Homeಮುಖಪುಟಸವರ್ಣಿಯ ಶಾಸಕನಿಂದ ಹಲ್ಲೆಗೊಳಗಾಗಿ 17 ತಿಂಗಳು ಆಸ್ಪತ್ರೆ ಪಾಲಾದ ದಲಿತ ಎಂಜಿನಿಯರ್

ಸವರ್ಣಿಯ ಶಾಸಕನಿಂದ ಹಲ್ಲೆಗೊಳಗಾಗಿ 17 ತಿಂಗಳು ಆಸ್ಪತ್ರೆ ಪಾಲಾದ ದಲಿತ ಎಂಜಿನಿಯರ್

- Advertisement -
- Advertisement -

ರಾಜಸ್ಥಾನದ ಧೋಲ್‌ಪುರದಲ್ಲಿ ಇಂಜಿನಿಯರ್ ಆಗಿದ್ದ ದಲಿತ ಸಮುದಾಯದ ಹರ್ಷಾಧಿಪತಿ ಅವರ ಮೇಲೆ  ಕಾಂಗ್ರೆಸ್ ಶಾಸಕ ಗಿರರಾಜ್ ಸಿಂಗ್ ಮಾಲಿಂಗ ಮತ್ತು ತಂಡ  ಹಲ್ಲೆ ನಡೆಸಿದ್ದರು. ಕಳೆದ ವರ್ಷ ಮಾರ್ಚ್ 28 ರಂದು ಘಟನೆ ನಡೆದಿದ್ದು ಆರೋಪಪಟ್ಟಿ ಇನ್ನು ಕೂಡ ಸಲ್ಲಿಕೆಯಾಗಿಲ್ಲ ಎನ್ನಲಾಗಿದೆ.

ಹರ್ಷಾಧಿಪತಿ ಸರಕಾರದ ವಿದ್ಯುತ್ ಬಿಲ್ ವಸೂಲಾತಿಗಾಗಿ ಗ್ರಾಮಗಳಿಗೆ ತೆರಳಿದ್ದರು. ಹಲವು ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟದವರಲ್ಲಿ ಬಿಲ್ ಕಟ್ಟುವಂತೆ ಆಗ್ರಹಿಸಿದ್ದರು. ಈ ವೇಳೆ ಜನರು  ನನ್ನ ಜಾತಿಯನ್ನು ಕೇಳಿದರು ಮತ್ತು ನನ್ನನ್ನು ಸುತ್ತುವರೆದರು. ನಾನು ಠಾಕೂರ್ ಗ್ರಾಮವನ್ನು ಪ್ರವೇಶಿಸಲು ಹೇಗೆ ಧೈರ್ಯ ಮಾಡಿದ್ದೇನೆ ಎಂದು ಕೇಳಿದರು. ವ್ಯಕ್ತಿಯೊಬ್ಬರು ನನ್ನನ್ನು ಶಾಸಕ ಮಾಲಿಂಗ ಎಂದು ಹೇಳಿದ ವ್ಯಕ್ತಿಯೊಂದಿಗೆ ಫೋನ್‌ನಲ್ಲಿ ಮಾತನಾಡುವಂತೆ ಹೇಳಿದರು. ಅವರು ನನ್ನನ್ನು ನಿಂದಿಸಿದರು ಮತ್ತು ಬೆದರಿಕೆ ಹಾಕಿದರು ಎಂದು ಹರ್ಷಾಧಿಪತಿ ಆರೋಪಿಸಿದ್ದಾರೆ.

ಮಾರ್ಚ್ 28 ರಂದು ರಜಪೂತ ಸಮುದಾಯದ, ಮೂರು ಬಾರಿ ಶಾಸಕರಾಗಿದ್ದ ಮಾಲಿಂಗ ಅವರು ತಮ್ಮ ಸಹಚರರೊಂದಿಗೆ ತಮ್ಮ ಕಚೇರಿಗೆ ನುಗ್ಗಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹರ್ಷಾಧಿಪತಿ ಆರೋಪಿಸಿದ್ದಾರೆ. ಅವರನ್ನು ಮೊದಲು ಆಗ್ರಾದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ಸೇರಿಸಲಾಗಿತ್ತು ಎಂದು ಹೇಳಿದ್ದಾರೆ.

ಆ ವೇಳೆ ಮಾಲಿಂಗ ಅವರು ಆರೋಪಗಳನ್ನು ಸುಳ್ಳು ಮತ್ತು ಆಧಾರರಹಿತ ಎಂದು ಕರೆದಿದ್ದರು ಮತ್ತು ಕೆಲವು ಬಿಜೆಪಿ ನಾಯಕರ ಆಜ್ಞೆಯ ಮೇರೆಗೆ ಎಫ್‌ಐಆರ್‌ನಲ್ಲಿ ತನ್ನ ಹೆಸರನ್ನು ಸೇರಿಸಲಾಗಿದೆ ಎಂದು ಹೇಳಿದ್ದರು.

ಮಾಲಿಂಗ ಸೇರಿ ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಯ ನಂತರ, ರಾಜಸ್ಥಾನ ಪೊಲೀಸರು ಇತರ ಆರೋಪಿಗಳನ್ನು ಬಂಧಿಸಿದ್ದು, ಶಾಸಕ ಮಾಲಿಂಗ ಅವರನ್ನು ಬಂಧಿಸಿಲ್ಲ.

ಮೇ 11, 2022 ರಂದು ಅವರು ಗೆಹ್ಲೋಟ್ ಅವರನ್ನು ಭೇಟಿಯಾದ ನಂತರ ಅವರು ಪೊಲಿಸರಿಗೆ ಶರಣಾದರು. ಧೋಲ್‌ಪುರದ ಸ್ಥಳೀಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು. ಇದರ ಮರುದಿನ ಕೋವಿಡ್‌ ಇದೆ ಎಂದು  ಆಸ್ಪತ್ರೆಗೆ ಸೇರಿದ್ದರು. ಒಂದು ವಾರದಲ್ಲಿ ಮಾಲಿಂಗ ಅವರಿಗೆ ಹೈಕೋರ್ಟ್ ಜಾಮೀನು ನೀಡಿತ್ತು.

28 ವರ್ಷ ವಯಸ್ಸಿನ ಹರ್ಷಾಧಿಪತಿ ಘಟನೆ ಬಳಿಕ ಆಸ್ಪತ್ರೆಯ ಕೊಠಡಿಯಲ್ಲಿ ನಡೆದಾಡಲು 17 ತಿಂಗಳುಗಳು ಬೇಕಾಗಿದೆ. ಹರ್ಷಾಧಿಪತಿ ದಿನವಿಡಿ ಹಾಸಿಗೆಯ ಮೇಲೆ ಮಲಗಿರುತ್ತಿದ್ದರು. ಹರ್ಷಾಧಿಪತಿ ಅವರಿಗೆ ಮೂಳೆ ಮುರಿತ ಸೇರಿದಂತೆ ಅನೇಕ ಭಾಗಗಳಲ್ಲಿ ಮುರಿತ ಉಂಟಾಗಿತ್ತು  ಎಂದು ಸರ್ಕಾರಿ ವೈದ್ಯರೊಬ್ಬರು ತಿಳಿಸಿದ್ದಾರೆ.

ನನ್ನ ದೈಹಿಕ ಗಾಯಗಳು  ಗುಣವಾಗಿದ್ದರೂ, ನಾನು ಪ್ರತಿದಿನ ಅನ್ಯಾಯದ ಭಾವನೆ ಅನುಭವಿಸುತ್ತಿದ್ದೇನೆ. ಶಾಸಕ ಗಿರರಾಜ್ ಸಿಂಗ್ ಮಾಲಿಂಗ ಅವರು ನನ್ನ ಮೇಲೆ ಕುರ್ಚಿ ಎಸೆದು, ಜಾತಿ ನಿಂದನೆಗಳನ್ನು ಮಾಡಿದರು. ಒಂದೂವರೆ ವರ್ಷ ಕಳೆದರೂ ನ್ಯಾಯಕ್ಕಾಗಿ ಕಾಯುತ್ತಿದ್ದೇನೆ. ಆರೋಪಿಯನ್ನು ರಕ್ಷಿಸಲಾಗುತ್ತಿದೆ ಎಂದು ಸಂತ್ರಸ್ತ ಹರ್ಷಾಧಿಪತಿ ಹೇಳಿದ್ದಾರೆ.

ಇದನ್ನು ಓದಿ: ಆದಿವಾಸಿ ಯುವಕನ ಎನ್‌ಕೌಂಟರ್: ಮರುತನಿಖೆಗೆ ಆದೇಶಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...