Homeಎಕಾನಮಿಆರ್ಥಿಕ ಕುಸಿತವನ್ನು ಮೋದಿ ಸರ್ಕಾರ ಒಪ್ಪಿಕೊಳ್ಳದಿರುವುದರಿಂದ ಗಂಭೀರ ಸಮಸ್ಯೆಯತ್ತ ನಡೆಯುತ್ತಿದ್ದೇವೆ; ಯೋಗೇಂದ್ರ ಯಾದವ್

ಆರ್ಥಿಕ ಕುಸಿತವನ್ನು ಮೋದಿ ಸರ್ಕಾರ ಒಪ್ಪಿಕೊಳ್ಳದಿರುವುದರಿಂದ ಗಂಭೀರ ಸಮಸ್ಯೆಯತ್ತ ನಡೆಯುತ್ತಿದ್ದೇವೆ; ಯೋಗೇಂದ್ರ ಯಾದವ್

- Advertisement -
- Advertisement -

ನಮ್ಮ ದೇಶ ಆರ್ಥಿಕ ಹಿಂಜರಿತದತ್ತ ಸಾಗುತ್ತಿದೆಯೇ? ಇನ್ನು ಈ ಪ್ರಶ್ನೆಯನ್ನು ಕೇಳದೇ ಇರಲು ಆಗುವುದಿಲ್ಲ. ಒಂದು ಕಡೆ ಇಡೀ ದೇಶವೇ ಜಮ್ಮು ಮತ್ತು ಕಾಶ್ಮೀರದ ಪ್ರಶ್ನೆಯಲ್ಲಿ ಸಿಲುಕಿಕೊಂಡಿದ್ದರೆ ಅದೇ ಸಮಯದಲ್ಲಿ ದೇಶದ ಅರ್ಥವ್ಯವಸ್ಥೆಯು ನಿಧಾನವಾಗಿ ಕುಸಿಯುತ್ತಿದೆ. ಮೊದಲು ಸಮಸ್ಯೆಯಾಗಿ ಕಂಡುಬಂದಿದ್ದು, ಈಗ ಸಂಕಟದ ರೂಪ ಪಡೆದುಕೊಳ್ಳುತ್ತಿದೆ.

ಇತ್ತೀಚಿಗೆ ರಿಸರ್ವ್ ಬ್ಯಾಂಕಿನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಆರ್ಥಿಕ ಹಿಂಜರಿತದ ಲಕ್ಷಣಗಳು ಚಿಂತಾಜನಕವಾಗಿವೆ, ಇದಕ್ಕೆ ತುರ್ತಾಗಿ ಏನಾದರೂ ಮಾಡಬೇಕಾದ ಅಗತ್ಯವಿದೆ ಎಂದು ಎಚ್ಚರಿಸಿದರು. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ಇದೇ ರಘುರಾಮ್ ರಾಜನ್ ಅವರು ವಿಶ್ವದಲ್ಲಿ 2008ರ ಆರ್ಥಿಕ ಹಿಂಜರಿತದ ಸಮಯದಲ್ಲಿ ಮುಂದೆ ಹೀಗಾಗುವುದಿದೆ ಎನ್ನುವ ಭವಿಷ್ಯವಾಣಿ ನುಡಿದಿದ್ದ ಅರ್ಥಶಾಸ್ತ್ರಜ್ಞರಾಗಿದ್ದಾರೆ. ಹಾಗಾಗಿ ಅವರ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಲೇಬೇಕಿದೆ.

ಕಳೆದ ಕೆಲವು ದಿನಗಳಲ್ಲಿ ಅರ್ಥವ್ಯವಸ್ಥೆಯ ಭಿನ್ನಭಿನ್ನ ಕ್ಷೇತ್ರಗಳಿಂದ ಕೆಟ್ಟ ಸುದ್ದಿಗಳು ಬರುತ್ತಿವೆ. ಆಟೋ ಉದ್ಯಮದಲ್ಲಿ ಹಿಂಜರಿತ ಮತ್ತು ಕೆಲಸಗಾರರನ್ನು ಕೆಲಸದಿಂದ ತೆಗೆದುಹಾಕುವ ವಿಷಯ ಈಗ ಸಾಮಾನ್ಯ ವಿಷಯವಾಗಿಬಿಟ್ಟಿದೆ. ಪರಿಸ್ಥಿತಿ ಎಷ್ಟು ಹದಗೆಟ್ಟಿದೆಯೆಂದರೆ, ರಾಹುಲ್ ಬಜಾಜ್‍ರಂತಹ ಉದ್ಯಮಿಯೇ ಅರ್ಥವ್ಯವಸ್ಥೆಯಲ್ಲಿ ಬೇಡಿಕೆ ಇಲ್ಲ ಹಾಗೂ ಹೂಡಿಕೆಯೂ ಇಲ್ಲದಿರುವಾಗ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಕೇಳಬೇಕಾಯಿತು. ರೈತರ ಸಂಘಟನೆಗಳು ಹಾಗೂ ಡೇರಿ ಉತ್ಪಾದಕರೂ ಸಹ ಅನೇಕ ದಿನಗಳಿಂದ ತಮ್ಮ ಸಂಕಷ್ಟವನ್ನು ತೋಡಿಕೊಳ್ಳುತ್ತಿದ್ದಾರೆ. ಈಗ ಬಟ್ಟೆ ತಯಾರಕರು ಆ ಕ್ಷೇತ್ರದಲ್ಲಿ ಪರಿಸ್ಥಿತಿ ದಿನೇದಿನೆ ಕೆಡುತ್ತಿದೆ ಎಂದು ನಿರ್ದಿಷ್ಟವಾಗಿ ಜಾಹೀರಾತನ್ನೇ ಪ್ರಕಟಿಸಿದ್ದಾರೆ. ಪ್ರಾಪರ್ಟಿಯ ವ್ಯಾಪಾರ ಹಲವು ವರ್ಷಗಳಿಂದ ನಿಧಾನವಾಗಿದೆ. ನೋಟುರದ್ದತಿಯ ಸಮಯದಿಂದಲೇ ಚಿಲ್ಲರೆ ವ್ಯಾಪಾರಿಗಳು ತಮ್ಮ ವ್ಯಾಪಾರ ಹದಗಟ್ಟಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಆದಾಗ್ಯೂ ಜನರ ಹೇಳಿಕೆಯ ಮೇಲೆ ಭರವಸೆ ಮಾಡುವುದರ ಬದಲಿಗೆ ನಿಜವಾದ ಅಂಕಿಅಂಶಗಳ ಆಧಾರದ ಮೇಲೆಯೇ ನಮ್ಮ ಅಭಿಪ್ರಾಯ ರೂಪಿಸಿಕೊಳ್ಳಬೇಕಿದೆ. ಇತ್ತೀಚಿಗೆ ಹಿಂಜರಿತವನ್ನು ಪುಷ್ಟೀಕರಿಸುವಂತಹ ಅನೇಕ ಅಂಕಿಅಂಶಗಳು ಬಂದಿವೆ. ಪ್ರತಿ ಮೂರು ತಿಂಗಳಿಗೊಮ್ಮೆ ಸರಕಾರ ಅರ್ಥವ್ಯವಸ್ಥೆಯ ಅಂಕಿಅಂಶಗಳನ್ನು ಬಿಡುಗಡೆ ಮಾಡುತ್ತದೆ. ಕಳೆದ 9 ತಿಂಗಳಿಂದ ಈ ಅಂಕಿಅಂಶಗಳ ಪ್ರಕಾರ ನಮ್ಮ ದೇಶದ ಅರ್ಥಿಕ ವೃದ್ಧಿಯ ದರ ಕಡಿಮೆಯಾಗುತ್ತಿದೆ. 9% ರಿಂದ 10% ದರದಲ್ಲಿ ವೃದ್ಧಿಯಾಗುತ್ತಿದ್ದ ನಮ್ಮ ಅರ್ಥವ್ಯವಸ್ಥೆ ಈಗ 5.8% ರ ದರಕ್ಕೆ ಕುಸಿದಿದೆ. ಕಳೆದ 20 ವರ್ಷಗಳಲ್ಲಿ ಸತತ ಮೂರು ತ್ರೈಮಾಸಿಕಗಳಲ್ಲೂ (quarterly) ಅಭಿವೃದ್ಧಿ ದರದಲ್ಲಿ ಕುಸಿತ ಕಂಡಿದ್ದು ಕೇವಲ ಮೂರು ಬಾರಿ. ನಿಸ್ಸಂಶಯವಾಗಿಯೂ ಆರ್ಥಿಕ ವೃದ್ಧಿಯ ವಾರ್ಷಿಕ ದರದಲ್ಲಿ ಇಳಿತ ಕಂಡುಬಂದಿದೆಯೇ ಹೊರತು ವೃದ್ಧಿ ನಿಂತಿಲ್ಲ, ಅಥವಾ ಅರ್ಥವ್ಯವಸ್ಥೆಯ ಸಂಕುಚಿತ ಇನ್ನೂ ಶುರು ಆಗಿಲ್ಲ. ಆದರೆ ಭಾರತೀಯ ಅರ್ಥವ್ಯವಸ್ಥೆಗೆ ವೃದ್ಧಿಯ ದರ ಹೆಚ್ಚುತ್ತ ಇರುವುದು ಅತ್ಯಂತ ಅವಶ್ಯಕವಾಗಿದೆ ಹಾಗಾಗಿ ಈ ಸುದ್ದಿಗಳು ಚಿಂತಾಜನಕವಾಗಿವೆ.

ಒಂದು ವೇಳೆ ಕಳೆದ ವರ್ಷ 2018ರಲ್ಲಿ ಜನೆವರಿಯಿಂದ ಮಾರ್ಚ್‍ತನಕದ ತ್ರೈಮಾಸಿಕ ಹಾಗೂ ಈ ವರ್ಷದ ಇವೇ ಮೂರು ತಿಂಗಳ ಹೋಲಿಕೆ ಮಾಡಿದರೆ ಸ್ಪಷ್ಟವಾಗುವುದೇನೆಂದರೆ ಸುಮಾರಾಗಿ ಎಲ್ಲಾ ಮಹತ್ವಪೂರ್ಣ ಕ್ಷೇತ್ರಗಳ ಅರ್ಥವ್ಯವಸ್ಥೆಯಲ್ಲಿ ಕುಸಿತ ಕಂಡುಬಂದಿದೆ. ಕಾರುಗಳು ಮಾರಾಟದಲ್ಲಿ ಕಳೆದ ಬಾರಿ 18% ವೃದ್ಧಿ ಆಗಿತ್ತು, ಈ ಬಾರಿ 23% ಕುಸಿತ ದಾಖಲೆಯಾಗಿದೆ. ಸ್ಕೂಟರ್ ಮತ್ತು ಇತರ ದ್ವೀಚಕ್ರ ವಾಹನಗಳಲ್ಲಿ ಕಳೆದ ಬಾರಿ 16% ಹೆಚ್ಚಳವಿತ್ತು ಆದರೆ ಈ ಬಾರಿ 12% ಕುಸಿತ ಕಾಣಿಸಿಕೊಂಡಿದೆ. ದೈನಂದಿಕ ಬಳಕೆಯ ಉಪಭೋಗದ ವಸ್ತುಗಳ ಮಾರಾಟದಲ್ಲಿ ಕಳೆದ ಬಾರಿಯ 12% ಹೆಚ್ಚಳದ ಹೋಲಿಕೆಯಲ್ಲಿ ಈ ಬಾರಿ ಕೇವಲ 5% ಹೆಚ್ಚಳವಾಗಿದೆ.

ಹೂಡಿಕೆಯಲ್ಲೂ ಇದೇ ಪ್ರವೃತ್ತಿಯನ್ನು ಕಾಣಬಹುದಾಗಿದೆ. ಕಳೆದ ವರ್ಷದ ಮೊದಲ ತ್ರೈಮಾಸಿಕದಲ್ಲಿ ಹೊಸ ಹೂಡಿಕೆಯ ಪ್ರೊಜೆಕ್ಟ್ ಗಳ ಮೊತ್ತದಲ್ಲಿ 13% ಹೆಚ್ಚಳವಾಗಿತ್ತು, ಆದರೆ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ 80% ಕಡಿಮೆ ಆಗಿದೆ. ಆರ್ಥಿಕ ಹಿಂಜರಿತವನ್ನು ಎದರುರಿಸುವುದರಲ್ಲಿ ಸರಕಾರಿ ವೆಚ್ಚದ ಮಹತ್ವಪೂರ್ಣ ಪಾತ್ರ ಇರುತ್ತದೆ. ಆದರೆ ಅದರಲ್ಲೂ ಕುಸಿತವೇ ಕಂಡುಬಂದಿದೆ. ಕಳೆದ ವರ್ಷದ ಮೊದಲ ತ್ರೈಮಾಸಿಕದಲ್ಲಿ ಸರಕಾರದ ಟ್ಯಾಕ್ಸ್ ಆದಾಯ 22% ಹೆಚ್ಚಾಗಿತ್ತು ಆದರೆ ಈ ವರ್ಷ ಕೇವಲ 1.5% ಹೆಚ್ಚಳ ಕಂಡಿದೆ. ರಫ್ತು ಮತ್ತು ಆಮದಿನ ಅಂತರ ಕಳೆದ ಬಾರಿ 15% ಹೆಚ್ಚಾಗಿತ್ತು ಆದರೆ ಈ ಬಾರಿ 1% ಕಡಿಮೆ ಆಗಿದೆ. ಈ ಎಲ್ಲ ಅಂಕಿಅಂಶಗಳು ಹೇಳುವುದೇನೆಂದರೆ ಆರ್ಥಿಕ ಹಿಂಜರಿತದ ಸತ್ಯವನ್ನು ಅಲ್ಲಗೆಳೆಯಲಾಗುವುದಿಲ್ಲ. ಒಂದು ವೇಳೆ ಇದೇ ಪ್ರವೃತ್ತಿ ಇನ್ನೆರಡು ತ್ರೈಮಾಸಿಕಳವರೆಗೆ ಮುಂದುವರೆದರೆ ಕಳೆದ ಮೂರು ದಶಕಗಳ ಅತ್ಯಂತ ಗಂಭೀರ ಸ್ಥಿತಿ ಎದುರಿಸಬೇಕಾಗುವುದು.

ಆರ್ಥಿಕ ಹಿಂಜರಿತವನ್ನು ನಿಭಾಯಿಸಲು ಸಾಧ್ಯವಿದೆ ಆದರೆ ಹಾಗೆ ಮಾಡಲು ಎಲ್ಲಕ್ಕಿಂತ ಮುಂಚೆ ಈ ವಾಸ್ತವವನ್ನು ಒಪ್ಪಿಕೊಳ್ಳಬೇಕಾಗುತ್ತದೆ. ದುರದೃಷ್ಟವಷಾತ್, ಸರಕಾರವು ಇಲ್ಲಿಯತನಕ ಈ ಸತ್ಯವನ್ನು ನೋಡಲು ನಿರಾಕರಿಸುತ್ತಿದೆ. ಜ್ವರದ ಚಿಕಿತ್ಸೆ ಮಾಡುವ ಬದಲಿಗೆ ಥರ್ಮಾಮೀಟರ್ ಅನ್ನು ಒಡೆದುಹಾಕುವಲ್ಲಿ ತನ್ನ ಗಮನವನ್ನು ಕೇಂದ್ರೀಕರಿಸಿದೆ. ಭಾರತದ ಅಂಕಿಅಂಶಗಳ ವಿಭಾಗ ಸಾಧನೆ ಎಷ್ಟಿದೆಯೆಂದರೆ, ವಿಶ್ವಾದ್ಯಂತ ಅದರ ಅಂಕಿಅಂಶಗಳನ್ನು ವಿಶ್ವಾಸಾರ್ಹ ಎಂದು ಪರಿಗಣಿಸಲಾಗುತ್ತದೆ. ಸ್ವತಃ ಮೋದಿ ಸರಕಾರದ ಮುಖ್ಯ ಆರ್ಥಿಕ ಸಲಹಾಕಾರರಾಗಿದ್ದ ಅರವಿಂದ್ ಸುಬ್ರಹ್ಮಣ್ಯಮ್ ಅವರು ಹೇಳುವುದೇನೆಂದರೆ ಭಾರತದ ಜಿಡಿಪಿ ಕನಿಷ್ಠಪಕ್ಷ ಶೇಕಡಾ ಎರಡರಿಂದ ಎರಡೂವರೆವಷ್ಟು ಹೆಚ್ಚಿಸಿ ತೋರಿಸಲಾಗುತ್ತಿದೆ ಎಂದು.

ಇಂತಹದರಲ್ಲಿ ಇನ್ನಷ್ಟು ಚಿಂತೆಯ ವಿಷಯವೇನೆಂದರೆ, ನಿಧಾನವಾಗಿ ಎಲ್ಲಾ ಒಳ್ಳೆಯ ಅರ್ಥಶಾಸ್ತ್ರಜ್ಞರು ಈ ಸರಕಾರವನ್ನು ಬಿಟ್ಟುಹೋಗುತ್ತಿದ್ದಾರೆ. ಕಳೆದ ಕಾರ್ಯಾವಧಿಯಲ್ಲಿ ರಿಸರ್ವ್ ಬ್ಯಾಂಕಿನ ಗವರ್ನರ್ ರಘುರಾಮ್ ರಾಜನ್ ಬಿಟ್ಟುಹೋದರು. ನಂತರ ಉರ್ಜಿತ್ ಪಟೇಲ್ ನಡುರಸ್ತೆಯಲ್ಲೇ ಬಿಟ್ಟುಹೋದರು. ಅರವಿಂದ ಸುಬ್ರಹ್ಮಣ್ಯಮ್ ಅವರೂ ಕೂಡ ತಮ್ಮ ಕಾರ್ಯಾವಧಿ ಪೂರ್ಣಗೊಳಿಸುವ ಮುನ್ನವೇ ಸರಕಾರವನ್ನು ಬಿಟ್ಟುಹೋದರು. ಹಾಗೂ ಈಗ ಆರ್ಥಿಕ ಸಲಹಾಕಾರ ಸಮಿತಿಯ ಅಧ್ಯಕ್ಷ ವಿವೇಕ್ ದೇಬರಾಯ್ ಕೂಡ ದೂರ ಹೋಗುತ್ತಿದ್ದಾರೆ. ನಿಸ್ಸಂಶಯವಾಗಿಯೂ ಪ್ರಧಾನಿ ನರೇಂದ್ರ ಮೋದಿ ರಾಜಕಾರಣದ ನಿಪುಣ ಆಟಗಾರರಾಗಿದ್ದಾರೆ ಹಾಗೂ ತಮಗೆ ಬೇಕಾದ ಫಲಿತಾಂಶಗಳನ್ನು ಗಿಟ್ಟಿಸಿಕೊಳ್ಳುತ್ತಾರೆ. ಆದರೆ ಅರ್ಥವ್ಯವಸ್ಥೆ ಒಂದು ಬೇರೆಯದೇ ವಿಷಯವಾಗಿದೆ. ನೋಟುರದ್ದತಿಯ ಪ್ರಕರಣವು ವಿವೇಚನೆಯುಳ್ಳ ಅರ್ಥಶಾಸ್ತ್ರಜ್ಞರ ಅಭಿಪ್ರಾಯವನ್ನು ಪಡೆಯದೇ ಕೆಲಸ ಮಾಡುವುದರಿಂದ ಎಂತಹ ದುಃಸ್ಥಿತಿಯನ್ನು ಎದುರಿಸಬೇಕಾಯಿತು ಎನ್ನುವುದನ್ನು ತೋರಿಸಿಕೊಟ್ಟಿತು. ಒಬ್ಬ ನಾಯಕದ ಅಜ್ಞಾನ ಮತ್ತು ಅಹಂಕಾರದ ಬೆಲೆಯನ್ನು ಸಂಪೂರ್ಣ ದೇಶ ಭರಿಸಬೇಕಾಗುತ್ತದೆ.

ರೋಗಿಯ ದೇಹ ಜ್ವರದಿಂದ ತಪಿಸುತ್ತಿದೆ. ಕೆಲಸ ಮಾಡಬೇಕಿರುವವರು ಬೇರೆಡೆ ಮುಖ ತಿರುಗಿಸಿ ಕುಳಿತಿದ್ದಾರೆ. ಥರ್ಮಾಮೀಟರ್ ಅನ್ನು ಒಡೆದುಹಾಕಲಾಗಿದೆ. ಹಾಗೂ ಈಗ ಡಾಕ್ಟರ್ ಗಳನ್ನೂ ಒದ್ದೋಡಿಸಲಾಗಿದೆ. ಇದರ ಪರಣಾಮ ಏನಾಗುವುದು ಎನ್ನುವುದನ್ನು ನೀವೇ ಯೋಚಿಸಿನೋಡಿ.

ಅನುವಾದ: ರಾಜಶೇಖರ್ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...