Homeಸಿನಿಮಾಕ್ರೀಡೆಟೀಕಾಕಾರರಿಗೆ ನನ್ನ ಚಿನ್ನವೇ ಉತ್ತರ: ಪಿ.ವಿ ಸಿಂಧು ಮನದಾಳದ ಮಾತುಗಳು

ಟೀಕಾಕಾರರಿಗೆ ನನ್ನ ಚಿನ್ನವೇ ಉತ್ತರ: ಪಿ.ವಿ ಸಿಂಧು ಮನದಾಳದ ಮಾತುಗಳು

- Advertisement -
- Advertisement -

ಕೊನೆಯ ಎರಡು ವಿಶ್ವ ಚಾಂಪಿಯನ್‌ಶಿಪ್ ಫೈನಲ್‌ಗಳನ್ನು ಗೆದ್ದಿಲ್ಲ ಎಂಬ ಟೀಕೆಗೆ ಗುರಿಯಾದ ನಂತರ ತಾನು “ಕೋಪ ಮತ್ತು ದುಃಖ” ಎರೆನ್ನು ಅನುಭವಿಸಿದ್ದೆ ಎಂದಿರುವ ಪಿ.ವಿ ಸಿಂಧು 2019ರ ಆವೃತ್ತಿಯಲ್ಲಿ ಭಾನುವಾರ ನಾನು ಗೆದ್ದ ಚಿನ್ನದ ಪದಕವು “ನನ್ನನ್ನು ಪದೇ ಪದೇ ಪ್ರಶ್ನೆಗಳನ್ನು ಕೇಳಿದ ಜನರಿಗೆ” ಎಲ್ಲರಿಗೂ ನನ್ನ ಉತ್ತರವಾಗಿದೆ ಎಂದು ತಿಳಿಸಿದ್ದಾರೆ.

ಹೈದರಾಬಾದ್‌ನ 24 ವರ್ಷದ ಪಿ.ವಿ ಸಿಂಧು ಜಪಾನ್‌ನ ಪ್ರತಿಸ್ಪರ್ಧಿ ನೊಜೋಮಿ ಒಕುಹರಾ ಅವರನ್ನು 21-7, 21-7 ಸೆಟ್‌ಗಳಿಂದ ಸೋಲಿಸಿ ವಿಶ್ವ ಚಾಂಪಿಯನ್‌ಶಿಪ್ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಂತರ ಪತ್ರಿಕಾಗೊಷ್ಠಿಯಲ್ಲಿ ಅವರು ಮಾತನಾಡಿ ಈ ವಿಷಯ ತಿಳಿಸಿದ್ದಾರೆ.

2017 ಮತ್ತು 2018 ರ ಫೈನಲ್‌ನಲ್ಲಿ ಕ್ರಮವಾಗಿ ಒಕುಹರಾ ಮತ್ತು ಸ್ಪೇನ್‌ನ ಒಲಿಂಪಿಕ್ ಚಾಂಪಿಯನ್ ಕೆರೊಲಿನಾ ಮರಿನ್ ವಿರುದ್ಧ ಸೋತಿದ್ದ ಸಿಂಧು 2019ರ ನಿನ್ನೆಯ ಪಂದ್ಯದಲ್ಲಿ ಕೊನೆಗೂ ಗೆಲುವಿನ ನಗೆ ಬೀರಿದ್ದಾರೆ.

ಸಿಂಧು ಅವರು 2016 ರ ರಿಯೊ ಒಲಿಂಪಿಕ್ಸ್‌ನಿಂದೀಚೆಗೆ ಉತ್ತಮ ಪ್ರದರ್ಶನ ನೀಡಿಲ್ಲ ಎಂಬ ಟೀಕೆಗೆ ಗುರಿಯಾಗಿದ್ದರು. ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲದೆ ಗೋಲ್ಡ್ ಕೋಸ್ಟ್ ಕಾಮನ್‌ವೆಲ್ತ್ ಕ್ರೀಡಾಕೂಟ, ಜಕಾರ್ತಾ ಏಷ್ಯನ್ ಕ್ರೀಡಾಕೂಟದ ಫೈನಲ್‌ಗಳನ್ನು ಸಹ ಕಳೆದುಕೊಂಡಿದ್ದರು. ಅವರು ಕಳೆದ ವರ್ಷ ಥೈಲ್ಯಾಂಡ್ ಓಪನ್ ಮತ್ತು ಇಂಡಿಯಾ ಓಪನ್ ಪಂದ್ಯಾವಳಿಯಲ್ಲಿಯೂ ಕೇವಲ ರನ್ನರ್ಸ್ ಅಪ್ ಸ್ಥಾನ ಪಡೆದಿದ್ದರು.

ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಸಿಂಧುಗೆ ಇದು ಐದನೇ ಪದಕವಾಗಿದೆ. ಅವರು 2013 ಮತ್ತು 2014 ಆವೃತ್ತಿಗಳಲ್ಲಿ ತಲಾ ಕಂಚು ಗೆದ್ದರು.
ಸಿಂಧು ಈಗ ವಿಶ್ವ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಮಹಿಳಾ ಸಿಂಗಲ್ಸ್‌ನಲ್ಲಿ ಜಂಟಿ ಅತ್ಯಧಿಕ ಪದಕ ವಿಜೇತರಾಗಿದ್ದಾರೆ. ಮಾಜಿ ಒಲಿಂಪಿಕ್ ಚಾಂಪಿಯನ್ ಚೀನಾದ ಜಾಂಗ್ ನಿಂಗ್ ಸಹ 2001 ಮತ್ತು 2007 ರ ನಡುವೆ 1 ಚಿನ್ನ, 2 ಬೆಳ್ಳಿ ಮತ್ತು 2 ಕಂಚು ಗೆದ್ದಿದ್ದಾರೆ.

“ಎಲ್ಲರೂ ನನ್ನಿಂದ ಈ ಗೆಲುವನ್ನು ಬಯಸುತ್ತಿದ್ದರು. ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕದ ನಂತರ, ನನ್ನ ಮೇಲೆ ನಿರೀಕ್ಷೆಗಳು ನಿಜವಾಗಿಯೂ ಹೆಚ್ಚಾಗಿದ್ದವು. ನಾನು ಟೂರ್ನಮೆಂಟ್‌ಗೆ ಹೋದಾಗಲೆಲ್ಲಾ ಎಲ್ಲರೂ ಚಿನ್ನ ಗೆಲ್ಲುತ್ತಾರೆ ಎಂದು ಎಲ್ಲರೂ ನಿರೀಕ್ಷಿಸುತ್ತಾರೆ” ಎಂದು ಸಿಂಧು ಹೇಳಿದ್ದಾರೆ.

“ಒಂದು ವರ್ಷದ ನಂತರ, ನಾನು ಅದಕ್ಕಾಗಿ ಏನು ಮಾಡಬೇಕೆಂದು ಯೋಚಿಸಿದೆ. ಇತರರ ಬಗ್ಗೆ ಯೋಚಿಸುವ ಬದಲು, ನಾನು ನನಗಾಗಿ ಆಡಬೇಕು ಮತ್ತು ನನ್ನ 100 ಪ್ರತಿಶತವ ಸಾಮರ್ಥ್ಯವನ್ನು ಪಣಕೊಡ್ಡಬೇಕು ಆಗ ಮತ್ತು ಸಹಜವಾಗಿ ನಾನು ಗೆಲ್ಲುತ್ತೇನೆ ಏಕೆಂದರೆ ಇತರರ ಬಗ್ಗೆ ಯೋಚಿಸುವುದರಿಂದ ನನ್ನ ಮೇಲೆ ಹೆಚ್ಚುವರಿ ಒತ್ತಡ ಉಂಟಾಗುತ್ತದೆ” ಎಂದು ತಿಳಿಸಿದ್ದಾರೆ.

ಜನರು ಈಗಾಗಲೇ ಟೋಕಿಯೊದಲ್ಲಿ 2020ರಲ್ಲಿ ನಡೆಯುವ ಒಲಿಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವ ಬಗ್ಗೆ ಮಾತಾಡುತ್ತಿದ್ದಾರೆ. ಒಲಪಿಂಕ್ಸ್ ನಲ್ಲಿ ನಾನು ಪದಕ ಗಳಿಸಿಲ್ಲ. ಹಾಗಾಗಿ ಈ ಬಾರಿ ನಾನು ಉತ್ತಮವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಅನಿಸುತ್ತಿದೆ. ಆದರೆ ಈಗ ನಾನು ಬೇರೆ ಏನನ್ನೂ ಯೋಚಿಸಲು ಬಯಸುವುದಿಲ್ಲ ಬದಲಿಗೆ ಸಿಕ್ಕಿರುವ ಪ್ರಶಸ್ತಿಯನ್ನು ಆನಂದಿಸಲು ಬಯಸುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...