Homeಕರ್ನಾಟಕಜಲ ವಿವಾದ: ಪ್ರಧಾನಿ ಬಳಿ ಸರ್ವ ಪಕ್ಷ ನಿಯೋಗ ಕೊಂಡೊಯ್ಯಲಾಗುವುದು; ಸಿಎಂ ಸಿದ್ದರಾಮಯ್ಯ

ಜಲ ವಿವಾದ: ಪ್ರಧಾನಿ ಬಳಿ ಸರ್ವ ಪಕ್ಷ ನಿಯೋಗ ಕೊಂಡೊಯ್ಯಲಾಗುವುದು; ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಜಲ ವಿವಾದಕ್ಕೆ ಸಂಬಂಧಿಸಿ ಪ್ರಧಾನಿ ಬಳಿ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷದ ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾವೇರಿ, ಮಹಾದಾಯಿ, ಮೇಕೆದಾಟು ವಿಚಾರದಲ್ಲಿ ನಾಡಿಗೆ ನ್ಯಾಯ ಒದಗಿಸುವ ಸಲುವಾಗಿ ಪ್ರಧಾನಿಯವರ ಬಳಿಗೆ ಸರ್ವ ಪಕ್ಷ ನಿಯೋಗವನ್ನು ಕರೆದುಕೊಂಡು ಹೋಗಲಾಗುವುದು  ಎಂದು ಹೇಳಿದ್ದಾರೆ.

ಸಭೆಯಲ್ಲಿ ಕರ್ನಾಟಕ ರಾಜ್ಯ ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯ  ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ವಿವರಿಸಿದ್ದಾರೆ. ಮಾಜಿ ಸಿಎಂಗಳು ಈ ವೇಳೆ ಅಭಿಪ್ರಾಯ ತಿಳಿಸಿದ್ದಾರೆ. ನಾಡಿನ, ಜನರ ಹಿತದೃಷ್ಟಿಯಿಂದ ಸರ್ಕಾರ ತೆಗೆದುಕೊಳ್ಳುವ ನಿಲುವುಗಳಿಗೆ ಸರ್ವಪಕ್ಷದ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಕನ್ನಡ ನಾಡು, ನುಡಿ, ಜಲ, ಭೂಮಿ, ವಿಚಾರದಲ್ಲಿ ಸರ್ವ ಪಕ್ಷಗಳೂ ಒಟ್ಟಾಗಿ ಶ್ರಮಿಸೋಣ. ತಮಿಳುನಾಡಿಗೆ ನಾವು ಇಲ್ಲಿಯವರೆಗೆ  24 ಟಿಎಂಸಿ ನೀರು ಬಿಡುಗಡೆ ಮಾಡಿದ್ದೇವೆ. ನಾವು ಸಮರ್ಥ ವಾದ ಮಂಡಿಸಿದ್ದರಿಂದಲೇ ತಮಿಳುನಾಡಿನ ಬೇಡಿಕೆಗಿಂತ ಕಡಿಮೆ ನೀರು ಬಿಡಲು ಆದೇಶವಾಯಿತು. ಇಲ್ಲದಿದ್ದರೆ  ಆದೇಶದಲ್ಲಿನ ನೀರಿನ ಪ್ರಮಾಣ ಇನ್ನೂ ಹೆಚ್ಚಿರುತ್ತಿತ್ತು. ನಮ್ಮ ಕಾನೂನು ತಂಡ ಸಮರ್ಥವಾಗಿದ್ದು, ತಂಡಕ್ಕೆ ಅಗತ್ಯವಾದ ನೆರವು ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ನಾವು 15 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ವಾದ ಮಂಡಿಸಿದ್ದೇವೆ. ಆಗ ‌ 10 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ. ಈಗ 10 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡಲು ಸಾಧ್ಯವಿಲ್ಲ ಎಂದು ಮುಂದಕ್ಕೆ ಸಮರ್ಥ ವಾದ ಮಂಡಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಭೆಯಲ್ಲಿ ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ವೀರಪ್ಪ ಮೊಯ್ಲಿ , ಸದಾನಂದಗೌಡ, ಜಗದೀಶ್ ಶೆಟ್ಟರ್, ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಸರ್ವಪಕ್ಷದ ಮುಖಂಡರು, ರೈತ ಸಂಘದ ಮುಖಂಡರು, ಸಂಸದರು ಭಾಗಿಯಾಗಿದ್ದರು.

ಇದನ್ನು ಓದಿ: ಜಾದವ್‌ಪುರ ವಿವಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯ ಬೆತ್ತಲೆ ಮೆರವಣಿಗೆ: ತನಿಖೆಯಲ್ಲಿ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...