ್‌ಐಆರ್  ನಲ್ಲಿ ಹೇಳಲಾಗಿದೆ.
ಇದರಿಂದ ಭಯಗೊಂಡ ಖುರೇಷಿ  ಸ್ಥಳೀಯರ ಜೊತೆ ಬರೇಲಿಯ ಕಂಟೋನ್ಮೆಂಟ್ ಪ್ರದೇಶದ ಬಿಲಾಲ್ ಮಸೀದಿ ಪ್ರದೇಶಕ್ಕೆ ಹೋಗಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್, ಕಾನ್‌ಸ್ಟೆಬಲ್‌ಗಳು ಮತ್ತು ಹೋಮ್ ಗಾರ್ಡ್ ತನ್ನ ಮಗನನ್ನು ಅಮಾನುಷವಾಗಿ ಥಳಿಸುವುದನ್ನು ನಾನು ನೋಡಿದ್ದೇನೆ ಎಂದು ಅವರು ಆರೋಪಿಸಿದ್ದಾರೆ.
ಮಗ ರಕ್ತದ ಮಡುವಿನಲ್ಲಿ ನೆಲದ ಮೇಲೆ ಮಲಗಿದ್ದ. ಸ್ಥಳದಲ್ಲಿ ಬಿಳಿ ಕಾರು ಮತ್ತು ಬೈಕ್ ನಿಂತಿತ್ತು.  ಗ್ರಾಮದ ಮುಖ್ಯಸ್ಥ ಪೋನ್  ಕರೆ ಮಾಡಿದ ನಂತರ SHO ಚೌಬೆ ತಮ್ಮ ತಂಡದೊಂದಿಗೆ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಅವರು ಎಸ್ ಎಚ್ ಒ ಪೊಲೀಸರನ್ನು ಸಮರ್ಥಿಸಿಕೊಂಡಿದ್ದಾರೆ.  ವಾದಿಸಿದರೆ ಗ್ರಾಮಕ್ಕೆ ಬೆಂಕಿ ಹಚ್ಚುವುದಾಗಿ ಹಾಗೂ ಶೂಟ್ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮೇ 4 ರಂದು ಸ್ಥಳೀಯ ನ್ಯಾಯಾಲಯದಲ್ಲಿ CrPC 156 (3) ಅಡಿಯಲ್ಲಿ ಸಲ್ಲಿಸಿದ ಅರ್ಜಿಯಲ್ಲಿ, ಖುರೇಷಿ ಅವರು ಸ್ಥಳೀಯರು ಚಿತ್ರೀಕರಿಸಿದ  ವೀಡಿಯೊವನ್ನು ನ್ಯಾಯಾಲಯಕ್ಕೆ  ಸಲ್ಲಿಸಿದರು ಮತ್ತು ಪೊಲೀಸ್ ಅಧಿಕಾರಿಯು ಅವರಿಗೆ ಬೆದರಿಕೆ ಹಾಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು.
ಬಾಲಕ ತಲೆಗೆ ಆದ ಗಾಯದಿಂದ ಮೃತಪಟ್ಟಿದ್ದಾನೆಂದು ಖುರೇಷಿ ಹೇಳಿದ್ದು, ಗಾಯದ ನಿಜವಾದ ಸ್ವರೂಪ ಅಥವಾ ನಿಖರವಾದ ಕಾರಣದ ಬಗ್ಗೆ ಯಾವುದೇ ಸ್ಪಷ್ಟತೆ  ಇಲ್ಲ ಎಂದು ಹೇಳಿದ್ದಾರೆ.
ಮರಣೊತ್ತರ ಪರೀಕ್ಷೆ ವರದಿಯು ತನ್ನ ಮಗನ ದೇಹದಲ್ಲಿ “16 ಗಾಯಗಳು” ಇದೆ ಎಂದು ತೋರಿಸಿದೆ ಎಂದು ಖುರೇಷಿ ಹೇಳಿದರು. ಆದರೆ, ಬರೇಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್‌ಪೆಕ್ಟರ್ ಜನರಲ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಬರೇಲಿಯ ಉನ್ನತ ಅಧಿಕಾರಿಗಳಿಗೆ ಲಿಖಿತ ದೂರುಗಳನ್ನು ಸಲ್ಲಿಸಿದ್ದರೂ, ಈ ಬಗ್ಗೆ ಯಾವುದೇ ಎಫ್‌ಐಆರ್ ದಾಖಲಿಸಿರಲಿಲ್ಲ ಎಂದು ಅವರು ಹೇಳಿದರು.
ಆದರೆ ಸ್ಥಳದಲ್ಲಿ ಪೊಲೀಸ್ ತಂಡದ ಮೇಲೆ ಹಲ್ಲೆ ಮಾಡಿದ್ದಾರೆಂದು ಪೊಲೀಸರು ತನ್ನ ಮತ್ತು ಇತರ ಗ್ರಾಮಸ್ಥರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ರಾಜೀವ್ ಗಾಂಧಿಯ ರಾಜಕೀಯ ಜೀವನ ಕ್ರೂರ ರೀತಿಯಲ್ಲಿ ಕೊನೆಗೊಂಡಿದೆ: ಸೋನಿಯಾ ಗಾಂಧಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...