Homeಮುಖಪುಟಅರುಣ್ ಜೈಟ್ಲಿ ಕೆಲ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದರೆ? ಇಲ್ಲಿದೆ ಹೊಸ ವಿವಾದ

ಅರುಣ್ ಜೈಟ್ಲಿ ಕೆಲ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದರೆ? ಇಲ್ಲಿದೆ ಹೊಸ ವಿವಾದ

- Advertisement -
- Advertisement -

ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಆರ್ಥಿಕ ಸಚಿವ ಅರುಣ್ ಜೈಟ್ಲಿ ನಿಧನರಾಗಿದ್ದಾರೆ. ಇದಕ್ಕೆ ದೇಶಾದ್ಯಂತ ಸಂತಾಪ ವ್ಯಕ್ತವಾಗಿದೆ. ಆದರೆ ಇದೇ ಸಂದರ್ಭದಲ್ಲಿ ಅವರು ತೀರಿಹೋದ ನಂತರ ಅವರನ್ನು ಹೊಗಳುವ ಬರದಲ್ಲಿ ‘ಟೈಮ್ಸ್ ನೌನ ವ್ಯವಸ್ಥಾಪಕ ಸಂಪಾದಕರಾದ ನವಿಕಾ ಕುಮಾರ್’ ಮಾಡಿದ ಟ್ವೀಟ್ ಒಂದು ಭಾರೀ ವಿವಾದ ಉಂಟು ಮಾಡಿದೆ. ಇದರಿಂದಾಗಿ ಅರುಣ್ ಜೈಟ್ಲಿ ಕೆಲ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದರೆ ಎಂಬ ಪ್ರಶ್ನೆ ಎದ್ದಿದೆ.

ಟೈಮ್ಸ್ ನೌನ ಬ್ಯೂರೋ ಚೀಫ್ ನವಿಕಾ ಕುಮಾರ್, “ನನ್ನ ಮೆಂಟರ್, ಮಾರ್ಗದರ್ಶನ ಬೆಳಕನ್ನು ಕಳೆದುಕೊಂಡಿದ್ದೇನೆ. ಅರುಣ್ ಸರ್, ಈಗ ನಾನು ಮಾರ್ಗದರ್ಶನಕ್ಕಾಗಿ ಪ್ರತಿದಿನ ಬೆಳಿಗ್ಗೆ ಯಾರನ್ನು ಕೇಳಲಿ? ಯಾರಿಗೆ ಕರೆ ಮಾಡಲಿ? ನಿಮ್ಮ ಬುದ್ಧಿ, ನಿಮ್ಮ ಹಾಸ್ಯ, ನಿಮ್ಮ ಉಪಾಖ್ಯಾನಗಳು, ನಿಮ್ಮ ಇತಿಹಾಸದ ಜ್ಞಾನಕ್ಕೆ ಸಾಟಿಯಿಲ್ಲ. ಆಕಾಶದಲ್ಲಿ ಪ್ರಕಾಶಮಾನವಾದ ನಕ್ಷತ್ರವು ನೀವು ನಮ್ಮನ್ನು ವೀಕ್ಷಿಸುತ್ತಿದ್ದೀರಿ ಮತ್ತು ಮಾರ್ಗದರ್ಶನ ಮಾಡುತ್ತಿದ್ದೀರಿ ಎಂದು ನನಗೆ ನೆನಪಿಸುತ್ತದೆ” ಎಂದು ಟ್ವೀಟ್ ಮಾಡಿದ್ದರು.

ಇದಕ್ಕೆ “ಅರುಣ್ ಜೇಟ್ಲಿಯನ್ನು “ಬ್ಯೂರೋ ಮುಖ್ಯಸ್ಥ” ಎಂದು ಅನೇಕ ಮಾಧ್ಯಮದವರು ತಿಳಿದಿದ್ದರು. ಅವರು ದಿನದ ಪತ್ರಿಕಾ ಕಾರ್ಯಸೂಚಿಯನ್ನು ನಿಗದಿಪಡಿಸುತ್ತಿದ್ದರು, ನವದೆಹಲಿಯ ಪತ್ರಕರ್ತರನ್ನು ಮೆಚ್ಚಿಸುತ್ತಿದ್ದರು ಮತ್ತು ಬೆಳೆಸಿದರು. ಹೆಚ್ಚಿನ ದಿನಗಳಲ್ಲಿ ಅವರು ಜೇಟ್ಲಿಯೊಂದಿಗೆ ಭೇಟಿಯಾದರು, ಆದೇಶಗಳನ್ನು ತೆಗೆದುಕೊಂಡರು. ಈ ತಪ್ಪೊಪ್ಪಿಗೆಯೂ ಭಾರತದ ಉನ್ನತ ಟಿವಿಯ ವ್ಯವಸ್ಥಾಪಕ ಸಂಪಾದಕರಿಂದ ಬಂದಿದೆ ಎಂದು” ಎಂದು ಟ್ವೀಟ್ ಮಾಡುವ ಮೂಲಕ ಗಂಭೀರ ಆರೋಪ ಮಾಡಿದ್ದರು.

“ದಿವಂಗತ ಅರುಣ್ ಜೇಟ್ಲಿಯವರಿಗೆ ಶ್ರದ್ಧಾಂಜಲಿ. ಇವರು ಮೋದಿ ಸಂಪುಟದ ಮಾಜಿ ಸಚಿವ ಮತ್ತು ಟೈಮ್ಸ್ ನೌ ಬ್ಯೂರೋ ಮುಖ್ಯಸ್ಥರಾಗಿದ್ದರು. ಟೈಮ್ಸ್ ನೌ ವ್ಯವಸ್ಥಾಪಕ ಸಂಪಾದಕರಾದ ನವಿಕಾ ಕುಮಾರ್ ಅವರು ಪ್ರತಿದಿನ ಬೆಳಿಗ್ಗೆ ಜೈಟ್ಲಿಯವರೊಂದಿಗೆ ಕರೆ ಮಾಡಿ ದಿನದ ಪ್ರೊಪಗಂಡಕ್ಕಾಗಿ ಮಾರ್ಗದರ್ಶನ ಮತ್ತು ನಿರ್ದೇಶನ ಪಡೆಯುತ್ತಿದ್ದರು. ಇತರ ಎಷ್ಟು ಚಾನೆಲ್‌ಗಳು ಸಹ ಇದೇ ರೀತಿ ಮಾಡಿವೆ?” ಎಂದು ಹೋರಾಟಗಾರ್ತಿ ಕವಿತಾ ಕೃಷ್ಣನ್ ರವರು ಟ್ವೀಟ್ ಮಾಡುವ ಮೂಲಕ ಆರೋಪವನ್ನು ಸಮರ್ಥಿಸಿದ್ದಾರೆ.

ಭಾರತದ ಬಹುತೇಕ ಮಾಧ್ಯಮಗಳು ಬಿಜೆಪಿಯ ಪರವಾಗಿ ವರ್ತಿಸುತ್ತಿವೆ ಎಂಬ ಆರೋಪ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ನವಿಕಾ ಕುಮಾರ್ ರವರು ಮಾಡಿರುವ ಟ್ವೀಟ್ ಮತ್ತು ಅದಕ್ಕೆ ಬಂದಿರುವ ಆರೋಪಗಳು ಇದಕ್ಕೆ ಪುಷ್ಟಿ ನೀಡುತ್ತಿವೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...