Homeಮುಖಪುಟಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ; ಕುಸಿದು ಬಿದ್ದ ಬಹುಮಹಡಿ ಕಟ್ಟಡಗಳು

ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ; ಕುಸಿದು ಬಿದ್ದ ಬಹುಮಹಡಿ ಕಟ್ಟಡಗಳು

- Advertisement -
- Advertisement -

ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಇಂದು ಭಾರೀ ಭೂಕುಸಿತ ಸಂಭವಿಸಿದ್ದು, ಹಲವಾರು ಮನೆಗಳು ನಾಶವಾಗಿದ್ದು, ಅನೇಕ ಜನರು ಅವಶೇಷಗಳಲ್ಲಿ ಸಿಲುಕಿರುವ ಸಾಧ್ಯತೆ ಇದೆ.

ವೈರಲ್ ವಿಡಿಯೋದಲ್ಲಿ ಭೂಕುಸಿತದ ದೃಶ್ಯಗಳು ಸೆರೆಯಾಗಿದ್ದು, ವಿಡಿಯೋದಲ್ಲಿ ಅನೇಕ ಬಹುಮಹಡಿ ಕಟ್ಟಡಗಳು ಕುಸಿಯುತ್ತಿರುವುದು ಕಂಡು ಬಂದಿದೆ.

ಭೂಕುಸಿತ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತುರ್ತು ಪ್ರತಿಕ್ರಿಯೆ ತಂಡಗಳನ್ನು ನಿಯೋಜಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದ್ದು, ಇಂದಿನಿಂದ ಮುಂದಿನ ಎರಡು ದಿನಗಳ ಕಾಲ ಹಿಮಾಚಲ ಪ್ರದೇಶದಲ್ಲಿ  ಭಾರೀ ಮಳೆ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದೆ.

ಭೂಕುಸಿತದಿಂದ ಕುಲ್ಲು ಜಿಲ್ಲೆಯಲ್ಲಿ ಬೃಹತ್ ವಾಣಿಜ್ಯ ಕಟ್ಟಡವು ಕುಸಿಯುತ್ತಿರುವುದನ್ನು ವಿಡಿಯೋಗಳು ತೋರಿಸಿದೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಎಕ್ಸ್  ನಲ್ಲಿ (ಟ್ವಿಟ್ಟರ್)ನಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಕುಲ್ಲುವಿನಿಂದ  ಭಯಾನಕ  ದೃಶ್ಯಗಳು ಈಗ ಹೊರಹೊಮ್ಮುತ್ತಿವೆ.  ಸ್ಥಳೀಯ ಆಡಳಿತವು ಅಪಾಯವನ್ನು ಮನಗಂಡು  ಎರಡು ದಿನಗಳ ಮೊದಲು ಕಟ್ಟಡದಲ್ಲಿದ್ದವರನ್ನು ಯಶಸ್ವಿಯಾಗಿ ಸ್ಥಳಾಂತರಿಸಿದೆ  ಎಂಬುದು ಗಮನಾರ್ಹವಾಗಿದೆ ಎಂದು  ಬರೆದಿದ್ದಾರೆ.

ಹಿಮಾಚಲ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ಸಂಜಯ್ ಕುಂದು ಎನ್‌ಡಿಟಿವಿ ಜೊತೆ ಮಾತನಾಡಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಭೂಕುಸಿತದ ಮೊದಲು ಅಲ್ಲಿನ ಜನರನ್ನು ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು ಎಂದು ಹೇಳಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ವೈಪರೀತ್ಯದಿಂದ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.  ಮಳೆಯಿಂದಾಗಿ  ಕುಲು-ಮಂಡಿ ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಿಲುಕಿಕೊಂಡಿವೆ.

ನಿರಂತರ ಮಳೆಯಿಂದಾಗಿ ಗುಡ್ಡಗಾಡು  ಪ್ರದೇಶದಲ್ಲಿ ಭೂಕುಸಿತಗಳು, ಮೇಘಸ್ಫೋಟಗಳು ಮತ್ತು ಹಠಾತ್ ಪ್ರವಾಹ ಉಂಟಾಗಿ ವ್ಯಾಪಕ ವಿನಾಶ ಉಂಟುಮಾಡಿದೆ. ರಾಜ್ಯ ಸರ್ಕಾರವು ಈ ಹಿಂದೆ ಇಡೀ ರಾಜ್ಯವನ್ನು “ನೈಸರ್ಗಿಕ ವಿಕೋಪ ಪೀಡಿತ ಪ್ರದೇಶ” ಎಂದು ಘೋಷಿಸಿದೆ.

ರಾಜ್ಯಕ್ಕೆ ಈ ಬಾರಿ ಮುಂಗಾರು ಮಳೆ ಆಗಮಿಸಿದ ನಂತರ ಮಳೆಯ ಹಾನಿಯಿಂದ  8,014.61 ಕೋಟಿಗಳಷ್ಟು ಹಾನಿಯಾಗಿದೆ ಎಂದು ಸರಕಾರ ಹೇಳಿದೆ. ಮಳೆಯಿಂದಾಗಿ 2,022 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ ಮತ್ತು 9,615 ಮನೆಗಳು ಭಾಗಶಃ ಹಾನಿಗೊಳಗಾಗಿವೆ. 113 ಕಡೆ  ಭೂಕುಸಿತಗಳಿಂದ ಮೂಲಭೂತ ಸೌಕರ್ಯಗಳಿಗೆ ವ್ಯಾಪಕ ಹಾನಿಯನ್ನುಂಟುಮಾಡಿದೆ ಮತ್ತು ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದೆ. ಮಳೆಯಿಂದಾಗಿ 224 ಜನರು ಸಾವನ್ನಪ್ಪಿದ್ದಾರೆ, ಇನ್ನೂ 117 ಮಂದಿ ಮಳೆ ಸಂಬಂಧಿತ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಸರ್ಕಾರದ ಬುಲೆಟಿನ್ ತಿಳಿಸಿದೆ.

 

ಇದನ್ನು ಓದಿ: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಎಫ್ ಐಆರ್ ದಾಖಲಿಸಲು ಸೂಚಿಸಿದ್ದ ಜಡ್ಜ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...