Homeರಾಜಕೀಯಕಣ್ಣೀರಧಾರೆ... ಇದೇಕೆ ಇದೇಕೆ ...! ಕುಮಾರಸ್ವಾಮಿ ಜಾಸ್ತಿ ಅತ್ತಿದ್ದು ಯಾವ ಸರ್ಕಾರದಲ್ಲಿ ನಿಮಗೆ ಗೊತ್ತೆ?

ಕಣ್ಣೀರಧಾರೆ… ಇದೇಕೆ ಇದೇಕೆ …! ಕುಮಾರಸ್ವಾಮಿ ಜಾಸ್ತಿ ಅತ್ತಿದ್ದು ಯಾವ ಸರ್ಕಾರದಲ್ಲಿ ನಿಮಗೆ ಗೊತ್ತೆ?

- Advertisement -
- Advertisement -

‘ಕುಮಾರಸ್ವಾಮಿ, ಕಾಂಗ್ರೆಸ್ ಜತೆಗೆ ಸರ್ಕಾರ ನಡೆಸುತ್ತಿದ್ದಾಗ ಸುರಿಸಿದಷ್ಟು ಕಣ್ಣೀರನ್ನು ಬಿಜೆಪಿ ಜತೆಗಿನ ಸರ್ಕಾರ ನಡೆಸುತ್ತಿದ್ದಾಗ ಸುರಿಸಿಲ್ಲ’ ಹೀಗೆಂದು ಜೆಡಿಎಸ್ ರಾಷ್ಟ್ರೀಯ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಜೆಡಿಎಸ್ ರಾಷ್ಟ್ರೀಯ ವರಿಷ್ಠರೇ ? ಕರ್ನಾಟಕ ಬಿಟ್ಟು ಬೇರೆ ಕಡೆ ಜೆಡಿಎಸ್ ಇದ್ದಂಗೆ ಕಾಣ್ತೀಲ್ಲ ಅಂತ ನೀವು ಪ್ರಶ್ನೆ ಹಾಕ್ಬೇಡಿ ? ಆಮೇಲೆ ಅವ್ರು ಕುಮಾರಸ್ವಾಮಿ ಜತೆ ಕುತ್ಕೊಂಡು ಅಳೋದಿಕ್ಕೆ ಶುರು ಮಾಡಿದ್ರೆ ಕಷ್ಟ. ಆಲ್ ರೈಟ್ ಮುಂದಕ್ಕೋಗೋಣ…

ದೇವೇಗೌಡರ ಮಾತಿನ ಅರ್ಥ ಏನು ? ಬಿಜೆಪಿ ಜತೆಗೆ ಸರ್ಕಾರ ನಡೆಸುವಾಗಲೂ ಕಣ್ಣೀರು ಹಾಕ್ತಾ ಇದ್ರು, ಆದರೆ ಕಾಂಗ್ರೆಸ್ ಜತೆಗೆ ಸರ್ಕಾರ ನಡೆಸುವಾಗ ಹಾಕಿದಷ್ಟು ಕಣ್ಣೀರು ಹಾಕಿಲ್ಲ ಅಂತಲ್ವ. ಮಳೆ ಇಷ್ಟು ಸೆಂಟಿಮೀಟರ್ ಬಿತ್ತು, ಇಷ್ಟು ಇಂಚು ಮಳೆ ಆಯ್ತು ಅಂತ ಹೇಳೋದಿಕ್ಕೆ ಅಳತೆಗೋಲು ಇದೆ. ಆದ್ರೆ ಯಾವಾಗ ಎಷ್ಟು ಕಣ್ಣೀರು ಬಿತ್ತು ಅಂತ ಅಳೆಯೋಕೆ ಮಾತ್ರ ಇಲ್ಲ. ಈ ಸೈಂಟಿಸ್ಟುಗಳಿಗೂ ಬುದ್ದಿ ಇಲ್ಲ ಕಣ್ರಿ, ಎಂಥೆಂತದೋ ಯಂತ್ರ ಕಂಡು ಹಿಡಿತಾರೆ, ಚಂದ್ರಯಾನಕ್ಕೂ ಕಳಿಸ್ತಾರೆ. ಈ ಕಣ್ಣೀರು ಎಷ್ಟು ಬಿತ್ತು ಅಂತ ಅಳೆಯೋಕೆ ಸಣ್ಣದೊಂದು ಥರ್ಮಾಮೀಟರ್ ಥರದ್ದು ಕಂಡು ಹಿಡಿದಿಲ್ವಲ್ರಿ… ಆಲ್ ರೈಟ್ ಮುಂದಕ್ಕೋಗೋಣ… ಮುಂದೆ ಕಂಡು ಹಿಡಿದ್ರೂ ಹಿಡಿಬಹುದು.

ಈಗ ಕುಮಾರಸ್ವಾಮಿ‌ ಕಣ್ಣೀರು ವಿಷಯಕ್ಕೆ ಬರೋಣ. ಮುಖ್ಯಮಂತ್ರಿ ಆಗಿರುವಾಗ ಅವ್ರು ಏಕೆ ಅಳ್ಬೇಕು, ಅದೂ ಅನಾಯಾಸವಾಗಿ ಮುಖ್ಯಮಂತ್ರಿ ಪಟ್ಟ ದಕ್ಕಿರುವಾಗಲೂ ? ನನಗಂತೂ ಅರ್ಥವಾಗ್ಲಿಲ್ಲ. ನಿಮಗೇನಾದ್ರೂ ಅರ್ಥವಾದ್ರೆ ಕಾಮೆಂಟಿನಲ್ಲಿ ಹೇಳಿ. ಈ ಐಎಎಸ್, ಐಪಿಎಸ್ ಪಾಸು ಮಾಡೋರು ಹಗಲು ರಾತ್ರಿ ಕಣ್ಣಿಗೆ ಎಣ್ಣೆ ಬುಡ್ಕಂಡು ಓದ್ತಾರೆ.‌ಕಣ್ಣಿಗೆ ಮಾತ್ರ ಎಣ್ಣೆ ಬಿಟ್ಕೊಳೋದಾ ? ಬೇರೆಲ್ಲೂ ಅಂದ್ರೆ ಬಾಯಿಗೆ ಬಿಟ್ಕಳೋದಿಲ್ವ ಅಂತ ಕೇಳ್ಬೇಡಿ. ಹಾಗೆ ಬಿಡ್ಕಂಡ್ರೆ ಐಎಎಸ್ ಪಾಸ್ ಮಾಡೋಕ್ಕಾಗೋಲ್ಲ. ಹಾಗೆ ಕಷ್ಟಪಟ್ಟು ಅಧಿಕಾರಿಗಳಾದವ್ರೆ ಬೇಸರವಾದ್ರೆ ನಗ್ತಾನಗ್ತಾನೆ ರಾಜಿನಾಮೆ ಬೀಸಾಕ್ಬಿಟ್ಟು ಮನೆಗೋಯ್ತಾರೆ. ಆಲ್ ರೈಟ್ ಮುಂದಕ್ಕೋಗೋಣ.

ಒಂದ್ ಇಂಟರೆಸ್ಟಿಂಗ್ ಅಂದ್ರೆ ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗಲೂ, ಇಲ್ದೆ ಇದ್ದಾಗಲೂ ಅಳ್ತಾ ಇರ್ತಾರೆ. ಅಧಿಕಾರಕ್ಕೆ ಬರೋ ಮುಂಚೆ ‘ ನಾನು ಹಾರ್ಟ್ ಪೇಶಂಟು’ ಅಂತ ಅಳ್ತಾರೆ.‌ಕೇಳಿದ ಜನವೂ ‘ಹೇ ಅತ್ಲಾಗೆ ಬಿಡೊ, ನಾವೇನ್ ನಮ್ ಮನೆ ಆಸ್ತೀನಾ ಬರ್ಕೊಟ್ಟವಾ, ಒಂದ್ ಓಟ್ ತಾನೇ ಅಂತ ಹಾಕಿಬಿಡ್ತಾರೆ’ ಗೆದ್ದಮೇಲೂ ಅಳ್ತಾರೆ. ‘ನಾನ್ ನಂಬಿದ ಜನ ನನಗೆ ಕೈಬುಡಲಿಲ್ಲ’ ಅಂತ.

ಇತ್ತಿತ್ಲಾಗೆ ಯಾವ ಪಾರ್ಟಿಗೂ ಸ್ಪಷ್ಟ ಸ್ಪಷ್ಟ‌ಬಹುಮತ ಇಲ್ಲ. ವಸಿ ಅಂದ್ರೆ ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಂಡು ಅಧಿಕಾರಕ್ಕೆ ಬರೋಕೆ ದೇವೇಗೌಡ್ರು ತಾವನೇ ಬರ್ಬೇಕು. ಆಯ್ತು ಬಂದ್ರು, ಕುಮಾರಸ್ವಾಮಿ ಮುಖ್ಯಮಂತ್ರಿ ಆದ್ರು… ಆದ್ರೆ ಮಾತ್ ಮಾತಿಗೂ ಟವೆಲ್ ಹಿಡ್ಕಂಡು ಅಳೋದ್ಯಾಕೆ? ಗೊಳೋ ಅಂತ ಅಳ್ತಾರೆ. ಇದು ಅವರ ತಂದೆ ದೇವೇಗೌಡ್ರರಿಂದಲೇ ಬಂದಿರೋ ರಕ್ತಗತ ಬಳುವಳಿ. ಏಕಂದ್ರೆ ದೇವೇಗೌಡ್ರು ಮುಸಮುಸ ಅಂತ ಮೂಗ್ ತಿಕ್ಕಂಡು ಅಳ್ತಾನೆ‌ ಇರ್ತಾರೆ.

ನೀವು ಮೂಗ್ ತಿಕ್ಕಂಡ್ರೆ ಅಳು ಬರುತ್ತಾ ಅಂತ ಪ್ರಯತ್ನಿಸೋಕೆ ಹೋಗ್ಬೇಡಿ… ಬರೋದು‌ ಕಣ್ಣೀರಲ್ಲ ಸಿಂಬಳ. ಅಂದಹಾಗೆ ಕಣ್ಣೀರು ಸುರಿಸೋದು ರಕ್ತಗತವಾಗಿ ಬರ್ತುದಾ ಅಂತ ಕೇಳ್ಬೇಡಿ. ಈ ಡಾಕ್ಟರುಗಳು ಬೇರೆ ರಕ್ತದಲ್ಲಿ ಬರೋದು ಕಾಯಿಲೆ ಹೊರತು ಕಲೆ ಅಲ್ಲ ಅಂತಾರೆ. ಅವ್ರ ಮಾತು ನಂಬ್ಬೇಡಿ. ಅವ್ರಿಗೆ ರಾಜಕೀಯ ಅಂದ್ರೇನು, ಕಲೆ ಅಂದ್ರೇನು ಅಂತ ಗೊತ್ತಿಲ್ಲ. ಆಲ್ ರೈಟ್ ಮುಂದಕ್ಕೋಗೋಣ.

ಈಗ ಪಾಯಿಂಟಿಗೆ ಬರೋಣ. ಕಣ್ಣೀರು ಹಾಕ್ತಾ ರಾಜ್ಯಭಾರ ಮಾಡೋದೇನಪ್ಪಾ, ಆಗ್ಲಿಲ್ಲ ಅಂದ್ರೆ ರಾಜ್ಯಪಾಲರತ್ರ ಹೋಗಿ ರಾಜಿನಾಮೆ ಒಗಾಯಿಸಿ ಅಂದ್ರೆ ಕೊಟ್ಬುಟ್ಟು ಬರೋದಪ್ಪಾ… ಅಂಗೂ ಮಾಡೋದಿಲ್ಲ. ಜನ ಏನಾದ್ರೂ ‘ಕುಮಾರಣ್ಣ ನೀನು‌ ಮುಖ್ಯಮಂತ್ರಿಯಾಗಿ ಮುಂದುವರಿಲಿಲ್ಲ ಅಂದ್ರೆ ನಮ್ಗೆ ಸಂಕಟ ಆಯ್ತುದೆ’ ಅಂತ ಕಣ್ಣೀರಾಕ್ತಾರಾ… ? ಒಂದುವೇಳೆ ಕರ್ನಾಟಕದ ಆರೂವರೆ ಕೋಟಿ ಜನ ಕಣ್ಣೀರು ಹಾಕಿದ್ರೆ ಇಲ್ಲಿ ಮಳೆ ಬಾರದೇ ಇದ್ದಾಗ ಪರ್ಜನ್ಯ ಜಪ ಮಾಡೋ ಬದ್ಲು ಒಂದಷ್ಟು ದಿನ ಕುಮಾರಸ್ವಾಮಿನಾ ಸಿಎಂ ಕುರ್ಚಿ ಮೇಲೆ ಕೂರಿಸ್ಬುಟ್ಟು ನಂತ್ರ ಇಳಿಸ್ಬುಟ್ರೆ ಜನವೆಲ್ಲಾ ಕಣ್ಣೀರಾಕಿ ಹಾಕಿ ನೀರು ಪ್ರವಾಹದೋಪಾದಿ ಹರೀತಾ ಇರೋದು. ಆದ್ರೆ ಹಾಗೇನೂ ಆಗಿಲ್ವೆ. ಜನ ಏನು ಪಟ್ಟು ಹಿಡಿದಿಲ್ವೆ. ಆದ್ರೂ ಅಳ್ತಾ ಅಳ್ತಾ ಅಧಿಕಾರ ನಡೆಸೋದ್ಯಾಕೆ. ವಯೋವೃದ್ಧರಾದ ತಮ್ಮ ತಂದೆಯವ್ರ ಕಣ್ಣಲೂ ನೀರು ತರಿಸೋದ್ಯಾಕೆ…ಒಂದ್ ವೇಳೆ ಇವರಿಬ್ರು ಸುರಿಸಿದ ಕಣ್ಣೀರನ್ನೆಲ್ಲ ಸಂಗ್ರಹಿಸಿ ಯಾವ್ದಾದ್ರೂ ಒಂದು ಸಸಿ ಬುಡಕ್ಕೆ ಹಾಕಿದ್ರೆ ಅದು ಹೆಮ್ಮರವಾಗಿ ಬೆಳ್ದು ಹಣ್ಣು ಬಿಡೋ ಬದ್ಲು ಕಣ್ಣೀರು ಸುರಿಸ್ತಾ ಇತ್ತೇನೋ… ಅದಕ್ಕೆ ಕಣ್ಣೀರು ಮರ ಅಂತ ಹೆಸ್ರಾಗಿ ದೇಶವಿದೇಶದ ಜನವೆಲ್ಲಾ ನೋಡೋಕೆ ಬರೋರೇನು…

ಆಲ್ ರೈಟ್… ಮುಂದಕ್ಕೋಣ, ಸಮ್ಮಿಶ್ರ ಸರ್ಕಾರ ಬಿದ್ದು ಹೋದ ಮೇಲೂ ಮಗನ ಕಣ್ಣೀರು ನೋಡಕಾಯ್ತಿಲ್ಲ, ಅಂತ ದೇವೇಗೌಡ್ರು ಅಳ್ತಾ ಅವ್ರೆ, ಮಹಾಜನಗಳೇ ಅವ್ರು ಕಣ್ಣೀರು ನಿಲ್ಸಿ ನಗುಮೊಗ ಮಾಡ್ಕಂಡು ನಿಂತ್ಕಳ್ಳೊ ಐಡಿಯಾ ಇದ್ರೆ ಕೊಡಿ ಅಂತ ಹೇಳ್ತಾ ಸದ್ಯಕ್ಕೆ ಈ ಕಣ್ಣೀರಧಾರೆ ಕಥೆಯನ್ನ ನಿಲ್ಸೋಣ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Ayyo Ayyo Sumane Natak
    Estu Kaniru surisidru JDS GOVT Madoke Agola Next Election nali Own Agi Govt madidre Nanu HDK MANEGE 1 year Jeeta madoke ready..

    Nataka Nataka Hige ಕಣ್ಣೀರಧಾರೆ Kinta Maneli Irodu Like Alwa MANINA MAKLU HOLADA KELESA MADLI. ELA NEXT ELECTION NALI 122 MORE SEAT BANDU GOVT MADI NIMA MANELI NANU JEET MADTINI

  2. ಕಣ್ಣೀರಧಾರೆ‌ ಇದೇಕೆ…ಇದೇಕೆ..ಲೇಖನ ವಿಡಂಬನಾತ್ಮಕವಾಗಿ ಚೆನ್ನಾಗಿದೆ. ದೇವರು ದೆವ್ವಾಂಥ ಕಂಡ ಕಂಡ ದೇವಸ್ಥಾನ ಹುತ್ತ ಕಲ್ಲು ಅಲೆಯೋ ಅಪ್ಪ ಮಕ್ಕಳಿಗೆ ಅವರ ದೇವರು ಅಧಿಕಾರದಲ್ಲೇ ಉಳಿಸೊ ಬದಲಿಗೆ ಕಣ್ಣೀರ ವರ ಯಾಕೆ ದಯ ಪಾಲಿಸಿದನೋ ತಿಳಿಯಲು ಮತ್ತೊಂದು ಹೋಮಹವನ ಮಾಡಿದರೆ ತಿಳಿಯಬಹುದು..ಅಥವಾ ಬರೀ ಗಿಮಿಕ್ಕಾ..

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...