Homeಮುಖಪುಟಅಮೆರಿಕದ ಇತಿಹಾಸದಲ್ಲಿ ಮೊದಲ ಪ್ರಕರಣ: ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

ಅಮೆರಿಕದ ಇತಿಹಾಸದಲ್ಲಿ ಮೊದಲ ಪ್ರಕರಣ: ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

- Advertisement -
- Advertisement -

2020ರ ಜಾರ್ಜಿಯಾ ಚುನಾವಣಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಲಾಗಿದೆ. ಆದರೆ ಕೂಡಲೇ 200,000 ಡಾಲರ್ ಬಾಂಡ್ ಆಧಾರದಲ್ಲಿ ಬಿಡುಗಡೆ ಮಾಡಲಾಗಿದೆ.

ಅಮೆರಿಕದ 2020ರ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ತಲೆಕೆಳಗಾಗಿಸಲು ಇತರೆ 18 ಜನರೊಂದಿಗೆ ಸೇರಿಕೊಂಡು ಪಿತೂರಿ ನಡೆಸಿದ್ದರು ಎಂಬ ಆರೋಪ ಟ್ರಂಪ್ ಮೇಲಿದೆ. ಅವರು ಅಟ್ಲಾಂಟಾದ ಫುಲ್ಟೋನ್ ಕೌಂಟಿ ಜೈಲಿನ ಒಳಗೆ ಸರಿಸುಮಾರು 30 ನಿಮಿಷ ಕಳೆದರು. ಬಳಿಕ ಬಿಡುಗಡೆಯಾಗಿ ಬೆಂಗಾವಲು ವಾಹನದಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಿದರು.

ಈ ಪ್ರಕರಣದಲ್ಲಿ ಉಳಿದ ಆರೋಪಿಗಳಂತೆಯೇ ಶರಣಾಗತರಾದ 77 ವರ್ಷದ ಟ್ರಂಪ್, ಬಂಧನ ಪ್ರಕ್ರಿಯೆ ವೇಳೆ ಮಗ್ ಶಾಟ್ (ಭುಜದ ಮೇಲಿನ ಮುಖದ ಚಿತ್ರ) ಫೋಟೋ ತೆಗೆಸಿಕೊಳ್ಳುವಂತಾಗಿದೆ.

ಅಟ್ಲಾಂಟಾ ಜೈಲಿನಲ್ಲಿನ ಟ್ರಂಪ್ ಅವರ ಚಿತ್ರವನ್ನು ಜಾರ್ಜಿಯಾದ ಫುಲ್ಫಾನ್ ಕೌಂಟಿಯ ಮೆಫ್ ಕಚೇರಿ ಬಿಡುಗಡೆ ಮಾಡಿದೆ. ಪೆರಿಫ್ ಕಚೇರಿ ಬಿಡುಗಡೆ ಮಾಡಿರುವ ಚಿತ್ರದಲ್ಲಿ ಕಡು ನೀಲಿ ಸೂಟ್, ಬಿಳಿ ಅಂಗಿ ಮತ್ತು ಕೆಂಪು ಟೈ ತೊಟ್ಟಿದ್ದ ಟ್ರಂಪ್, ಕ್ಯಾಮೆರಾ ಕಡೆ ಮುಖ ಗಂಟಿಕ್ಕಿಕೊಂಡಿರುವುದನ್ನು ನೋಡಬಹುದು. ಅಮೆರಿಕದ ಇತಿಹಾಸದಲ್ಲಿ ಹಾಲಿ ಅಥವಾ ಯಾವುದೇ ಮಾಜಿ ಅಧ್ಯಕ್ಷರು ಈ ರೀತಿ ಜೈಲಿಗೆ ಹೋಗಿದ್ದು ಇದು ಮೊದಲ ನಿದರ್ಶನವಾಗಿದೆ.

ಕಳೆದ ಮಾರ್ಚ್‌ನಿಂದ ಟ್ರಂಪ್‌ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳಲ್ಲಿ ಇದು ನಾಲ್ಕನೆಯದಾಗಿದೆ. ಫಾರಿಡಾ, ವಾಷಿಂಗ್ಟನ್‌ನಲ್ಲಿಯೂ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಟ್ರಂಪ್

ಶರಣಾಗುತ್ತೇನೆ ಎಂದಿದ್ದ ಟ್ರಂಪ್

ತಮ್ಮ ಬಂಧನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ”ಇದು ಅಮೆರಿಕಕ್ಕೆ ದುಃಖದ ದಿನ” ಎಂದು ಪ್ರತಿಕ್ರಿಯೆ ನೀಡಿದ್ದಾರೆ. ”ಇಲ್ಲಿ ನಡೆದಿರುವುದು ನ್ಯಾಯದ ಅಣಕ. ನಾನು ಯಾವ ತಪ್ಪೂ ಮಾಡಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಸ್ವಂತ ಟ್ರುತ್ ಸಾಮಾಜಿಕ ಜಾಲತಾಣದಲ್ಲಿ ಮಗ್ ಶಾಟ್ ಫೋಟೋ ಹಂಚಿಕೊಂಡಿರುವ ಟ್ರಂಪ್, ‘ಚುನಾವಣೆಯಲ್ಲಿ ಹಸ್ತಕ್ಷೇಪ’ ಎಂಬ ಅಡಿ ಶೀರ್ಷಿಕೆ ನೀಡಿದ್ದಾರೆ. ಅದರ ಜತೆ ತಮ್ಮ ಪ್ರಚಾರದ ವೆಬ್‌ಸೈಟ್‌ನ ಕೊಂಡಿ ಪೋಸ್ಟ್ ಮಾಡಿದ್ದಾರೆ. 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ನಾಮನಿರ್ದೇಶನಕ್ಕೆ ಟ್ರಂಪ್ ಮುಂಚೂಣಿಯಲ್ಲಿದ್ದಾರೆ.

ಫುಲ್ಟೋನ್ ಕೌಂಟಿ ಜೈಲಿನಲ್ಲಿ ಟ್ರಂಪ್ ಅವರಿಗೆ ಕೈದಿ ಸಂಖ್ಯೆ ”PO1135809” ನೀಡಲಾಗಿತ್ತು. ಅವರ ಎತ್ತರ 6.3 ಅಡಿ, ತೂಕ 97 ಕೆಜಿ ಎಂದು ನಮೂದಿಸಲಾಗಿದ್ದು, ಅವರ ಕೂದಲಿನ ಬಣ್ಣವನ್ನು ಹೊಂಬಣ್ಣ ಅಥವಾ ಸ್ಟ್ರಾಬೆರ್ರಿ ಎಂದು ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...